AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಐಪಿಎಲ್​ನಿಂದ ಸಿರಿಯಲ್ ಟಿಆರ್​ಪಿ ಮೇಲೆ ಭರ್ಜರಿ ಎಫೆಕ್ಟ್; ಯಾವ ಧಾರಾವಾಹಿಗೆ ಮೊದಲ ಸ್ಥಾನ?

Kannada Serial TRP: ಜೀ ಕನ್ನಡದಲ್ಲಿ ಇತ್ತೀಚೆಗೆ ಆರಂಭ ಆದ ‘ಲಕ್ಷ್ಮೀ ನಿವಾಸ’ ಧಾರಾವಾಹಿ ಟಿಆರ್​ಪಿಯಲ್ಲಿ ಮೊದಲ ಸ್ಥಾನದಲ್ಲಿ ಇದೆ. ಈ ಧಾರಾವಾಹಿಗೆ ಕಳೆದ ವಾರಕ್ಕಿಂತ ಕಡಿಮೆ ಟಿಆರ್​ಪಿ ಸಿಕ್ಕಿದೆ. ಉಳಿದ ಧಾರಾವಾಹಿಗಳ ರೇಟಿಂಗ್ ಕೂಡ ಕಡಿಮೆ ಆಗಿರುವುದರಿಂದ ಈ ಧಾರಾವಾಹಿ ಮೊದಲ ಸ್ಥಾನದಲ್ಲೇ ಇದೆ.

ಐಪಿಎಲ್​ನಿಂದ ಸಿರಿಯಲ್ ಟಿಆರ್​ಪಿ ಮೇಲೆ ಭರ್ಜರಿ ಎಫೆಕ್ಟ್; ಯಾವ ಧಾರಾವಾಹಿಗೆ ಮೊದಲ ಸ್ಥಾನ?
ಐಪಿಎಲ್​ನಿಂದ ಸಿರಿಯಲ್ ಟಿಆರ್​ಪಿ ಮೇಲೆ ಭರ್ಜರಿ ಎಫೆಕ್ಟ್
ರಾಜೇಶ್ ದುಗ್ಗುಮನೆ
|

Updated on:Apr 19, 2024 | 2:20 PM

Share

ಐಪಿಎಲ್ (IPL) ಹಂಗಾಮಾ ಶುರುವಾಗಿದೆ. ಜನರು ಹೆಚ್ಚಿನ ಸಂಖ್ಯೆಯಲ್ಲಿ ಐಪಿಎಲ್ ವೀಕ್ಷಣೆ ಮಾಡುತ್ತಾರೆ. ಇದರ ಪ್ರಭಾವ ಧಾರಾವಾಹಿ ಟಿಆರ್​ಪಿಗಳ ಮೇಲಾಗಿದೆ ಎಂದರೂ ತಪ್ಪಿಲ್ಲ. ಈ ಮೊದಲು ಧಾರಾವಾಹಿಗಳು ಎರಡು ಡಿಜಿಟ್ ಸಂಖ್ಯೆಯಲ್ಲಿ ಟಿಆರ್​ಪಿ (TRP) ಪಡೆದ ಉದಾಹರಣೆ ಇದೆ. ಆದರೆ, ಈಗ ಹಾಗಿಲ್ಲ. ವಾರ ಕಳೆದಂತೆ ಎಲ್ಲಾ ಧಾರಾವಾಹಿಗಳ ಟಿಆರ್​ಪಿಯಲ್ಲಿ ಇಳಿಕೆ ಕಾಣುತ್ತಿದೆ. ಇದಕ್ಕೆ ಐಪಿಎಲ್ ಕಾರಣ ಎಂದು ಹೇಳಲಾಗುತ್ತಿದೆ.

ಈ ಬಾರಿ ‘ಲಕ್ಷ್ಮೀ ನಿವಾಸ’ ಧಾರಾವಾಹಿ ಟಿಆರ್​ಪಿಯಲ್ಲಿ ಮೊದಲ ಸ್ಥಾನದಲ್ಲಿ ಇದೆ. ಈ ಧಾರಾವಾಹಿಗೆ ಕಳೆದ ವಾರಕ್ಕಿಂತ ಕಡಿಮೆ ಟಿಆರ್​ಪಿ ಸಿಕ್ಕಿದೆ. ಉಳಿದ ಧಾರಾವಾಹಿಗಳ ರೇಟಿಂಗ್ ಕೂಡ ಕಡಿಮೆ ಆಗಿರುವುದರಿಂದ ಈ ಧಾರಾವಾಹಿ ಮೊದಲ ಸ್ಥಾನದಲ್ಲೇ ಇದೆ. ಎರಡನೇ ಸ್ಥಾನದಲ್ಲಿ ‘ಪುಟ್ಟಕ್ಕನ ಮಕ್ಕಳು’ ಧಾರಾವಾಹಿ ಇದೆ. ಈ ಧಾರಾವಾಹಿ ಈ ಮೊದಲು ಎರಡಂಕಿ ಟಿಆರ್​ಪಿ ಪಡೆಯುತ್ತಿತ್ತು. ಆದರೆ, ಇತ್ತೀಚೆಗೆ ಟಿಆರ್​ಪಿ ಕುಸಿಯುತ್ತಿದೆ.

ಕಲರ್ಸ್ ಕನ್ನಡದ ‘ರಾಮಾಚಾರಿ’ ಧಾರಾವಾಹಿ ಟಿಆರ್​ಪಿ ರೇಸ್​ನಲ್ಲಿದೆ. ಈ ಧಾರಾವಾಹಿ ಮೂರನೇ ಸ್ಥಾನ ಪಡೆದುಕೊಂಡಿದೆ. ಈ ಧಾರಾವಾಹಿಯ ಟಿಆರ್​ಪಿಯಲ್ಲಿ ಏರಿಳಿತ ಆಗುತ್ತಲೇ ಇದೆ. ‘ಸೀತಾ ರಾಮ’ ಧಾರಾವಾಹಿ ಹೊಸ ಹೊಸ ತಿರುವುಗಳನ್ನು ಪಡೆದುಕೊಂಡು ಸಾಗುತ್ತಿದೆ. ಈ ಧಾರಾವಾಹಿ ನಾಲ್ಕನೇ ಸ್ಥಾನದಲ್ಲಿದೆ. ಗಗನ್ ಚಿನ್ನಪ್ಪ, ವೈಷ್ಣವಿ ಗೌಡ, ಅಶೋಕ್ ಮೊದಲಾದವರು ಈ ಧಾರಾವಾಹಿಯಲ್ಲಿ ನಟಿಸುತ್ತಿದ್ದಾರೆ. ಈ ಧಾರಾವಾಹಿ ಕನ್ಸಿಸ್ಟನ್ಸಿ ಕಾಪಾಡಿಕೊಂಡು ಹೋಗುತ್ತಿದೆ.

ಇದನ್ನೂ ಓದಿ: ಕಲರ್ಸ್ ಕನ್ನಡ ಧಾರಾವಾಹಿಗೆ ಎಂಟ್ರಿಕೊಟ್ಟ ವಿನಯ್ ಗೌಡ; ಇಲ್ಲಿದೆ ವಿವರ

ಹೊಸದಾಗಿ ಎಂಟ್ರಿಕೊಟ್ಟಿರೋ ‘ಶ್ರಾವಣಿ ಸುಬ್ರಹ್ಮಣ್ಯ’ ಧಾರಾವಾಹಿ ರೇಸ್​ನಲ್ಲಿ ಐದನೇ ಸ್ಥಾನದಲ್ಲಿ ಇದೆ. ಈ ಧಾರಾವಾಹಿ ಟಿಆರ್​ಪಿ ರೇಸ್​ನಲ್ಲಿ ಸ್ಥಾನ ಪಡೆದುಕೊಂಡು ಮಿಂಚುತ್ತಿದೆ. ಎಲ್ಲಾ ಧಾರಾವಾಹಿಗಳ ಟಿಆರ್​ಪಿ ಕಡಿಮೆ ಆಗಿರುವುದಕ್ಕೆ ಐಪಿಎಲ್ ಮುಖ್ಯ ಕಾರಣ ಅನ್ನೋದು ಕೆಲವರ ಅಭಿಪ್ರಾಯ. ಈ ಮೊದಲು ಬಿಗ್ ಬಾಸ್ ಬಂದಾಗ ಇತರ ವಾಹಿನಿಗಳಲ್ಲಿ ಆ ಸಂದರ್ಭದಲ್ಲಿ ಪ್ರಸಾರ ಆಗುತ್ತಿದ್ದ ಧಾರಾವಾಹಿಗಳ ಟಿಆರ್​ಪಿ ಕಡಿಮೆ ಆಗಿತ್ತು.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 2:19 pm, Fri, 19 April 24

Follow Us
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ