Sign In

By signing in or creating an account, you agree with Associated Broadcasting Company's Terms & Conditions and Privacy Policy.

ಐಪಿಎಲ್​ನಿಂದ ಸಿರಿಯಲ್ ಟಿಆರ್​ಪಿ ಮೇಲೆ ಭರ್ಜರಿ ಎಫೆಕ್ಟ್; ಯಾವ ಧಾರಾವಾಹಿಗೆ ಮೊದಲ ಸ್ಥಾನ?

Kannada Serial TRP: ಜೀ ಕನ್ನಡದಲ್ಲಿ ಇತ್ತೀಚೆಗೆ ಆರಂಭ ಆದ ‘ಲಕ್ಷ್ಮೀ ನಿವಾಸ’ ಧಾರಾವಾಹಿ ಟಿಆರ್​ಪಿಯಲ್ಲಿ ಮೊದಲ ಸ್ಥಾನದಲ್ಲಿ ಇದೆ. ಈ ಧಾರಾವಾಹಿಗೆ ಕಳೆದ ವಾರಕ್ಕಿಂತ ಕಡಿಮೆ ಟಿಆರ್​ಪಿ ಸಿಕ್ಕಿದೆ. ಉಳಿದ ಧಾರಾವಾಹಿಗಳ ರೇಟಿಂಗ್ ಕೂಡ ಕಡಿಮೆ ಆಗಿರುವುದರಿಂದ ಈ ಧಾರಾವಾಹಿ ಮೊದಲ ಸ್ಥಾನದಲ್ಲೇ ಇದೆ.

ಐಪಿಎಲ್​ನಿಂದ ಸಿರಿಯಲ್ ಟಿಆರ್​ಪಿ ಮೇಲೆ ಭರ್ಜರಿ ಎಫೆಕ್ಟ್; ಯಾವ ಧಾರಾವಾಹಿಗೆ ಮೊದಲ ಸ್ಥಾನ?
ಐಪಿಎಲ್​ನಿಂದ ಸಿರಿಯಲ್ ಟಿಆರ್​ಪಿ ಮೇಲೆ ಭರ್ಜರಿ ಎಫೆಕ್ಟ್
Follow us
ರಾಜೇಶ್ ದುಗ್ಗುಮನೆ
|

Updated on:Apr 19, 2024 | 2:20 PM

ಐಪಿಎಲ್ (IPL) ಹಂಗಾಮಾ ಶುರುವಾಗಿದೆ. ಜನರು ಹೆಚ್ಚಿನ ಸಂಖ್ಯೆಯಲ್ಲಿ ಐಪಿಎಲ್ ವೀಕ್ಷಣೆ ಮಾಡುತ್ತಾರೆ. ಇದರ ಪ್ರಭಾವ ಧಾರಾವಾಹಿ ಟಿಆರ್​ಪಿಗಳ ಮೇಲಾಗಿದೆ ಎಂದರೂ ತಪ್ಪಿಲ್ಲ. ಈ ಮೊದಲು ಧಾರಾವಾಹಿಗಳು ಎರಡು ಡಿಜಿಟ್ ಸಂಖ್ಯೆಯಲ್ಲಿ ಟಿಆರ್​ಪಿ (TRP) ಪಡೆದ ಉದಾಹರಣೆ ಇದೆ. ಆದರೆ, ಈಗ ಹಾಗಿಲ್ಲ. ವಾರ ಕಳೆದಂತೆ ಎಲ್ಲಾ ಧಾರಾವಾಹಿಗಳ ಟಿಆರ್​ಪಿಯಲ್ಲಿ ಇಳಿಕೆ ಕಾಣುತ್ತಿದೆ. ಇದಕ್ಕೆ ಐಪಿಎಲ್ ಕಾರಣ ಎಂದು ಹೇಳಲಾಗುತ್ತಿದೆ.

ಈ ಬಾರಿ ‘ಲಕ್ಷ್ಮೀ ನಿವಾಸ’ ಧಾರಾವಾಹಿ ಟಿಆರ್​ಪಿಯಲ್ಲಿ ಮೊದಲ ಸ್ಥಾನದಲ್ಲಿ ಇದೆ. ಈ ಧಾರಾವಾಹಿಗೆ ಕಳೆದ ವಾರಕ್ಕಿಂತ ಕಡಿಮೆ ಟಿಆರ್​ಪಿ ಸಿಕ್ಕಿದೆ. ಉಳಿದ ಧಾರಾವಾಹಿಗಳ ರೇಟಿಂಗ್ ಕೂಡ ಕಡಿಮೆ ಆಗಿರುವುದರಿಂದ ಈ ಧಾರಾವಾಹಿ ಮೊದಲ ಸ್ಥಾನದಲ್ಲೇ ಇದೆ. ಎರಡನೇ ಸ್ಥಾನದಲ್ಲಿ ‘ಪುಟ್ಟಕ್ಕನ ಮಕ್ಕಳು’ ಧಾರಾವಾಹಿ ಇದೆ. ಈ ಧಾರಾವಾಹಿ ಈ ಮೊದಲು ಎರಡಂಕಿ ಟಿಆರ್​ಪಿ ಪಡೆಯುತ್ತಿತ್ತು. ಆದರೆ, ಇತ್ತೀಚೆಗೆ ಟಿಆರ್​ಪಿ ಕುಸಿಯುತ್ತಿದೆ.

ಕಲರ್ಸ್ ಕನ್ನಡದ ‘ರಾಮಾಚಾರಿ’ ಧಾರಾವಾಹಿ ಟಿಆರ್​ಪಿ ರೇಸ್​ನಲ್ಲಿದೆ. ಈ ಧಾರಾವಾಹಿ ಮೂರನೇ ಸ್ಥಾನ ಪಡೆದುಕೊಂಡಿದೆ. ಈ ಧಾರಾವಾಹಿಯ ಟಿಆರ್​ಪಿಯಲ್ಲಿ ಏರಿಳಿತ ಆಗುತ್ತಲೇ ಇದೆ. ‘ಸೀತಾ ರಾಮ’ ಧಾರಾವಾಹಿ ಹೊಸ ಹೊಸ ತಿರುವುಗಳನ್ನು ಪಡೆದುಕೊಂಡು ಸಾಗುತ್ತಿದೆ. ಈ ಧಾರಾವಾಹಿ ನಾಲ್ಕನೇ ಸ್ಥಾನದಲ್ಲಿದೆ. ಗಗನ್ ಚಿನ್ನಪ್ಪ, ವೈಷ್ಣವಿ ಗೌಡ, ಅಶೋಕ್ ಮೊದಲಾದವರು ಈ ಧಾರಾವಾಹಿಯಲ್ಲಿ ನಟಿಸುತ್ತಿದ್ದಾರೆ. ಈ ಧಾರಾವಾಹಿ ಕನ್ಸಿಸ್ಟನ್ಸಿ ಕಾಪಾಡಿಕೊಂಡು ಹೋಗುತ್ತಿದೆ.

ಇದನ್ನೂ ಓದಿ: ಕಲರ್ಸ್ ಕನ್ನಡ ಧಾರಾವಾಹಿಗೆ ಎಂಟ್ರಿಕೊಟ್ಟ ವಿನಯ್ ಗೌಡ; ಇಲ್ಲಿದೆ ವಿವರ

ಹೊಸದಾಗಿ ಎಂಟ್ರಿಕೊಟ್ಟಿರೋ ‘ಶ್ರಾವಣಿ ಸುಬ್ರಹ್ಮಣ್ಯ’ ಧಾರಾವಾಹಿ ರೇಸ್​ನಲ್ಲಿ ಐದನೇ ಸ್ಥಾನದಲ್ಲಿ ಇದೆ. ಈ ಧಾರಾವಾಹಿ ಟಿಆರ್​ಪಿ ರೇಸ್​ನಲ್ಲಿ ಸ್ಥಾನ ಪಡೆದುಕೊಂಡು ಮಿಂಚುತ್ತಿದೆ. ಎಲ್ಲಾ ಧಾರಾವಾಹಿಗಳ ಟಿಆರ್​ಪಿ ಕಡಿಮೆ ಆಗಿರುವುದಕ್ಕೆ ಐಪಿಎಲ್ ಮುಖ್ಯ ಕಾರಣ ಅನ್ನೋದು ಕೆಲವರ ಅಭಿಪ್ರಾಯ. ಈ ಮೊದಲು ಬಿಗ್ ಬಾಸ್ ಬಂದಾಗ ಇತರ ವಾಹಿನಿಗಳಲ್ಲಿ ಆ ಸಂದರ್ಭದಲ್ಲಿ ಪ್ರಸಾರ ಆಗುತ್ತಿದ್ದ ಧಾರಾವಾಹಿಗಳ ಟಿಆರ್​ಪಿ ಕಡಿಮೆ ಆಗಿತ್ತು.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 2:19 pm, Fri, 19 April 24

Daily Devotional: ಪೂಜೆ ಸಮಯದಲ್ಲಿ ಅಗರಬತ್ತಿ ಬಳಕೆಯ ಮಹತ್ವ ತಿಳಿಯಿರಿ
Daily Devotional: ಪೂಜೆ ಸಮಯದಲ್ಲಿ ಅಗರಬತ್ತಿ ಬಳಕೆಯ ಮಹತ್ವ ತಿಳಿಯಿರಿ
ಸುನಿತಾ ವಿಲಿಯಮ್ಸ್, ವಿಲ್ಮೋರ್ ಲ್ಯಾಂಡಿಂಗ್: ಅದ್ಭುತ ವಿಡಿಯೋ ಇಲ್ಲಿದೆ ನೋಡಿ
ಸುನಿತಾ ವಿಲಿಯಮ್ಸ್, ವಿಲ್ಮೋರ್ ಲ್ಯಾಂಡಿಂಗ್: ಅದ್ಭುತ ವಿಡಿಯೋ ಇಲ್ಲಿದೆ ನೋಡಿ
Daily Horoscope: ಮಿಥುನ ರಾಶಿಯವರಿಗೆ ಆರು ಗ್ರಹಗಳ ಶುಭಫಲವಿದೆ
Daily Horoscope: ಮಿಥುನ ರಾಶಿಯವರಿಗೆ ಆರು ಗ್ರಹಗಳ ಶುಭಫಲವಿದೆ
ಪತಿಯೊಂದಿಗೆ ಜಗಳವಾಡಿ ವಿದ್ಯುತ್ ಟವರ್ ಹತ್ತಿ ಆತ್ಮಹತ್ಯೆಗೆ ಯತ್ನಿಸಿದ ಪತ್ನಿ
ಪತಿಯೊಂದಿಗೆ ಜಗಳವಾಡಿ ವಿದ್ಯುತ್ ಟವರ್ ಹತ್ತಿ ಆತ್ಮಹತ್ಯೆಗೆ ಯತ್ನಿಸಿದ ಪತ್ನಿ
ಶಿವಪುರಿಯ ಮಾತಟಿಲಾ ಡ್ಯಾಂನಲ್ಲಿ ಮುಳುಗಿದ ದೋಣಿ; 7 ಜನ ಸಾವನ್ನಪ್ಪಿರುವ ಶಂಕೆ
ಶಿವಪುರಿಯ ಮಾತಟಿಲಾ ಡ್ಯಾಂನಲ್ಲಿ ಮುಳುಗಿದ ದೋಣಿ; 7 ಜನ ಸಾವನ್ನಪ್ಪಿರುವ ಶಂಕೆ
ಕೋರ್ಟ್​ ಆದೇಶ ಹಾಗೂ ವ್ಯಕ್ತಿ ಪ್ರಾಣಕ್ಕೂ ಬೆಲೆ ಕೊಡದ KSRTC, ಬಸ್ ಜಪ್ತಿ!
ಕೋರ್ಟ್​ ಆದೇಶ ಹಾಗೂ ವ್ಯಕ್ತಿ ಪ್ರಾಣಕ್ಕೂ ಬೆಲೆ ಕೊಡದ KSRTC, ಬಸ್ ಜಪ್ತಿ!
ಚಂದನ್ ಶೆಟ್ಟಿ ಜೊತೆ ಮದುವೆ ಗಾಸಿಪ್, ಸ್ಪಷ್ಟನೆ ಕೊಟ್ಟ ಸಂಜನಾ
ಚಂದನ್ ಶೆಟ್ಟಿ ಜೊತೆ ಮದುವೆ ಗಾಸಿಪ್, ಸ್ಪಷ್ಟನೆ ಕೊಟ್ಟ ಸಂಜನಾ
ಕುಮಾರಸ್ವಾಮಿ ನನ್ನನ್ನು ಬಯ್ಯದೆ ಬೇರೆ ಯಾರನ್ನು ಬಯ್ಯಲು ಸಾಧ್ಯ? ಶಿವಕುಮಾರ್
ಕುಮಾರಸ್ವಾಮಿ ನನ್ನನ್ನು ಬಯ್ಯದೆ ಬೇರೆ ಯಾರನ್ನು ಬಯ್ಯಲು ಸಾಧ್ಯ? ಶಿವಕುಮಾರ್
ಜಾರ್ಖಂಡ್‌ನ ದಿಯೋಘರ್‌ನಲ್ಲಿ ಇಂಡಿಯನ್ ಆಯಿಲ್ ಸ್ಥಾವರದಲ್ಲಿ ಬೆಂಕಿ ಅವಘಡ
ಜಾರ್ಖಂಡ್‌ನ ದಿಯೋಘರ್‌ನಲ್ಲಿ ಇಂಡಿಯನ್ ಆಯಿಲ್ ಸ್ಥಾವರದಲ್ಲಿ ಬೆಂಕಿ ಅವಘಡ
ಕರ್ನಾಟಕ ಮೊದಲು ತಮಿಳುನಾಡು ಚರ್ಚೆ ಮಾಡಬೇಕಾದ ಅವಶ್ಯಕತೆ ಸ್ಪಷ್ಟವಾಗುತ್ತಿದೆ
ಕರ್ನಾಟಕ ಮೊದಲು ತಮಿಳುನಾಡು ಚರ್ಚೆ ಮಾಡಬೇಕಾದ ಅವಶ್ಯಕತೆ ಸ್ಪಷ್ಟವಾಗುತ್ತಿದೆ