AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಐಪಿಎಲ್​ನಿಂದ ಸಿರಿಯಲ್ ಟಿಆರ್​ಪಿ ಮೇಲೆ ಭರ್ಜರಿ ಎಫೆಕ್ಟ್; ಯಾವ ಧಾರಾವಾಹಿಗೆ ಮೊದಲ ಸ್ಥಾನ?

Kannada Serial TRP: ಜೀ ಕನ್ನಡದಲ್ಲಿ ಇತ್ತೀಚೆಗೆ ಆರಂಭ ಆದ ‘ಲಕ್ಷ್ಮೀ ನಿವಾಸ’ ಧಾರಾವಾಹಿ ಟಿಆರ್​ಪಿಯಲ್ಲಿ ಮೊದಲ ಸ್ಥಾನದಲ್ಲಿ ಇದೆ. ಈ ಧಾರಾವಾಹಿಗೆ ಕಳೆದ ವಾರಕ್ಕಿಂತ ಕಡಿಮೆ ಟಿಆರ್​ಪಿ ಸಿಕ್ಕಿದೆ. ಉಳಿದ ಧಾರಾವಾಹಿಗಳ ರೇಟಿಂಗ್ ಕೂಡ ಕಡಿಮೆ ಆಗಿರುವುದರಿಂದ ಈ ಧಾರಾವಾಹಿ ಮೊದಲ ಸ್ಥಾನದಲ್ಲೇ ಇದೆ.

ಐಪಿಎಲ್​ನಿಂದ ಸಿರಿಯಲ್ ಟಿಆರ್​ಪಿ ಮೇಲೆ ಭರ್ಜರಿ ಎಫೆಕ್ಟ್; ಯಾವ ಧಾರಾವಾಹಿಗೆ ಮೊದಲ ಸ್ಥಾನ?
ಐಪಿಎಲ್​ನಿಂದ ಸಿರಿಯಲ್ ಟಿಆರ್​ಪಿ ಮೇಲೆ ಭರ್ಜರಿ ಎಫೆಕ್ಟ್
ರಾಜೇಶ್ ದುಗ್ಗುಮನೆ
|

Updated on:Apr 19, 2024 | 2:20 PM

Share

ಐಪಿಎಲ್ (IPL) ಹಂಗಾಮಾ ಶುರುವಾಗಿದೆ. ಜನರು ಹೆಚ್ಚಿನ ಸಂಖ್ಯೆಯಲ್ಲಿ ಐಪಿಎಲ್ ವೀಕ್ಷಣೆ ಮಾಡುತ್ತಾರೆ. ಇದರ ಪ್ರಭಾವ ಧಾರಾವಾಹಿ ಟಿಆರ್​ಪಿಗಳ ಮೇಲಾಗಿದೆ ಎಂದರೂ ತಪ್ಪಿಲ್ಲ. ಈ ಮೊದಲು ಧಾರಾವಾಹಿಗಳು ಎರಡು ಡಿಜಿಟ್ ಸಂಖ್ಯೆಯಲ್ಲಿ ಟಿಆರ್​ಪಿ (TRP) ಪಡೆದ ಉದಾಹರಣೆ ಇದೆ. ಆದರೆ, ಈಗ ಹಾಗಿಲ್ಲ. ವಾರ ಕಳೆದಂತೆ ಎಲ್ಲಾ ಧಾರಾವಾಹಿಗಳ ಟಿಆರ್​ಪಿಯಲ್ಲಿ ಇಳಿಕೆ ಕಾಣುತ್ತಿದೆ. ಇದಕ್ಕೆ ಐಪಿಎಲ್ ಕಾರಣ ಎಂದು ಹೇಳಲಾಗುತ್ತಿದೆ.

ಈ ಬಾರಿ ‘ಲಕ್ಷ್ಮೀ ನಿವಾಸ’ ಧಾರಾವಾಹಿ ಟಿಆರ್​ಪಿಯಲ್ಲಿ ಮೊದಲ ಸ್ಥಾನದಲ್ಲಿ ಇದೆ. ಈ ಧಾರಾವಾಹಿಗೆ ಕಳೆದ ವಾರಕ್ಕಿಂತ ಕಡಿಮೆ ಟಿಆರ್​ಪಿ ಸಿಕ್ಕಿದೆ. ಉಳಿದ ಧಾರಾವಾಹಿಗಳ ರೇಟಿಂಗ್ ಕೂಡ ಕಡಿಮೆ ಆಗಿರುವುದರಿಂದ ಈ ಧಾರಾವಾಹಿ ಮೊದಲ ಸ್ಥಾನದಲ್ಲೇ ಇದೆ. ಎರಡನೇ ಸ್ಥಾನದಲ್ಲಿ ‘ಪುಟ್ಟಕ್ಕನ ಮಕ್ಕಳು’ ಧಾರಾವಾಹಿ ಇದೆ. ಈ ಧಾರಾವಾಹಿ ಈ ಮೊದಲು ಎರಡಂಕಿ ಟಿಆರ್​ಪಿ ಪಡೆಯುತ್ತಿತ್ತು. ಆದರೆ, ಇತ್ತೀಚೆಗೆ ಟಿಆರ್​ಪಿ ಕುಸಿಯುತ್ತಿದೆ.

ಕಲರ್ಸ್ ಕನ್ನಡದ ‘ರಾಮಾಚಾರಿ’ ಧಾರಾವಾಹಿ ಟಿಆರ್​ಪಿ ರೇಸ್​ನಲ್ಲಿದೆ. ಈ ಧಾರಾವಾಹಿ ಮೂರನೇ ಸ್ಥಾನ ಪಡೆದುಕೊಂಡಿದೆ. ಈ ಧಾರಾವಾಹಿಯ ಟಿಆರ್​ಪಿಯಲ್ಲಿ ಏರಿಳಿತ ಆಗುತ್ತಲೇ ಇದೆ. ‘ಸೀತಾ ರಾಮ’ ಧಾರಾವಾಹಿ ಹೊಸ ಹೊಸ ತಿರುವುಗಳನ್ನು ಪಡೆದುಕೊಂಡು ಸಾಗುತ್ತಿದೆ. ಈ ಧಾರಾವಾಹಿ ನಾಲ್ಕನೇ ಸ್ಥಾನದಲ್ಲಿದೆ. ಗಗನ್ ಚಿನ್ನಪ್ಪ, ವೈಷ್ಣವಿ ಗೌಡ, ಅಶೋಕ್ ಮೊದಲಾದವರು ಈ ಧಾರಾವಾಹಿಯಲ್ಲಿ ನಟಿಸುತ್ತಿದ್ದಾರೆ. ಈ ಧಾರಾವಾಹಿ ಕನ್ಸಿಸ್ಟನ್ಸಿ ಕಾಪಾಡಿಕೊಂಡು ಹೋಗುತ್ತಿದೆ.

ಇದನ್ನೂ ಓದಿ: ಕಲರ್ಸ್ ಕನ್ನಡ ಧಾರಾವಾಹಿಗೆ ಎಂಟ್ರಿಕೊಟ್ಟ ವಿನಯ್ ಗೌಡ; ಇಲ್ಲಿದೆ ವಿವರ

ಹೊಸದಾಗಿ ಎಂಟ್ರಿಕೊಟ್ಟಿರೋ ‘ಶ್ರಾವಣಿ ಸುಬ್ರಹ್ಮಣ್ಯ’ ಧಾರಾವಾಹಿ ರೇಸ್​ನಲ್ಲಿ ಐದನೇ ಸ್ಥಾನದಲ್ಲಿ ಇದೆ. ಈ ಧಾರಾವಾಹಿ ಟಿಆರ್​ಪಿ ರೇಸ್​ನಲ್ಲಿ ಸ್ಥಾನ ಪಡೆದುಕೊಂಡು ಮಿಂಚುತ್ತಿದೆ. ಎಲ್ಲಾ ಧಾರಾವಾಹಿಗಳ ಟಿಆರ್​ಪಿ ಕಡಿಮೆ ಆಗಿರುವುದಕ್ಕೆ ಐಪಿಎಲ್ ಮುಖ್ಯ ಕಾರಣ ಅನ್ನೋದು ಕೆಲವರ ಅಭಿಪ್ರಾಯ. ಈ ಮೊದಲು ಬಿಗ್ ಬಾಸ್ ಬಂದಾಗ ಇತರ ವಾಹಿನಿಗಳಲ್ಲಿ ಆ ಸಂದರ್ಭದಲ್ಲಿ ಪ್ರಸಾರ ಆಗುತ್ತಿದ್ದ ಧಾರಾವಾಹಿಗಳ ಟಿಆರ್​ಪಿ ಕಡಿಮೆ ಆಗಿತ್ತು.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 2:19 pm, Fri, 19 April 24

Follow Us
ಹಳೇ ಹುಬ್ಬಳ್ಳಿ ಆಸಾರ ಓಣಿ ಪುಷ್ಕರಣಿ ವಿವಾದ: ಹಿಂದೂಪರ ಸಂಘಟನೆಗಳ ಪ್ರತಿಭಟನೆ
ಹಳೇ ಹುಬ್ಬಳ್ಳಿ ಆಸಾರ ಓಣಿ ಪುಷ್ಕರಣಿ ವಿವಾದ: ಹಿಂದೂಪರ ಸಂಘಟನೆಗಳ ಪ್ರತಿಭಟನೆ
28 ಕೈದಿಗಳ ಬಿಡುಗಡೆಗೆ ಸಚಿವ ಸಂಪುಟ ಅಸ್ತು
28 ಕೈದಿಗಳ ಬಿಡುಗಡೆಗೆ ಸಚಿವ ಸಂಪುಟ ಅಸ್ತು
ಇಂದು ಶ್ರಾವಣ ಶನಿವಾರ; ವೆಂಕಟೇಶ್ವರನ ದರ್ಶನ ಹಾಗೂ ನಾಮಸ್ಮರಣೆಗೆ ಶುಭ ದಿನ
ಇಂದು ಶ್ರಾವಣ ಶನಿವಾರ; ವೆಂಕಟೇಶ್ವರನ ದರ್ಶನ ಹಾಗೂ ನಾಮಸ್ಮರಣೆಗೆ ಶುಭ ದಿನ
ಬಾಗಲಕೋಟೆಯಲ್ಲಿ ಅಜಾನ್ ವಿವಾದ: ಸಿಡಿದೆದ್ದ ಬಿಜೆಪಿ, ಹಿಂದೂ ಸಂಘಟನೆಗಳು
ಬಾಗಲಕೋಟೆಯಲ್ಲಿ ಅಜಾನ್ ವಿವಾದ: ಸಿಡಿದೆದ್ದ ಬಿಜೆಪಿ, ಹಿಂದೂ ಸಂಘಟನೆಗಳು
ಭಾರತ-ಬಾಂಗ್ಲಾ ಗಡಿ ಭದ್ರಪಡಿಸದೆ ಬಂಗಾಳ ಭದ್ರವಾಗಲು ಸಾಧ್ಯವಿಲ್ಲ; ಅಮಿತ್ ಶಾ
ಭಾರತ-ಬಾಂಗ್ಲಾ ಗಡಿ ಭದ್ರಪಡಿಸದೆ ಬಂಗಾಳ ಭದ್ರವಾಗಲು ಸಾಧ್ಯವಿಲ್ಲ; ಅಮಿತ್ ಶಾ
ಮಠದಲ್ಲೇ ಅಪ್ರಾಪ್ತೆ ಮೇಲೆರಗಿ ಅಟ್ಟಹಾಸ: ಸ್ವಾಮೀಜಿ ಅರೆಸ್ಟ್
ಮಠದಲ್ಲೇ ಅಪ್ರಾಪ್ತೆ ಮೇಲೆರಗಿ ಅಟ್ಟಹಾಸ: ಸ್ವಾಮೀಜಿ ಅರೆಸ್ಟ್
ನೈಸರ್ಗಿಕವಾಗಿ ಬಾಳೆಕಾಯಿ ಹಣ್ಣು ಮಾಡುವ ವಿಧಾನ ಹೇಗೆ? ವಿಡಿಯೋ ನೋಡಿ
ನೈಸರ್ಗಿಕವಾಗಿ ಬಾಳೆಕಾಯಿ ಹಣ್ಣು ಮಾಡುವ ವಿಧಾನ ಹೇಗೆ? ವಿಡಿಯೋ ನೋಡಿ
ನಾಗೇಂದ್ರ ಮತ್ತಷ್ಟು ಸಂಕಷ್ಟ: ಪ್ರಾಸಿಕ್ಯೂಷನ್‌ಗೆ ಅನುಮತಿ ಸಿಬಿಐ ಪತ್ರ!
ನಾಗೇಂದ್ರ ಮತ್ತಷ್ಟು ಸಂಕಷ್ಟ: ಪ್ರಾಸಿಕ್ಯೂಷನ್‌ಗೆ ಅನುಮತಿ ಸಿಬಿಐ ಪತ್ರ!
ಹೇಗೆ ನಡೀತಿದೆ ‘ಟಾಕ್ಸಿಕ್’ ಕಟೌಟ್ ತಯಾರಿ? ವಿಡಿಯೋ ನೋಡಿ
ಹೇಗೆ ನಡೀತಿದೆ ‘ಟಾಕ್ಸಿಕ್’ ಕಟೌಟ್ ತಯಾರಿ? ವಿಡಿಯೋ ನೋಡಿ
2 ಕೋಟಿ ರೂ. ವೆಚ್ಚದಲ್ಲಿ 700 ವರ್ಷಗಳ ಪುರಾತನ ದೇಗುಲ ಜೀರ್ಣೋದ್ಧಾರ
2 ಕೋಟಿ ರೂ. ವೆಚ್ಚದಲ್ಲಿ 700 ವರ್ಷಗಳ ಪುರಾತನ ದೇಗುಲ ಜೀರ್ಣೋದ್ಧಾರ