Kannada Serial TRP: ಟಿಆರ್​ಪಿ ರೇಸ್: ಟಾಪ್​​ನಲ್ಲಿರೋ ಹತ್ತು ಧಾರಾವಾಹಿಗಳ ಬಗ್ಗೆ ಇಲ್ಲಿದೆ ಮಾಹಿತಿ

ಜೀ ಕನ್ನಡದ 3 ಧಾರಾವಾಹಿ ಹಾಗೂ ಕಲರ್ಸ್​ ಕನ್ನಡದ ಎರಡು ಧಾರಾವಾಹಿ ಟಾಪ್ ಐದರಲ್ಲಿ ಇದೆ. ಆ ಬಗ್ಗೆ ಇಲ್ಲಿದೆ ವಿವರ.

Kannada Serial TRP: ಟಿಆರ್​ಪಿ ರೇಸ್: ಟಾಪ್​​ನಲ್ಲಿರೋ ಹತ್ತು ಧಾರಾವಾಹಿಗಳ ಬಗ್ಗೆ ಇಲ್ಲಿದೆ ಮಾಹಿತಿ
ಕನ್ನಡ ಸೀರಿಯಲ್ ಟಿಆರ್​ಪಿ
Follow us
|

Updated on:May 05, 2023 | 3:16 PM

ಇದು ಟಿಆರ್​ಪಿ ಯುಗ. ಯಾವುದೇ ಧಾರಾವಾಹಿಯ ಜನಪ್ರಿಯತೆ ಅಳೆಯಬೇಕು ಎಂದರೆ ಅದಕ್ಕೆ ಮಾನದಂಡವಾಗಿ ಬಳಕೆ ಆಗೋದು ಟಿಆರ್​ಪಿ. ಕನ್ನಡ ಸೀರಿಯಲ್ ಟಿಆರ್​ಪಿ ಪಟ್ಟಿ ಬಿಡುಗಡೆ ಆಗಿದೆ. ಸೋಮವಾರದಿಂದ ಭಾನುವಾರದವರೆಗಿನ (ಏಪ್ರಿಲ್ 22-28) ಅವಧಿಯಲ್ಲಿ ಹಲವು ಧಾರಾವಾಹಿಗಳು ಟಿಆರ್​ಪಿ ಲಿಸ್ಟ್​ನಲ್ಲಿ ಸ್ಥಾನ ಪಡೆದಿವೆ.   ಜೀ ಕನ್ನಡದ 3 ಧಾರಾವಾಹಿ ಹಾಗೂ ಕಲರ್ಸ್​ ಕನ್ನಡದ (Colors Kannada) ಎರಡು ಧಾರಾವಾಹಿ ಟಾಪ್ ಐದರಲ್ಲಿ ಇದೆ. ಆ ಬಗ್ಗೆ ಇಲ್ಲಿದೆ ವಿವರ.

ಪುಟ್ಟಕ್ಕನ ಮಕ್ಕಳು:

‘ಪುಟ್ಟಕ್ಕನ ಮಕ್ಕಳು’ ಧಾರಾವಾಹಿ ಟಿಆರ್​ಪಿ ರೇಸ್​ನಲ್ಲಿ ಮೊದಲ ಸ್ಥಾನದಲ್ಲಿದೆ. ಈ ಧಾರಾವಾಹಿಗೆ ದೊಡ್ಡ ವೀಕ್ಷಕರ ವರ್ಗ ಇದೆ. ಹಿರಿಯ ನಟಿ ಉಮಾಶ್ರೀ ಅವರು ಎಲ್ಲರ ಗಮನ ಸೆಳೆಯುವ ಕೆಲಸ ಮಾಡುತ್ತಿದ್ದಾರೆ. ಈ ಧಾರಾವಾಹಿ ಜನರಿಗೆ ಇಷ್ಟವಾಗಿದೆ ಅನ್ನೋದಕ್ಕೆ ಟಿಆರ್​ಪಿಯಲ್ಲಿ ಈ ಧಾರಾವಾಹಿ ಮೊದಲಿರುವುದೇ ಸಾಕ್ಷಿ.

ಗಟ್ಟಿಮೇಳ:

ಗಟ್ಟಿಮೇಳ ಧಾರಾವಾಹಿ ಎರಡನೇ ಸ್ಥಾನದಲ್ಲಿದೆ. ಜೀ ಕನ್ನಡದಲ್ಲಿ ಪ್ರಸಾರ ಆಗುತ್ತಿರುವ ಈ ಧಾರಾವಾಹಿ ಜನಮನ್ನಣೆ ಪಡೆದಿದೆ. ಈಗಾಗಲೇ ಧಾರಾವಾಹಿ 1000+ ಎಪಿಸೋಡ್ ಪೂರೈಸಿದೆ. ಆದಾಗ್ಯೂ ಧಾರಾವಾಹಿ ಟಿಆರ್​ಪಿ ಕಳೆದುಕೊಂಡಿಲ್ಲ. ವೀಕ್ಷಕರಿಗೆ ಇಷ್ಟ ಆಗುವ ರೀತಿಯಲ್ಲಿ ಕಥೆಯನ್ನು ತೆಗೆದುಕೊಂಡು ಹೋಗಲಾಗುತ್ತಿದೆ.

ಲಕ್ಷ್ಮೀ ಬಾರಮ್ಮ:

ಕಲರ್ಸ್ ಕನ್ನಡದ ‘ಲಕ್ಷ್ಮೀ ಬಾರಮ್ಮ’ ಧಾರಾವಾಹಿ ಜನಮನ್ನಣೆ ಪಡೆದಿದೆ. ಈ ಧಾರಾವಾಹಿಯನ್ನು ಜನರು ಇಷ್ಟಪಡುತ್ತಿದ್ದಾರೆ. ಟಾಪ್ ಐದರಲ್ಲಿ ಈ ಧಾರಾವಾಹಿಗೆ ಮೂರನೇ ಸ್ಥಾನ ಇದೆ.

‘ಭಾಗ್ಯ ಲಕ್ಷ್ಮೀ’

‘ಭಾಗ್ಯ ಲಕ್ಷ್ಮೀ’ ಧಾರಾವಾಹಿ ಕೂಡ ಕಲರ್ಸ್ ಕನ್ನಡದಲ್ಲಿ ಪ್ರಸಾರ ಆಗುತ್ತಿದೆ. ಈ ಧಾರಾವಾಹಿ ಸಾಕಷ್ಟು ಜನಪ್ರಿಯತೆ ಪಡೆದಿದೆ. ಈ ಧಾರಾವಾಹಿ ನಾಲ್ಕನೇ ಸ್ಥಾನದಲ್ಲಿದೆ.

ಶ್ರೀರಸ್ತು ಶುಭಮಸ್ತು

ಸುಧಾರಾಣಿ ಅವರು ಹಿರಿತೆರೆಯಲ್ಲಿ ಹೆಚ್ಚು ಗುರುತಿಸಿಕೊಂಡವರು. ಅವರು ‘ಶ್ರೀರಸ್ತು ಶುಭಮಸ್ತು’ ಧಾರಾವಾಹಿ ಮೂಲಕ ಗಮನ ಸೆಳೆಯುತ್ತಿದ್ದಾರೆ. ತುಳಸಿ ಹೆಸರಿನ ಪಾತ್ರವನ್ನು ಅವರು ಮಾಡಿದ್ದಾರೆ. ಮಾಧವ್ ಆಗಿ ಅಜಿತ್ ಹಂದೆ ಕಾಣಿಸಿಕೊಂಡಿದ್ದಾರೆ. ಈ ಧಾರಾವಾಹಿ ಐದನೇ ಸ್ಥಾನದಲ್ಲಿದೆ. ಕಳೆದ ವಾರ ಈ ಧಾರಾವಾಹಿ ಮೂರನೇ ಸ್ಥಾನದಲ್ಲಿತ್ತು.

ಉಳಿದ ಸ್ಥಾನ..

ಆರನೇ ಸ್ಥಾನದಲ್ಲಿ ‘ಸತ್ಯ’, ಏಳನೇ ಸ್ಥಾನದಲ್ಲಿ ‘ತ್ರಿನಯನಿ’, ಎಂಟನೇ ಸ್ಥಾನದಲ್ಲಿ ‘ಉಧೋ ಉಧೋ ಶ್ರೀ ರೇಣುಕಾ ಯಲ್ಲಮ್ಮ’, ಒಂಭತ್ತು ಹಾಗೂ ಹತ್ತನೇ ಸ್ಥಾನದಲ್ಲಿ ‘ಹಿಟ್ಲರ್ ಕಲ್ಯಾಣ’ ಹಾಗೂ ‘ಪುನರ್ ​ವಿವಾಹ’ ಧಾರಾವಾಹಿಗಳು ಇವೆ.

Published On - 2:13 pm, Fri, 5 May 23

ಸೆಪ್ಟೆಂಬರ್​​ 30 ರಿಂದ ಅಕ್ಟೋಬರ್​ 6ರವರೆಗಿನ ವಾರ ಭವಿಷ್ಯ ತಿಳಿಯಿರಿ
ಸೆಪ್ಟೆಂಬರ್​​ 30 ರಿಂದ ಅಕ್ಟೋಬರ್​ 6ರವರೆಗಿನ ವಾರ ಭವಿಷ್ಯ ತಿಳಿಯಿರಿ
Nithya Bhavishya: ಈ ರಾಶಿಯವರು ಕೆಲವು ಸಾಲಬಾಧೆಯಿಂದ ಮುಕ್ತಿಪಡೆಯುವಿರಿ
Nithya Bhavishya: ಈ ರಾಶಿಯವರು ಕೆಲವು ಸಾಲಬಾಧೆಯಿಂದ ಮುಕ್ತಿಪಡೆಯುವಿರಿ
ನೀವು ಏನಾದರೂ ಅಂದುಕೊಳ್ರಿ ನಾನಿರೋದು ಹೀಗೆ: ಶಿವಣ್ಣ
ನೀವು ಏನಾದರೂ ಅಂದುಕೊಳ್ರಿ ನಾನಿರೋದು ಹೀಗೆ: ಶಿವಣ್ಣ
ತುಂಬಿ ಹರಿಯುವ ಹೊಳೆಯಲ್ಲೇ ಗರ್ಭಿಣಿ ಹೆಂಡತಿಯನ್ನು ಹೊತ್ತು ನಡೆದ ಗಂಡ
ತುಂಬಿ ಹರಿಯುವ ಹೊಳೆಯಲ್ಲೇ ಗರ್ಭಿಣಿ ಹೆಂಡತಿಯನ್ನು ಹೊತ್ತು ನಡೆದ ಗಂಡ
ನಾಳೆ ಹಮ್ಮಿಕೊಂಡಿದ್ದ ಚಾಮುಂಡಿ ಚಲೋ ರದ್ದು: ಪ್ರತಾಪ್ ಸಿಂಹ ಹೇಳಿದ್ದಿಷ್ಟು
ನಾಳೆ ಹಮ್ಮಿಕೊಂಡಿದ್ದ ಚಾಮುಂಡಿ ಚಲೋ ರದ್ದು: ಪ್ರತಾಪ್ ಸಿಂಹ ಹೇಳಿದ್ದಿಷ್ಟು
ಮಧ್ಯಪ್ರದೇಶದ ಶಾಜಾಪುರದಲ್ಲಿ ಭೀಕರ ಅಪಘಾತ; ಶಾಲಾ ಬಸ್ ಪಲ್ಟಿ, ಮಕ್ಕಳಿಗೆ ಗಾಯ
ಮಧ್ಯಪ್ರದೇಶದ ಶಾಜಾಪುರದಲ್ಲಿ ಭೀಕರ ಅಪಘಾತ; ಶಾಲಾ ಬಸ್ ಪಲ್ಟಿ, ಮಕ್ಕಳಿಗೆ ಗಾಯ
ಗ್ಯಾರಂಟಿ ಯೋಜನೆಗಳು, ಬಡವರ ಸುರಕ್ಷತೆ, ಕಲ್ಯಾಣ ಕೃತಿ ಬಿಡುಗಡೆ ಮಾಡಿದ ಸಿಎಂ
ಗ್ಯಾರಂಟಿ ಯೋಜನೆಗಳು, ಬಡವರ ಸುರಕ್ಷತೆ, ಕಲ್ಯಾಣ ಕೃತಿ ಬಿಡುಗಡೆ ಮಾಡಿದ ಸಿಎಂ
ಕೋಲಾರ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಮಾರಾಮಾರಿ
ಕೋಲಾರ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಮಾರಾಮಾರಿ
ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಕಾರು, ಸಿಟಿವಿಯಲ್ಲಿ ಭೀಕರ ದೃಶ್ಯ ಸೆರೆ
ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಕಾರು, ಸಿಟಿವಿಯಲ್ಲಿ ಭೀಕರ ದೃಶ್ಯ ಸೆರೆ
ಕೊತ್ವಾಲನ ಶಿಷ್ಯರು ವಿಧಾನಸೌಧಕ್ಕೆ ಬಂದ್ಮೇಲೆ ಕುಲಗೆಟ್ಟಿದ್ದು: ಹೆಚ್​ಡಿಕೆ
ಕೊತ್ವಾಲನ ಶಿಷ್ಯರು ವಿಧಾನಸೌಧಕ್ಕೆ ಬಂದ್ಮೇಲೆ ಕುಲಗೆಟ್ಟಿದ್ದು: ಹೆಚ್​ಡಿಕೆ