AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಖತ್ ಟಿಆರ್​ಪಿ ಪಡೆದ ‘ಪುಟ್ಟಕ್ಕನ ಮಕ್ಕಳು’; ಮೂರು ಧಾರಾವಾಹಿಗೆ ಒಂದೇ ಸ್ಥಾನ, ಇಲ್ಲಿದೆ ವಿವರ

Kannada TV Serials TRP: ಟಿಆರ್​ಪಿ ರೇಸ್​ನಲ್ಲಿ ಯಾವ ಧಾರಾವಾಹಿಗೆ ಯಾವ ಸ್ಥಾನ? ನಾಲ್ಕನೇ ಸ್ಥಾನದಲ್ಲಿ ಇರುವ ಮೂರು ಧಾರಾವಾಹಿಗಳು ಯಾವವು? ಆ ಬಗ್ಗೆ ಇಲ್ಲಿದೆ ವಿವರ.

ಸಖತ್ ಟಿಆರ್​ಪಿ ಪಡೆದ ‘ಪುಟ್ಟಕ್ಕನ ಮಕ್ಕಳು’; ಮೂರು ಧಾರಾವಾಹಿಗೆ ಒಂದೇ ಸ್ಥಾನ, ಇಲ್ಲಿದೆ ವಿವರ
ಕನ್ನಡ ಸೀರಿಯಲ್ ಟಿಆರ್​ಪಿ
ರಾಜೇಶ್ ದುಗ್ಗುಮನೆ
| Edited By: |

Updated on:Jun 01, 2023 | 2:03 PM

Share

ಟಿಆರ್​ಪಿ (Serial TRP) ರೇಸ್​ನಲ್ಲಿ ಏರಿಳಿತಗಳು ಸಾಮಾನ್ಯ. ಈ ವಾರ ಟಾಪ್​ನಲ್ಲಿದ್ದ ಸೀರಿಯಲ್ ಮುಂದಿನವಾರ ಕೆಳಕ್ಕೆ ಕುಸಿಯಬಹುದು. ಇದು ನಿರಂತರ. ಈಗ ಕಳೆದವಾರದ (ಮೇ 19-25) ಧಾರಾವಾಹಿ ಟಿಆರ್​ಪಿ ಲಿಸ್ಟ್ ಹೊರಬಿದ್ದಿದೆ. ಈ ಪೈಕಿ ಉಮಾಶ್ರೀ ನಟನೆಯ ‘ಪುಟ್ಟಕ್ಕನ ಮಕ್ಕಳು’ (Puttakkana Makkalu) ಧಾರಾವಾಹಿ ಟಾಪ್ ಸ್ಥಾನ ಕಾಯ್ದುಕೊಂಡಿದೆ. ನಾಲ್ಕನೇ ಸ್ಥಾನದಲ್ಲಿ ಮೂರು ಧಾರಾವಾಹಿಗಳು ಇವೆ. ಹಾಗಾದರೆ, ಯಾವ ಧಾರಾವಾಹಿಗೆ ಯಾವ ಸ್ಥಾನ? ನಾಲ್ಕನೇ ಸ್ಥಾನದಲ್ಲಿ ಇರುವ ಮೂರು ಧಾರಾವಾಹಿಗಳು ಯಾವವು? ಆ ಬಗ್ಗೆ ಇಲ್ಲಿದೆ ವಿವರ.

ಪುಟ್ಟಕ್ಕನ ಮಕ್ಕಳು

‘ಪುಟ್ಟಕ್ಕನ ಮಕ್ಕಳು’ ಧಾರಾವಾಹಿ ಜೀ ಕನ್ನಡ ವಾಹಿನಿಯಲ್ಲಿ ಪ್ರಸಾರ ಕಾಣುತ್ತಿದೆ. ಈ ಧಾರಾವಾಹಿ ಮೊದಲ ಸ್ಥಾನದಲ್ಲಿದೆ. ಸಾಮಾನ್ಯಕ್ಕಿಂತ ಹೆಚ್ಚಿನ ಟಿಆರ್​ಪಿಯನ್ನು ಇದು ಪಡೆದಿದೆ. ಉಮಾಶ್ರೀ ಅವರು ನಟನೆ ಮೂಲಕ ಗಮನ ಸೆಳೆದಿದ್ದಾರೆ. ಅವರ ಪಾತ್ರ ವೀಕ್ಷಕರಿಗೆ ಇಷ್ಟವಾಗಿದೆ. ಹೀಗಾಗಿ, ಈ ಧಾರಾವಾಹಿ ಮೊದಲ ಸ್ಥಾನದಲ್ಲಿದೆ.

ಗಟ್ಟಿಮೇಳ

ಜೀ ಕನ್ನಡದಲ್ಲಿ ಪ್ರಸಾರ ಆಗುತ್ತಿರುವ ‘ಗಟ್ಟಿಮೇಳ’ ಧಾರಾವಾಹಿ ಟಿಆರ್​ಪಿ ರೇಸ್​ನಲ್ಲಿ ಎರಡನೇ ಸ್ಥಾನದಲ್ಲಿದೆ. ಸಾವಿರ ಎಪಿಸೋಡ್ ಮುಗಿಸಿದ ಬಳಿಕವೂ ಧಾರಾವಾಹಿಗೆ ಬೇಡಿಕೆ ಕಡಿಮೆ ಆಗಿಲ್ಲ. ರಕ್ಷಿತ್ ಗೌಡ, ನಿಶಾ ರವಿಕೃಷ್ಣನ್, ಸುಧಾ ನರಸಿಂಹರಾಜು ಮೊದಲಾದವರು ಈ ಧಾರಾವಾಹಿಯಲ್ಲಿ ನಟಿಸಿದ್ದಾರೆ. ರಕ್ಷಿತ್ ವೇದಾಂತ್ ಆಗಿ ಗಮನ ಸೆಳೆದರೆ ನಿಶಾ ಅಮೂಲ್ಯ ಹೆಸರಿನ ಪಾತ್ರ ಮಾಡುತ್ತಿದ್ದಾರೆ.

ಭಾಗ್ಯ ಲಕ್ಷ್ಮೀ

‘ಭಾಗ್ಯ ಲಕ್ಷ್ಮೀ’ ಧಾರಾವಾಹಿ ಕಲರ್ಸ್ ಕನ್ನಡದಲ್ಲಿ ಪ್ರಸಾರ ಕಾಣುತ್ತಿದೆ. ಈ ಧಾರಾವಾಹಿಗೆ ಎಲ್ಲ ಕಡೆಗಳಿಂದ ಮೆಚ್ಚುಗೆ ವ್ಯಕ್ತವಾಗಿದೆ. ಈ ಧಾರಾವಾಹಿ ಮೂರನೇ ಸ್ಥಾನದಲ್ಲಿದೆ. ಭೂಮಿಕಾ ರಮೇಶ್, ಸುಷ್ಮಾ ಕೆ. ರಾವ್, ಸುದರ್ಶನ್ ರಂಗಪ್ರಸಾದ್ ಮೊದಲಾದವರು ಈ ಧಾರಾವಾಹಿಯಲ್ಲಿದ್ದಾರೆ. ಕಳೆದ ವಾರವೂ ಈ ಧಾರಾವಾಹಿಗೆ ಮೂರನೇ ಸ್ಥಾನ ಸಿಕ್ಕಿತ್ತು.

ಇದನ್ನೂ ಓದಿ: ‘ಅಮೃತಧಾರೆ’ ಧಾರಾವಾಹಿ: ಇಲ್ಲಿ ನಾಯಕ-ನಾಯಕಿ ಪಡುತ್ತಿರುವ ಕಷ್ಟಗಳು ಒಂದೇ

ನಾಲ್ಕನೇ ಸ್ಥಾನದಲ್ಲಿ ಮೂರು ಸೀರಿಯಲ್

ನಾಲ್ಕನೇ ಸ್ಥಾನದಲ್ಲಿ ಜೀ ಕನ್ನಡ ವಾಹಿನಿಯ ‘ಸತ್ಯ’, ಕಲರ್ಸ್ ಕನ್ನಡದ ‘ಲಕ್ಷ್ಮೀ ಬಾರಮ್ಮ’, ಜೀ ಕನ್ನಡದ ‘ಶ್ರೀರಸ್ತು ಶುಭಮಸ್ತು’ ಇದೆ.

ತ್ರಿನಯನಿ

ಐದನೇ ಸ್ಥಾನದಲ್ಲಿ ಜೀ ಕನ್ನಡ ವಾಹಿನಿಯ ‘ತ್ರಿನಯನಿ’ ಧಾರಾವಾಹಿ ಇದೆ. ಮೂರು ಧಾರಾವಾಹಿಗಳಿಗೆ ಒಂದೇ ಸ್ಥಾನ ಸಿಕ್ಕಿದ್ದರಿಂದ ಈ ಧಾರಾವಾಹಿಗೆ ಐದನೇ ಸ್ಥಾನ ಸಿಕ್ಕಿದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ ಇದನ್ನೂ ಓದಿ:

Published On - 12:54 pm, Thu, 1 June 23

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ