AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟಿಆರ್​ಪಿಯಲ್ಲಿ ಮತ್ತೆ ಮೊದಲ ಸ್ಥಾನಕ್ಕೇರಿದ ‘ಪುಟ್ಟಕ್ಕನ ಮಕ್ಕಳು’; ಟಾಪ್ ಐದು ಧಾರಾವಾಹಿಗಳಿವು

‘ಲಕ್ಷ್ಮೀ ನಿವಾಸ’ ಧಾರಾವಾಹಿ ಈ ಬಾರಿ ಎರಡನೇ ಸ್ಥಾನದಲ್ಲಿ ಇದೆ. ಅಶೋಕ್ ಜಂಬೆ, ಶ್ವೇತಾ, ಮಧು ಹೆಗ್ಡೆ, ದಿಶಾ ಮದನ್ ಮೊದಲಾದವರು ನಟಿಸಿದ್ದಾರೆ.  ಈ ಧಾರಾವಾಹಿ ಜನ ಮೆಚ್ಚುಗೆ ಪಡೆಯುತ್ತಿದೆ. ಆರಂಭ ಆದಾಗಿನಿಂದಲೂ ಈ ಧಾರಾವಾಹಿ ಮೊದಲ ಸ್ಥಾನದಲ್ಲೇ ಮುನ್ನಡೆಯುತ್ತಾ ಬರುತ್ತಿತ್ತು. ಈಗ ಧಾರಾವಾಹಿ ಎರಡನೇ ಸ್ಥಾನಕ್ಕೆ ಇಳಿದಿದೆ.

ಟಿಆರ್​ಪಿಯಲ್ಲಿ ಮತ್ತೆ ಮೊದಲ ಸ್ಥಾನಕ್ಕೇರಿದ ‘ಪುಟ್ಟಕ್ಕನ ಮಕ್ಕಳು’; ಟಾಪ್ ಐದು ಧಾರಾವಾಹಿಗಳಿವು
ಲಕ್ಷ್ಮಿ ನಿವಾಸ-ಪುಟ್ಟಕ್ಕನ ಮಕ್ಕಳು
ರಾಜೇಶ್ ದುಗ್ಗುಮನೆ
|

Updated on: Apr 25, 2024 | 2:29 PM

Share

2024ರ 16ನೇ ವಾರದ ಟಿಆರ್​ಪಿ ಲಿಸ್ಟ್ ಹೊರ ಬಿದ್ದಿದೆ. ಇಷ್ಟು ವಾರಗಳ ಕಾಲ ಎರಡನೇ ಸ್ಥಾನ ಪಡೆಯುತ್ತಾ ಬರುತ್ತಿದ್ದ ‘ಪುಟ್ಟಕ್ಕನ ಮಕ್ಕಳು’ ಧಾರಾವಾಹಿ (Puttakkana Makkalu Serial) 16ನೇ ವಾರದ ಟಿಆರ್​ಪಿಯಲ್ಲಿ ಮೊದಲ ಸ್ಥಾನಕ್ಕೇರಿದೆ. ಪಾಯಿಂಟ್ ಒಂದು ಅಂಕಗಳ ಅಂತರದಲ್ಲಿ ಈ ಧಾರಾವಾಹಿ ಮೊದಲ ಸ್ಥಾನ ಪಡೆದುಕೊಂಡಿದೆ. ಉಮಾಶ್ರೀ, ಸಂಜನಾ ಬರ್ಲಿ, ಮಂಜು ಭಾಷಿಣಿ ಮೊದಲಾದವರು ಧಾರಾವಾಹಿಯಲ್ಲಿ ನಟಿಸಿದ್ದಾರೆ.

ಎರಡನೇ ಸ್ಥಾನದಲ್ಲಿ ಈ ಬಾರಿ ‘ಲಕ್ಷ್ಮೀ ನಿವಾಸ’ ಧಾರಾವಾಹಿ ಇದೆ. ಅಶೋಕ್ ಜಂಬೆ, ಶ್ವೇತಾ, ಮಧು ಹೆಗ್ಡೆ, ದಿಶಾ ಮದನ್ ಮೊದಲಾದವರು ನಟಿಸಿದ್ದಾರೆ.  ಈ ಧಾರಾವಾಹಿ ಜನ ಮೆಚ್ಚುಗೆ ಪಡೆಯುತ್ತಿದೆ. ಆರಂಭ ಆದಾಗಿನಿಂದಲೂ ಈ ಧಾರಾವಾಹಿ ಮೊದಲ ಸ್ಥಾನದಲ್ಲೇ ಮುನ್ನಡೆಯುತ್ತಾ ಬರುತ್ತಿತ್ತು. ಈಗ ಧಾರಾವಾಹಿ ಎರಡನೇ ಸ್ಥಾನಕ್ಕೆ ಇಳಿದಿದೆ. ಮುಂದಿನ ವಾರಕ್ಕೆ ಮತ್ತೆ ಟಿಆರ್​ಪಿಯಲ್ಲಿ ಬದಲಾವಣೆ ಆಗಬಹುದು.

ಮೂರನೇ ಸ್ಥಾನದಲ್ಲಿ ‘ಸೀತಾ ರಾಮ’ ಧಾರಾವಾಹಿ ಇದೆ. ಗಗನ್ ಚಿನ್ನಪ್ಪ ರಾಮನಾಗಿ, ವೈಷ್ಣವಿ ಗೌಡ ಸೀತೆಯಾಗಿ ಈ ಧಾರಾವಾಹಿಯಲ್ಲಿ ನಟಿಸಿದ್ದಾರೆ. ಈಗಾಗಲೇ ವಿವಾಹ ಆಗಿ ಗಂಡನಿಂದ ದೂರವಾದ ಸೀತೆಯ ಮೇಲೆ ರಾಮನಿಗೆ ಪ್ರೀತಿ ಆಗಿದೆ. ಆಕೆಯ ಬಳಿ ಪ್ರೀತಿಯನ್ನೂ ಹೇಳಿಕೊಳ್ಳಲಾಗಿದೆ. ಇಬ್ಬರ ನಡುವಿನ ತುಮುಲವನ್ನು ತೋರಿಸಲಾಗುತ್ತಿದೆ.

ಇದನ್ನೂ ಓದಿ: ಐಪಿಎಲ್​ನಿಂದ ಸಿರಿಯಲ್ ಟಿಆರ್​ಪಿ ಮೇಲೆ ಭರ್ಜರಿ ಎಫೆಕ್ಟ್; ಯಾವ ಧಾರಾವಾಹಿಗೆ ಮೊದಲ ಸ್ಥಾನ?

ನಾಲ್ಕನೇ ಸ್ಥಾನದಲ್ಲಿ ಕಲರ್ಸ್ ಕನ್ನಡದಲ್ಲಿ ಪ್ರಸಾರ ಆಗುತ್ತಿರುವ ‘ರಾಮಾಚಾರಿ’ ಧಾರಾವಾಹಿ ಇದೆ. ಮೌನಾ ಗುಡ್ಡೇಮನೆ, ರಿತ್ವಿಕ್ ಕೃಪಾಕರ್, ಪುನಿಥಾ ಗೌಡ ಮೊದಲಾದವರು ನಟಿಸಿದ್ದಾರೆ. ಈ ಧಾರಾವಾಹಿ ಮೆಚ್ಚುಗೆ ಪಡೆಯುತ್ತಿದೆ. ಐದನೇ ಸ್ಥಾನದಲ್ಲಿ ಈ ಬಾರಿ ಎರಡು ಧಾರಾವಾಹಿಗಳು ಸ್ಥಾನ ಪಡೆದಿವೆ. ಇತ್ತೀಚೆಗೆ ಆರಂಭ ಆಗಿರೋ ‘ಶ್ರಾವಣಿ ಸುಬ್ರಮಣ್ಯ’ ಹಾಗೂ ‘ಅಮೃತಧಾರೆ’ ಧಾರಾವಾಹಿ ಇದೆ. ಎರಡೂ ಧಾರಾವಾಹಿಗಳಿಗೆ ಈ ಬಾರಿ ಐದನೇ ಸ್ಥಾನ ಸಿಕ್ಕಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ