AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಪುಟ್ಟಕ್ಕನ ಮಕ್ಕಳು’ ಧಾರಾವಾಹಿಗೆ ಭರ್ಜರಿ ಬೇಡಿಕೆ; ಟಿಆರ್​ಪಿಯಲ್ಲಿ ಸಖತ್ ಏರಿಕೆ

ಎರಡನೇ ಸ್ಥಾನದಲ್ಲಿ ‘ಲಕ್ಷ್ಮೀ ನಿವಾಸ’ ಧಾರಾವಾಹಿ ಇದೆ. ಈ ಧಾರಾವಾಹಿಯಲ್ಲಿ ಕೂಡು ಕುಟುಂಬದ ಕಥೆಯನ್ನು ಹೇಳಲಾಗುತ್ತಿದೆ. ಈ ಧಾರಾವಾಹಿ ಕಳೆದ ಕೆಲವು ವಾರಗಳಿಂದ ನಂಬರ್ 1 ಸ್ಥಾನದಲ್ಲಿ ಇತ್ತು. ಈಗ ‘ಪುಟ್ಟಕ್ಕನ ಮಕ್ಕಳು’ ಧಾರಾವಾಹಿ ಟಿಆರ್​ಪಿ ಹೆಚ್ಚಿರುವುದರಿಂದ ‘ಲಕ್ಷ್ಮಿ ನಿವಾಸ’ಕ್ಕೆ ಎರಡನೇ ಸ್ಥಾನ ಸಿಕ್ಕಿದೆ.

‘ಪುಟ್ಟಕ್ಕನ ಮಕ್ಕಳು’ ಧಾರಾವಾಹಿಗೆ ಭರ್ಜರಿ ಬೇಡಿಕೆ; ಟಿಆರ್​ಪಿಯಲ್ಲಿ ಸಖತ್ ಏರಿಕೆ
ಪುಟ್ಟಕ್ಕನ ಮಕ್ಕಳು
ರಾಜೇಶ್ ದುಗ್ಗುಮನೆ
|

Updated on: May 09, 2024 | 2:21 PM

Share

ಕನ್ನಡದಲ್ಲಿ ಪ್ರಸಾರ ಕಾಣುತ್ತಿರುವ ‘ಪುಟ್ಟಕ್ಕನ ಮಕ್ಕಳು’ ಧಾರಾವಾಹಿ (Puttakkana Makkalu) ಪ್ರಮುಖ ಘಟ್ಟ ತಲುಪಿದೆ. ಈ ಕಾರಣಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ವೀಕ್ಷಕರು ಈ ಧಾರಾವಾಹಿಯನ್ನು ನೋಡುತ್ತಿದ್ದಾರೆ. ಈ ಧಾರಾವಾಹಿ ಕಳೆದ ಮೂರು ವಾರಗಳಿಂದ ನಂಬರ್ 1 ಸ್ಥಾನದಲ್ಲಿ ಮುಂದುವರಿಯುತ್ತಿದೆ. 18ನೇ ವಾರದ ಟಿಆರ್​ಪಿ ಲಿಸ್ಟ್ ಹೊರ ಬಿದ್ದಿದ್ದು ಈ ಧಾರಾವಾಹಿಗೆ ಮೊದಲ ಸ್ಥಾನ ಸಿಕ್ಕಿದೆ. ಉಳಿದಂತೆ ಯಾವ ಯಾವ ಧಾರಾವಾಹಿಗಳು ಮೊದಲ ಸ್ಥಾನದಲ್ಲಿ ಇವೆ ಎನ್ನುವ ಬಗ್ಗೆ ಇಲ್ಲಿದೆ ಮಾಹಿತಿ.

‘ಪುಟ್ಟಕ್ಕನ ಮಕ್ಕಳು’ ಧಾರಾವಾಹಿಯಲ್ಲಿ ಉಮಾಶ್ರೀ, ಸಂಜನಾ ಬುರ್ಲಿ ಮೊದಲಾದವರು ಪ್ರಮುಖ ಪಾತ್ರ ಮಾಡಿದ್ದಾರೆ. ಈ ಧಾರಾವಾಹಿ ಎಲ್ಲರಿಂದ ಮೆಚ್ಚುಗೆ ಪಡೆಯುತ್ತಿದೆ. ‘ಪುಟ್ಟಕ್ಕನ ಮಕ್ಕಳು’ ಧಾರಾವಾಹಿ ಈಗ ಪ್ರಮುಖ ಘಟ್ಟ ತಲುಪಿದೆ. ಸಹನಾ ತೀರಿ ಹೋಗಿದ್ದಾಳೆ ಎಂದು ಎಲ್ಲರೂ ಅಂದುಕೊಂಡಿದ್ದಾರೆ. ಈ ಕಥೆ ಹಲವು ಟ್ವಿಸ್ಟ್ ಪಡೆದು ಸಾಗುತ್ತಿರುವುದರಿಂದ ಜನರಿಂದ ಧಾರಾವಾಹಿ ಮೆಚ್ಚುಗೆ ಪಡೆಯುತ್ತಿದೆ. ಟಿಆರ್​ಪಿ ಕೂಡ ಹೆಚ್ಚಿದೆ.

ಎರಡನೇ ಸ್ಥಾನದಲ್ಲಿ ‘ಲಕ್ಷ್ಮೀ ನಿವಾಸ’ ಧಾರಾವಾಹಿ ಇದೆ. ಈ ಧಾರಾವಾಹಿಯಲ್ಲಿ ಕೂಡು ಕುಟುಂಬದ ಕಥೆಯನ್ನು ಹೇಳಲಾಗುತ್ತಿದೆ. ಈ ಧಾರಾವಾಹಿ ಕಳೆದ ಕೆಲವು ವಾರಗಳಿಂದ ನಂಬರ್ 1 ಸ್ಥಾನದಲ್ಲಿ ಇತ್ತು. ಈಗ ‘ಪುಟ್ಟಕ್ಕನ ಮಕ್ಕಳು’ ಧಾರಾವಾಹಿ ಟಿಆರ್​ಪಿ ಹೆಚ್ಚಿರುವುದರಿಂದ ‘ಲಕ್ಷ್ಮಿ ನಿವಾಸ’ಕ್ಕೆ ಎರಡನೇ ಸ್ಥಾನ ಸಿಕ್ಕಿದೆ.

ಇದನ್ನೂ ಓದಿ: ಜಿಯೋ ಸಿನಿಮಾದಲ್ಲಿ ನಿಮ್ಮ ನೆಚ್ಚಿನ ಧಾರಾವಾಹಿಗಳನ್ನು ಟಿವಿಗೂ ಮೊದಲೇ ವೀಕ್ಷಿಸಬಹುದು; ಹೇಗೆ?

ಮೂರನೇ ಸ್ಥಾನದಲ್ಲಿ ಈ ಬಾರಿ ಎರಡು ಧಾರಾವಾಹಿಗಳು ಇವೆ. ‘ಸೀತಾ ರಾಮ’ ಹಾಗೂ ‘ಶ್ರಾವಣಿ ಸುಬ್ರಮಣ್ಯ’ ಧಾರಾವಾಹಿಗೆ ಈ ಬಾರಿ ಮೂರನೇ ಸ್ಥಾನ ಸಿಕ್ಕಿದೆ. ಎರಡೂ ಧಾರಾವಾಹಿಗಳಿಗೆ ಸಮಾನ ಬೇಡಿಕೆ ಸೃಷ್ಟಿ ಆಗಿದೆ. ನಾಲ್ಕನೇ ಸ್ಥಾನದಲ್ಲಿ ‘ಅಮೃತಧಾರೆ’ ಧಾರಾವಾಹಿ ಇದೆ. ಈ ಧಾರಾವಾಹಿಯಲ್ಲಿ ರಾಜೇಶ್ ನಟರಂಗ ಹಾಗೂ ಛಾಯಾ ಸಿಂಗ್ ಮುಖ್ಯಭೂಮಿಕೆಯಲ್ಲಿದ್ದಾರೆ. ಐದನೇ ಸ್ಥಾನದಲ್ಲಿ ಕಲರ್ಸ್ ಕನ್ನಡ ವಾಹಿನಿಯ ‘ರಾಮಾಚಾರಿ’ ಧಾರಾವಾಹಿ ಇದೆ. ಟಾಪ್ 5ರಲ್ಲಿ ಇರೋ ಕಲರ್ಸ್ ಕನ್ನಡದ ಏಕೈಕ ಧಾರಾವಾಹಿ ಇದಾಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಜಾಗಕ್ಕಾಗಿ ಹಠ ಹಿಡಿದಿರುವುದು ಯಾಕೆ? ಅಸಲಿ ಕಾರಣ ತಿಳಿಸಿದ ಯಶ್ ತಾಯಿ ಪುಷ್ಪಾ
ಜಾಗಕ್ಕಾಗಿ ಹಠ ಹಿಡಿದಿರುವುದು ಯಾಕೆ? ಅಸಲಿ ಕಾರಣ ತಿಳಿಸಿದ ಯಶ್ ತಾಯಿ ಪುಷ್ಪಾ
ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಚಾರ್ಮಾಡಿ ಅರಣ್ಯದಲ್ಲಿ ಬೆಂಕಿ: ಹೊತ್ತಿ ಉರಿದ ವನ್ಯಸಂಪತ್ತು
ಚಾರ್ಮಾಡಿ ಅರಣ್ಯದಲ್ಲಿ ಬೆಂಕಿ: ಹೊತ್ತಿ ಉರಿದ ವನ್ಯಸಂಪತ್ತು
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್