AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕನ್ನಡತಿಯಲ್ಲಿ ಹರ್ಷನ ಪ್ರಪೋಸ್​ ಭುವಿ ಒಪ್ಪಿಕೊಳ್ಳೋದು ಡೌಟು? ಇಲ್ಲಿದೆ ಕಾರಣ

ಭುವಿ ಜನ್ಮದಿನ ಬಂದಿದೆ. ಈ ವಿಶೇಷ ದಿನದಂದು ಹರ್ಷ ಪ್ರಪೋಸ್​ ಮಾಡಬೇಕು ಎಂದು ನಿರ್ಧರಿಸಿದ್ದರು. ಅಂತೆಯೇ, ಭುವಿ ತಂಗಿ ಬಿಂದು ಜತೆ ಸೇರಿ ಮನೆಯನ್ನೆಲ್ಲ ಅಲಂಕರಿಸಿದ್ದಾರೆ.

ಕನ್ನಡತಿಯಲ್ಲಿ ಹರ್ಷನ ಪ್ರಪೋಸ್​ ಭುವಿ ಒಪ್ಪಿಕೊಳ್ಳೋದು ಡೌಟು? ಇಲ್ಲಿದೆ ಕಾರಣ
ಭುವಿ-ಹರ್ಷ
TV9 Web
| Updated By: ರಾಜೇಶ್ ದುಗ್ಗುಮನೆ|

Updated on:Oct 06, 2021 | 7:12 PM

Share

ಕನ್ನಡತಿ ಧಾರಾವಾಹಿ ಪ್ರಮುಖ ಘಟ್ಟ ತಲುಪಿದೆ. ಪ್ರೀತಿಯನ್ನು ವ್ಯಕ್ತಪಡಿಸದೇ ಸುಮ್ಮನೆ ಇದ್ದ ಹರ್ಷ​, ಭುವಿ ಜನ್ಮದಿನಕ್ಕಾಗಿ ಕಾದಿದ್ದ. ಆ ದಿನ ಈಗ ಬಂದೇ ಬಿಟ್ಟಿದೆ. ಭುವಿಗೆ ಪ್ರಪೋಸ್​ ಮಾಡೋಕೆ ಹರ್ಷ ಎಲ್ಲಾ ಸಿದ್ಧತೆ ಮಾಡಿಕೊಂಡಿದ್ದಾನೆ. ಈ ವಿಶೇಷ ಕ್ಷಣಕ್ಕೆ ಯಾವುದಾದರೂ ವಿಘ್ನ ಎದುರಾಗಲಿದೆಯೇ ಎನ್ನುವ ಪ್ರಶ್ನೆ ಮೂಡಿದೆ.

ಭುವಿ ಜನ್ಮದಿನ ಬಂದಿದೆ. ಈ ವಿಶೇಷ ದಿನದಂದು ಹರ್ಷ ಪ್ರಪೋಸ್​ ಮಾಡಬೇಕು ಎಂದು ನಿರ್ಧರಿಸಿದ್ದ. ಅಂತೆಯೇ, ಭುವಿ ತಂಗಿ ಬಿಂದು ಜತೆ ಸೇರಿ ಮನೆಯನ್ನೆಲ್ಲ ಅಲಂಕರಿಸಿದ್ದಾನೆ. ಭುವಿ ಮನೆ ಒಳಗೆ ಬರುತ್ತಿದ್ದಂತೆ ಅವಳಿಗೆ ದೊಡ್ಡ ಸರ್​ಪ್ರೈಸ್​ ಕಾದಿತ್ತು.  ಭುವಿ ಕಣ್ಮುಚ್ಚಿ ಬಿಂದು ಮನೆ ಒಳಗೆ ಕರೆತಂದಳು. ಒಳಗೆ ಮಾಡಲಾಗಿದ್ದ ಅಲಂಕಾರ ನೋಡಿ ಭುವನೇಶ್ವರಿಗೆ ನಿಜಕ್ಕೂ ಅಚ್ಚರಿ ಹಾಗೂ ಶಾಕ್​ ಎರಡೂ ಆಗಿತ್ತು.

ಬರ್ತ್​ಡೇ ಸೆಲಬ್ರೇಷನ್​ ನಂತರದಲ್ಲಿ ಹರ್ಷ ಪ್ರಪೋಸ್​ ಮಾಡೋಕೆ ವಿಶೇಷ ಅರೇಂಜ್​ಮೆಂಟ್​ಗಳನ್ನು ಮಾಡಿದ್ದಾನೆ. ಕಾಂಟ್ರ್ಯಾಕ್ಟ್​ ನೀಡಿ ಪ್ರಪೋಸ್​ ಮಾಡೋಕೆ ವ್ಯವಸ್ಥೆ ಮಾಡಿಸಿದ್ದಾನೆ. ಚಿನ್ನದ ಉಂಗುರ ಕೂಡ ಮಾಡಿಸಿದ್ದಾನೆ. ಇದು ಭುವಿಗೆ ಇನ್ನೂ ತಿಳಿದಿಲ್ಲ.

ಭುವಿ ಪ್ರಪೋಸ್​ ಒಪ್ಪಿಕೊಳ್ಳುತ್ತಾರಾ?

ಹರ್ಷ ಮಾಡಿದ ಪ್ರಪೋಸ್​ ಭುವಿ ಒಪ್ಪಿಕೊಳ್ಳುತ್ತಾಳಾ ಅನ್ನೋದು ಸದ್ಯದ ಕುತೂಹಲ. ಅವಳ ಕ್ಲೋಸ್​ ಫ್ರೆಂಡ್ ವರುಧಿನಿಗೆ ಹರ್ಷ ಮೇಲೆ ಪ್ರೀತಿ ಇದೆ. ಆ ಪ್ರೀತಿಯನ್ನು ಪಡೆಯಬೇಕು ಎನ್ನುವ ಹಠಕ್ಕೆ ಬಿದ್ದಿದ್ದಾಳೆ ವರುಧಿನಿ. ಇದು ಭುವಿಗೂ ಗೊತ್ತಾಗಿದೆ. ಒಂದೊಮ್ಮೆ ಹರ್ಷ ಪ್ರೀತಿ ಒಪ್ಪಿಕೊಂಡರೆ ವರುಧಿನಿಗೆ ಬೇಸರ ಆಗುತ್ತದೆ ಎಂದು ಭುವಿಗೆ ಅನಿಸಬಹುದು. ಹೀಗಾಗಿ, ಅವಳು ಹರ್ಷನ ಪ್ರೀತಿಯನ್ನು ತಿರಸ್ಕರಿಸಬಹುದು. ಹರ್ಷನನ್ನು ಕಂಡರೆ ಭುವಿಗೆ ಎಲ್ಲಿಲ್ಲದ ಪ್ರೀತಿ. ಈ ಕಾರಣಕ್ಕೆ ಈ ಪ್ರೀತಿಯನ್ನು ಒಪ್ಪಿಕೊಳ್ಳಬೇಕೋ ಅಥವಾ ಬೇಡವೋ ಎನ್ನುವ ಗೊಂದಲಕ್ಕೆ ಅವಳು ಬೀಳಬಹುದು.

ಇದನ್ನೂ ಓದಿ: ಅದ್ದೂರಿಯಾಗಿ ಭುವಿಗೆ ಪ್ರಪೋಸ್​ ಮಾಡಲು ‘ಕನ್ನಡತಿ’ ಹರ್ಷ ರೆಡಿ; ವಿಲನ್​ ಯಾರು?

Published On - 7:02 pm, Wed, 6 October 21

ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ