AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟಿಆರ್​ಪಿ ರೇಸ್​ನಲ್ಲಿ ಅಚ್ಚರಿಯ ಕಂಬ್ಯಾಕ್ ಮಾಡಿದ ‘ಲಕ್ಷ್ಮೀ ಬಾರಮ್ಮ’, ‘ರಾಮಾಚಾರಿ’

‘ಲಕ್ಷ್ಮೀ ನಿವಾಸ’ ಧಾರಾವಾಹಿ ಸದ್ಯ ಮೊದಲ ಸ್ಥಾನದಲ್ಲಿ ಇದೆ. ಈ ಧಾರಾವಾಹಿ ಇತ್ತೀಚೆಗಷ್ಟೇ 300 ಸಂಚಿಕೆಯನ್ನು ಪೂರ್ಣಗೊಳಿಸಿದೆ. ಈ ಸಂಭ್ರಮದಲ್ಲೇ ಧಾರಾವಾಹಿ ಮೊದಲ ಸ್ಥಾನ ಕಾಯ್ದುಕೊಂಡಿದೆ. ಈ ಮೊದಲು ‘ಪುಟ್ಟಕ್ಕನ ಮಕ್ಕಳು’ ಧಾರಾವಾಹಿ ಟಿಆರ್​ಪಿಯಲ್ಲಿ ಮೊದಲಿತ್ತು. ಈಗ ಧಾರಾವಾಹಿ ಟಿಆರ್​ಪಿ ಕುಸಿದಿದೆ.

ಟಿಆರ್​ಪಿ ರೇಸ್​ನಲ್ಲಿ ಅಚ್ಚರಿಯ ಕಂಬ್ಯಾಕ್ ಮಾಡಿದ ‘ಲಕ್ಷ್ಮೀ ಬಾರಮ್ಮ’, ‘ರಾಮಾಚಾರಿ’
ಟಿಆರ್​ಪಿ ರೇಸ್​ನಲ್ಲಿ ಅಚ್ಚರಿಯ ಕಂಬ್ಯಾಕ್ ಮಾಡಿದ ‘ಲಕ್ಷ್ಮೀ ಬಾರಮ್ಮ’, ‘ರಾಮಾಚಾರಿ’
ರಾಜೇಶ್ ದುಗ್ಗುಮನೆ
|

Updated on: Sep 13, 2024 | 6:58 AM

Share

‘ಅಣ್ಣಯ್ಯ’ ಧಾರಾವಾಹಿ ಇತ್ತೀಚೆಗಷ್ಟೇ ಆರಂಭ ಆಗಿದೆ. ಈ ಧಾರಾವಾಹಿ ಆರಂಭ ಆದ ಕೆಲ ವಾರ ಒಳ್ಳೆಯ ಟಿಆರ್​ಪಿಯನ್ನೇ ಪಡೆದಿತ್ತು. ಆದರೆ, 36ನೇ ವಾರದ ಟಿಆರ್​ಪಿಯಲ್ಲಿ ಧಾರಾವಾಹಿ ಸ್ವಲ್ಪ ಡಲ್ ಹೊಡೆದಂತೆ ಕಾಣಿಸುತ್ತಿದೆ. ಕಲರ್ಸ್ ಕನ್ನಡದ ಕೆಲ ಧಾರಾವಾಹಿಗಳು ಒಳ್ಳೆಯ ಟಿಆರ್​ಪಿ ಪಡೆದುಕೊಂಡಿರುವುದು ಕೂಡ ‘ಅಣ್ಣಯ್ಯ’ ಧಾರಾವಾಹಿ ಹಿಂದೆ ಬೀಳಲು ಕಾರಣ ಎಂದು ಹೇಳಲಾಗುತ್ತಿದೆ.

‘ಲಕ್ಷ್ಮೀ ನಿವಾಸ’ ಧಾರಾವಾಹಿ ಸದ್ಯ ಮೊದಲ ಸ್ಥಾನದಲ್ಲಿ ಇದೆ. ಈ ಧಾರಾವಾಹಿ ಇತ್ತೀಚೆಗಷ್ಟೇ 300 ಸಂಚಿಕೆಯನ್ನು ಪೂರ್ಣಗೊಳಿಸಿದೆ. ಈ ಸಂಭ್ರಮದಲ್ಲೇ ಧಾರಾವಾಹಿ ಮೊದಲ ಸ್ಥಾನ ಕಾಯ್ದುಕೊಂಡಿದೆ. ಈ ಮೊದಲು ‘ಪುಟ್ಟಕ್ಕನ ಮಕ್ಕಳು’ ಧಾರಾವಾಹಿ ಟಿಆರ್​ಪಿಯಲ್ಲಿ ಮೊದಲಿತ್ತು. ಆದರೆ, ಧಾರಾವಾಹಿಯ ಸಮಯ ಬದಲಾದ ಕಾರಣ ಈಗ ‘ಲಕ್ಷ್ಮೀ ನಿವಾಸ’ ಧಾರಾವಾಹಿಗೆ ಮೊದಲ ಸ್ಥಾನ ಸಿಕ್ಕಿದೆ.

ಎರಡನೇ ಸ್ಥಾನದಲ್ಲಿ ‘ಲಕ್ಷ್ಮೀ ಬಾರಮ್ಮ’ ಧಾರಾವಾಹಿ ಸ್ಥಾನ ಪಡೆದುಕೊಂಡಿದೆ. ಈ ಮೊದಲು ಐದು ಅಥವಾ ಆರನೇ ಸ್ಥಾನದಲ್ಲಿ ಇರುತ್ತಿದ್ದ ಧಾರಾವಾಹಿ ಇದು. ಈ ಬಾರಿ ಎರಡನೇ ಸ್ಥಾನ ಪಡೆದುಕೊಳ್ಳುವ ಮೂಲಕ ಎಲ್ಲರಲ್ಲೂ ಅಚ್ಚರಿ ಮೂಡಿಸಿದೆ. ಇತ್ತೀಚಿನ ದಿನಗಳಲ್ಲಿ ಕಲರ್ಸ್ ಕನ್ನಡದ ಧಾರಾವಾಹಿ ಎರಡನೇ ಸ್ಥಾನ ಪಡೆದಿದ್ದು ಇದೇ ಮೊದಲು.

ಇದನ್ನೂ ಓದಿ: ಒಂದೇ ಧಾರಾವಾಹಿಯಲ್ಲಿ ನಟಿಸಿದ ಈ ನಟಿಯರು ಈಗ ಒಟ್ಟಿಗೆ ಪ್ರೆಗ್ನೆಂಟ್; ಸುಂದರ ಫೋಟೋಶೂಟ್ ವೈರಲ್

ಮೂರನೇ ಸ್ಥಾನದಲ್ಲಿ ‘ಶ್ರಾವಣಿ ಸುಬ್ರಮಣ್ಯ’ ಧಾರಾವಾಹಿ ಇದೆ. ನಾಲ್ಕನೇ ಸ್ಥಾನದಲ್ಲಿ ‘ಅಮೃತಧಾರೆ’ ಧಾರಾವಾಹಿ ಸ್ಥಾನಪಡೆದುಕೊಂಡಿದೆ. ಈ ಧಾರಾವಾಹಿ ಈ ಮೊದಲಿಗಿಂತ ಒಳ್ಳೆಯ ಟಿಆರ್​ಪಿ ಪಡೆದು ಸಾಗುತ್ತಿದೆ. ಐದನೇ ಸ್ಥಾನದಲ್ಲಿ ಹೊಸ ಧಾರಾವಾಹಿ ‘ಅಣ್ಣಯ್ಯ’ ಹಾಗೂ ಕಲರ್ಸ್ ಕನ್ನಡದ ‘ರಾಮಾಚಾರಿ’ ಧಾರಾವಾಹಿ ಇದೆ. ‘ಸೀತಾ ರಾಮ’ ಧಾರಾವಾಹಿ ಆರನೇ ಸ್ಥಾನದಲ್ಲಿ ಇದೆ. ‘ನಿನಗಾಗಿ’ ಧಾರಾವಾಹಿ ಇತ್ತೀಚೆಗೆ ಒಳ್ಳೆಯ ಟಿಆರ್​ಪಿ ಪಡೆದುಕೊಂಡು ಸಾಗುತ್ತಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ದೆಹಲಿಯಲ್ಲಿ ಭಾರಿ ಮಳೆಯಿಂದ ಕಟ್ಟಡ ಕುಸಿತ; ಓರ್ವ ಸಾವು
ದೆಹಲಿಯಲ್ಲಿ ಭಾರಿ ಮಳೆಯಿಂದ ಕಟ್ಟಡ ಕುಸಿತ; ಓರ್ವ ಸಾವು
ಇಂಡೋನೇಷ್ಯಾ ಪ್ರವಾಸ ಮುಗಿಸಿ ಮೆಲ್ಬೋರ್ನ್‌ಗೆ ಬಂದಿಳಿದ ಪ್ರಧಾನಿ ಮೋದಿ
ಇಂಡೋನೇಷ್ಯಾ ಪ್ರವಾಸ ಮುಗಿಸಿ ಮೆಲ್ಬೋರ್ನ್‌ಗೆ ಬಂದಿಳಿದ ಪ್ರಧಾನಿ ಮೋದಿ
ಅನ್ನಭಾಗ್ಯ ಫಲಾನುಭವಿಗಳಿಗೆ ಗುಡ್​ನ್ಯೂಸ್​​: ಶೀಘ್ರದಲ್ಲೇ ಇಂದಿರಾ ಕಿಟ್
ಅನ್ನಭಾಗ್ಯ ಫಲಾನುಭವಿಗಳಿಗೆ ಗುಡ್​ನ್ಯೂಸ್​​: ಶೀಘ್ರದಲ್ಲೇ ಇಂದಿರಾ ಕಿಟ್
ಏಷ್ಯಾಕಪ್ ಟ್ರೋಫಿ ಟೀಂ ಇಂಡಿಯಾ ಕೈ ಸೇರುವುದು ಯಾವಾಗ?
ಏಷ್ಯಾಕಪ್ ಟ್ರೋಫಿ ಟೀಂ ಇಂಡಿಯಾ ಕೈ ಸೇರುವುದು ಯಾವಾಗ?
ಕೆತ್ತಿಕಲ್‌ ಗುಡ್ಡ ಕುಸಿತಕ್ಕೆ ಸ್ಫೋಟಕ ಕಾರಣ ಬಿಚ್ಚಿಟ್ಟ ಪರಿಸರ ತಜ್ಞ
ಕೆತ್ತಿಕಲ್‌ ಗುಡ್ಡ ಕುಸಿತಕ್ಕೆ ಸ್ಫೋಟಕ ಕಾರಣ ಬಿಚ್ಚಿಟ್ಟ ಪರಿಸರ ತಜ್ಞ
ಕನ್ನಡಿಗರ ಬಗ್ಗೆ ಪ್ರೀತಿಯಿಂದ ಮಾತನಾಡಿ ‘ಟಾಕ್ಸಿಕ್’ ನಟಿ ಹುಮಾ ಖುರೇಷಿ
ಕನ್ನಡಿಗರ ಬಗ್ಗೆ ಪ್ರೀತಿಯಿಂದ ಮಾತನಾಡಿ ‘ಟಾಕ್ಸಿಕ್’ ನಟಿ ಹುಮಾ ಖುರೇಷಿ
2 ದಿನ ಕೆರೆಯಲ್ಲಿ ನರಳಾಡಿ ತನ್ನಷ್ಟಕ್ಕೇ ತಾನೆ ಆಚೆ ಬಂದ ಆನೆ
2 ದಿನ ಕೆರೆಯಲ್ಲಿ ನರಳಾಡಿ ತನ್ನಷ್ಟಕ್ಕೇ ತಾನೆ ಆಚೆ ಬಂದ ಆನೆ
ಮತ್ತೊಂದು ಕಲ್ಲು ಗಣಿಗಾರಿಕೆ ದುರಂತ: ಜೆಸಿಬಿ ಮೇಲೆ ಬಿದ್ದ ಬಂಡೆ
ಮತ್ತೊಂದು ಕಲ್ಲು ಗಣಿಗಾರಿಕೆ ದುರಂತ: ಜೆಸಿಬಿ ಮೇಲೆ ಬಿದ್ದ ಬಂಡೆ
ಸಿದ್ದರಾಮಯ್ಯನವರಿಂದ ದೂರ: ವಿಡಿಯೋ ವೈರಲ್ ಬಗ್ಗೆ ಜಾರಕಿಹೊಳಿ ಸ್ಪಷ್ಟನೆ
ಸಿದ್ದರಾಮಯ್ಯನವರಿಂದ ದೂರ: ವಿಡಿಯೋ ವೈರಲ್ ಬಗ್ಗೆ ಜಾರಕಿಹೊಳಿ ಸ್ಪಷ್ಟನೆ
ಜಿಬಿಎ ನಿರ್ಲಕ್ಷ್ಯ: ಹೊಂಡದಲ್ಲಿ ಕಾರಿನ ಚಕ್ರ ಸಿಲುಕಿ ಚಾಲಕನ ಪರದಾಟ
ಜಿಬಿಎ ನಿರ್ಲಕ್ಷ್ಯ: ಹೊಂಡದಲ್ಲಿ ಕಾರಿನ ಚಕ್ರ ಸಿಲುಕಿ ಚಾಲಕನ ಪರದಾಟ