AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕರ್ಣ ಹಾಗೂ ‘ಅಣ್ಣಯ್ಯ’ ಶಿವು ಪಾತ್ರಕ್ಕೆ ಕನೆಕ್ಷನ್; ತೆರೆದುಕೊಂಡಿತು ಹೊಸ ಕಥೆ

Karna Serial: ಕರ್ಣ ಮತ್ತು ಅಣ್ಣಯ್ಯ ಧಾರಾವಾಹಿಗಳ ಪಾತ್ರಗಳು ಅಮೃತಧಾರೆ ಧಾರಾವಾಹಿಯಲ್ಲಿ ಒಂದಾಗಿದ್ದವು. ಇದು ವೀಕ್ಷಕರಲ್ಲಿ ಕುತೂಹಲ ಮೂಡಿಸಿತ್ತು. ಆದರೆ, ಧಾರಾವಾಹಿಯ ನಿಜವಾದ ಕನೆಕ್ಷನ್ ಈಗ ಹೊರಬಿದ್ದಿದೆ. ಅಣ್ಣಯ್ಯ ಮತ್ತು ಕರ್ಣ ಧಾರಾವಾಹಿಯ ನಡುವೆ ಸಂಪರ್ಕ ಕಲ್ಪಿಸಲಾಗುತ್ತಿದೆ. ಆ ಬಗ್ಗೆ ಇಲ್ಲಿದೆ ವಿವರ.

ಕರ್ಣ ಹಾಗೂ ‘ಅಣ್ಣಯ್ಯ’ ಶಿವು ಪಾತ್ರಕ್ಕೆ ಕನೆಕ್ಷನ್; ತೆರೆದುಕೊಂಡಿತು ಹೊಸ ಕಥೆ
ಕರ್ಣ
 ಶ್ರೀಲಕ್ಷ್ಮೀ ಎಚ್
| Edited By: |

Updated on:Sep 05, 2025 | 8:58 AM

Share

‘ಕರ್ಣ’ (Karna Serial) ಧಾರಾವಾಹಿ ಹಾಗೂ ‘ಅಣ್ಣಯ್ಯ’ ಧಾರಾವಾಹಿ ಪಾತ್ರಧಾರಿಗಳು ‘ಅಮೃತಧಾರೆ’ ಧಾರಾವಾಹಿಯಲ್ಲಿ ಒಂದಾಗಿದ್ದು ಗೊತ್ತೇ ಇದೆ. ಇದು ಒಂದು ಸಾಮಾನ್ಯ ಸಂಗಮ ಎಂದೇ ಎಲ್ಲರೂ ಭಾವಿಸಿದ್ದೂ ಇದೆ. ಆದರೆ, ‘ಕರ್ಣ’ ಧಾರಾವಾಹಿಯನ್ನು ಈಗ ವೀಕ್ಷಿಸುತ್ತಿರುವವರಿಗೆ ಇದು ಸಾಮಾನ್ಯ ಕನೆಕ್ಷನ್ ಅಲ್ಲವೇ ಅಲ್ಲ ಎಂಬ ವಿಚಾರ ಗೊತ್ತಾಗಲು ಹೆಚ್ಚು ಸಮಯ ಬೇಕಾಗಿಲ್ಲ ಎಂದೇ ಹೇಳಬಹುದು. ಏಕೆಂದರೆ ‘ಕರ್ಣ’ ಹಾಗೂ ‘ಅಣ್ಣಯ್ಯ’ ಧಾರಾವಾಹಿಗೆ ಕನೆಕ್ಷನ್ ನೀಡುವ ಕೆಲಸವನ್ನು ತಂಡದವರು ಮಾಡಿದ್ದಾರೆ.

‘ಕರ್ಣ’ ಅನಾಥ. ಆದರೆ, ಅವನನ್ನು ತಂದು, ಸಾಕುವ ಕೆಲಸ ಆಗಿದೆ. ಆತನ ಹಿನ್ನೆಲೆ ಏನು ಎಂಬುದು ಅಲ್ಲಿ ಯಾರಿಗೂ ತಿಳಿದಿಲ್ಲ. ಆದರೆ, ಕುಟುಂಬದವರೆಲ್ಲರೂ ಸೇರಿ ಈಗ ಮಾರಿಗುಡಿಗೆ ಹೊರಟಿದ್ದಾರೆ. ಮಾರಿ ಗುಡಿಗೆ ಹೋದರೆ ಆತನ ಹಿನ್ನೆಲೆ ಗೊತ್ತಾಗಿ ಬಿಡುತ್ತದೆ ಎನ್ನುವ ಚಿಂತೆ ಆತನ ಅತ್ತೆಗೆ ಕಾಡಿದೆ. ಇದು ವೀಕ್ಷಕರಲ್ಲಿ ಅನುಮಾನ ಹುಟ್ಟುಹಾಕಿದೆ.

‘ಅಣ್ಣಯ್ಯ’ ಧಾರಾವಾಹಿ ಕಥೆಯಲ್ಲಿ ನಾಯಕ ಶಿವುನ ಊರು ಮಾರಿಗುಡಿ. ಆತ ಮಾರಿಗುಡಿ ಶಿವು ಎಂದೇ ಜನಪ್ರಿಯತೆ ಪಡೆದುಕೊಂಡವನು. ಈಗ ‘ಅಣ್ಣಯ್ಯ’ ಧಾರಾವಾಹಿಯಲ್ಲೂ ಮಾರಿಗುಡಿ ಊರನ್ನು ತೋರಿಸಲಾಗುತ್ತಿದೆ. ಅಲ್ಲದೆ ಮಾರಿಗುಡಿಗೆ ಹೋದರೆ ಕರ್ಣನ ಹಿನ್ನೆಲೆ ತಿಳಿದು ಹೋಗುತ್ತದೆ ಎಂಬ ವಿಚಾರ ಬಂದಿರೋದರಿಂದ ಈ ಬಗ್ಗೆ ಅನುಮಾನ ಮೂಡಿದೆ.

ಇದನ್ನೂ ಓದಿ
Image
ಹಳ್ಳಿ ಪವರ್​​’ನಲ್ಲಿ ಮಿಂಚುತ್ತಿರುವ ‘ಭೀಮ’ ಕಲಾವಿದೆ ಆ್ಯಶ್
Image
‘ಕರ್ಣ’ ಧಾರಾವಾಹಿಗೆ ಶಾಕ್ ಕೊಟ್ಟ ಟಿಆರ್​ಪಿ ರೇಟಿಂಗ್; ಕುಸಿಯಿತು ಸ್ಥಾನ
Image
‘ಸು ಫ್ರಮ್ ಸೋ’ ಒಟಿಟಿ ರಿಲೀಸ್ ದಿನಾಂಕ ಫೇಕ್; ಹಾಟ್​ಸ್ಟಾರ್​ನವರು ಹೇಳೋದೇನು
Image
ರಾಜ್ ಮುಟ್ಟಿದ್ದೆಲ್ಲ ಚಿನ್ನ; ಹಂಚಿಕೆ ಮಾಡಿದ ‘ಲೋಕಃ’ ಗಳಿಕೆ ಜೋರು

ಇಷ್ಟೇ ಆಗಿದ್ದರೆ ಕನೆಕ್ಷನ್ ಅನುಮಾನ ಹೊರಕ್ಕೆ ಬರುತ್ತಿರಲಿಲ್ಲವೇನೋ. ಸದ್ಯ ರಿಲೀಸ್ ಆಗಿರುವ ಪ್ರೋಮೋದಲ್ಲಿ ಶಿವುನ ಕೂಡ ತೋರಿಸಲಾಗಿದೆ. ಹೀಗಾಗಿ, ಕರ್ಣನಿಗೂ ಶಿವುಗೂ ಇರುವ ಕನೆಕ್ಷನ್ ಏನು ಎಂಬ ಕುತೂಹಲ ಮೂಡಿದೆ. ಮುಂದಿನ ದಿನಗಳಲ್ಲಿ ಎರಡೂ ಧಾರಾವಾಹಿಗಳ ಕಥೆಯನ್ನು ಒಟ್ಟೊಟ್ಟಿಗೆ ತೆಗೆದುಕೊಂಡು ಹೋಗುತ್ತಾರಾ ಎಂಬ ಪ್ರಶ್ನೆ ಮೂಡಿದೆ.

ಇದನ್ನೂ ಓದಿ: ‘ಕರ್ಣ’ ಧಾರಾವಾಹಿಗೆ ಶಾಕ್ ಕೊಟ್ಟ ಟಿಆರ್​ಪಿ ರೇಟಿಂಗ್; ಕುಸಿಯಿತು ಸ್ಥಾನ

ಕರ್ಣನಿಗೆ ತನ್ನ ಹಿನ್ನೆಲೆ ಬಗ್ಗೆ ಅವನಿಗೆ ಸರಿಯಾಗಿ ತಿಳಿದಿಲ್ಲ. ಇದೇ ವಿಚಾರ ಇಟ್ಟುಕೊಂಡು ಆತನ ತಂದೆ ಹೀಯಾಳಿಸುತ್ತಾ ಬರುತ್ತಿದ್ದಾನೆ. ಇದು ಆತನಿಗೆ ಬೇಸರ ಮೂಡಿಸಿತ್ತು ಮತ್ತು ಸಾಕಷ್ಟು ನೋವನ್ನು ಉಂಟು ಮಾಡಿತ್ತು. ಆದರೆ, ಈಗ ಆತನ ತಂದೆ ಬದಲಾದಂತೆ ನಟಿಸುತ್ತಿದ್ದಾನೆ. ಈ ಮುಖವಾಡ ಯಾವಾಗ ಕಳಚಿ ಬೀಳುತ್ತದೆ ಎಂಬ ಕುತೂಹಲ ಸಾಕಷ್ಟು ಮೂಡಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 8:58 am, Fri, 5 September 25

Follow Us
Shreelaxmi H
Shreelaxmi H

ಪತ್ರಕರ್ತೆ ಆಗಬೇಕು ಅಂದುಕೊಂಡವಳು. ಮನೆಯವರ ಒತ್ತಾಯಕ್ಕೆ ಅಕೌಂಟ್ ತೆಗೆದುಕೊಂಡೆ. ಈಗ ಬ್ಯಾಂಕ್ ಎಕ್ಸಾಂಗಳನ್ನು ಬರೆಯುತ್ತಿದ್ದೇನೆ. ಸಮಯ ಸಿಕ್ಕಾಗ ಸುತ್ತಾಡುತ್ತೇನೆ. ಓದಿನ ಬಗ್ಗೆ ಅತೀವ ಆಸಕ್ತಿ. ರವಿ ಬೆಳಗೆರೆ, ತೇಜಸ್ವಿ ನೆಚ್ಚಿನವರು. ಅವರ ಪುಸ್ತಕಗಳನ್ನು ಮತ್ತೆ ಮತ್ತೆ ಓದುತ್ತೇನೆ. ಸಮಯ ಸಿಕ್ಕಾಗ ಪತ್ರಿಕೆಗಳಿಗೆ ಕಥೆಗಳನ್ನು ಬರೆಯುತ್ತೇನೆ. ಸಿನಿಮಾ ಬಗ್ಗೆ ಅತೀವ ಆಸಕ್ತಿ. ಈಗ ಟಿವಿ9 ಕನ್ನಡಕ್ಕೆ ಸಿನಿಮಾ ಸುದ್ದಿಗಳನ್ನು ಬರೆಯುತ್ತಿದ್ದೇನೆ.

Read More
34 ರನ್​ಗಳಿದ್ದಾಗ ಕ್ಯಾಚ್ ಬಿಟ್ಟ ಸಿರಾಜ್; 93 ರನ್ ಚಚ್ಚಿದ ಅಲೆನ್
34 ರನ್​ಗಳಿದ್ದಾಗ ಕ್ಯಾಚ್ ಬಿಟ್ಟ ಸಿರಾಜ್; 93 ರನ್ ಚಚ್ಚಿದ ಅಲೆನ್
9 ಗಂಟೆ ಕಾರ್ಯಾಚರಣೆ ಬಳಿಕ ಬೋರ್​​ವೆಲ್​ನಿಂದ 4 ವರ್ಷದ ಬಾಲಕನ ರಕ್ಷಣೆ!
9 ಗಂಟೆ ಕಾರ್ಯಾಚರಣೆ ಬಳಿಕ ಬೋರ್​​ವೆಲ್​ನಿಂದ 4 ವರ್ಷದ ಬಾಲಕನ ರಕ್ಷಣೆ!
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?
ಸಿದ್ದರಾಮಯ್ಯ ಬಿಟ್ರೆ CM ಆಗುವ ಅರ್ಹತೆ ಖರ್ಗೆಗೆ ಮಾತ್ರ: ರಾಯರೆಡ್ಡಿ
ಸಿದ್ದರಾಮಯ್ಯ ಬಿಟ್ರೆ CM ಆಗುವ ಅರ್ಹತೆ ಖರ್ಗೆಗೆ ಮಾತ್ರ: ರಾಯರೆಡ್ಡಿ