AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭರ್ಜರಿ ಟಿಆರ್​ಪಿ ಪಡೆದ ‘ಅಮೃತಧಾರೆ’ಗೆ ಎರಡನೇ ಸ್ಥಾನ; ಯಾವ ಧಾರಾವಾಹಿಗೆ ಎಷ್ಟನೇ ರ‍್ಯಾಂಕ್?

ಧಾರಾವಾಹಿಗಳ ಟಿಆರ್​ಪಿ ರೇಸ್​ನಲ್ಲಿ ‘ಪುಟ್ಟಕ್ಕನ ಮಕ್ಕಳು’ ಕಳೆದ ಒಂದು ವರ್ಷದಿಂದ ಬಹುತೇಕ ಸಂದರ್ಭಗಳಲ್ಲಿ ಮೊದಲ ಸ್ಥಾನ ಕಾಪಾಡಿಕೊಂಡು ಬರುತ್ತಾ ಇತ್ತು. ಪ್ರೈಮ್​ ಟೈಮ್​ನಲ್ಲಿ ಈ ಧಾರಾವಾಹಿ ಪ್ರಸಾರ ಕಾಣುತ್ತಾ ಇತ್ತು. ಕುಗ್ಗಿದ್ದ ಈ ಧಾರಾವಾಹಿಯ ಟಿಆರ್​ಪಿಯಲ್ಲಿ ಮತ್ತೆ ಏರಿಕೆ ಕಂಡಿದೆ.

ಭರ್ಜರಿ ಟಿಆರ್​ಪಿ ಪಡೆದ ‘ಅಮೃತಧಾರೆ’ಗೆ ಎರಡನೇ ಸ್ಥಾನ; ಯಾವ ಧಾರಾವಾಹಿಗೆ ಎಷ್ಟನೇ ರ‍್ಯಾಂಕ್?
ಭರ್ಜರಿ ಟಿಆರ್​ಪಿ ಪಡೆದ ‘ಅಮೃತಧಾರೆ’ಗೆ ಎರಡನೇ ಸ್ಥಾನ; ಯಾವ ಧಾರಾವಾಹಿಗೆ ಎಷ್ಟನೇ ರ‍್ಯಾಂಕ್?
ರಾಜೇಶ್ ದುಗ್ಗುಮನೆ
|

Updated on: Sep 19, 2024 | 3:00 PM

Share

ಕನ್ನಡ ಧಾರಾವಾಹಿಗಳ 37ನೇ ವಾರದ ಟಿಆರ್​ಪಿ ಹೊರ ಬಿದ್ದಿದೆ. ಪ್ರತಿವರವೂ ಧಾರಾವಾಹಿಗಳು ಬಹುತೇಕ ಒಂದೇ ರೀತಿಯ ಸ್ಥಾನದಲ್ಲಿ ಇರುತ್ತಿದ್ದವು. ಆದರೆ, ಈ ಬಾರಿ ಅಚ್ಚರಿಯ ಬೆಳವಣಿಗೆ ನಡೆದಿದೆ. ಬೇರೆ ಬೇರೆ ಧಾರಾವಾಹಿಗಳು ಟಾಪ್ ಐದರಲ್ಲಿ ಸ್ಥಾನ ಪಡೆದಿವೆ. ಈ ಪೈಕಿ ‘ಅಮೃತಧಾರೆ’ ಧಾರಾವಾಹಿ ಎರಡನೇ ಸ್ಥಾನ ಪಡೆದು ಅಚ್ಚರಿ ಮೂಡಿಸಿದೆ. ಹೊಸ ಧಾರಾವಾಹಿಗಳು ಪಾತಾಳ ಕಾಣುತ್ತಿವೆ. ಧಾರಾವಾಹಿಗಳ ಟಿಆರ್​ಪಿ ಬಗ್ಗೆ ಇಲ್ಲಿದೆ ಮಾಹಿತಿ.

‘ಲಕ್ಷ್ಮೀ ನಿವಾಸ’ ಧಾರಾವಾಹಿ ಮೊದಲ ಸ್ಥಾನದಲ್ಲಿ ಇದೆ. ಈ ಧಾರಾವಾಹಿ ಒಳ್ಳೆಯ ಟಿಆರ್​ಪಿ ಪಡೆದು ಸಾಗುತ್ತಿದೆ. ಕಳೆದ ಕೆಲ ವಾರಗಳಿಂದ ಧಾರಾವಾಹಿ ಮೆಚ್ಚುಗೆ ಪಡೆದು ಮೊದಲ ಸ್ಥಾನ ಕಾಪಾಡಿಕೊಂಡು ಬರುತ್ತಿದೆ. ಎರಡನೇ ಸ್ಥಾನದಲ್ಲಿ ಈ ಬಾರಿ ‘ಅಮೃತಧಾರೆ’ ಧಾರಾವಾಹಿ ಇದೆ. ಕಳೆದ ವಾರಗಳಿಗಿಂತ ಈ ವಾರ ಧಾರಾವಾಹಿ ಉಚ್ಛ ಸ್ಥಾನವನ್ನು ಪಡೆದುಕೊಂಡಿದೆ. ಈ ಎರಡೂ ಧಾರಾವಾಹಿಗಳು ಜೀ ಕನ್ನಡದಲ್ಲಿ ಪ್ರಸಾರ ಕಾಣುತ್ತಿವೆ.

ಮೂರನೇ ಸ್ಥಾನದಲ್ಲಿ ‘ಶ್ರಾವಣಿ ಸುಬ್ರಮಣ್ಯ’ ಧಾರಾವಾಹಿ ಇದೆ. ಈ ಧಾರಾವಾಹಿ ಹಾಗೂ ‘ಅಮೃತಧಾರೆ’ ಧಾರಾವಾಹಿ ಮಧ್ಯೆ ಭರ್ಜರಿ ಸ್ಪರ್ಧೆ ಏರ್ಪಟ್ಟಿದೆ. ಕೂದಲೆಳೆ ಅಂತರದಲ್ಲಿ ‘ಶ್ರಾವಣಿ ಸುಬ್ರಮಣ್ಯ’ ಧಾರಾವಾಹಿಗೆ ಎರಡನೇ ಸ್ಥಾನ ಮಿಸ್ ಆಗಿದೆ. ಅಚ್ಚರಿ ಎಂಬಂತೆ ನಾಲ್ಕನೇ ಸ್ಥಾನದಲ್ಲಿ ‘ಪುಟ್ಟಕ್ಕನ ಮಕ್ಕಳು’ ಧಾರಾವಾಹಿಗೆ ಸ್ಥಾನ ದೊರೆತಿದೆ. ಈ ಧಾರಾವಾಹಿಯ ಸಮಯವನ್ನು ಬದಲಾವಣೆ ಮಾಡಲಾಗಿದ್ದು, 6.30ಕ್ಕೆ ಪ್ರಸಾರ ಕಾಣುತ್ತಿದೆ. ಇದರಿಂದ ಟಿಆರ್​ಪಿಯಲ್ಲಿ ಇಳಿಕೆ ಕಂಡಿತ್ತು. ಈಗ ಧಾರಾವಾಗಿ ಮತ್ತೆ ಕಂಬ್ಯಾಕ್ ಮಾಡಿದೆ. ಕಳೆದ ವಾರ ಈ ಧಾರಾವಾಹಿ ಟಾಪ್ ಐದರಲ್ಲೂ ಇರಲಿಲ್ಲ.

ಇದನ್ನೂ ಓದಿ: ಒಂದೇ ಧಾರಾವಾಹಿಯಲ್ಲಿ ನಟಿಸಿದ ಈ ನಟಿಯರು ಈಗ ಒಟ್ಟಿಗೆ ಪ್ರೆಗ್ನೆಂಟ್; ಸುಂದರ ಫೋಟೋಶೂಟ್ ವೈರಲ್

ಐದನೇ ಸ್ಥಾನದಲ್ಲಿ ‘ಅಣ್ಣಯ್ಯ’ ಧಾರಾವಾಹಿ’ ಹಾಗೂ ‘ರಾಮಾಚಾರಿ’ ಧಾರಾವಾಹಿಗಳು ಸ್ಥಾನ ಪಡೆದಿವೆ. ಎರಡೂ ಧಾರಾವಾಹಿಗೆ ಸಮಾನ ಟಿಆರ್​ಪಿ ಸಿಕ್ಕಿದೆ. ‘ಅಣ್ಣಯ್ಯ’ ಧಾರಾವಾಹಿ ಇತ್ತೀಚೆಗಷ್ಟೇ ಪ್ರಸಾರ ಆರಂಭಿಸಿದೆ. ಈ ಸೀರಿಯಲ್​ಗೆ ಊದಮ ಆರನೇ ಸ್ಥಾನದಲ್ಲಿ ‘ಲಕ್ಷ್ಮೀ ಬಾರಮ್ಮ’ ಧಾರಾವಾಹಿ ಇದೆ. ಕಲರ್ಸ್ ಕನ್ನಡದಲ್ಲಿ ಈ ಧಾರಾವಾಹಿ ಪ್ರಸಾರ ಕಾಣುತ್ತಿದೆ. ‘ಸೀತಾ ರಾಮ’ ಧಾರಾವಾಹಿಯಲ್ಲಿ ಹಲವು ಟ್ವಿಸ್ಟ್​ಗಳನ್ನು ನೀಡುತ್ತಿರುವ ಹೊರತಾಗಿಯೂ ಈ ಧಾರಾವಾಹಿ ಏಳನೇ ಸ್ಥಾನ ಪಡೆದಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಹೊಳೆ ದಾಟೋಕೆ ದೊಣ್ಣೆ‌ನಾಯಕನ ಅಪ್ಪಣೆ ಬೇಕೆ: ಖರ್ಗೆಗೆ ಜೋಶಿ ತಿರುಗೇಟು
ಹೊಳೆ ದಾಟೋಕೆ ದೊಣ್ಣೆ‌ನಾಯಕನ ಅಪ್ಪಣೆ ಬೇಕೆ: ಖರ್ಗೆಗೆ ಜೋಶಿ ತಿರುಗೇಟು
ಎಸ್ ಜಾನಕಿ ಅವರಿಗಿದ್ದ ನೋವೇನು? ಭಾರತಿ ವಿಷ್ಣುವರ್ಧನ್ ಮಾತು
ಎಸ್ ಜಾನಕಿ ಅವರಿಗಿದ್ದ ನೋವೇನು? ಭಾರತಿ ವಿಷ್ಣುವರ್ಧನ್ ಮಾತು
ಜಾನಕಮ್ಮ ಸ್ಮಾರಕಕ್ಕೆ ಬೇಡಿಕೆ: ಶೀಘ್ರದಲ್ಲೇ ತೀರ್ಮಾನ ಮಾಡ್ತೀವಿ ಎಂದ ಯತೀಂದ್
ಜಾನಕಮ್ಮ ಸ್ಮಾರಕಕ್ಕೆ ಬೇಡಿಕೆ: ಶೀಘ್ರದಲ್ಲೇ ತೀರ್ಮಾನ ಮಾಡ್ತೀವಿ ಎಂದ ಯತೀಂದ್
‘ಜಾನಕಿ ಹಾಡು ಕೇಳುತ್ತಲೇ ನಮ್ಮ ತಾಯಿ ಪ್ರಾಣ ಬಿಟ್ಟಿದ್ದರು’: ಸಾಧು ಕೋಕಿಲ
‘ಜಾನಕಿ ಹಾಡು ಕೇಳುತ್ತಲೇ ನಮ್ಮ ತಾಯಿ ಪ್ರಾಣ ಬಿಟ್ಟಿದ್ದರು’: ಸಾಧು ಕೋಕಿಲ
ಪ್ರವೀಣ್ ನೆಟ್ಟಾರು ಪ್ರಕರಣ: NIA ಬಲೆಗೆ ಬಿದ್ದ ಮೋಸ್ಟ್ ವಾಂಟೆಡ್ ಆರೋಪಿಗಳು
ಪ್ರವೀಣ್ ನೆಟ್ಟಾರು ಪ್ರಕರಣ: NIA ಬಲೆಗೆ ಬಿದ್ದ ಮೋಸ್ಟ್ ವಾಂಟೆಡ್ ಆರೋಪಿಗಳು
ಎಸ್. ಜಾನಕಿ ಪಾರ್ಥಿವ ಶರೀರ ನೋಡಿ ಬಿಕ್ಕಿ ಬಿಕ್ಕಿ ಅತ್ತ ವಾಣಿ ಹರಿಕೃಷ್ಣ
ಎಸ್. ಜಾನಕಿ ಪಾರ್ಥಿವ ಶರೀರ ನೋಡಿ ಬಿಕ್ಕಿ ಬಿಕ್ಕಿ ಅತ್ತ ವಾಣಿ ಹರಿಕೃಷ್ಣ
ಎಸ್.ಜಾನಕಿಯವರ ಅಂತಿಮ ದರ್ಶನ ಪಡೆದು ಭಾವುಕರಾದ ಗಾಯಕ ವಿಜಯ್ ಪ್ರಕಾಶ್
ಎಸ್.ಜಾನಕಿಯವರ ಅಂತಿಮ ದರ್ಶನ ಪಡೆದು ಭಾವುಕರಾದ ಗಾಯಕ ವಿಜಯ್ ಪ್ರಕಾಶ್
ಎಸ್​​. ಜಾನಕಿ ನಿಧನಕ್ಕೆ ಲಂಡನ್​​ನಿಂದಲೇ ಇಳಯರಾಜ್ ಸಂತಾಪ
ಎಸ್​​. ಜಾನಕಿ ನಿಧನಕ್ಕೆ ಲಂಡನ್​​ನಿಂದಲೇ ಇಳಯರಾಜ್ ಸಂತಾಪ
ಜಾನಕಮ್ಮಗೆ ಮೈಸೂರಿನ ನಂಟು ಹೇಗೆ? ನವೀನ್ ಕೇರ್​ಟೇಕರ್ ಆಗಿದ್ಯಾಕೆ?
ಜಾನಕಮ್ಮಗೆ ಮೈಸೂರಿನ ನಂಟು ಹೇಗೆ? ನವೀನ್ ಕೇರ್​ಟೇಕರ್ ಆಗಿದ್ಯಾಕೆ?
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಯುವ ಕಾಂಗ್ರೆಸ್​​ನಿಂದ ಸೈಕಲ್ ಜಾಥಾ
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಯುವ ಕಾಂಗ್ರೆಸ್​​ನಿಂದ ಸೈಕಲ್ ಜಾಥಾ