AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕನ್ನಡ ಧಾರಾವಾಹಿಗಳ ಟಿಆರ್​ಪಿ ಪಟ್ಟಿ ರಿಲೀಸ್; ಇಲ್ಲಿದೆ ಟಾಪ್ ಐದು ಸೀರಿಯಲ್​ಗಳು

Kannada Serial TRP: ಜೀ ಕನ್ನಡದಲ್ಲಿ ‘ಲಕ್ಷ್ಮೀ ನಿವಾಸ’ ಧಾರಾವಾಹಿ ಪ್ರಸಾರ ಆರಂಭಿಸಿದೆ. ಇದೊಂದು ಪಕ್ಕಾ ಮಧ್ಯಮ ವರ್ಗದ ಕೂಡು ಕುಟುಂಬದ ಕಥೆ. ಹೀಗಾಗಿ ಧಾರಾವಾಹಿ ವೀಕ್ಷಕರಿಗೆ ಇಷ್ಟವಾಗಿದೆ. ಈ ಧಾರಾವಾಹಿ ನಗರ ಹಾಗೂ ರಾಜ್ಯದ ಟಿಆರ್​ಪಿಯಲ್ಲಿ ಮೊದಲ ಸ್ಥಾನ ಪಡೆದು ಮುನ್ನುಗ್ಗುತ್ತಿದೆ. ಉಳಿದ ಧಾರಾವಾಹಿಗಳ ಸ್ಥಾನಗಳ ಬಗ್ಗೆ ಇಲ್ಲಿದೆ ವಿವರ.

ಕನ್ನಡ ಧಾರಾವಾಹಿಗಳ ಟಿಆರ್​ಪಿ ಪಟ್ಟಿ ರಿಲೀಸ್; ಇಲ್ಲಿದೆ ಟಾಪ್ ಐದು ಸೀರಿಯಲ್​ಗಳು
ಲಕ್ಷ್ಮಿ ನಿವಾಸ ಧಾರಾವಾಹಿ
ರಾಜೇಶ್ ದುಗ್ಗುಮನೆ
|

Updated on: Mar 01, 2024 | 12:27 PM

Share

ಕನ್ನಡ ಧಾರಾವಾಹಿಗಳ ಟಿಆರ್​ಪಿ ರೇಸ್​ನಲ್ಲಿ ಪ್ರತಿ ವಾರ ಬದಲಾವಣೆ ಆಗುತ್ತಲೇ ಇರುತ್ತದೆ. ಆಯಾ ವಾರಗಳಲ್ಲಿ ಯಾವ ರೀತಿಯಲ್ಲಿ ಕಥೆ ಸಾಗುತ್ತದೆ ಎನ್ನುವುದರ ಮೇಲೆ ಟಿಆರ್​ಪಿ ನಿರ್ಧಾರ ಆಗುತ್ತದೆ. ಈಗ ಎಂಟನೇ ವಾರದ ಟಿಆರ್​ಪಿ ಲಿಸ್ಟ್ ರಿಲೀಸ್ ಆಗಿದೆ. ‘ಬಿಗ್ ಬಾಸ್ ಕನ್ನಡ ಸೀಸನ್ 10’ (BBk 10) ಪೂರ್ಣಗೊಂಡ ಬಳಿಕ ಕಲರ್ಸ್ ಕನ್ನಡದಲ್ಲಿ ಕೆಲವು ಧಾರಾವಾಹಿಗಳು ಪ್ರಾರಂಭ ಆದವು. ಅವುಗಳಿಗೆ ಟಾಪ್ ಐದರಲ್ಲಿ ಸ್ಥಾನ ಪಡೆಯಲು ಅವು ವಿಫಲವಾಗಿವೆ.

ಲಕ್ಷ್ಮೀ ನಿವಾಸ

ಜೀ ಕನ್ನಡದಲ್ಲಿ ಇತ್ತೀಚೆಗೆ ಪ್ರಸಾರ ಆರಂಭಿಸಿದ ‘ಲಕ್ಷ್ಮೀ ನಿವಾಸ’ ಪಕ್ಕಾ ಮಧ್ಯಮ ವರ್ಗದ ಕೂಡು ಕುಟುಂಬದ ಕಥೆ. ಈ ಕಾರಣಕ್ಕೆ ಧಾರಾವಾಹಿ ವೀಕ್ಷಕರಿಗೆ ಇಷ್ಟವಾಗಿದೆ. ಈ ಧಾರಾವಾಹಿ ನಗರ ಹಾಗೂ ರಾಜ್ಯದ ಟಿಆರ್​ಪಿಯಲ್ಲಿ ಮೊದಲ ಸ್ಥಾನ ಪಡೆದು ಮುನ್ನುಗ್ಗುತ್ತಿದೆ.

ಪುಟ್ಟಕ್ಕನ ಮಕ್ಕಳು

‘ಲಕ್ಷ್ಮೀ ನಿವಾಸ’ ಧಾರಾವಾಹಿ ಆರಂಭಕ್ಕೂ ಮೊದಲು ‘ಪುಟ್ಟಕ್ಕನ ಮಕ್ಕಳು’ ಧಾರಾವಾಹಿ ಮೊದಲ ಸ್ಥಾನ ಕಾಯ್ದುಕೊಂಡು ಬಂದಿತ್ತು. ಈಗ ಧಾರಾವಾಹಿಗೆ ಎರಡನೇ ಸ್ಥಾನ ಸಿಕ್ಕಿದೆ. ಈ ಮೊದಲು ಎರಡಂಕಿ ಟಿಆರ್​ಪಿ ಪಡೆಯುತ್ತಿತ್ತು ಈ ಧಾರಾವಾಹಿ. ಇತ್ತೀಚೆಗೆ ಟಿಆರ್​ಪಿ ಕಡಿಮೆ ಆಗಿದೆ.

ಶ್ರೀರಸ್ತು ಶುಭಮಸ್ತು

ಸುಧಾರಾಣಿ ಮೊದಲಾದವರು ನಟಿಸಿರೋ ‘ಶ್ರೀರಸ್ತು ಶುಭಮಸ್ತು’ ಧಾರಾವಾಹಿ ಜನ ಮೆಚ್ಚುಗೆ ಪಡೆದಿದೆ. ಈ ಧಾರಾವಾಹಿ ಮೂರನೇ ಸ್ಥಾನದಲ್ಲಿ ಇದೆ. ಒಂದು ಪ್ರಬುದ್ಧ ಪ್ರೇಮಕಥೆಯನ್ನು ಧಾರಾವಾಹಿ ಹೊಂದಿದೆ.

ಸೀತಾ ರಾಮ

ಈ ಮೊದಲ ‘ಬಿಗ್ ಬಾಸ್’ ರಾತ್ರಿ 9:30ಕ್ಕೆ ಪ್ರಸಾರ ಕಾಣುತ್ತಿತ್ತು. ಇದೇ ಸಮಯದಲ್ಲಿ ಜೀ ಕನ್ನಡದಲ್ಲಿ ‘ಸೀರಾ ರಾಮ’ ಪ್ರಸಾರ ಕಾಣುತ್ತಿದೆ. ಈ ಕಾರಣಕ್ಕೆ ಧಾರಾವಾಹಿಯ ಟಿಆರ್​ಪಿ ಇಳಿಕೆ ಕಂಡಿತ್ತು. ಈಗ ಬಿಗ್ ಬಾಸ್ ಪೂರ್ಣಗೊಂಡ ಬಳಿಕ ಧಾರಾವಾಹಿ ವೀಕ್ಷಕರ ಸಂಖ್ಯೆ ಹೆಚ್ಚಿದೆ. ಈ ಧಾರಾವಾಹಿಗೆ ನಾಲ್ಕನೇ ಸ್ಥಾನ ಸಿಕ್ಕಿದೆ.

ಇದನ್ನೂ ಓದಿ: ಬಿಕಿನಿಯಲ್ಲಿ ‘ಅಮೃತಧಾರೆ’ ಸೀರಿಯಲ್​​​ ನಟಿ ಸಾರಾ ಅಣ್ಣಯ್ಯ

 ಅಮೃತಧಾರೆ

‘ಅಮೃತಧಾರೆ’ ಧಾರಾವಾಹಿ ಸಾಕಷ್ಟು ಟ್ವಿಸ್ಟ್​ಗಳನ್ನು ಪಡೆದು ಸಾಗುತ್ತಿದೆ. ಛಾಯಾ ಸಿಂಗ್ ಹಾಗೂ ರಾಜೇಶ್ ನಟರಂಗ ಅವರ ಕಾಂಬಿನೇಷನ್ ಜನರಿಗೆ ಇಷ್ಟ ಆಗಿದೆ. ಈ ಧಾರಾವಾಹಿ ಟಿಆರ್​ಪಿಯಲ್ಲಿ ಐದನೇ ಸ್ಥಾನದಲ್ಲಿ ಇದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow Us
ಸಚಿವ ಡಿ ಸುಧಾಕರ್ ಆರೋಗ್ಯದ ಬಗ್ಗೆ ಬಿಗ್ ಅಪ್ಡೇಟ್ ಕೊಟ್ಟ ಸಿದ್ದರಾಮಯ್ಯ
ಸಚಿವ ಡಿ ಸುಧಾಕರ್ ಆರೋಗ್ಯದ ಬಗ್ಗೆ ಬಿಗ್ ಅಪ್ಡೇಟ್ ಕೊಟ್ಟ ಸಿದ್ದರಾಮಯ್ಯ
ಶಾಲೆಗಳಲ್ಲಿ ಶಿಕ್ಷಕರೇ ಇಲ್ಲ, SSLC ಫಲಿತಾಂಶ ಏರಿಕೆ ಆಗಿದ್ಹೇಗೆ? ವಿಶ್ವನಾಥ್
ಶಾಲೆಗಳಲ್ಲಿ ಶಿಕ್ಷಕರೇ ಇಲ್ಲ, SSLC ಫಲಿತಾಂಶ ಏರಿಕೆ ಆಗಿದ್ಹೇಗೆ? ವಿಶ್ವನಾಥ್
ಉಕ್ರೇನ್ ಮೇಲೆ ಮತ್ತೆ ರಷ್ಯಾದಿಂದ ಡ್ರೋನ್ ದಾಳಿ; ನಾಲ್ವರು ಸಾವು
ಉಕ್ರೇನ್ ಮೇಲೆ ಮತ್ತೆ ರಷ್ಯಾದಿಂದ ಡ್ರೋನ್ ದಾಳಿ; ನಾಲ್ವರು ಸಾವು
3 ತಿಂಗಳ ಕಂದನನ್ನ ತನ್ನದೇ ಮಗು ಎಂಬಂತೆ ಅಪ್ಪಿಕೊಂಡು ಮುದ್ದಾಡಿದ ಮಂಗ
3 ತಿಂಗಳ ಕಂದನನ್ನ ತನ್ನದೇ ಮಗು ಎಂಬಂತೆ ಅಪ್ಪಿಕೊಂಡು ಮುದ್ದಾಡಿದ ಮಂಗ
ಪಂದ್ಯ ಶ್ರೇಷ್ಠ ಕಿಂಗ್ ಕೊಹ್ಲಿಗೆ ಟಿವಿ, ಮೊಬೈಲ್ ಗಿಫ್ಟ್
ಪಂದ್ಯ ಶ್ರೇಷ್ಠ ಕಿಂಗ್ ಕೊಹ್ಲಿಗೆ ಟಿವಿ, ಮೊಬೈಲ್ ಗಿಫ್ಟ್
ಜನಿವಾರ ಕತ್ತರಿಸಿ ಕಸದ ಬುಟ್ಟಿಗೆ ಎಸೆದರು: ವಿದ್ಯಾರ್ಥಿ ಗಂಭೀರ ಆರೋಪ
ಜನಿವಾರ ಕತ್ತರಿಸಿ ಕಸದ ಬುಟ್ಟಿಗೆ ಎಸೆದರು: ವಿದ್ಯಾರ್ಥಿ ಗಂಭೀರ ಆರೋಪ
ತೆಲಂಗಾಣದಲ್ಲಿ ತಂದೆ ಮಗಳ ರಾಜಕೀಯ ಜಿದ್ದು: ಹೊಸ ಪಕ್ಷ ಘೋಷಿಸಿದ ಕವಿತಾ!
ತೆಲಂಗಾಣದಲ್ಲಿ ತಂದೆ ಮಗಳ ರಾಜಕೀಯ ಜಿದ್ದು: ಹೊಸ ಪಕ್ಷ ಘೋಷಿಸಿದ ಕವಿತಾ!
ಕಲಬುರಗಿ ಜಿಲ್ಲೆ ಡಿಸಿ ಕಚೇರಿಯಲ್ಲೇ ಇಲ್ಲ ಕುಡಿಯುವ ನೀರು
ಕಲಬುರಗಿ ಜಿಲ್ಲೆ ಡಿಸಿ ಕಚೇರಿಯಲ್ಲೇ ಇಲ್ಲ ಕುಡಿಯುವ ನೀರು
ವಿನಯ್ ಕುಲಕರ್ಣಿ ಬೆಂಬಲಕ್ಕೆ ನಿಂತ ಅಭಿಮಾನಿಗಳು!
ವಿನಯ್ ಕುಲಕರ್ಣಿ ಬೆಂಬಲಕ್ಕೆ ನಿಂತ ಅಭಿಮಾನಿಗಳು!
ರಣವೀರ್ ಸಿಂಗ್ ದೈವಕ್ಕೆ ಅವಮಾನ ಮಾಡಿದ ಪ್ರಕರಣ ಇತ್ಯರ್ಥ; ಷರತ್ತುಗಳೇನು?
ರಣವೀರ್ ಸಿಂಗ್ ದೈವಕ್ಕೆ ಅವಮಾನ ಮಾಡಿದ ಪ್ರಕರಣ ಇತ್ಯರ್ಥ; ಷರತ್ತುಗಳೇನು?