AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಎರಡನೇ ಸ್ಥಾನದಲ್ಲಿ ‘ಸೀತಾ ರಾಮ’ ಧಾರಾವಾಹಿ; ಹೆಚ್ಚಿತು ‘ಗೀತಾ’ ಸೀರಿಯಲ್ ಟಿಆರ್​ಪಿ

Kannada Serials TRP: ಕಲರ್ಸ್ ಕನ್ನಡದಲ್ಲಿ ಪ್ರಸಾರ ಕಾಣುತ್ತಿರುವ ‘ಗೀತಾ’ ಧಾರಾವಾಹಿಯ ಟಿಆರ್​ಪಿ ಏಕಾಏಕಿ ಏರಿಕೆ ಕಂಡಿದೆ. ಹಾಗಾದರೆ ಈ ವಾರ ಯಾವ ಧಾರಾವಾಹಿ ಯಾವ ಸ್ಥಾನವನ್ನು ಕಾಪಾಡಿಕೊಂಡಿದೆ? ಇತ್ತೀಚೆಗೆ ಆರಂಭ ಆದ ಧಾರಾವಾಹಿಗಳಿಗೆ ಎಷ್ಟನೇ ಸ್ಥಾನ ಸಿಕ್ಕಿದೆ ಎಂಬಿತ್ಯಾದಿ ವಿಚಾರಗಳ ಬಗ್ಗೆ 33ನೇ ವಾರದ ಟಿಆರ್​ಪಿ ಪಟ್ಟಿಯಲ್ಲಿದೆ ಮಾಹಿತಿ.

ಎರಡನೇ ಸ್ಥಾನದಲ್ಲಿ ‘ಸೀತಾ ರಾಮ’ ಧಾರಾವಾಹಿ; ಹೆಚ್ಚಿತು ‘ಗೀತಾ’ ಸೀರಿಯಲ್ ಟಿಆರ್​ಪಿ
ಕನ್ನಡ ಧಾರಾವಾಹಿ ಟಿಆರ್​ಪಿ
ರಾಜೇಶ್ ದುಗ್ಗುಮನೆ
|

Updated on:Aug 24, 2023 | 1:06 PM

Share

ಟಿಆರ್​ಪಿ ರೇಸ್​ನಲ್ಲಿ ಧಾರಾವಾಹಿಗಳ ಸ್ಥಾನಪಲ್ಲಟ ಆಗೋದು ಸಾಮಾನ್ಯ. ವಾರದಿಂದ ವಾರಕ್ಕೆ ಧಾರಾವಾಹಿಗಳ ಟಿಆರ್​ಪಿಯಲ್ಲಿ ಬದಲಾಗುತ್ತಲೇ ಇರುತ್ತದೆ. ಆದರೆ, ಜೀ ಕನ್ನಡದಲ್ಲಿ ಪ್ರಸಾರ ಕಾಣುತ್ತಿರುವ ‘ಪುಟ್ಟಕ್ಕನ ಮಕ್ಕಳು’ (Puttakkana Makkalu) ಧಾರಾವಾಹಿ ಕಳೆದ ಕೆಲವು ತಿಂಗಳಿಂದ ಮೊದಲ ಸ್ಥಾನ ಪಡೆದುಕೊಳ್ಳುತ್ತಿದೆ. ವಿಶೇಷ ಎಂಬಂತೆ ಕಲರ್ಸ್ ಕನ್ನಡದಲ್ಲಿ ಪ್ರಸಾರ ಕಾಣುತ್ತಿರುವ ‘ಗೀತಾ’ ಧಾರಾವಾಹಿಯ (Geetha Serials) ಟಿಆರ್​ಪಿ ಏಕಾಏಕಿ ಏರಿಕೆ ಕಂಡಿದೆ. ಹಾಗಾದರೆ ಈ ವಾರ ಯಾವ ಧಾರಾವಾಹಿ ಯಾವ ಸ್ಥಾನವನ್ನು ಕಾಪಾಡಿಕೊಂಡಿದೆ? ಇತ್ತೀಚೆಗೆ ಆರಂಭ ಆದ ಧಾರಾವಾಹಿಗಳಿಗೆ ಎಷ್ಟನೇ ಸ್ಥಾನ ಸಿಕ್ಕಿದೆ ಎಂಬಿತ್ಯಾದಿ ವಿಚಾರಗಳ ಬಗ್ಗೆ 33ನೇ ವಾರದ ಟಿಆರ್​ಪಿ ಪಟ್ಟಿಯಲ್ಲಿದೆ ಮಾಹಿತಿ.

‘ಪುಟ್ಟಕ್ಕನ ಮಕ್ಕಳು’

ಉಮಾಶ್ರೀ ಅವರು ಹಿರಿತೆರೆಯಲ್ಲಿ ಮಿಂಚಿದವರು. ‘ಪುಟ್ಟಕ್ಕನ ಮಕ್ಕಳು’ ಧಾರಾವಾಹಿ ಮೂಲಕ ಅವರ ಜನಪ್ರಿಯತೆ ಮತ್ತಷ್ಟು ಹೆಚ್ಚಿದೆ. ಸಂಜನಾ ಬುರುಳಿ ಮೊದಲಾದವರು ನಿರ್ವಹಿಸುತ್ತಿರುವ ಪಾತ್ರವೂ ಗಮನ ಸೆಳೆಯುತ್ತಿದೆ. ಈ ಧಾರಾವಾಹಿ ಎರಡಂಕಿ ಟಿಆರ್​ಪಿ ಪಡೆದು ಮೊದಲ ಸ್ಥಾನ ಕಾಪಾಡಿಕೊಂಡಿದೆ.

ಸೀತಾ ರಾಮ

‘ಸೀತಾ ರಾಮ’ ಧಾರಾವಾಹಿಯನ್ನು ಬಹಳ ಅದ್ದೂರಿಯಾಗಿ ಕಟ್ಟಿಕೊಡಲಾಗುತ್ತಿದೆ. ರಾಮ ಹಾಗೂ ಸೀತಾ (ವೈಷ್ಣವಿ-ಗಗನ್) ಮಧ್ಯೆ ಈಗ ತಾನೇ ಆಪ್ತತೆ ಮೂಡುತ್ತಿದೆ. ಇದಕ್ಕೆ ಸಿಹಿ (ರೀತು ಸಿಂಗ್) ಸೇತುವೆ ಆಗುತ್ತಿದ್ದಾಳೆ. ಅಶೋಕ್ ಹಾಗೂ ಮುಖ್ಯಮಂತ್ರಿ ಚಂದ್ರು ಅವರ ಕಾಮಿಡಿ ಪಂಚ್ ಕೂಡ ಪ್ರೇಕ್ಷಕರಿಗೆ ಇಷ್ಟವಾಗುತ್ತಿದೆ. ಈ ಧಾರಾವಾಹಿ ಕಳೆದ ವಾರ ಎರಡನೇ ಸ್ಥಾನದಲ್ಲಿತ್ತು. ಅದನ್ನು ಉಳಿಸಿಕೊಂಡು ಮುಂದೆ ಸಾಗುತ್ತಿದೆ.

‘ಗಟ್ಟಿಮೇಳ’

ನಿಶಾ ರವಿಕೃಷ್ಣನ್, ರಕ್ಷಿತ್ ಗೌಡ ಮುಖ್ಯಭೂಮಿಕೆ ನಿಭಾಯಿಸಿರುವ ‘ಗಟ್ಟಿಮೇಳ’ ಧಾರಾವಾಹಿ ಮೂರನೇ ಸ್ಥಾನದಲ್ಲಿದೆ. ಈ ಧಾರಾವಾಹಿ ಹಾಗೂ ‘ಸೀತಾ ರಾಮ’ ಧಾರಾವಾಹಿ ಮಧ್ಯೆ ಟಫ್ ಕಾಂಪಿಟೇಷನ್ ಇದೆ. ‘ಗಟ್ಟಿಮೇಳ’ ಧಾರಾವಾಹಿ ಸಾವಿರ ಎಪಿಸೋಡ್ ದಾಟಿದರೂ ಟಿಆರ್​ಪಿ ರೇಸ್​ನಲ್ಲಿ ಮುಂದಿದೆ.

ಶ್ರೀರಸ್ತು ಶುಭಮಸ್ತು

‘ಶ್ರೀರಸ್ತು ಶುಭಮಸ್ತು’ ಧಾರಾವಾಹಿ ಈ ಬಾರಿ ನಾಲ್ಕನೇ ಸ್ಥಾನಕ್ಕೆ ಬಂದಿದೆ. ಕಥೆಯಲ್ಲಿ ಪ್ರಮುಖ ತಿರುವು ಸಿಕ್ಕಿರುವುದರಿಂದ ಈ ಧಾರಾವಾಹಿಯ ಟಿಆರ್​ಪಿ ಹೆಚ್ಚಿದೆ. ಸುಧಾರಾಣಿ ಮೊದಲಾದವರು ಮುಖ್ಯಭೂಮಿಕೆಯಲ್ಲಿದ್ದಾರೆ.

ಇದನ್ನೂ ಓದಿ: ಎರಡನೇ ಸ್ಥಾನಕ್ಕೆ ಜಿಗಿದ ‘ಸೀತಾ ರಾಮ’; ಟಿಆರ್​ಪಿ ರೇಸ್​ನಲ್ಲಿ ಯಾವ ಧಾರಾವಾಹಿಗೆ ಯಾವ ಸ್ಥಾನ? ಇಲ್ಲಿದೆ ವಿವರ

ಅಮೃತಧಾರೆ

ರಾಜೇಶ್ ನಟರಂಗ ಹಾಗೂ ಛಾಯಾ ಸಿಂಗ್ ನಟನೆಯ ‘ಅಮೃತಧಾರೆ’ ಧಾರಾವಾಹಿ ಈ ವಾರ ಐದನೇ ಸ್ಥಾನದಲ್ಲಿದೆ. ಈ ಧಾರಾವಾಹಿಯಲ್ಲಿ ಈ ವಾರ ಮದುವೆ ಇದೆ. ಹೀಗಾಗಿ 34ನೇ ವಾರದಲ್ಲಿ ಟಿಆರ್​ಪಿ ಹೆಚ್ಚಬಹುದು.

ಉಳಿದ ಸ್ಥಾನಗಳು..

ಆರನೇ ಸ್ಥಾನದಲ್ಲಿ ‘ಸತ್ಯ’ ಧಾರಾವಾಹಿ ಇದೆ. ಏಳನೇ ಸ್ಥಾನದಲ್ಲಿ ‘ಲಕ್ಷ್ಮಿ ಬಾರಮ್ಮ’ ಧಾರಾವಾಹಿ ಇದೆ. ಈ ಬಾರಿ ‘ಗೀತಾ’ ಧಾರಾವಾಹಿಗೆ ಒಳ್ಳೆಯ ಟಿಆರ್​ಪಿ ಸಿಕ್ಕಿದೆ. ಹೀಗಾಗಿ, ಈ ಧಾರಾವಾಹಿಗೆ ಎಂಟನೇ ಸ್ಥಾನ ಸಿಕ್ಕಿದೆ.

Published On - 1:04 pm, Thu, 24 August 23

ಡಿಕೆ ಶಿವಕುಮಾರ್ ಸಿಎಂ ಆಗುವುದು ಗ್ಯಾರಂಟಿನಾ?ವಿಶ್ವಾಸದಲ್ಲಿ ಡಿಕೆಶಿ ಆಪ್ತರು
ಡಿಕೆ ಶಿವಕುಮಾರ್ ಸಿಎಂ ಆಗುವುದು ಗ್ಯಾರಂಟಿನಾ?ವಿಶ್ವಾಸದಲ್ಲಿ ಡಿಕೆಶಿ ಆಪ್ತರು
ಕಾರಿಗೆ ಗುದ್ದಿ ಪಾದಚಾರಿ ಮೇಲೆ ಕ್ಯಾಂಟರ್ ಪಲ್ಟಿ​​: ಎದೆ ಝಲ್ ಎನಿಸೋ ದೃಶ್ಯ!
ಕಾರಿಗೆ ಗುದ್ದಿ ಪಾದಚಾರಿ ಮೇಲೆ ಕ್ಯಾಂಟರ್ ಪಲ್ಟಿ​​: ಎದೆ ಝಲ್ ಎನಿಸೋ ದೃಶ್ಯ!
ಬಾರ್​ಗೆ ನುಗ್ಗಿದ ಕೊಬ್ಬರಿ ಹೋರಿ, ಮದ್ಯಪ್ರಿಯರು ಕಕ್ಕಾಬಿಕ್ಕಿ!
ಬಾರ್​ಗೆ ನುಗ್ಗಿದ ಕೊಬ್ಬರಿ ಹೋರಿ, ಮದ್ಯಪ್ರಿಯರು ಕಕ್ಕಾಬಿಕ್ಕಿ!
ರಾಯಚೂರಲ್ಲೂ ಘರ್ಜಿಸಿದ ಜೆಸಿಬಿಗಳು: 20ಕ್ಕೂ ಅಧಿಕ ಮನೆಗಳ ತೆರವು
ರಾಯಚೂರಲ್ಲೂ ಘರ್ಜಿಸಿದ ಜೆಸಿಬಿಗಳು: 20ಕ್ಕೂ ಅಧಿಕ ಮನೆಗಳ ತೆರವು
ಅಪಾರ್ಟ್ಮೆಂಟ್​​ನಲ್ಲಿ ಸಿಲುಕಿಕೊಂಡ ಬೆಕ್ಕನ್ನು ಕಾಪಾಡಿದ ಅಗ್ನಿಶಾಮಕ ದಳ
ಅಪಾರ್ಟ್ಮೆಂಟ್​​ನಲ್ಲಿ ಸಿಲುಕಿಕೊಂಡ ಬೆಕ್ಕನ್ನು ಕಾಪಾಡಿದ ಅಗ್ನಿಶಾಮಕ ದಳ
ಹುಟ್ಟೂರಿನಲ್ಲಿ ಮನೆ ದೇವರಿಗೆ ಪೂಜೆ ಸಲ್ಲಿಸಿದ ಹೆಚ್.ಡಿ.ದೇವೇಗೌಡ
ಹುಟ್ಟೂರಿನಲ್ಲಿ ಮನೆ ದೇವರಿಗೆ ಪೂಜೆ ಸಲ್ಲಿಸಿದ ಹೆಚ್.ಡಿ.ದೇವೇಗೌಡ
ಬಾಂಗ್ಲಾದಲ್ಲಿ ಹಿಂದೂಗಳ ಮೇಲೆ ನಿಲ್ಲದ ಹಿಂಸಾಚಾರ, ಹಿಂದೂಗಳ ಮನೆಗಳಿಗೆ ಬೆಂಕಿ
ಬಾಂಗ್ಲಾದಲ್ಲಿ ಹಿಂದೂಗಳ ಮೇಲೆ ನಿಲ್ಲದ ಹಿಂಸಾಚಾರ, ಹಿಂದೂಗಳ ಮನೆಗಳಿಗೆ ಬೆಂಕಿ
ಬಾರ್​​​ನಲ್ಲಿ ಸಿಗರೇಟ್ ವಿಚಾರಕ್ಕೆ ಜಗಳ:ಚಾಕು ಇರಿದು ಯುವಕನಿಗೆ ಹಲ್ಲೆ
ಬಾರ್​​​ನಲ್ಲಿ ಸಿಗರೇಟ್ ವಿಚಾರಕ್ಕೆ ಜಗಳ:ಚಾಕು ಇರಿದು ಯುವಕನಿಗೆ ಹಲ್ಲೆ
ಐದೇ ನಿಮಿಷ, ಪಕ್ಕಾ ಪ್ಲ್ಯಾನ್​​: ಕೆಜಿಗಟ್ಟಲೆ ಚಿನ್ನ ಕದ್ದು ಎಸ್ಕೇಪ್​
ಐದೇ ನಿಮಿಷ, ಪಕ್ಕಾ ಪ್ಲ್ಯಾನ್​​: ಕೆಜಿಗಟ್ಟಲೆ ಚಿನ್ನ ಕದ್ದು ಎಸ್ಕೇಪ್​
‘ಉತ್ತರ ಕರ್ನಾಟಕ ಅಳ್ತಿದೆ, ಯಾರನ್ನೂ ವಿನ್ನರ್ ಅಂತ ಒಪ್ಪಿಕೊಳ್ಳಲ್ಲ’; ಮಾಳು
‘ಉತ್ತರ ಕರ್ನಾಟಕ ಅಳ್ತಿದೆ, ಯಾರನ್ನೂ ವಿನ್ನರ್ ಅಂತ ಒಪ್ಪಿಕೊಳ್ಳಲ್ಲ’; ಮಾಳು