AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಎರಡನೇ ಸ್ಥಾನದಲ್ಲಿ ‘ಸೀತಾ ರಾಮ’ ಧಾರಾವಾಹಿ; ಹೆಚ್ಚಿತು ‘ಗೀತಾ’ ಸೀರಿಯಲ್ ಟಿಆರ್​ಪಿ

Kannada Serials TRP: ಕಲರ್ಸ್ ಕನ್ನಡದಲ್ಲಿ ಪ್ರಸಾರ ಕಾಣುತ್ತಿರುವ ‘ಗೀತಾ’ ಧಾರಾವಾಹಿಯ ಟಿಆರ್​ಪಿ ಏಕಾಏಕಿ ಏರಿಕೆ ಕಂಡಿದೆ. ಹಾಗಾದರೆ ಈ ವಾರ ಯಾವ ಧಾರಾವಾಹಿ ಯಾವ ಸ್ಥಾನವನ್ನು ಕಾಪಾಡಿಕೊಂಡಿದೆ? ಇತ್ತೀಚೆಗೆ ಆರಂಭ ಆದ ಧಾರಾವಾಹಿಗಳಿಗೆ ಎಷ್ಟನೇ ಸ್ಥಾನ ಸಿಕ್ಕಿದೆ ಎಂಬಿತ್ಯಾದಿ ವಿಚಾರಗಳ ಬಗ್ಗೆ 33ನೇ ವಾರದ ಟಿಆರ್​ಪಿ ಪಟ್ಟಿಯಲ್ಲಿದೆ ಮಾಹಿತಿ.

ಎರಡನೇ ಸ್ಥಾನದಲ್ಲಿ ‘ಸೀತಾ ರಾಮ’ ಧಾರಾವಾಹಿ; ಹೆಚ್ಚಿತು ‘ಗೀತಾ’ ಸೀರಿಯಲ್ ಟಿಆರ್​ಪಿ
ಕನ್ನಡ ಧಾರಾವಾಹಿ ಟಿಆರ್​ಪಿ
ರಾಜೇಶ್ ದುಗ್ಗುಮನೆ
|

Updated on:Aug 24, 2023 | 1:06 PM

Share

ಟಿಆರ್​ಪಿ ರೇಸ್​ನಲ್ಲಿ ಧಾರಾವಾಹಿಗಳ ಸ್ಥಾನಪಲ್ಲಟ ಆಗೋದು ಸಾಮಾನ್ಯ. ವಾರದಿಂದ ವಾರಕ್ಕೆ ಧಾರಾವಾಹಿಗಳ ಟಿಆರ್​ಪಿಯಲ್ಲಿ ಬದಲಾಗುತ್ತಲೇ ಇರುತ್ತದೆ. ಆದರೆ, ಜೀ ಕನ್ನಡದಲ್ಲಿ ಪ್ರಸಾರ ಕಾಣುತ್ತಿರುವ ‘ಪುಟ್ಟಕ್ಕನ ಮಕ್ಕಳು’ (Puttakkana Makkalu) ಧಾರಾವಾಹಿ ಕಳೆದ ಕೆಲವು ತಿಂಗಳಿಂದ ಮೊದಲ ಸ್ಥಾನ ಪಡೆದುಕೊಳ್ಳುತ್ತಿದೆ. ವಿಶೇಷ ಎಂಬಂತೆ ಕಲರ್ಸ್ ಕನ್ನಡದಲ್ಲಿ ಪ್ರಸಾರ ಕಾಣುತ್ತಿರುವ ‘ಗೀತಾ’ ಧಾರಾವಾಹಿಯ (Geetha Serials) ಟಿಆರ್​ಪಿ ಏಕಾಏಕಿ ಏರಿಕೆ ಕಂಡಿದೆ. ಹಾಗಾದರೆ ಈ ವಾರ ಯಾವ ಧಾರಾವಾಹಿ ಯಾವ ಸ್ಥಾನವನ್ನು ಕಾಪಾಡಿಕೊಂಡಿದೆ? ಇತ್ತೀಚೆಗೆ ಆರಂಭ ಆದ ಧಾರಾವಾಹಿಗಳಿಗೆ ಎಷ್ಟನೇ ಸ್ಥಾನ ಸಿಕ್ಕಿದೆ ಎಂಬಿತ್ಯಾದಿ ವಿಚಾರಗಳ ಬಗ್ಗೆ 33ನೇ ವಾರದ ಟಿಆರ್​ಪಿ ಪಟ್ಟಿಯಲ್ಲಿದೆ ಮಾಹಿತಿ.

‘ಪುಟ್ಟಕ್ಕನ ಮಕ್ಕಳು’

ಉಮಾಶ್ರೀ ಅವರು ಹಿರಿತೆರೆಯಲ್ಲಿ ಮಿಂಚಿದವರು. ‘ಪುಟ್ಟಕ್ಕನ ಮಕ್ಕಳು’ ಧಾರಾವಾಹಿ ಮೂಲಕ ಅವರ ಜನಪ್ರಿಯತೆ ಮತ್ತಷ್ಟು ಹೆಚ್ಚಿದೆ. ಸಂಜನಾ ಬುರುಳಿ ಮೊದಲಾದವರು ನಿರ್ವಹಿಸುತ್ತಿರುವ ಪಾತ್ರವೂ ಗಮನ ಸೆಳೆಯುತ್ತಿದೆ. ಈ ಧಾರಾವಾಹಿ ಎರಡಂಕಿ ಟಿಆರ್​ಪಿ ಪಡೆದು ಮೊದಲ ಸ್ಥಾನ ಕಾಪಾಡಿಕೊಂಡಿದೆ.

ಸೀತಾ ರಾಮ

‘ಸೀತಾ ರಾಮ’ ಧಾರಾವಾಹಿಯನ್ನು ಬಹಳ ಅದ್ದೂರಿಯಾಗಿ ಕಟ್ಟಿಕೊಡಲಾಗುತ್ತಿದೆ. ರಾಮ ಹಾಗೂ ಸೀತಾ (ವೈಷ್ಣವಿ-ಗಗನ್) ಮಧ್ಯೆ ಈಗ ತಾನೇ ಆಪ್ತತೆ ಮೂಡುತ್ತಿದೆ. ಇದಕ್ಕೆ ಸಿಹಿ (ರೀತು ಸಿಂಗ್) ಸೇತುವೆ ಆಗುತ್ತಿದ್ದಾಳೆ. ಅಶೋಕ್ ಹಾಗೂ ಮುಖ್ಯಮಂತ್ರಿ ಚಂದ್ರು ಅವರ ಕಾಮಿಡಿ ಪಂಚ್ ಕೂಡ ಪ್ರೇಕ್ಷಕರಿಗೆ ಇಷ್ಟವಾಗುತ್ತಿದೆ. ಈ ಧಾರಾವಾಹಿ ಕಳೆದ ವಾರ ಎರಡನೇ ಸ್ಥಾನದಲ್ಲಿತ್ತು. ಅದನ್ನು ಉಳಿಸಿಕೊಂಡು ಮುಂದೆ ಸಾಗುತ್ತಿದೆ.

‘ಗಟ್ಟಿಮೇಳ’

ನಿಶಾ ರವಿಕೃಷ್ಣನ್, ರಕ್ಷಿತ್ ಗೌಡ ಮುಖ್ಯಭೂಮಿಕೆ ನಿಭಾಯಿಸಿರುವ ‘ಗಟ್ಟಿಮೇಳ’ ಧಾರಾವಾಹಿ ಮೂರನೇ ಸ್ಥಾನದಲ್ಲಿದೆ. ಈ ಧಾರಾವಾಹಿ ಹಾಗೂ ‘ಸೀತಾ ರಾಮ’ ಧಾರಾವಾಹಿ ಮಧ್ಯೆ ಟಫ್ ಕಾಂಪಿಟೇಷನ್ ಇದೆ. ‘ಗಟ್ಟಿಮೇಳ’ ಧಾರಾವಾಹಿ ಸಾವಿರ ಎಪಿಸೋಡ್ ದಾಟಿದರೂ ಟಿಆರ್​ಪಿ ರೇಸ್​ನಲ್ಲಿ ಮುಂದಿದೆ.

ಶ್ರೀರಸ್ತು ಶುಭಮಸ್ತು

‘ಶ್ರೀರಸ್ತು ಶುಭಮಸ್ತು’ ಧಾರಾವಾಹಿ ಈ ಬಾರಿ ನಾಲ್ಕನೇ ಸ್ಥಾನಕ್ಕೆ ಬಂದಿದೆ. ಕಥೆಯಲ್ಲಿ ಪ್ರಮುಖ ತಿರುವು ಸಿಕ್ಕಿರುವುದರಿಂದ ಈ ಧಾರಾವಾಹಿಯ ಟಿಆರ್​ಪಿ ಹೆಚ್ಚಿದೆ. ಸುಧಾರಾಣಿ ಮೊದಲಾದವರು ಮುಖ್ಯಭೂಮಿಕೆಯಲ್ಲಿದ್ದಾರೆ.

ಇದನ್ನೂ ಓದಿ: ಎರಡನೇ ಸ್ಥಾನಕ್ಕೆ ಜಿಗಿದ ‘ಸೀತಾ ರಾಮ’; ಟಿಆರ್​ಪಿ ರೇಸ್​ನಲ್ಲಿ ಯಾವ ಧಾರಾವಾಹಿಗೆ ಯಾವ ಸ್ಥಾನ? ಇಲ್ಲಿದೆ ವಿವರ

ಅಮೃತಧಾರೆ

ರಾಜೇಶ್ ನಟರಂಗ ಹಾಗೂ ಛಾಯಾ ಸಿಂಗ್ ನಟನೆಯ ‘ಅಮೃತಧಾರೆ’ ಧಾರಾವಾಹಿ ಈ ವಾರ ಐದನೇ ಸ್ಥಾನದಲ್ಲಿದೆ. ಈ ಧಾರಾವಾಹಿಯಲ್ಲಿ ಈ ವಾರ ಮದುವೆ ಇದೆ. ಹೀಗಾಗಿ 34ನೇ ವಾರದಲ್ಲಿ ಟಿಆರ್​ಪಿ ಹೆಚ್ಚಬಹುದು.

ಉಳಿದ ಸ್ಥಾನಗಳು..

ಆರನೇ ಸ್ಥಾನದಲ್ಲಿ ‘ಸತ್ಯ’ ಧಾರಾವಾಹಿ ಇದೆ. ಏಳನೇ ಸ್ಥಾನದಲ್ಲಿ ‘ಲಕ್ಷ್ಮಿ ಬಾರಮ್ಮ’ ಧಾರಾವಾಹಿ ಇದೆ. ಈ ಬಾರಿ ‘ಗೀತಾ’ ಧಾರಾವಾಹಿಗೆ ಒಳ್ಳೆಯ ಟಿಆರ್​ಪಿ ಸಿಕ್ಕಿದೆ. ಹೀಗಾಗಿ, ಈ ಧಾರಾವಾಹಿಗೆ ಎಂಟನೇ ಸ್ಥಾನ ಸಿಕ್ಕಿದೆ.

Published On - 1:04 pm, Thu, 24 August 23

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ