AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಎರಡನೇ ಸ್ಥಾನದಲ್ಲಿ ‘ಸೀತಾ ರಾಮ’ ಧಾರಾವಾಹಿ; ಹೆಚ್ಚಿತು ‘ಗೀತಾ’ ಸೀರಿಯಲ್ ಟಿಆರ್​ಪಿ

Kannada Serials TRP: ಕಲರ್ಸ್ ಕನ್ನಡದಲ್ಲಿ ಪ್ರಸಾರ ಕಾಣುತ್ತಿರುವ ‘ಗೀತಾ’ ಧಾರಾವಾಹಿಯ ಟಿಆರ್​ಪಿ ಏಕಾಏಕಿ ಏರಿಕೆ ಕಂಡಿದೆ. ಹಾಗಾದರೆ ಈ ವಾರ ಯಾವ ಧಾರಾವಾಹಿ ಯಾವ ಸ್ಥಾನವನ್ನು ಕಾಪಾಡಿಕೊಂಡಿದೆ? ಇತ್ತೀಚೆಗೆ ಆರಂಭ ಆದ ಧಾರಾವಾಹಿಗಳಿಗೆ ಎಷ್ಟನೇ ಸ್ಥಾನ ಸಿಕ್ಕಿದೆ ಎಂಬಿತ್ಯಾದಿ ವಿಚಾರಗಳ ಬಗ್ಗೆ 33ನೇ ವಾರದ ಟಿಆರ್​ಪಿ ಪಟ್ಟಿಯಲ್ಲಿದೆ ಮಾಹಿತಿ.

ಎರಡನೇ ಸ್ಥಾನದಲ್ಲಿ ‘ಸೀತಾ ರಾಮ’ ಧಾರಾವಾಹಿ; ಹೆಚ್ಚಿತು ‘ಗೀತಾ’ ಸೀರಿಯಲ್ ಟಿಆರ್​ಪಿ
ಕನ್ನಡ ಧಾರಾವಾಹಿ ಟಿಆರ್​ಪಿ
ರಾಜೇಶ್ ದುಗ್ಗುಮನೆ
|

Updated on:Aug 24, 2023 | 1:06 PM

Share

ಟಿಆರ್​ಪಿ ರೇಸ್​ನಲ್ಲಿ ಧಾರಾವಾಹಿಗಳ ಸ್ಥಾನಪಲ್ಲಟ ಆಗೋದು ಸಾಮಾನ್ಯ. ವಾರದಿಂದ ವಾರಕ್ಕೆ ಧಾರಾವಾಹಿಗಳ ಟಿಆರ್​ಪಿಯಲ್ಲಿ ಬದಲಾಗುತ್ತಲೇ ಇರುತ್ತದೆ. ಆದರೆ, ಜೀ ಕನ್ನಡದಲ್ಲಿ ಪ್ರಸಾರ ಕಾಣುತ್ತಿರುವ ‘ಪುಟ್ಟಕ್ಕನ ಮಕ್ಕಳು’ (Puttakkana Makkalu) ಧಾರಾವಾಹಿ ಕಳೆದ ಕೆಲವು ತಿಂಗಳಿಂದ ಮೊದಲ ಸ್ಥಾನ ಪಡೆದುಕೊಳ್ಳುತ್ತಿದೆ. ವಿಶೇಷ ಎಂಬಂತೆ ಕಲರ್ಸ್ ಕನ್ನಡದಲ್ಲಿ ಪ್ರಸಾರ ಕಾಣುತ್ತಿರುವ ‘ಗೀತಾ’ ಧಾರಾವಾಹಿಯ (Geetha Serials) ಟಿಆರ್​ಪಿ ಏಕಾಏಕಿ ಏರಿಕೆ ಕಂಡಿದೆ. ಹಾಗಾದರೆ ಈ ವಾರ ಯಾವ ಧಾರಾವಾಹಿ ಯಾವ ಸ್ಥಾನವನ್ನು ಕಾಪಾಡಿಕೊಂಡಿದೆ? ಇತ್ತೀಚೆಗೆ ಆರಂಭ ಆದ ಧಾರಾವಾಹಿಗಳಿಗೆ ಎಷ್ಟನೇ ಸ್ಥಾನ ಸಿಕ್ಕಿದೆ ಎಂಬಿತ್ಯಾದಿ ವಿಚಾರಗಳ ಬಗ್ಗೆ 33ನೇ ವಾರದ ಟಿಆರ್​ಪಿ ಪಟ್ಟಿಯಲ್ಲಿದೆ ಮಾಹಿತಿ.

‘ಪುಟ್ಟಕ್ಕನ ಮಕ್ಕಳು’

ಉಮಾಶ್ರೀ ಅವರು ಹಿರಿತೆರೆಯಲ್ಲಿ ಮಿಂಚಿದವರು. ‘ಪುಟ್ಟಕ್ಕನ ಮಕ್ಕಳು’ ಧಾರಾವಾಹಿ ಮೂಲಕ ಅವರ ಜನಪ್ರಿಯತೆ ಮತ್ತಷ್ಟು ಹೆಚ್ಚಿದೆ. ಸಂಜನಾ ಬುರುಳಿ ಮೊದಲಾದವರು ನಿರ್ವಹಿಸುತ್ತಿರುವ ಪಾತ್ರವೂ ಗಮನ ಸೆಳೆಯುತ್ತಿದೆ. ಈ ಧಾರಾವಾಹಿ ಎರಡಂಕಿ ಟಿಆರ್​ಪಿ ಪಡೆದು ಮೊದಲ ಸ್ಥಾನ ಕಾಪಾಡಿಕೊಂಡಿದೆ.

ಸೀತಾ ರಾಮ

‘ಸೀತಾ ರಾಮ’ ಧಾರಾವಾಹಿಯನ್ನು ಬಹಳ ಅದ್ದೂರಿಯಾಗಿ ಕಟ್ಟಿಕೊಡಲಾಗುತ್ತಿದೆ. ರಾಮ ಹಾಗೂ ಸೀತಾ (ವೈಷ್ಣವಿ-ಗಗನ್) ಮಧ್ಯೆ ಈಗ ತಾನೇ ಆಪ್ತತೆ ಮೂಡುತ್ತಿದೆ. ಇದಕ್ಕೆ ಸಿಹಿ (ರೀತು ಸಿಂಗ್) ಸೇತುವೆ ಆಗುತ್ತಿದ್ದಾಳೆ. ಅಶೋಕ್ ಹಾಗೂ ಮುಖ್ಯಮಂತ್ರಿ ಚಂದ್ರು ಅವರ ಕಾಮಿಡಿ ಪಂಚ್ ಕೂಡ ಪ್ರೇಕ್ಷಕರಿಗೆ ಇಷ್ಟವಾಗುತ್ತಿದೆ. ಈ ಧಾರಾವಾಹಿ ಕಳೆದ ವಾರ ಎರಡನೇ ಸ್ಥಾನದಲ್ಲಿತ್ತು. ಅದನ್ನು ಉಳಿಸಿಕೊಂಡು ಮುಂದೆ ಸಾಗುತ್ತಿದೆ.

‘ಗಟ್ಟಿಮೇಳ’

ನಿಶಾ ರವಿಕೃಷ್ಣನ್, ರಕ್ಷಿತ್ ಗೌಡ ಮುಖ್ಯಭೂಮಿಕೆ ನಿಭಾಯಿಸಿರುವ ‘ಗಟ್ಟಿಮೇಳ’ ಧಾರಾವಾಹಿ ಮೂರನೇ ಸ್ಥಾನದಲ್ಲಿದೆ. ಈ ಧಾರಾವಾಹಿ ಹಾಗೂ ‘ಸೀತಾ ರಾಮ’ ಧಾರಾವಾಹಿ ಮಧ್ಯೆ ಟಫ್ ಕಾಂಪಿಟೇಷನ್ ಇದೆ. ‘ಗಟ್ಟಿಮೇಳ’ ಧಾರಾವಾಹಿ ಸಾವಿರ ಎಪಿಸೋಡ್ ದಾಟಿದರೂ ಟಿಆರ್​ಪಿ ರೇಸ್​ನಲ್ಲಿ ಮುಂದಿದೆ.

ಶ್ರೀರಸ್ತು ಶುಭಮಸ್ತು

‘ಶ್ರೀರಸ್ತು ಶುಭಮಸ್ತು’ ಧಾರಾವಾಹಿ ಈ ಬಾರಿ ನಾಲ್ಕನೇ ಸ್ಥಾನಕ್ಕೆ ಬಂದಿದೆ. ಕಥೆಯಲ್ಲಿ ಪ್ರಮುಖ ತಿರುವು ಸಿಕ್ಕಿರುವುದರಿಂದ ಈ ಧಾರಾವಾಹಿಯ ಟಿಆರ್​ಪಿ ಹೆಚ್ಚಿದೆ. ಸುಧಾರಾಣಿ ಮೊದಲಾದವರು ಮುಖ್ಯಭೂಮಿಕೆಯಲ್ಲಿದ್ದಾರೆ.

ಇದನ್ನೂ ಓದಿ: ಎರಡನೇ ಸ್ಥಾನಕ್ಕೆ ಜಿಗಿದ ‘ಸೀತಾ ರಾಮ’; ಟಿಆರ್​ಪಿ ರೇಸ್​ನಲ್ಲಿ ಯಾವ ಧಾರಾವಾಹಿಗೆ ಯಾವ ಸ್ಥಾನ? ಇಲ್ಲಿದೆ ವಿವರ

ಅಮೃತಧಾರೆ

ರಾಜೇಶ್ ನಟರಂಗ ಹಾಗೂ ಛಾಯಾ ಸಿಂಗ್ ನಟನೆಯ ‘ಅಮೃತಧಾರೆ’ ಧಾರಾವಾಹಿ ಈ ವಾರ ಐದನೇ ಸ್ಥಾನದಲ್ಲಿದೆ. ಈ ಧಾರಾವಾಹಿಯಲ್ಲಿ ಈ ವಾರ ಮದುವೆ ಇದೆ. ಹೀಗಾಗಿ 34ನೇ ವಾರದಲ್ಲಿ ಟಿಆರ್​ಪಿ ಹೆಚ್ಚಬಹುದು.

ಉಳಿದ ಸ್ಥಾನಗಳು..

ಆರನೇ ಸ್ಥಾನದಲ್ಲಿ ‘ಸತ್ಯ’ ಧಾರಾವಾಹಿ ಇದೆ. ಏಳನೇ ಸ್ಥಾನದಲ್ಲಿ ‘ಲಕ್ಷ್ಮಿ ಬಾರಮ್ಮ’ ಧಾರಾವಾಹಿ ಇದೆ. ಈ ಬಾರಿ ‘ಗೀತಾ’ ಧಾರಾವಾಹಿಗೆ ಒಳ್ಳೆಯ ಟಿಆರ್​ಪಿ ಸಿಕ್ಕಿದೆ. ಹೀಗಾಗಿ, ಈ ಧಾರಾವಾಹಿಗೆ ಎಂಟನೇ ಸ್ಥಾನ ಸಿಕ್ಕಿದೆ.

Published On - 1:04 pm, Thu, 24 August 23

Follow Us
ಸಿಐಡಿ ಮುಂದೆ ತಪ್ಪೊಪ್ಪಿಕೊಂಡ 6 ಅಭ್ಯರ್ಥಿಗಳು!
ಸಿಐಡಿ ಮುಂದೆ ತಪ್ಪೊಪ್ಪಿಕೊಂಡ 6 ಅಭ್ಯರ್ಥಿಗಳು!
ಇಂದಿನಿಂದ ಲಿಂಗಸುಗೂರಿನಿಂದ ‘ಬಳ್ಳಾರಿ ಚಲೋ’ ಹೆಸರಲ್ಲಿ ಬಿಜೆಪಿ ಪಾದಯಾತ್ರೆ
ಇಂದಿನಿಂದ ಲಿಂಗಸುಗೂರಿನಿಂದ ‘ಬಳ್ಳಾರಿ ಚಲೋ’ ಹೆಸರಲ್ಲಿ ಬಿಜೆಪಿ ಪಾದಯಾತ್ರೆ
ಸೆಪ್ಟೆಂಬರ್ 1, 2026: ದ್ವಾದಶ ರಾಶಿಗಳ ಮೇಲೆ ಗ್ರಹಗಳ ಪ್ರಭಾವ, ದಿನ ಭವಿಷ್ಯ
ಸೆಪ್ಟೆಂಬರ್ 1, 2026: ದ್ವಾದಶ ರಾಶಿಗಳ ಮೇಲೆ ಗ್ರಹಗಳ ಪ್ರಭಾವ, ದಿನ ಭವಿಷ್ಯ
ಸಲಾಲ್ ಡ್ಯಾಂನ ಗೇಟ್​ ಓಪನ್ ಮಾಡಿದ ಭಾರತ; ಪಾಕಿಸ್ತಾನ ಕಂಗಾಲು
ಸಲಾಲ್ ಡ್ಯಾಂನ ಗೇಟ್​ ಓಪನ್ ಮಾಡಿದ ಭಾರತ; ಪಾಕಿಸ್ತಾನ ಕಂಗಾಲು
ಮದುವೆ ಬಳಿಕ ಹಿಮವದ್ ಗೋಪಾಲಸ್ವಾಮಿ ದೇವಸ್ಥಾನಕ್ಕೆ ಚಿಕ್ಕಣ್ಣ, ಪಾವನಾ ಭೇಟಿ
ಮದುವೆ ಬಳಿಕ ಹಿಮವದ್ ಗೋಪಾಲಸ್ವಾಮಿ ದೇವಸ್ಥಾನಕ್ಕೆ ಚಿಕ್ಕಣ್ಣ, ಪಾವನಾ ಭೇಟಿ
ಗ್ಯಾರಂಟಿ ಪ್ರಾಧಿಕಾರದ ಸಭೆಯಲ್ಲಿ ಮಹತ್ವದ ತೀರ್ಮಾನ: ಚುನಾವಣೆಗೆ ತಯಾರಿ?
ಗ್ಯಾರಂಟಿ ಪ್ರಾಧಿಕಾರದ ಸಭೆಯಲ್ಲಿ ಮಹತ್ವದ ತೀರ್ಮಾನ: ಚುನಾವಣೆಗೆ ತಯಾರಿ?
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
ಉಜ್ಬೆಕಿಸ್ತಾನ್‌ ಮಕ್ಕಳ ಬಾಯಲ್ಲಿ ತಾವೇ ಬರೆದ ಕವಿತೆ ಕೇಳಿ ಭಾವುಕರಾದ ಮೋದಿ
ಉಜ್ಬೆಕಿಸ್ತಾನ್‌ ಮಕ್ಕಳ ಬಾಯಲ್ಲಿ ತಾವೇ ಬರೆದ ಕವಿತೆ ಕೇಳಿ ಭಾವುಕರಾದ ಮೋದಿ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು