AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಎರಡನೇ ಸ್ಥಾನಕ್ಕೆ ಜಿಗಿದ ‘ಸೀತಾ ರಾಮ’; ಟಿಆರ್​ಪಿ ರೇಸ್​ನಲ್ಲಿ ಯಾವ ಧಾರಾವಾಹಿಗೆ ಯಾವ ಸ್ಥಾನ? ಇಲ್ಲಿದೆ ವಿವರ

Kannada TV Serial TRP: 32ನೇ ವಾರದ ಟಿಆರ್​ಪಿ ಲಿಸ್ಟ್ ಹೊರ ಬಿದ್ದಿದೆ. ಈ ಪೈಕಿ ಜೀ ಕನ್ನಡದಲ್ಲಿ ಪ್ರಸಾರ ಆಗುತ್ತಿರುವ ‘ಪುಟ್ಟಕ್ಕನ ಮಕ್ಕಳು’ ಧಾರಾವಾಹಿ ಮೊದಲ ಸ್ಥಾನ ಕಾಯ್ದುಕೊಂಡಿದೆ. ಕಳೆದ ವಾರಕ್ಕೆ ಹೋಲಿಕೆ ಮಾಡಿದರೆ ಧಾರಾವಾಹಿಯ ಟಿಆರ್​ಪಿ ಕೊಂಚ ತಗ್ಗಿದೆ. ‘ಸೀತಾ ರಾಮ’ ಧಾರಾವಾಹಿ ಎರಡನೇ ಸ್ಥಾನ ಪಡೆದುಕೊಂಡಿದೆ.

ಎರಡನೇ ಸ್ಥಾನಕ್ಕೆ ಜಿಗಿದ ‘ಸೀತಾ ರಾಮ’; ಟಿಆರ್​ಪಿ ರೇಸ್​ನಲ್ಲಿ ಯಾವ ಧಾರಾವಾಹಿಗೆ ಯಾವ ಸ್ಥಾನ? ಇಲ್ಲಿದೆ ವಿವರ
ಧಾರಾವಾಹಿ ಟಿಆರ್​ಪಿ
ರಾಜೇಶ್ ದುಗ್ಗುಮನೆ
| Edited By: |

Updated on:Aug 18, 2023 | 1:05 PM

Share

ಹೊಸ ಹೊಸ ಧಾರಾವಾಹಿಗಳು ಪ್ರಸಾರ ಕಾಣುತ್ತಲೇ ಇರುತ್ತವೆ. ಹೊಸ ಮಾದರಿಯ ಕಥೆಯೊಂದಿಗೆ ಪ್ರೇಕ್ಷಕರ ಎದುರು ಬರುವ ಪ್ರಯತ್ನ ನಿರಂತರವಾಗಿ ಆಗುತ್ತಲೇ ಇರುತ್ತದೆ. ಧಾರಾವಾಹಿಗಳ ಜನಪ್ರಿಯತೆ ಅಳೆಯೋಕೆ ಇರೋ ಮಾನದಂಡ ಟಿಆರ್​ಪಿ. ಒಳ್ಳೆಯ ಟಿಆರ್​ಪಿ (TRP) ಗಳಿಕೆಗೆ ಎಲ್ಲಾ ವಾಹಿನಿಗಳು ರೇಸ್​ಗೆ ಇಳಿದಿವೆ. ಧಾರಾವಾಹಿಗಳನ್ನು ಅದ್ದೂರಿಯಾಗಿ ಸಿದ್ಧಪಡಿಸಲಾಗುತ್ತಿದೆ. ಈಗ 32ನೇ ವಾರದ ಟಿಆರ್​ಪಿ ಲಿಸ್ಟ್ ಹೊರ ಬಿದ್ದಿದೆ. ಈ ಪೈಕಿ ಜೀ ಕನ್ನಡದಲ್ಲಿ (Zee Kannada) ಪ್ರಸಾರ ಆಗುತ್ತಿರುವ ‘ಪುಟ್ಟಕ್ಕನ ಮಕ್ಕಳು’ ಧಾರಾವಾಹಿ ಮೊದಲ ಸ್ಥಾನ ಕಾಯ್ದುಕೊಂಡಿದೆ. ಕಳೆದ ವಾರಕ್ಕೆ ಹೋಲಿಕೆ ಮಾಡಿದರೆ ಧಾರಾವಾಹಿಯ ಟಿಆರ್​ಪಿ ಕೊಂಚ ತಗ್ಗಿದೆ. ‘ಸೀತಾ ರಾಮ’ ಧಾರಾವಾಹಿ ಎರಡನೇ ಸ್ಥಾನ ಪಡೆದುಕೊಂಡಿದೆ.

ಪುಟ್ಟಕ್ಕನ ಮಕ್ಕಳು

ಉಮಾಶ್ರೀ, ಸಂಜನಾ ಬುರುಳಿ ಮೊದಲಾದವರು ನಟಿಸಿರುವ ‘ಪುಟ್ಟಕ್ಕನ ಮಕ್ಕಳು’ ಧಾರಾವಾಹಿ ಮೊದಲ ಸ್ಥಾನದಲ್ಲಿದೆ. ಈ ಧಾರಾವಾಹಿ ಕಳೆದ ಕೆಲ ತಿಂಗಳಿಂದ ಮೊದಲ ಸ್ಥಾನ ಕಾಪಾಡಿಕೊಂಡು ಬಂದಿದೆ. ಕೆಲವು ಪ್ರಮುಖ ತಿರುವುಗಳಲ್ಲಿ ಧಾರಾವಾಹಿಯ ಕಥೆ ಸಾಗಿದ್ದರಿಂದ ಈ ಧಾರಾವಾಹಿಯ ಟಿಆರ್​ಪಿ ಹೆಚ್ಚಿದೆ.

ಸೀತಾ ರಾಮ

ಎರಡನೇ ಸ್ಥಾನದಲ್ಲಿ ‘ಸೀತಾ ರಾಮ’ ಧಾರಾವಾಹಿ ಇದೆ. ವೈಷ್ಣವಿ ಗೌಡ, ಗಗನ್ ಚಿನ್ನಪ್ಪ ಹಾಗೂ ರೀತು ಸಿಂಗ್ ಮುಖ್ಯಭೂಮಿಕೆಯಲ್ಲಿ ಕಾಣಿಸಿಕೊಂಡಿರುವ ‘ಸೀತಾ ರಾಮ’ ಧಾರಾವಾಹಿ ಗಮನ ಸೆಳೆಯುತ್ತಿದೆ. ಕಾಮಿಡಿ ಹಾಗೂ ಅಮ್ಮ-ಮಗಳ ಎಮೋಷನ್ ವರ್ಕ್ ಆಗುತ್ತಿದೆ.

‘ಗಟ್ಟಿಮೇಳ’

ನಿಶಾ ರವಿಕೃಷ್ಣನ್, ರಕ್ಷಿತ್ ಗೌಡ ಮೊದಲಾದವರು ‘ಗಟ್ಟಿಮೇಳ’ ಧಾರಾವಾಹಿಯಲ್ಲಿ ನಟಿಸುತ್ತಿದ್ದಾರೆ. ಸಾವಿರ ಎಪಿಸೋಡ್ ಮುಗಿಸಿರುವ ಈ ಧಾರಾವಾಹಿ ಇಷ್ಟು ದಿನ ಎರಡನೇ ಸ್ಥಾನದಲ್ಲಿ ಇತ್ತು. ಈಗ ಧಾರಾವಾಹಿಗೆ ಮೂರನೇ ಸ್ಥಾನ ಸಿಕ್ಕಿದೆ. ಈ ಧಾರಾವಾಹಿಗೆ ದೊಡ್ಡ ವೀಕ್ಷಕರ ವರ್ಗ ಇದೆ.

ಇದನ್ನೂ ಓದಿ: ಹೊರಬಿತ್ತು ಧಾರಾವಾಹಿ ಟಿಆರ್​ಪಿ ಲಿಸ್ಟ್​; ‘ಗಟ್ಟಿಮೇಳ’-‘ಸೀತಾ ರಾಮ’ ಮಧ್ಯೆ ಭರ್ಜರಿ ಸ್ಪರ್ಧೆ

‘ಸತ್ಯ’

‘ಸತ್ಯ’ ಧಾರಾವಾಹಿ ನಾಲ್ಕನೇ ಸ್ಥಾನದಲ್ಲಿದೆ. ಈ ಧಾರಾವಾಹಿಗೆ ಎಲ್ಲ ಕಡೆಗಳಿಂದ ಮೆಚ್ಚುಗೆ ಸಿಗುತ್ತಿದೆ. ಈ ಧಾರಾವಾಹಿ ಪ್ರಬಲ ಸ್ಪರ್ಧೆ ನೀಡುತ್ತಿದೆ.

ಅಮೃತಧಾರೆ- ಶ್ರೀರಸ್ತು ಶುಭಮಸ್ತು

ಅಮೃತಧಾರೆ ಧಾರಾವಾಹಿಯಲ್ಲಿ ಮದುವೆ ಸಂಭ್ರಮ ಮನೆ ಮಾಡಿದೆ. ಗೌತಮ್-ಭೂಮಿಕಾ ಮದುವೆ ನಡೆಯುತ್ತಿದೆ. ಈ ಧಾರಾವಾಹಿ ಈ ಬಾರಿ ಐದನೇ ಸ್ಥಾನ ಅಲಂಕರಿಸಿದೆ. ಇದರ ಜೊತೆ ಸುಧಾರಾಣಿ ನಟಿಸುತ್ತಿರುವ ‘ಶ್ರೀರಸ್ತು ಶುಭಮಸ್ತು’ ಧಾರಾವಾಹಿ ಕೂಡ ಐದನೇ ಸ್ಥಾನದಲ್ಲಿದೆ. ಈ ಧಾರಾವಾಹಿಯಲ್ಲೂ ಮದುವೆ ವಿಚಾರ ಹೈಲೈಟ್ ಆಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 1:00 pm, Fri, 18 August 23

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?