AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಎರಡನೇ ಸ್ಥಾನಕ್ಕೆ ಜಿಗಿದ ‘ಸೀತಾ ರಾಮ’; ಟಿಆರ್​ಪಿ ರೇಸ್​ನಲ್ಲಿ ಯಾವ ಧಾರಾವಾಹಿಗೆ ಯಾವ ಸ್ಥಾನ? ಇಲ್ಲಿದೆ ವಿವರ

Kannada TV Serial TRP: 32ನೇ ವಾರದ ಟಿಆರ್​ಪಿ ಲಿಸ್ಟ್ ಹೊರ ಬಿದ್ದಿದೆ. ಈ ಪೈಕಿ ಜೀ ಕನ್ನಡದಲ್ಲಿ ಪ್ರಸಾರ ಆಗುತ್ತಿರುವ ‘ಪುಟ್ಟಕ್ಕನ ಮಕ್ಕಳು’ ಧಾರಾವಾಹಿ ಮೊದಲ ಸ್ಥಾನ ಕಾಯ್ದುಕೊಂಡಿದೆ. ಕಳೆದ ವಾರಕ್ಕೆ ಹೋಲಿಕೆ ಮಾಡಿದರೆ ಧಾರಾವಾಹಿಯ ಟಿಆರ್​ಪಿ ಕೊಂಚ ತಗ್ಗಿದೆ. ‘ಸೀತಾ ರಾಮ’ ಧಾರಾವಾಹಿ ಎರಡನೇ ಸ್ಥಾನ ಪಡೆದುಕೊಂಡಿದೆ.

ಎರಡನೇ ಸ್ಥಾನಕ್ಕೆ ಜಿಗಿದ ‘ಸೀತಾ ರಾಮ’; ಟಿಆರ್​ಪಿ ರೇಸ್​ನಲ್ಲಿ ಯಾವ ಧಾರಾವಾಹಿಗೆ ಯಾವ ಸ್ಥಾನ? ಇಲ್ಲಿದೆ ವಿವರ
ಧಾರಾವಾಹಿ ಟಿಆರ್​ಪಿ
ರಾಜೇಶ್ ದುಗ್ಗುಮನೆ
| Edited By: |

Updated on:Aug 18, 2023 | 1:05 PM

Share

ಹೊಸ ಹೊಸ ಧಾರಾವಾಹಿಗಳು ಪ್ರಸಾರ ಕಾಣುತ್ತಲೇ ಇರುತ್ತವೆ. ಹೊಸ ಮಾದರಿಯ ಕಥೆಯೊಂದಿಗೆ ಪ್ರೇಕ್ಷಕರ ಎದುರು ಬರುವ ಪ್ರಯತ್ನ ನಿರಂತರವಾಗಿ ಆಗುತ್ತಲೇ ಇರುತ್ತದೆ. ಧಾರಾವಾಹಿಗಳ ಜನಪ್ರಿಯತೆ ಅಳೆಯೋಕೆ ಇರೋ ಮಾನದಂಡ ಟಿಆರ್​ಪಿ. ಒಳ್ಳೆಯ ಟಿಆರ್​ಪಿ (TRP) ಗಳಿಕೆಗೆ ಎಲ್ಲಾ ವಾಹಿನಿಗಳು ರೇಸ್​ಗೆ ಇಳಿದಿವೆ. ಧಾರಾವಾಹಿಗಳನ್ನು ಅದ್ದೂರಿಯಾಗಿ ಸಿದ್ಧಪಡಿಸಲಾಗುತ್ತಿದೆ. ಈಗ 32ನೇ ವಾರದ ಟಿಆರ್​ಪಿ ಲಿಸ್ಟ್ ಹೊರ ಬಿದ್ದಿದೆ. ಈ ಪೈಕಿ ಜೀ ಕನ್ನಡದಲ್ಲಿ (Zee Kannada) ಪ್ರಸಾರ ಆಗುತ್ತಿರುವ ‘ಪುಟ್ಟಕ್ಕನ ಮಕ್ಕಳು’ ಧಾರಾವಾಹಿ ಮೊದಲ ಸ್ಥಾನ ಕಾಯ್ದುಕೊಂಡಿದೆ. ಕಳೆದ ವಾರಕ್ಕೆ ಹೋಲಿಕೆ ಮಾಡಿದರೆ ಧಾರಾವಾಹಿಯ ಟಿಆರ್​ಪಿ ಕೊಂಚ ತಗ್ಗಿದೆ. ‘ಸೀತಾ ರಾಮ’ ಧಾರಾವಾಹಿ ಎರಡನೇ ಸ್ಥಾನ ಪಡೆದುಕೊಂಡಿದೆ.

ಪುಟ್ಟಕ್ಕನ ಮಕ್ಕಳು

ಉಮಾಶ್ರೀ, ಸಂಜನಾ ಬುರುಳಿ ಮೊದಲಾದವರು ನಟಿಸಿರುವ ‘ಪುಟ್ಟಕ್ಕನ ಮಕ್ಕಳು’ ಧಾರಾವಾಹಿ ಮೊದಲ ಸ್ಥಾನದಲ್ಲಿದೆ. ಈ ಧಾರಾವಾಹಿ ಕಳೆದ ಕೆಲ ತಿಂಗಳಿಂದ ಮೊದಲ ಸ್ಥಾನ ಕಾಪಾಡಿಕೊಂಡು ಬಂದಿದೆ. ಕೆಲವು ಪ್ರಮುಖ ತಿರುವುಗಳಲ್ಲಿ ಧಾರಾವಾಹಿಯ ಕಥೆ ಸಾಗಿದ್ದರಿಂದ ಈ ಧಾರಾವಾಹಿಯ ಟಿಆರ್​ಪಿ ಹೆಚ್ಚಿದೆ.

ಸೀತಾ ರಾಮ

ಎರಡನೇ ಸ್ಥಾನದಲ್ಲಿ ‘ಸೀತಾ ರಾಮ’ ಧಾರಾವಾಹಿ ಇದೆ. ವೈಷ್ಣವಿ ಗೌಡ, ಗಗನ್ ಚಿನ್ನಪ್ಪ ಹಾಗೂ ರೀತು ಸಿಂಗ್ ಮುಖ್ಯಭೂಮಿಕೆಯಲ್ಲಿ ಕಾಣಿಸಿಕೊಂಡಿರುವ ‘ಸೀತಾ ರಾಮ’ ಧಾರಾವಾಹಿ ಗಮನ ಸೆಳೆಯುತ್ತಿದೆ. ಕಾಮಿಡಿ ಹಾಗೂ ಅಮ್ಮ-ಮಗಳ ಎಮೋಷನ್ ವರ್ಕ್ ಆಗುತ್ತಿದೆ.

‘ಗಟ್ಟಿಮೇಳ’

ನಿಶಾ ರವಿಕೃಷ್ಣನ್, ರಕ್ಷಿತ್ ಗೌಡ ಮೊದಲಾದವರು ‘ಗಟ್ಟಿಮೇಳ’ ಧಾರಾವಾಹಿಯಲ್ಲಿ ನಟಿಸುತ್ತಿದ್ದಾರೆ. ಸಾವಿರ ಎಪಿಸೋಡ್ ಮುಗಿಸಿರುವ ಈ ಧಾರಾವಾಹಿ ಇಷ್ಟು ದಿನ ಎರಡನೇ ಸ್ಥಾನದಲ್ಲಿ ಇತ್ತು. ಈಗ ಧಾರಾವಾಹಿಗೆ ಮೂರನೇ ಸ್ಥಾನ ಸಿಕ್ಕಿದೆ. ಈ ಧಾರಾವಾಹಿಗೆ ದೊಡ್ಡ ವೀಕ್ಷಕರ ವರ್ಗ ಇದೆ.

ಇದನ್ನೂ ಓದಿ: ಹೊರಬಿತ್ತು ಧಾರಾವಾಹಿ ಟಿಆರ್​ಪಿ ಲಿಸ್ಟ್​; ‘ಗಟ್ಟಿಮೇಳ’-‘ಸೀತಾ ರಾಮ’ ಮಧ್ಯೆ ಭರ್ಜರಿ ಸ್ಪರ್ಧೆ

‘ಸತ್ಯ’

‘ಸತ್ಯ’ ಧಾರಾವಾಹಿ ನಾಲ್ಕನೇ ಸ್ಥಾನದಲ್ಲಿದೆ. ಈ ಧಾರಾವಾಹಿಗೆ ಎಲ್ಲ ಕಡೆಗಳಿಂದ ಮೆಚ್ಚುಗೆ ಸಿಗುತ್ತಿದೆ. ಈ ಧಾರಾವಾಹಿ ಪ್ರಬಲ ಸ್ಪರ್ಧೆ ನೀಡುತ್ತಿದೆ.

ಅಮೃತಧಾರೆ- ಶ್ರೀರಸ್ತು ಶುಭಮಸ್ತು

ಅಮೃತಧಾರೆ ಧಾರಾವಾಹಿಯಲ್ಲಿ ಮದುವೆ ಸಂಭ್ರಮ ಮನೆ ಮಾಡಿದೆ. ಗೌತಮ್-ಭೂಮಿಕಾ ಮದುವೆ ನಡೆಯುತ್ತಿದೆ. ಈ ಧಾರಾವಾಹಿ ಈ ಬಾರಿ ಐದನೇ ಸ್ಥಾನ ಅಲಂಕರಿಸಿದೆ. ಇದರ ಜೊತೆ ಸುಧಾರಾಣಿ ನಟಿಸುತ್ತಿರುವ ‘ಶ್ರೀರಸ್ತು ಶುಭಮಸ್ತು’ ಧಾರಾವಾಹಿ ಕೂಡ ಐದನೇ ಸ್ಥಾನದಲ್ಲಿದೆ. ಈ ಧಾರಾವಾಹಿಯಲ್ಲೂ ಮದುವೆ ವಿಚಾರ ಹೈಲೈಟ್ ಆಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 1:00 pm, Fri, 18 August 23

Follow Us
ಇಂದು ಪಾಪನಾಶಿನಿ ದ್ವಾದಶಿ: ದ್ವಾದಶ ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಪಾಪನಾಶಿನಿ ದ್ವಾದಶಿ: ದ್ವಾದಶ ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಕಾಂಗ್ರೆಸ್​​ಗೆ ಹತ್ತಿರವಾಗುತ್ತಿದ್ದಾರಾ ಬಿಜೆಪಿಯ ಪ್ರೀತಂಗೌಡ?
ಕಾಂಗ್ರೆಸ್​​ಗೆ ಹತ್ತಿರವಾಗುತ್ತಿದ್ದಾರಾ ಬಿಜೆಪಿಯ ಪ್ರೀತಂಗೌಡ?
ಪ್ರತಿಯೊಬ್ಬ ವಿದ್ಯಾರ್ಥಿಯ ಆಕಾಂಕ್ಷೆ ಆಲಿಸಲು ಅಧಿಕಾರಿಗಳಿಗೆ ಜೋಶಿ ಸೂಚನೆ
ಪ್ರತಿಯೊಬ್ಬ ವಿದ್ಯಾರ್ಥಿಯ ಆಕಾಂಕ್ಷೆ ಆಲಿಸಲು ಅಧಿಕಾರಿಗಳಿಗೆ ಜೋಶಿ ಸೂಚನೆ
ಶಾಸಕರ ಅಸಮಾಧಾನದ ನಡುವೆ ದೆಹಲಿಗೆ ಹಾರಿದ ಸಿಎಂ ಡಿ.ಕೆ ಶಿವಕುಮಾರ್
ಶಾಸಕರ ಅಸಮಾಧಾನದ ನಡುವೆ ದೆಹಲಿಗೆ ಹಾರಿದ ಸಿಎಂ ಡಿ.ಕೆ ಶಿವಕುಮಾರ್
ಚಲಿಸುತ್ತಿದ್ದಾಗಲೇ ಟೈರ್ ಬ್ಲಾಸ್ಟ್: ಗದ್ದೆಗೆ ನುಗ್ಗಿದ KSRTC ಬಸ್​​
ಚಲಿಸುತ್ತಿದ್ದಾಗಲೇ ಟೈರ್ ಬ್ಲಾಸ್ಟ್: ಗದ್ದೆಗೆ ನುಗ್ಗಿದ KSRTC ಬಸ್​​
ಸಚಿವರ ಪಟ್ಟಿ ಬದಲಾಗಿದ್ದು ಕಾಂಗ್ರೆಸ್ ಇತಿಹಾಸದಲ್ಲಿ ಇದೇ ಮೊದಲು: ರಾಜಣ್ಣ
ಸಚಿವರ ಪಟ್ಟಿ ಬದಲಾಗಿದ್ದು ಕಾಂಗ್ರೆಸ್ ಇತಿಹಾಸದಲ್ಲಿ ಇದೇ ಮೊದಲು: ರಾಜಣ್ಣ
ಯತೀಂದ್ರಗೆ ಮತ್ತೊಂದು ಜಾಕ್​​ ಪಾಟ್, ಸಿದ್ದರಾಮಯ್ಯ ಮುನಿಸು ತಣಿಸುವ ಪ್ರಯತ್ನ
ಯತೀಂದ್ರಗೆ ಮತ್ತೊಂದು ಜಾಕ್​​ ಪಾಟ್, ಸಿದ್ದರಾಮಯ್ಯ ಮುನಿಸು ತಣಿಸುವ ಪ್ರಯತ್ನ
‘ಖಾಕಿ’ ಧರಿಸಿದರೆ ಜೋಶ್ ಬರುತ್ತೆ: ಪೊಲೀಸರ ಬಗ್ಗೆ ಡಾಲಿ ಧನಂಜಯ್ ಮಾತು
‘ಖಾಕಿ’ ಧರಿಸಿದರೆ ಜೋಶ್ ಬರುತ್ತೆ: ಪೊಲೀಸರ ಬಗ್ಗೆ ಡಾಲಿ ಧನಂಜಯ್ ಮಾತು
GBDA ಯೋಜನೆ ಕುರಿತು ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಸಂದೇಶ
GBDA ಯೋಜನೆ ಕುರಿತು ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಸಂದೇಶ
‘ನನ್ನ ಕನಸನ್ನು ಹೆಗಲ ಮೇಲೆ ಹೊತ್ತುಕೊಂಡ ಯಶ್: ಗೀತು ಮೋಹನ್​​ದಾಸ್ ಭಾವುಕ
‘ನನ್ನ ಕನಸನ್ನು ಹೆಗಲ ಮೇಲೆ ಹೊತ್ತುಕೊಂಡ ಯಶ್: ಗೀತು ಮೋಹನ್​​ದಾಸ್ ಭಾವುಕ