AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟಿಆರ್​ಪಿ ರೇಸ್​​ನಲ್ಲಿ ಎಲ್ಲರನ್ನು ಹಿಂದಿಕ್ಕಿ ನಂಬರ್ 1 ಸ್ಥಾನ ಪಡೆದ ‘ಅಮೃತಧಾರೆ’; ಟಾಪ್ ಐದು ಸೀರಿಯಲ್ಸ್

ಕನ್ನಡ ಧಾರಾವಾಹಿಗಳ 39ನೇ ವಾರದ ಟಿಆರ್​ಪಿ ಹೊರ ಬಿದ್ದಿದೆ. ಪ್ರತಿವರವೂ ಧಾರಾವಾಹಿಗಳು ಬಹುತೇಕ ಒಂದೇ ರೀತಿಯ ಸ್ಥಾನದಲ್ಲಿ ಇರುತ್ತಿದ್ದವು. ಆದರೆ, ಈ ಬಾರಿ ಅಚ್ಚರಿಯ ಬೆಳವಣಿಗೆ ನಡೆದಿದೆ. ಬೇರೆ ಬೇರೆ ಧಾರಾವಾಹಿಗಳು ಟಾಪ್ ಐದರಲ್ಲಿ ಸ್ಥಾನ ಪಡೆದಿವೆ.

ಟಿಆರ್​ಪಿ ರೇಸ್​​ನಲ್ಲಿ ಎಲ್ಲರನ್ನು ಹಿಂದಿಕ್ಕಿ ನಂಬರ್ 1 ಸ್ಥಾನ ಪಡೆದ ‘ಅಮೃತಧಾರೆ’; ಟಾಪ್ ಐದು ಸೀರಿಯಲ್ಸ್
ಅಮೃತಧಾರೆ
ರಾಜೇಶ್ ದುಗ್ಗುಮನೆ
|

Updated on:Oct 04, 2024 | 2:21 PM

Share

‘ಅಮೃತಧಾರೆ’ ಧಾರಾವಾಹಿ ಆರಂಭ ಆಗಿ ವರ್ಷಗಳೇ ಕಳೆದಿವೆ. ಆರಂಭದ ದಿನಗಳಲ್ಲಿ ಈ ಧಾರಾವಾಹಿಗೆ ಒಳ್ಳೆಯ ಟಿಆರ್​ಪಿ ಸಿಗುತ್ತಿತ್ತು. ನಂತರದ ದಿನಗಳಲ್ಲಿ ಅಷ್ಟಾಗಿ ಟಿಆರ್​ಪಿ ಸಿಕ್ಕಿಲ್ಲ. ಈಗ 39ನೇ ವಾರದ ಲಿಸ್ಟ್​​ನಲ್ಲಿ ‘ಅಮೃತಧಾರೆ’ ಧಾರಾವಾಹಿ ಕರ್ನಾಟಕದಲ್ಲಿ ನಂಬರ್ 1 ಸ್ಥಾನ ಪಡೆದಿದೆ. ಈ ಮೂಲಕ ಅಚ್ಚರಿಯ ಕಂಬ್ಯಾಕ್ ಮಾಡಿದೆ. ಇದು ತಂಡದ ಖುಷಿ ಹೆಚ್ಚಿಸಿದೆ. ಟಾಪ್ ಐದರಲ್ಲಿ ಇರುವ ಧಾರಾವಾಹಿಗಳ ಪಟ್ಟಿ ಇಲ್ಲಿದೆ.

‘ಅಮೃತಧಾರೆ’ ಧಾರಾವಾಹಿಯಲ್ಲಿ ರಾಜೇಶ್ ನಟರಂಗ, ಛಾಯಾ ಸಿಂಗ್ ಮೊದಲಾದವರು ನಟಿಸುತ್ತಿದ್ದಾರೆ. ಈ ದಾರಾವಾಹಿಗೆ ಮೊದಲ ಸ್ಥಾನ ಸಿಕ್ಕಿದೆ. ಈ ಧಾರಾವಾಹಿಯ ಕಂಬ್ಯಾಕ್ ಫ್ಯಾನ್ಸ್​ಗೆ ಖುಷಿ ಕೊಟ್ಟಿದೆ. ಎರಡನೇ ಸ್ಥಾನದಲ್ಲಿ ‘ಲಕ್ಷ್ಮೀ ನಿವಾಸ’ ಧಾರಾವಾಹಿ ಇದೆ. ‘ಪುಟ್ಟಕ್ಕನ ಮಕ್ಕಳು’ ಸಮಯ ಬದಲಾವಣೆ ನಂತರದಲ್ಲಿ ‘ಲಕ್ಷ್ಮೀ ನಿವಾಸ’ ಧಾರಾವಾಹಿ ನಂಬರ್ 1 ಸ್ಥಾನ ಕಾಪಾಡಿಕೊಳ್ಳುತ್ತಾ ಬರುತ್ತಿತ್ತು.

ಮೂರನೇ ಸ್ಥಾನದಲ್ಲಿ ‘ಶ್ರಾವಣಿ ಸುಬ್ರಮಣ್ಯ’ ಧಾರಾವಾಹಿ ಇದೆ.  ನಾಲ್ಕನೇ ಸ್ಥಾನದಲ್ಲಿ ‘ಪುಟ್ಟಕ್ಕನ ಮಕ್ಕಳು’ ಧಾರಾವಾಹಿ ಇದೆ. ಈ ಧಾರಾವಾಹಿಯ  ಸಮಯ ಬದಲಾವಣೆ ಆದರೂ ಟಿಆರ್​ಪಿಯಲ್ಲಿ ಹೆಚ್ಚಿನ ವ್ಯತ್ಯಾಸ ಏನು ಆಗಿಲ್ಲ ಅನ್ನೋದು ವಿಶೇಷ. ಐದನೇ ಸ್ಥಾನದಲ್ಲಿ ‘ಲಕ್ಷ್ಮೀ ಬಾರಮ್ಮ’ ಧಾರಾವಾಹಿ ಇದೆ. ಆರನೇ ಸ್ಥಾನದಲ್ಲಿ ‘ಅಣ್ಣಯ್ಯ’ ಧಾರಾವಾಹಿ ಇದೆ. ಇತ್ತೀಚೆಗೆ ಆರಂಭವಾದ ಈ ಧಾರಾವಾಹಿ ಅಂದುಕೊಂಡಷ್ಟು ಟಿಆರ್​ಪಿಯನ್ನು ಪಡೆದುಕೊಳ್ಳುತ್ತಿಲ್ಲ ಅನ್ನೋದು ಬೇಸರದ ವಿಚಾರ. ‘ಸೀತಾ ರಾಮ’ ಧಾರಾವಾಹಿಯ ಟಿಆರ್​ಪಿ ಕೂಡ ಕುಗ್ಗಿದೆ.

ಇದನ್ನೂ ಓದಿ: ಭರ್ಜರಿ ಟಿಆರ್​ಪಿ ಪಡೆದ ‘ಅಮೃತಧಾರೆ’ಗೆ ಎರಡನೇ ಸ್ಥಾನ; ಯಾವ ಧಾರಾವಾಹಿಗೆ ಎಷ್ಟನೇ ರ‍್ಯಾಂಕ್?

ಈಗಾಗಲೇ ಬಿಗ್ ಬಾಸ್ ಆರಂಭ ಆಗಿದೆ. ಮುಂದಿನ ವಾರದಿಂದ ಬಿಗ್ ಬಾಸ್​ ಟಿಆರ್​ಪಿ ಕೂಡ ಇದರಲ್ಲಿ ಲಭ್ಯವಾಗಲಿದೆ. ಬಿಗ್ ಬಾಸ್ ಸಮಯದಲ್ಲಿ ಪ್ರಸಾರ ಕಾಣುವ ಇತರ ಧಾರಾವಾಹಿಗಳ ಟಿಆರ್​ಪಿ ಕುಗ್ಗೋ ಸಾಧ್ಯತೆ ಇದೆ. ಒಂದೊಮ್ಮೆ ಸುದೀಪ್ ಅವರು ಲಾಯರ್ ಜಗದೀಶ್​ಗೆ ಕ್ಲಾಸ್ ತೆಗೆದುಕೊಂಡರೆ ವೀಕೆಂಡ್​ನಲ್ಲಿ ಬಿಗ್ ಬಾಸ್​ಗೆ ಭರ್ಜರಿ ಟಿಆರ್​ಪಿ ಸಿಗೋ ನಿರೀಕ್ಷೆ ಇರುತ್ತದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 2:21 pm, Fri, 4 October 24

Follow Us
ಪ್ರಧಾನಿ ಮೋದಿ ಸಲಹೆ ಪಾಲಿಸದಿದ್ರೆ ದೇಶಕ್ಕೆ ಸಂಕಷ್ಟ ಎಂದ ರುದ್ರಮೂರ್ತಿ
ಪ್ರಧಾನಿ ಮೋದಿ ಸಲಹೆ ಪಾಲಿಸದಿದ್ರೆ ದೇಶಕ್ಕೆ ಸಂಕಷ್ಟ ಎಂದ ರುದ್ರಮೂರ್ತಿ
PM ಮೋದಿ 8 ಸಂದೇಶ ಯಾಕೆ? ಆರ್ಥಿಕ ತಜ್ಞ ರುದ್ರಮೂರ್ತಿ ಹೇಳಿದ್ದಿಷ್ಟು
PM ಮೋದಿ 8 ಸಂದೇಶ ಯಾಕೆ? ಆರ್ಥಿಕ ತಜ್ಞ ರುದ್ರಮೂರ್ತಿ ಹೇಳಿದ್ದಿಷ್ಟು
ಮೋದಿ ಸಾಗೋ ದಾರಿಯಲ್ಲಿ ಜಿಲೆಟಿನ್ ಕಡ್ಡಿ ಪತ್ತೆ ಕೇಸ್​: ತಮಿಳುನಾಡು ಲಿಂಕ್​?
ಮೋದಿ ಸಾಗೋ ದಾರಿಯಲ್ಲಿ ಜಿಲೆಟಿನ್ ಕಡ್ಡಿ ಪತ್ತೆ ಕೇಸ್​: ತಮಿಳುನಾಡು ಲಿಂಕ್​?
ಅಡುಗೆ ಎಣ್ಣೆ ಬೆಲೆ 3 ರೂ. ಏರಿಕೆ
ಅಡುಗೆ ಎಣ್ಣೆ ಬೆಲೆ 3 ರೂ. ಏರಿಕೆ
ಕಾನೂನು ಉಲಂಘಿಸಿ ರಸ್ತೆಯಲ್ಲಿ ಸಂಚಾರ ಮಾಡ್ತಿದ್ದ ಶಾಲಾ ವಾಹನಗಳು RTO ವಶಕ್ಕೆ
ಕಾನೂನು ಉಲಂಘಿಸಿ ರಸ್ತೆಯಲ್ಲಿ ಸಂಚಾರ ಮಾಡ್ತಿದ್ದ ಶಾಲಾ ವಾಹನಗಳು RTO ವಶಕ್ಕೆ
ಮುಂಬೈ ಇಂಡಿಯನ್ಸ್​ ಸೋಲಿಗೆ ಕಾರಣವಾಯ್ತು ಈ ಒಂದು 'ಎಡವಟ್ಟು'
ಮುಂಬೈ ಇಂಡಿಯನ್ಸ್​ ಸೋಲಿಗೆ ಕಾರಣವಾಯ್ತು ಈ ಒಂದು 'ಎಡವಟ್ಟು'
ಇತಿಹಾಸ ನಿರ್ಮಿಸಿದ ದಳಪತಿಗೆ ಸಿಎಂ ಸಿದ್ದರಾಮಯ್ಯ ವಿಶೇಷ ಅಭಿನಂದನೆ!
ಇತಿಹಾಸ ನಿರ್ಮಿಸಿದ ದಳಪತಿಗೆ ಸಿಎಂ ಸಿದ್ದರಾಮಯ್ಯ ವಿಶೇಷ ಅಭಿನಂದನೆ!
ತಿಂಗಳಾನುಗಟ್ಟಲೆ ಪೇಮೆಂಟ್ ಇಲ್ಲದೆ ಇಂದಿರಾ ಕ್ಯಾಂಟಿನ್ ಸಿಬ್ಬಂದಿ ಪರದಾಟ!
ತಿಂಗಳಾನುಗಟ್ಟಲೆ ಪೇಮೆಂಟ್ ಇಲ್ಲದೆ ಇಂದಿರಾ ಕ್ಯಾಂಟಿನ್ ಸಿಬ್ಬಂದಿ ಪರದಾಟ!
ಚಿಕ್ಕಬಳ್ಳಾಪುರದಲ್ಲಿ ಕಾಶ್ಮೀರಿ ಆ್ಯಪಲ್ ಬೆಳೆದು ಸೈ ಎನಿಸಿಕೊಂಡ ರೈತ!
ಚಿಕ್ಕಬಳ್ಳಾಪುರದಲ್ಲಿ ಕಾಶ್ಮೀರಿ ಆ್ಯಪಲ್ ಬೆಳೆದು ಸೈ ಎನಿಸಿಕೊಂಡ ರೈತ!
ದೇಶದ ಹಿತಕ್ಕಾಗಿ ಒಂದು ವರ್ಷ ಚಿನ್ನ ಖರೀದಿಸಬೇಡಿ: ಪ್ರಧಾನಿ ಮೋದಿ ಕರೆ
ದೇಶದ ಹಿತಕ್ಕಾಗಿ ಒಂದು ವರ್ಷ ಚಿನ್ನ ಖರೀದಿಸಬೇಡಿ: ಪ್ರಧಾನಿ ಮೋದಿ ಕರೆ