ಟಿಆರ್​ಪಿ ರೇಸ್​​ನಲ್ಲಿ ಎಲ್ಲರನ್ನು ಹಿಂದಿಕ್ಕಿ ನಂಬರ್ 1 ಸ್ಥಾನ ಪಡೆದ ‘ಅಮೃತಧಾರೆ’; ಟಾಪ್ ಐದು ಸೀರಿಯಲ್ಸ್

ಕನ್ನಡ ಧಾರಾವಾಹಿಗಳ 39ನೇ ವಾರದ ಟಿಆರ್​ಪಿ ಹೊರ ಬಿದ್ದಿದೆ. ಪ್ರತಿವರವೂ ಧಾರಾವಾಹಿಗಳು ಬಹುತೇಕ ಒಂದೇ ರೀತಿಯ ಸ್ಥಾನದಲ್ಲಿ ಇರುತ್ತಿದ್ದವು. ಆದರೆ, ಈ ಬಾರಿ ಅಚ್ಚರಿಯ ಬೆಳವಣಿಗೆ ನಡೆದಿದೆ. ಬೇರೆ ಬೇರೆ ಧಾರಾವಾಹಿಗಳು ಟಾಪ್ ಐದರಲ್ಲಿ ಸ್ಥಾನ ಪಡೆದಿವೆ.

ಟಿಆರ್​ಪಿ ರೇಸ್​​ನಲ್ಲಿ ಎಲ್ಲರನ್ನು ಹಿಂದಿಕ್ಕಿ ನಂಬರ್ 1 ಸ್ಥಾನ ಪಡೆದ ‘ಅಮೃತಧಾರೆ’; ಟಾಪ್ ಐದು ಸೀರಿಯಲ್ಸ್
ಅಮೃತಧಾರೆ
Follow us
|

Updated on:Oct 04, 2024 | 2:21 PM

‘ಅಮೃತಧಾರೆ’ ಧಾರಾವಾಹಿ ಆರಂಭ ಆಗಿ ವರ್ಷಗಳೇ ಕಳೆದಿವೆ. ಆರಂಭದ ದಿನಗಳಲ್ಲಿ ಈ ಧಾರಾವಾಹಿಗೆ ಒಳ್ಳೆಯ ಟಿಆರ್​ಪಿ ಸಿಗುತ್ತಿತ್ತು. ನಂತರದ ದಿನಗಳಲ್ಲಿ ಅಷ್ಟಾಗಿ ಟಿಆರ್​ಪಿ ಸಿಕ್ಕಿಲ್ಲ. ಈಗ 39ನೇ ವಾರದ ಲಿಸ್ಟ್​​ನಲ್ಲಿ ‘ಅಮೃತಧಾರೆ’ ಧಾರಾವಾಹಿ ಕರ್ನಾಟಕದಲ್ಲಿ ನಂಬರ್ 1 ಸ್ಥಾನ ಪಡೆದಿದೆ. ಈ ಮೂಲಕ ಅಚ್ಚರಿಯ ಕಂಬ್ಯಾಕ್ ಮಾಡಿದೆ. ಇದು ತಂಡದ ಖುಷಿ ಹೆಚ್ಚಿಸಿದೆ. ಟಾಪ್ ಐದರಲ್ಲಿ ಇರುವ ಧಾರಾವಾಹಿಗಳ ಪಟ್ಟಿ ಇಲ್ಲಿದೆ.

‘ಅಮೃತಧಾರೆ’ ಧಾರಾವಾಹಿಯಲ್ಲಿ ರಾಜೇಶ್ ನಟರಂಗ, ಛಾಯಾ ಸಿಂಗ್ ಮೊದಲಾದವರು ನಟಿಸುತ್ತಿದ್ದಾರೆ. ಈ ದಾರಾವಾಹಿಗೆ ಮೊದಲ ಸ್ಥಾನ ಸಿಕ್ಕಿದೆ. ಈ ಧಾರಾವಾಹಿಯ ಕಂಬ್ಯಾಕ್ ಫ್ಯಾನ್ಸ್​ಗೆ ಖುಷಿ ಕೊಟ್ಟಿದೆ. ಎರಡನೇ ಸ್ಥಾನದಲ್ಲಿ ‘ಲಕ್ಷ್ಮೀ ನಿವಾಸ’ ಧಾರಾವಾಹಿ ಇದೆ. ‘ಪುಟ್ಟಕ್ಕನ ಮಕ್ಕಳು’ ಸಮಯ ಬದಲಾವಣೆ ನಂತರದಲ್ಲಿ ‘ಲಕ್ಷ್ಮೀ ನಿವಾಸ’ ಧಾರಾವಾಹಿ ನಂಬರ್ 1 ಸ್ಥಾನ ಕಾಪಾಡಿಕೊಳ್ಳುತ್ತಾ ಬರುತ್ತಿತ್ತು.

ಮೂರನೇ ಸ್ಥಾನದಲ್ಲಿ ‘ಶ್ರಾವಣಿ ಸುಬ್ರಮಣ್ಯ’ ಧಾರಾವಾಹಿ ಇದೆ.  ನಾಲ್ಕನೇ ಸ್ಥಾನದಲ್ಲಿ ‘ಪುಟ್ಟಕ್ಕನ ಮಕ್ಕಳು’ ಧಾರಾವಾಹಿ ಇದೆ. ಈ ಧಾರಾವಾಹಿಯ  ಸಮಯ ಬದಲಾವಣೆ ಆದರೂ ಟಿಆರ್​ಪಿಯಲ್ಲಿ ಹೆಚ್ಚಿನ ವ್ಯತ್ಯಾಸ ಏನು ಆಗಿಲ್ಲ ಅನ್ನೋದು ವಿಶೇಷ. ಐದನೇ ಸ್ಥಾನದಲ್ಲಿ ‘ಲಕ್ಷ್ಮೀ ಬಾರಮ್ಮ’ ಧಾರಾವಾಹಿ ಇದೆ. ಆರನೇ ಸ್ಥಾನದಲ್ಲಿ ‘ಅಣ್ಣಯ್ಯ’ ಧಾರಾವಾಹಿ ಇದೆ. ಇತ್ತೀಚೆಗೆ ಆರಂಭವಾದ ಈ ಧಾರಾವಾಹಿ ಅಂದುಕೊಂಡಷ್ಟು ಟಿಆರ್​ಪಿಯನ್ನು ಪಡೆದುಕೊಳ್ಳುತ್ತಿಲ್ಲ ಅನ್ನೋದು ಬೇಸರದ ವಿಚಾರ. ‘ಸೀತಾ ರಾಮ’ ಧಾರಾವಾಹಿಯ ಟಿಆರ್​ಪಿ ಕೂಡ ಕುಗ್ಗಿದೆ.

ಇದನ್ನೂ ಓದಿ: ಭರ್ಜರಿ ಟಿಆರ್​ಪಿ ಪಡೆದ ‘ಅಮೃತಧಾರೆ’ಗೆ ಎರಡನೇ ಸ್ಥಾನ; ಯಾವ ಧಾರಾವಾಹಿಗೆ ಎಷ್ಟನೇ ರ‍್ಯಾಂಕ್?

ಈಗಾಗಲೇ ಬಿಗ್ ಬಾಸ್ ಆರಂಭ ಆಗಿದೆ. ಮುಂದಿನ ವಾರದಿಂದ ಬಿಗ್ ಬಾಸ್​ ಟಿಆರ್​ಪಿ ಕೂಡ ಇದರಲ್ಲಿ ಲಭ್ಯವಾಗಲಿದೆ. ಬಿಗ್ ಬಾಸ್ ಸಮಯದಲ್ಲಿ ಪ್ರಸಾರ ಕಾಣುವ ಇತರ ಧಾರಾವಾಹಿಗಳ ಟಿಆರ್​ಪಿ ಕುಗ್ಗೋ ಸಾಧ್ಯತೆ ಇದೆ. ಒಂದೊಮ್ಮೆ ಸುದೀಪ್ ಅವರು ಲಾಯರ್ ಜಗದೀಶ್​ಗೆ ಕ್ಲಾಸ್ ತೆಗೆದುಕೊಂಡರೆ ವೀಕೆಂಡ್​ನಲ್ಲಿ ಬಿಗ್ ಬಾಸ್​ಗೆ ಭರ್ಜರಿ ಟಿಆರ್​ಪಿ ಸಿಗೋ ನಿರೀಕ್ಷೆ ಇರುತ್ತದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 2:21 pm, Fri, 4 October 24

ಜಿಟಿ ದೇವೇಗೌಡರ ಬಗ್ಗೆ ಶಾಕಿಂಗ್ ಹೇಳಿಕೆ ಕೊಟ್ಟ ಸ್ನೇಹಮಯಿ ಕೃಷ್ಣ
ಜಿಟಿ ದೇವೇಗೌಡರ ಬಗ್ಗೆ ಶಾಕಿಂಗ್ ಹೇಳಿಕೆ ಕೊಟ್ಟ ಸ್ನೇಹಮಯಿ ಕೃಷ್ಣ
ಗೃಹಲಕ್ಷ್ಮೀಯರಿಗೆ ದಸರಾ ಗಿಫ್ಟ್: ನವರಾತ್ರಿಗೆ ಮಹಿಳೆಯರ ಖಾತೆಗೆ ಹಣ ಜಮೆ
ಗೃಹಲಕ್ಷ್ಮೀಯರಿಗೆ ದಸರಾ ಗಿಫ್ಟ್: ನವರಾತ್ರಿಗೆ ಮಹಿಳೆಯರ ಖಾತೆಗೆ ಹಣ ಜಮೆ
ವಿಡಿಯೋ: ಅಲ್ಲೂರಿ ಜಿಲ್ಲೆಯ ನದಿಯಲ್ಲಿ ತೇಲಿಬಂದ ಆಂಜನೇಯ ಸ್ವಾಮಿ ವಿಗ್ರಹ!
ವಿಡಿಯೋ: ಅಲ್ಲೂರಿ ಜಿಲ್ಲೆಯ ನದಿಯಲ್ಲಿ ತೇಲಿಬಂದ ಆಂಜನೇಯ ಸ್ವಾಮಿ ವಿಗ್ರಹ!
ಕುಮಾರಸ್ವಾಮಿ ವಿರುದ್ಧ ಎಫ್​ಐಆರ್: ಪೊಲೀಸ್ ಆಯುಕ್ತ ದಯಾನಂದ್ ಹೇಳಿದ್ದೇನು?
ಕುಮಾರಸ್ವಾಮಿ ವಿರುದ್ಧ ಎಫ್​ಐಆರ್: ಪೊಲೀಸ್ ಆಯುಕ್ತ ದಯಾನಂದ್ ಹೇಳಿದ್ದೇನು?
ಮೈಸೂರು ದಸರಾ: ಹೇಗಿದೆ ನೋಡಿ ಹಳೇ ಬೈಕ್​ಗಳ ಸವಾರಿ!
ಮೈಸೂರು ದಸರಾ: ಹೇಗಿದೆ ನೋಡಿ ಹಳೇ ಬೈಕ್​ಗಳ ಸವಾರಿ!
ಮೃಗಗಳಂತೆ ವರ್ತಿಸಿದ ಸ್ಪರ್ಧಿಗಳಿಗೆ ಬಿಗ್ ಬಾಸ್ ನೀತಿ ಪಾಠ
ಮೃಗಗಳಂತೆ ವರ್ತಿಸಿದ ಸ್ಪರ್ಧಿಗಳಿಗೆ ಬಿಗ್ ಬಾಸ್ ನೀತಿ ಪಾಠ
Daily Devotional: ನಂಬಿಕೆ ದ್ರೋಹ ಮಾಡಿದ್ರೆ ಪರಿಣಾಮ ಹೇಗಿರುತ್ತೆ ಗೊತ್ತಾ?
Daily Devotional: ನಂಬಿಕೆ ದ್ರೋಹ ಮಾಡಿದ್ರೆ ಪರಿಣಾಮ ಹೇಗಿರುತ್ತೆ ಗೊತ್ತಾ?
ನವರಾತ್ರಿಯ 2ನೇ ದಿನವಾದ ಇಂದು ನಿಮ್ಮ ರಾಶಿ ಭವಿಷ್ಯ ಹೇಗಿದೆ? ತಿಳಿಯಿರಿ
ನವರಾತ್ರಿಯ 2ನೇ ದಿನವಾದ ಇಂದು ನಿಮ್ಮ ರಾಶಿ ಭವಿಷ್ಯ ಹೇಗಿದೆ? ತಿಳಿಯಿರಿ
ದೆಹಲಿಯ ದೇವಸ್ಥಾನದಲ್ಲಿ ಕರೆಂಟ್ ಶಾಕ್ ಹೊಡೆದು 9ನೇ ತರಗತಿ ವಿದ್ಯಾರ್ಥಿ ಸಾವು
ದೆಹಲಿಯ ದೇವಸ್ಥಾನದಲ್ಲಿ ಕರೆಂಟ್ ಶಾಕ್ ಹೊಡೆದು 9ನೇ ತರಗತಿ ವಿದ್ಯಾರ್ಥಿ ಸಾವು
ನಿವೃತ್ತರಾದ ತಹಸೀಲ್ದಾರ್ ಬೀಳ್ಕೊಡುಗೆ ವೇಳೆ ಬಾರ್​ ಡ್ಯಾನ್ಸರ್​ಗಳ ನೃತ್ಯ
ನಿವೃತ್ತರಾದ ತಹಸೀಲ್ದಾರ್ ಬೀಳ್ಕೊಡುಗೆ ವೇಳೆ ಬಾರ್​ ಡ್ಯಾನ್ಸರ್​ಗಳ ನೃತ್ಯ