AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸುರದ್ರೂಪಿ ಶ್ರೀಧರ್ ಕೊನೆಯ ದಿನಗಳು ಹೇಗಿದ್ದವು ನೋಡಿ; ವೈರಿಗಳಿಗೂ ಹೀಗಾಗಬಾರದು

Shridhar Naik Passes Away: ಕಿರುತೆರೆ ನಟ ಶ್ರೀಧರ್ ನಾಯಕ್ ಅವರು 47ನೇ ವಯಸ್ಸಿನಲ್ಲಿ ನಿಧನರಾಗಿದ್ದಾರೆ. ಕಳೆದ ಆರು ತಿಂಗಳಿಂದ ಅವರು ಅನಾರೋಗ್ಯದಿಂದ ಬಳಲುತ್ತಿದ್ದರು. ಅವರ ಆರೋಗ್ಯದಲ್ಲಿನ ಭಾರಿ ಬದಲಾವಣೆ ತೋರಿಸುವ ಫೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ. 'ಪಾರು', 'ಮಂಗಳ ಗೌರಿ' ಮುಂತಾದ ಅನೇಕ ಧಾರಾವಾಹಿಗಳಲ್ಲಿ ನಟಿಸಿದ್ದ ಅವರ ಸಾವು ಕಿರುತೆರೆ ಲೋಕಕ್ಕೆ ಭಾರೀ ನಷ್ವವನ್ನುಂಟು ಮಾಡಿದೆ. 

ಸುರದ್ರೂಪಿ ಶ್ರೀಧರ್ ಕೊನೆಯ ದಿನಗಳು ಹೇಗಿದ್ದವು ನೋಡಿ; ವೈರಿಗಳಿಗೂ ಹೀಗಾಗಬಾರದು
ಶ್ರೀಧರ್ ನಾಯಕ್
ರಾಜೇಶ್ ದುಗ್ಗುಮನೆ
|

Updated on:May 27, 2025 | 8:36 AM

Share

ಕಿರುತೆರೆ ನಟ ಶ್ರೀಧರ್ ನಾಯಕ್ ಅವರು ನಿಧನ ಹೊಂದಿದ್ದಾರೆ. ಅವರಿಗೆ ಕೇವಲ 47 ವರ್ಷ ವಯಸ್ಸಾಗಿತ್ತು. ಅವರು ಇಲ್ಲ ಎಂಬ ವಿಚಾರ ಅಭಿಮಾನಿಗಳಿಗೆ ಬೇಸರ ಮೂಡಿಸಿದೆ. ಶ್ರೀಧರ್ ನಾಯಕ್ (Shridhar Naik) ಆರೋಗ್ಯವಾಗಿದ್ದಾಗ ಹೇಗಿದ್ದರು ಮತ್ತು ಅನಾರೋಗ್ಯಕ್ಕೆ ಒಳಗಾದ ಬಳಿಕ ಹೇಗಾದರು ಎಂಬುದರ ಫೋಟೋಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿವೆ. ಇದನ್ನು ನೋಡಿ ಅನೇಕರಿಗೆ ಶಾಕ್ ಆಗಿದೆ ಮತ್ತು ಈ ರೀತಿಯ ಪರಿಸ್ಥಿತಿ ವೈರಿಗಳಿಗೂ ಬರಬಾರದು ಎಂದು ಅನೇಕರು ಕೋರಿಕೊಂಡಿದ್ದಾರೆ.

ಶ್ರೀಧರ್ ನಾಯಕ್ ಅವರು ಜನಿಸಿದ್ದು 1978ರಲ್ಲಿ. ಅವರಿಗೆ ಈಗಿನ್ನೂ 47 ವರ್ಷ. ಇನ್ನೂ ಬದುಕಿ ಬಾಳಬೇಕಿದ್ದ ಅವರು ಇಹಲೋಕ ತ್ಯಜಿಸಿದ್ದಾರೆ. ಅವರ ಸಾವಿನಿಂದ ಕಿರುತೆರೆ ಲೋಕಕ್ಕೆ ದೊಡ್ಡ ನಷ್ಟ ಉಂಟಾಗಿದೆ. ಶ್ರೀಧರ್ ನಾಯಕ್ ಅವರಿಗೆ ಕಳೆದ ಆರು ತಿಂಗಳಿಂದ ಅನಾರೋಗ್ಯ ಕಾಡಿತ್ತು. ಬೆಂಗಳೂರಿನ ಬ್ಯಾಪಿಸ್ಟ್ ಆಸ್ಪತ್ರೆಯಲ್ಲಿ ಅವರಿಗೆ ಚಿಕಿತ್ಸೆ ನೀಡಲಾಗುತ್ತಿತ್ತು. ಸಾವಿನ ವಿರುದ್ಧ ಜಯಿಸಲು ಅವರಿಗೆ ಸಾಧ್ಯವಾಗಲಿಲ್ಲ.

Shridhar Naik (1)

ಶ್ರೀಧರ್ ನಾಯಕ್

ಶ್ರೀಧರ್ ನಾಯಕ್ ಅವರಿಗೆ ಆರು ತಿಂಗಳ ಹಿಂದೆ ಇನ್​ಫೆಕ್ಷನ್​ಗೆ ಒಳಗಾಗಿದ್ದರು. ಇದಾದ ಬಳಿಕ ಅವರ ದೇಹದ ಚಿತ್ರಣವೇ ಬದಲಾಗಿ ಹೋಯಿತು. ಗುರುತೇ ಸಿಗದಷ್ಟು ಬದಲಾದರು. ಸುರದ್ರೂಪಿ ಎನಿಸಿಕೊಂಡಿದ್ದ ಶ್ರೀಧರ್, ಸಣಕಲಾಗಿ ಹೋದರು. ಚಿತ್ರರಂಗ ಹಾಗೂ ಕಿರುತೆರೆ ಲೋಕದ ಅನೇಕರು ಆಸ್ಪತ್ರೆಗೆ ತೆರಳಿ ಅವರ ಆರೋಗ್ಯ ವಿಚಾರಿಸಿದ್ದರು.

ಇದನ್ನೂ ಓದಿ: ‘ಪಾರು’ ಖ್ಯಾತಿಯ ನಟ ಶ್ರೀಧರ್ ನಾಯಕ್ ನಿಧನ; ಫಲಿಸಲಿಲ್ಲ ಪ್ರಾರ್ಥನೆ

ಶ್ರೀಧರ್ ನಾಯಕ್ ಅವರು ‘ಪಾರು’, ‘ವಧು’, ‘ಮಂಗಳ ಗೌರಿ’, ‘ಮನೆಯೇ ಮಂತ್ರಾಲಯ’ ಸೇರಿದಂತೆ 40ಕ್ಕೂ ಹೆಚ್ಚು ಸೀರಿಯಲ್‌ಗಳಲ್ಲಿ ನಟಿಸಿದ್ದಾರೆ. ಕಿಚ್ಚ ಸುದೀಪ್ ನಟನೆಯ ‘ಮ್ಯಾಕ್ಸ್’ ಚಿತ್ರದಲ್ಲೂ ಅವರು ಅವಕಾಶ ಪಡೆದಿದ್ದರು. ಈ ಚಿತ್ರ ಸೂಪರ್ ಹಿಟ್ ಆಯಿತು. ಅವರು ಕೆಲವು ತಮಿಳು ಸಿನಿಮಾಗಳನ್ನು ಕೂಡ ಮಾಡಿದ್ದರು. ಆದರೆ, ಆರ್ಥಿಕವಾಗಿ ಅವರು ಸದೃಢರಾಗಿರಲಿಲ್ಲ. ಹೀಗಾಗಿ ಸಹಾಯಕ್ಕಾಗಿ ಅವರು ಅಭಿಮಾನಿಗಳು ಹಾಗೂ ಬಣ್ಣದ ಲೋಕದವರನ್ನು ಕೇಳಿದ್ದರು. ಅನೇಕರು ಕೈಲಾದಷ್ಟು ಸಹಾಯ ಮಾಡಿದ್ದರು. ಆದರೆ, ಅವರನ್ನು ಉಳಿಸಿಕೊಳ್ಳಲು ಸಾಧ್ಯ ಆಗಲೇ ಇಲ್ಲ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 8:30 am, Tue, 27 May 25

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ