AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸೀರಿಯಲ್​ನಲ್ಲಿ ನಂಬರ್ 1 ಆದ ‘ಅಮೃತಧಾರೆ’ ಧಾರಾವಾಹಿ; ಟಿಆರ್​ಪಿ ಪಟ್ಟಿ

ಸದ್ಯ ಬಿಗ್ ಬಾಸ್ ಕೂಡ ಆರಂಭ ಆಗಿದೆ. ಮುಂದಿನ ವಾರ ಈ ಶೋನ ಟಿಆರ್​ಪಿ ಹೊರ ಬೀಳಲಿದೆ. ಈ ರಿಯಾಲಿಟಿ ಶೋ ಕಾರಣಕ್ಕೆ ಆ ಸಮಯದಲ್ಲಿ ಜೀ ಕನ್ನಡದಲ್ಲಿ ಪ್ರಸಾರ ಕಾಣುವ, ‘ನಾ ನಿನ್ನ ಬಿಡಲಾರೆ’ ಧಾರಾವಾಹಿ ಟಿಆರ್​ಪಿ ಕುಸಿಯುವ ಸಾಧ್ಯತೆ ಇದೆ.

ಸೀರಿಯಲ್​ನಲ್ಲಿ ನಂಬರ್ 1 ಆದ ‘ಅಮೃತಧಾರೆ’ ಧಾರಾವಾಹಿ; ಟಿಆರ್​ಪಿ ಪಟ್ಟಿ
ಅಮೃತಧಾರೆ
TV9 Web
| Edited By: |

Updated on: Oct 04, 2025 | 12:38 PM

Share

38ನೇ ವಾರದ ಟಿಆರ್​ಪಿ ಲಿಸ್ಟ್ ಹೊರ ಬಿದ್ದಿದೆ. ಈ ಟಿಆರ್​ಪಿಯಲ್ಲಿ ಅಚ್ಚರಿ ಎಂಬಂತೆ ‘ಅಮೃತಧಾರೆ’ ಧಾರಾವಾಹಿ ನಂಬರ್ 1 ಸ್ಥಾನ ಪಡೆದುಕೊಂಡಿದೆ. ಧಾರಾವಾಹಿಯಲ್ಲಿ ಎದುರಾದ ಟ್ವಿಸ್ಟ್​ಗಳಿಂದ ಈ ಧಾರಾವಾಹಿಗೆ ಮೊದಲ ಸ್ಥಾನ ಸಿಕ್ಕಿದೆ. ಹಾಗಾದರೆ, ಯಾವ ಧಾರಾವಾಹಿಗಳು ಯಾವ ಸ್ಥಾನದಲ್ಲಿ ಇವೆ ಎಂಬಿತ್ಯಾದಿ ವಿಚಾರಗಳ ಬಗ್ಗೆ ಇಲ್ಲಿದೆ ಮಾಹಿತಿ.

ಪ್ರತಿ ವಾರದ ಟಿಆರ್​ಪಿಯಲ್ಲೂ ಬದಲಾವಣೆಗಳು ಆಗುತ್ತಲೇ ಇರುತ್ತವೆ. ಯಾವ ಧಾರಾವಾಹಿ ಮೊದಲ ಸ್ಥಾನ ಪಡೆಯುತ್ತವೆ, ಯಾವ ಧಾರವಾಹಿ ಎರಡನೇ ಸ್ಥಾನ ಪಡೆಯುತ್ತವೆ ಎಂದು ಊಹಿಸೋದು ಕಷ್ಟ. ಏಕೆಂದರೆ ಪ್ರತಿ ವಾರವೂ ಇದರಲ್ಲಿ ಬದಲಾವಣೆಗಳು ಆಗುತ್ತಲೇ ಇರುತ್ತವೆ. ಈಗ 38ನೇ ವಾರದ ಟಿಆರ್​ಪಿಯಲ್ಲಿ ದೊಡ್ಡ ಬದಲಾವಣೆ ಆಗಿದೆ.

‘ಅಮೃತಧಾರೆ’ ಧಾರಾವಾಹಿ ಮೊದಲ ಸ್ಥಾನದಲ್ಲಿ ಮಿಂಚುತ್ತಿದೆ. ಭೂಮಿಕಾ ಹಾಗೂ ಗೌತಮ್ ಭೇಟಿಯ ಸಮಯದ ಎಪಿಸೋಡ್​ಗೆ ಸಿಕ್ಕ ಟಿಆರ್​ಪಿ ಇದಾಗಿದೆ. ಎರಡನೇ ಸ್ಥಾನದಲ್ಲಿ ‘ಅಣ್ಣಯ್ಯ’ ಧಾರಾವಾಹಿ ಇದೆ. ಈ ಧಾರಾವಾಹಿಯಲ್ಲೂ ಸದ್ಯ ಸಾಕಷ್ಟು ತಿರುವುಗಳು ಎದುರಾಗುತ್ತಿವೆ. ಹೀಗಾಗಿ, ಮುಂದಿನ ದಿನಗಳಲ್ಲಿ ಈ ಧಾರಾವಾಹಿಯಲ್ಲಿ ಮತ್ತಷ್ಟು ಹೆಚ್ಚಿನ ಟಿಆರ್​ಪಿ ಪಡೆಯಬಹುದು ಎಂದು ನಿರೀಕ್ಷಿಸಲಾಗಿದೆ.

ಮೂರನೇ ಸ್ಥಾನದಲ್ಲಿ ‘ಕರ್ಣ’ ಧಾರಾವಾಹಿ ಇದೆ. ಈ ಧಾರಾವಾಹಿ ಕಳೆದ ಕೆಲ ವಾರಗಳಿಂದ ಮೊದಲ ಸ್ಥಾನ ಪಡೆದುಕೊಳ್ಳುತ್ತಾ ಬರುತ್ತಿತ್ತು. ಆದರೆ, ಈಗ ಉಳಿದ ಧಾರಾವಾಹಿಗಳ ಟಿಆರ್​ಪಿಯಲ್ಲಿ ಏರಿಕೆ ಕಂಡಿದ್ದರಿಂದ, ಈ ಧಾರಾವಾಹಿಯ ಸ್ಥಾನ ಕುಸಿದಿದೆ. ನಾಲ್ಕನೇ ಸ್ಥಾನದಲ್ಲಿ ‘ಬ್ರಹ್ಮಗಂಟು’ ಧಾರಾವಾಹಿಗೆ ಸ್ಥಾನ ಸಿಕ್ಕಿದೆ. ಐದನೇ ಸ್ಥಾನದಲ್ಲಿ ‘ನಾ ನಿನ್ನ ಬಿಡಲಾರೆ’ ಧಾರಾವಾಹಿ ಇದೆ. ‘ಪುಟ್ಟಕ್ಕನ ಮಕ್ಕಳು’ ಧಾರಾವಾಹಿ ಆರನೇ ಸ್ಥಾನಕ್ಕೆ ತೃಪ್ತಿ ಪಟ್ಟುಕೊಂಡಿದೆ.

ಇದನ್ನೂ ಓದಿ: ರಾಕೆಟ್ ರೀತಿ ಏರಿತು ‘ಅಮೃತಧಾರೆ’ ಟಿಆರ್​ಪಿ; ಟಾಪ್ ಐದರಿಂದ ‘ನಾ ನಿನ್ನ ಬಿಡಲಾರೆ’ ಔಟ್

ಸದ್ಯ ಬಿಗ್ ಬಾಸ್ ಕೂಡ ಆರಂಭ ಆಗಿದೆ. ಮುಂದಿನ ವಾರ ಈ ಶೋನ ಟಿಆರ್​ಪಿ ಹೊರ ಬೀಳಲಿದೆ. ಈ ರಿಯಾಲಿಟಿ ಶೋ ಕಾರಣಕ್ಕೆ ಆ ಸಮಯದಲ್ಲಿ ಜೀ ಕನ್ನಡದಲ್ಲಿ ಪ್ರಸಾರ ಕಾಣುವ, ‘ನಾ ನಿನ್ನ ಬಿಡಲಾರೆ’ ಧಾರಾವಾಹಿ ಟಿಆರ್​ಪಿ ಕುಸಿಯುವ ಸಾಧ್ಯತೆ ಇದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಪ್ರಶ್ನೆಪತ್ರಿಕೆ ಸೋರಿಕೆ, ನೇಮಕಾತಿ ವಿಳಂಬಕ್ಕೆ ವಿದ್ಯಾರ್ಥಿಗಳ ರಣಕಹಳೆ
ಪ್ರಶ್ನೆಪತ್ರಿಕೆ ಸೋರಿಕೆ, ನೇಮಕಾತಿ ವಿಳಂಬಕ್ಕೆ ವಿದ್ಯಾರ್ಥಿಗಳ ರಣಕಹಳೆ
KRS ಡ್ಯಾಂಗೆ ಮುತ್ತಿಗೆ: ವಾಟಾಳ್ ನಾಗರಾಜ್ ಘೋಷಣೆ
KRS ಡ್ಯಾಂಗೆ ಮುತ್ತಿಗೆ: ವಾಟಾಳ್ ನಾಗರಾಜ್ ಘೋಷಣೆ
ಎಬಿವಿಪಿ ಪ್ರತಿಭಟನೆ ವೇಳೆ ಮಾಧ್ಯಮದವರ ಮೇಲೆ ಪೊಲೀಸರ ದರ್ಪ
ಎಬಿವಿಪಿ ಪ್ರತಿಭಟನೆ ವೇಳೆ ಮಾಧ್ಯಮದವರ ಮೇಲೆ ಪೊಲೀಸರ ದರ್ಪ
ರಸ್ತೆ ಮಧ್ಯೆ ಕಬ್ಬಿನ ಲಾರಿ ಅಡ್ಡಗಟ್ಟಿದ 10ಕ್ಕೂ ಹೆಚ್ಚು ಕಾಡಾನೆಗಳ ಹಿಂಡು!
ರಸ್ತೆ ಮಧ್ಯೆ ಕಬ್ಬಿನ ಲಾರಿ ಅಡ್ಡಗಟ್ಟಿದ 10ಕ್ಕೂ ಹೆಚ್ಚು ಕಾಡಾನೆಗಳ ಹಿಂಡು!
PSI ಮೇಲೆ ಶಾಸಕ ಸುರೇಶ್‌ಗೌಡ ಪುತ್ರಿ ಕಪಾಳಮೋಕ್ಷ ಪ್ರಕರಣ; ವೀಡಿಯೋ ವೈರಲ್
PSI ಮೇಲೆ ಶಾಸಕ ಸುರೇಶ್‌ಗೌಡ ಪುತ್ರಿ ಕಪಾಳಮೋಕ್ಷ ಪ್ರಕರಣ; ವೀಡಿಯೋ ವೈರಲ್
ಕೆಪಿಎಸ್‌ಸಿ ಕಚೇರಿ ಮೇಲೆ ಮತ್ತೆ ಸಿಐಡಿ ದಾಳಿ
ಕೆಪಿಎಸ್‌ಸಿ ಕಚೇರಿ ಮೇಲೆ ಮತ್ತೆ ಸಿಐಡಿ ದಾಳಿ
ಪುತ್ತೂರು ಬಂದ್ ಹಿನ್ನೆಲೆ ಪರಿಸ್ಥಿತಿ ಶಾಂತ: ಬಿಗಿ ಪೊಲೀಸ್ ಬಂದೋಬಸ್ತ್
ಪುತ್ತೂರು ಬಂದ್ ಹಿನ್ನೆಲೆ ಪರಿಸ್ಥಿತಿ ಶಾಂತ: ಬಿಗಿ ಪೊಲೀಸ್ ಬಂದೋಬಸ್ತ್
ಬಗೆದಷ್ಟೂ ಬಯಲಾಗ್ತಿದೆ ಮರಿ ವೀರಪ್ಪನ್​​ ಗೋವಿಂದನ ಕರಾಳ ಇತಿಹಾಸ!
ಬಗೆದಷ್ಟೂ ಬಯಲಾಗ್ತಿದೆ ಮರಿ ವೀರಪ್ಪನ್​​ ಗೋವಿಂದನ ಕರಾಳ ಇತಿಹಾಸ!
ಕೊಡಗಿನಲ್ಲಿ ವರುಣನ ಅಬ್ಬರ; ಭಾಗಮಂಡಲದ ತ್ರಿವೇಣಿ ಸಂಗಮ ಮತ್ತೆ ಜಲಾವೃತ!
ಕೊಡಗಿನಲ್ಲಿ ವರುಣನ ಅಬ್ಬರ; ಭಾಗಮಂಡಲದ ತ್ರಿವೇಣಿ ಸಂಗಮ ಮತ್ತೆ ಜಲಾವೃತ!
ತಮಿಳುನಾಡಿಗೆ ಮತ್ತೆ ನೀರು ಬಿಡಬೇಕೆಂಬ ಆದೇಶ ಖಂಡಿಸಿ ಮಂಡ್ಯದಲ್ಲಿ ಪ್ರತಿಭಟನೆ
ತಮಿಳುನಾಡಿಗೆ ಮತ್ತೆ ನೀರು ಬಿಡಬೇಕೆಂಬ ಆದೇಶ ಖಂಡಿಸಿ ಮಂಡ್ಯದಲ್ಲಿ ಪ್ರತಿಭಟನೆ