AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸೀರಿಯಲ್​ನಲ್ಲಿ ನಂಬರ್ 1 ಆದ ‘ಅಮೃತಧಾರೆ’ ಧಾರಾವಾಹಿ; ಟಿಆರ್​ಪಿ ಪಟ್ಟಿ

ಸದ್ಯ ಬಿಗ್ ಬಾಸ್ ಕೂಡ ಆರಂಭ ಆಗಿದೆ. ಮುಂದಿನ ವಾರ ಈ ಶೋನ ಟಿಆರ್​ಪಿ ಹೊರ ಬೀಳಲಿದೆ. ಈ ರಿಯಾಲಿಟಿ ಶೋ ಕಾರಣಕ್ಕೆ ಆ ಸಮಯದಲ್ಲಿ ಜೀ ಕನ್ನಡದಲ್ಲಿ ಪ್ರಸಾರ ಕಾಣುವ, ‘ನಾ ನಿನ್ನ ಬಿಡಲಾರೆ’ ಧಾರಾವಾಹಿ ಟಿಆರ್​ಪಿ ಕುಸಿಯುವ ಸಾಧ್ಯತೆ ಇದೆ.

ಸೀರಿಯಲ್​ನಲ್ಲಿ ನಂಬರ್ 1 ಆದ ‘ಅಮೃತಧಾರೆ’ ಧಾರಾವಾಹಿ; ಟಿಆರ್​ಪಿ ಪಟ್ಟಿ
ಅಮೃತಧಾರೆ
TV9 Web
| Edited By: |

Updated on: Oct 04, 2025 | 12:38 PM

Share

38ನೇ ವಾರದ ಟಿಆರ್​ಪಿ ಲಿಸ್ಟ್ ಹೊರ ಬಿದ್ದಿದೆ. ಈ ಟಿಆರ್​ಪಿಯಲ್ಲಿ ಅಚ್ಚರಿ ಎಂಬಂತೆ ‘ಅಮೃತಧಾರೆ’ ಧಾರಾವಾಹಿ ನಂಬರ್ 1 ಸ್ಥಾನ ಪಡೆದುಕೊಂಡಿದೆ. ಧಾರಾವಾಹಿಯಲ್ಲಿ ಎದುರಾದ ಟ್ವಿಸ್ಟ್​ಗಳಿಂದ ಈ ಧಾರಾವಾಹಿಗೆ ಮೊದಲ ಸ್ಥಾನ ಸಿಕ್ಕಿದೆ. ಹಾಗಾದರೆ, ಯಾವ ಧಾರಾವಾಹಿಗಳು ಯಾವ ಸ್ಥಾನದಲ್ಲಿ ಇವೆ ಎಂಬಿತ್ಯಾದಿ ವಿಚಾರಗಳ ಬಗ್ಗೆ ಇಲ್ಲಿದೆ ಮಾಹಿತಿ.

ಪ್ರತಿ ವಾರದ ಟಿಆರ್​ಪಿಯಲ್ಲೂ ಬದಲಾವಣೆಗಳು ಆಗುತ್ತಲೇ ಇರುತ್ತವೆ. ಯಾವ ಧಾರಾವಾಹಿ ಮೊದಲ ಸ್ಥಾನ ಪಡೆಯುತ್ತವೆ, ಯಾವ ಧಾರವಾಹಿ ಎರಡನೇ ಸ್ಥಾನ ಪಡೆಯುತ್ತವೆ ಎಂದು ಊಹಿಸೋದು ಕಷ್ಟ. ಏಕೆಂದರೆ ಪ್ರತಿ ವಾರವೂ ಇದರಲ್ಲಿ ಬದಲಾವಣೆಗಳು ಆಗುತ್ತಲೇ ಇರುತ್ತವೆ. ಈಗ 38ನೇ ವಾರದ ಟಿಆರ್​ಪಿಯಲ್ಲಿ ದೊಡ್ಡ ಬದಲಾವಣೆ ಆಗಿದೆ.

‘ಅಮೃತಧಾರೆ’ ಧಾರಾವಾಹಿ ಮೊದಲ ಸ್ಥಾನದಲ್ಲಿ ಮಿಂಚುತ್ತಿದೆ. ಭೂಮಿಕಾ ಹಾಗೂ ಗೌತಮ್ ಭೇಟಿಯ ಸಮಯದ ಎಪಿಸೋಡ್​ಗೆ ಸಿಕ್ಕ ಟಿಆರ್​ಪಿ ಇದಾಗಿದೆ. ಎರಡನೇ ಸ್ಥಾನದಲ್ಲಿ ‘ಅಣ್ಣಯ್ಯ’ ಧಾರಾವಾಹಿ ಇದೆ. ಈ ಧಾರಾವಾಹಿಯಲ್ಲೂ ಸದ್ಯ ಸಾಕಷ್ಟು ತಿರುವುಗಳು ಎದುರಾಗುತ್ತಿವೆ. ಹೀಗಾಗಿ, ಮುಂದಿನ ದಿನಗಳಲ್ಲಿ ಈ ಧಾರಾವಾಹಿಯಲ್ಲಿ ಮತ್ತಷ್ಟು ಹೆಚ್ಚಿನ ಟಿಆರ್​ಪಿ ಪಡೆಯಬಹುದು ಎಂದು ನಿರೀಕ್ಷಿಸಲಾಗಿದೆ.

ಮೂರನೇ ಸ್ಥಾನದಲ್ಲಿ ‘ಕರ್ಣ’ ಧಾರಾವಾಹಿ ಇದೆ. ಈ ಧಾರಾವಾಹಿ ಕಳೆದ ಕೆಲ ವಾರಗಳಿಂದ ಮೊದಲ ಸ್ಥಾನ ಪಡೆದುಕೊಳ್ಳುತ್ತಾ ಬರುತ್ತಿತ್ತು. ಆದರೆ, ಈಗ ಉಳಿದ ಧಾರಾವಾಹಿಗಳ ಟಿಆರ್​ಪಿಯಲ್ಲಿ ಏರಿಕೆ ಕಂಡಿದ್ದರಿಂದ, ಈ ಧಾರಾವಾಹಿಯ ಸ್ಥಾನ ಕುಸಿದಿದೆ. ನಾಲ್ಕನೇ ಸ್ಥಾನದಲ್ಲಿ ‘ಬ್ರಹ್ಮಗಂಟು’ ಧಾರಾವಾಹಿಗೆ ಸ್ಥಾನ ಸಿಕ್ಕಿದೆ. ಐದನೇ ಸ್ಥಾನದಲ್ಲಿ ‘ನಾ ನಿನ್ನ ಬಿಡಲಾರೆ’ ಧಾರಾವಾಹಿ ಇದೆ. ‘ಪುಟ್ಟಕ್ಕನ ಮಕ್ಕಳು’ ಧಾರಾವಾಹಿ ಆರನೇ ಸ್ಥಾನಕ್ಕೆ ತೃಪ್ತಿ ಪಟ್ಟುಕೊಂಡಿದೆ.

ಇದನ್ನೂ ಓದಿ: ರಾಕೆಟ್ ರೀತಿ ಏರಿತು ‘ಅಮೃತಧಾರೆ’ ಟಿಆರ್​ಪಿ; ಟಾಪ್ ಐದರಿಂದ ‘ನಾ ನಿನ್ನ ಬಿಡಲಾರೆ’ ಔಟ್

ಸದ್ಯ ಬಿಗ್ ಬಾಸ್ ಕೂಡ ಆರಂಭ ಆಗಿದೆ. ಮುಂದಿನ ವಾರ ಈ ಶೋನ ಟಿಆರ್​ಪಿ ಹೊರ ಬೀಳಲಿದೆ. ಈ ರಿಯಾಲಿಟಿ ಶೋ ಕಾರಣಕ್ಕೆ ಆ ಸಮಯದಲ್ಲಿ ಜೀ ಕನ್ನಡದಲ್ಲಿ ಪ್ರಸಾರ ಕಾಣುವ, ‘ನಾ ನಿನ್ನ ಬಿಡಲಾರೆ’ ಧಾರಾವಾಹಿ ಟಿಆರ್​ಪಿ ಕುಸಿಯುವ ಸಾಧ್ಯತೆ ಇದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Web contact
Web contact

TV9 Kannada

Read More
ಡಿಕೆ ಶಿವಕುಮಾರ್ ಸಂಪುಟದ ಸಚಿವರಿಗೆ ಖಾತೆ ಹಂಚಿಕೆ:ಯಾರಿಗೆ ಯಾವ ಖಾತೆ?
ಡಿಕೆ ಶಿವಕುಮಾರ್ ಸಂಪುಟದ ಸಚಿವರಿಗೆ ಖಾತೆ ಹಂಚಿಕೆ:ಯಾರಿಗೆ ಯಾವ ಖಾತೆ?
ಜಿಲ್ಲೆಗಳ ಸಮಸ್ಯೆ ಪಟ್ಟಿ ಮಾಡಿ 25 ದಿನಗಳ ಒಳಗೆ ಕೊಡಿ: ಡಿಕೆಶಿ ಸೂಚನೆ
ಜಿಲ್ಲೆಗಳ ಸಮಸ್ಯೆ ಪಟ್ಟಿ ಮಾಡಿ 25 ದಿನಗಳ ಒಳಗೆ ಕೊಡಿ: ಡಿಕೆಶಿ ಸೂಚನೆ
ಸಿಎಂ ಆದ 2ನೇ ದಿನಕ್ಕೆ ರೌಡಿಗಳ ವಿರುದ್ಧ ಸಮರ ಸಾರಿದ ಡಿಕೆ ಶಿವಕುಮಾರ್!
ಸಿಎಂ ಆದ 2ನೇ ದಿನಕ್ಕೆ ರೌಡಿಗಳ ವಿರುದ್ಧ ಸಮರ ಸಾರಿದ ಡಿಕೆ ಶಿವಕುಮಾರ್!
ಪಾರದರ್ಶಕವಾಗಿ ಕೆಲಸ ಮಾಡಲು ಅಧಿಕಾರಿಗಳಿಗೆ ಡಿಕೆಶಿ ಖಡಕ್ ಸೂಚನೆ​​
ಪಾರದರ್ಶಕವಾಗಿ ಕೆಲಸ ಮಾಡಲು ಅಧಿಕಾರಿಗಳಿಗೆ ಡಿಕೆಶಿ ಖಡಕ್ ಸೂಚನೆ​​
ರೋಗಿ ಕರೆದೊಯ್ಯುತ್ತಿದ್ದ ಆ್ಯಂಬುಲೆನ್ಸ್ ಕ್ಯಾಂಟರ್​​ಗೆ ಡಿಕ್ಕಿ
ರೋಗಿ ಕರೆದೊಯ್ಯುತ್ತಿದ್ದ ಆ್ಯಂಬುಲೆನ್ಸ್ ಕ್ಯಾಂಟರ್​​ಗೆ ಡಿಕ್ಕಿ
ಪೆದ್ದಿ ರಿಲೀಸ್​​ಗೂ ಮೊದಲು ಕಾಲ್ನಡಿಗೆಯಲ್ಲಿ ತಿರುಪತಿಗೆ ಬಂದ ಜಾನ್ವಿ
ಪೆದ್ದಿ ರಿಲೀಸ್​​ಗೂ ಮೊದಲು ಕಾಲ್ನಡಿಗೆಯಲ್ಲಿ ತಿರುಪತಿಗೆ ಬಂದ ಜಾನ್ವಿ
ವಿದ್ಯಾರ್ಥಿ ಜೀವನದಲ್ಲಿ ಇವುಗಳಿದ್ದರೆ ಉದ್ಧಾರ ಗ್ಯಾರಂಟಿ
ವಿದ್ಯಾರ್ಥಿ ಜೀವನದಲ್ಲಿ ಇವುಗಳಿದ್ದರೆ ಉದ್ಧಾರ ಗ್ಯಾರಂಟಿ
ಸಾಯಿಬಾಬಾ ನೆನೆದರೆ ಕಷ್ಟಗಳೆಲ್ಲಾ ನಿವಾರಣೆ
ಸಾಯಿಬಾಬಾ ನೆನೆದರೆ ಕಷ್ಟಗಳೆಲ್ಲಾ ನಿವಾರಣೆ
ಮೊದಲ ಸಂಪುಟ ಸಭೆಯಲ್ಲೇ ಡಿಕೆ ಶಿವಕುಮಾರ್​​ ಗುಡ್​ ನ್ಯೂಸ್: 6 ಕೊಡುಗೆ ಘೋಷಣೆ
ಮೊದಲ ಸಂಪುಟ ಸಭೆಯಲ್ಲೇ ಡಿಕೆ ಶಿವಕುಮಾರ್​​ ಗುಡ್​ ನ್ಯೂಸ್: 6 ಕೊಡುಗೆ ಘೋಷಣೆ
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್