AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸೀರಿಯಲ್​ನಲ್ಲಿ ನಂಬರ್ 1 ಆದ ‘ಅಮೃತಧಾರೆ’ ಧಾರಾವಾಹಿ; ಟಿಆರ್​ಪಿ ಪಟ್ಟಿ

ಸದ್ಯ ಬಿಗ್ ಬಾಸ್ ಕೂಡ ಆರಂಭ ಆಗಿದೆ. ಮುಂದಿನ ವಾರ ಈ ಶೋನ ಟಿಆರ್​ಪಿ ಹೊರ ಬೀಳಲಿದೆ. ಈ ರಿಯಾಲಿಟಿ ಶೋ ಕಾರಣಕ್ಕೆ ಆ ಸಮಯದಲ್ಲಿ ಜೀ ಕನ್ನಡದಲ್ಲಿ ಪ್ರಸಾರ ಕಾಣುವ, ‘ನಾ ನಿನ್ನ ಬಿಡಲಾರೆ’ ಧಾರಾವಾಹಿ ಟಿಆರ್​ಪಿ ಕುಸಿಯುವ ಸಾಧ್ಯತೆ ಇದೆ.

ಸೀರಿಯಲ್​ನಲ್ಲಿ ನಂಬರ್ 1 ಆದ ‘ಅಮೃತಧಾರೆ’ ಧಾರಾವಾಹಿ; ಟಿಆರ್​ಪಿ ಪಟ್ಟಿ
ಅಮೃತಧಾರೆ
TV9 Web
| Edited By: |

Updated on: Oct 04, 2025 | 12:38 PM

Share

38ನೇ ವಾರದ ಟಿಆರ್​ಪಿ ಲಿಸ್ಟ್ ಹೊರ ಬಿದ್ದಿದೆ. ಈ ಟಿಆರ್​ಪಿಯಲ್ಲಿ ಅಚ್ಚರಿ ಎಂಬಂತೆ ‘ಅಮೃತಧಾರೆ’ ಧಾರಾವಾಹಿ ನಂಬರ್ 1 ಸ್ಥಾನ ಪಡೆದುಕೊಂಡಿದೆ. ಧಾರಾವಾಹಿಯಲ್ಲಿ ಎದುರಾದ ಟ್ವಿಸ್ಟ್​ಗಳಿಂದ ಈ ಧಾರಾವಾಹಿಗೆ ಮೊದಲ ಸ್ಥಾನ ಸಿಕ್ಕಿದೆ. ಹಾಗಾದರೆ, ಯಾವ ಧಾರಾವಾಹಿಗಳು ಯಾವ ಸ್ಥಾನದಲ್ಲಿ ಇವೆ ಎಂಬಿತ್ಯಾದಿ ವಿಚಾರಗಳ ಬಗ್ಗೆ ಇಲ್ಲಿದೆ ಮಾಹಿತಿ.

ಪ್ರತಿ ವಾರದ ಟಿಆರ್​ಪಿಯಲ್ಲೂ ಬದಲಾವಣೆಗಳು ಆಗುತ್ತಲೇ ಇರುತ್ತವೆ. ಯಾವ ಧಾರಾವಾಹಿ ಮೊದಲ ಸ್ಥಾನ ಪಡೆಯುತ್ತವೆ, ಯಾವ ಧಾರವಾಹಿ ಎರಡನೇ ಸ್ಥಾನ ಪಡೆಯುತ್ತವೆ ಎಂದು ಊಹಿಸೋದು ಕಷ್ಟ. ಏಕೆಂದರೆ ಪ್ರತಿ ವಾರವೂ ಇದರಲ್ಲಿ ಬದಲಾವಣೆಗಳು ಆಗುತ್ತಲೇ ಇರುತ್ತವೆ. ಈಗ 38ನೇ ವಾರದ ಟಿಆರ್​ಪಿಯಲ್ಲಿ ದೊಡ್ಡ ಬದಲಾವಣೆ ಆಗಿದೆ.

‘ಅಮೃತಧಾರೆ’ ಧಾರಾವಾಹಿ ಮೊದಲ ಸ್ಥಾನದಲ್ಲಿ ಮಿಂಚುತ್ತಿದೆ. ಭೂಮಿಕಾ ಹಾಗೂ ಗೌತಮ್ ಭೇಟಿಯ ಸಮಯದ ಎಪಿಸೋಡ್​ಗೆ ಸಿಕ್ಕ ಟಿಆರ್​ಪಿ ಇದಾಗಿದೆ. ಎರಡನೇ ಸ್ಥಾನದಲ್ಲಿ ‘ಅಣ್ಣಯ್ಯ’ ಧಾರಾವಾಹಿ ಇದೆ. ಈ ಧಾರಾವಾಹಿಯಲ್ಲೂ ಸದ್ಯ ಸಾಕಷ್ಟು ತಿರುವುಗಳು ಎದುರಾಗುತ್ತಿವೆ. ಹೀಗಾಗಿ, ಮುಂದಿನ ದಿನಗಳಲ್ಲಿ ಈ ಧಾರಾವಾಹಿಯಲ್ಲಿ ಮತ್ತಷ್ಟು ಹೆಚ್ಚಿನ ಟಿಆರ್​ಪಿ ಪಡೆಯಬಹುದು ಎಂದು ನಿರೀಕ್ಷಿಸಲಾಗಿದೆ.

ಮೂರನೇ ಸ್ಥಾನದಲ್ಲಿ ‘ಕರ್ಣ’ ಧಾರಾವಾಹಿ ಇದೆ. ಈ ಧಾರಾವಾಹಿ ಕಳೆದ ಕೆಲ ವಾರಗಳಿಂದ ಮೊದಲ ಸ್ಥಾನ ಪಡೆದುಕೊಳ್ಳುತ್ತಾ ಬರುತ್ತಿತ್ತು. ಆದರೆ, ಈಗ ಉಳಿದ ಧಾರಾವಾಹಿಗಳ ಟಿಆರ್​ಪಿಯಲ್ಲಿ ಏರಿಕೆ ಕಂಡಿದ್ದರಿಂದ, ಈ ಧಾರಾವಾಹಿಯ ಸ್ಥಾನ ಕುಸಿದಿದೆ. ನಾಲ್ಕನೇ ಸ್ಥಾನದಲ್ಲಿ ‘ಬ್ರಹ್ಮಗಂಟು’ ಧಾರಾವಾಹಿಗೆ ಸ್ಥಾನ ಸಿಕ್ಕಿದೆ. ಐದನೇ ಸ್ಥಾನದಲ್ಲಿ ‘ನಾ ನಿನ್ನ ಬಿಡಲಾರೆ’ ಧಾರಾವಾಹಿ ಇದೆ. ‘ಪುಟ್ಟಕ್ಕನ ಮಕ್ಕಳು’ ಧಾರಾವಾಹಿ ಆರನೇ ಸ್ಥಾನಕ್ಕೆ ತೃಪ್ತಿ ಪಟ್ಟುಕೊಂಡಿದೆ.

ಇದನ್ನೂ ಓದಿ: ರಾಕೆಟ್ ರೀತಿ ಏರಿತು ‘ಅಮೃತಧಾರೆ’ ಟಿಆರ್​ಪಿ; ಟಾಪ್ ಐದರಿಂದ ‘ನಾ ನಿನ್ನ ಬಿಡಲಾರೆ’ ಔಟ್

ಸದ್ಯ ಬಿಗ್ ಬಾಸ್ ಕೂಡ ಆರಂಭ ಆಗಿದೆ. ಮುಂದಿನ ವಾರ ಈ ಶೋನ ಟಿಆರ್​ಪಿ ಹೊರ ಬೀಳಲಿದೆ. ಈ ರಿಯಾಲಿಟಿ ಶೋ ಕಾರಣಕ್ಕೆ ಆ ಸಮಯದಲ್ಲಿ ಜೀ ಕನ್ನಡದಲ್ಲಿ ಪ್ರಸಾರ ಕಾಣುವ, ‘ನಾ ನಿನ್ನ ಬಿಡಲಾರೆ’ ಧಾರಾವಾಹಿ ಟಿಆರ್​ಪಿ ಕುಸಿಯುವ ಸಾಧ್ಯತೆ ಇದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಇಷ್ಟಪಟ್ಟು ಕಾರು ತಗೊಂಡೆ, ಇಎಂಐ ಕಟ್ಟೋದು ಕಷ್ಟ ಆಗ್ತಿದೆ: ಮೋಕ್ಷಿತಾ
ಇಷ್ಟಪಟ್ಟು ಕಾರು ತಗೊಂಡೆ, ಇಎಂಐ ಕಟ್ಟೋದು ಕಷ್ಟ ಆಗ್ತಿದೆ: ಮೋಕ್ಷಿತಾ
ಪಾವಗಡ - ಆಂಧ್ರ ಪ್ರದೇಶ ಗಡಿಯಲ್ಲಿ ಕೋವಿಡ್ ಚೆಕ್​ಪೋಸ್ಟ್: ತಪಾಸಣೆ ಶುರು
ಪಾವಗಡ - ಆಂಧ್ರ ಪ್ರದೇಶ ಗಡಿಯಲ್ಲಿ ಕೋವಿಡ್ ಚೆಕ್​ಪೋಸ್ಟ್: ತಪಾಸಣೆ ಶುರು
ಸಚಿವ ಸ್ಥಾನಕ್ಕಾಗಿ ದೆಹಲಿಗೆ ದೌಡಾಯಿಸಿದ ಆಕಾಂಕ್ಷಿಗಳು
ಸಚಿವ ಸ್ಥಾನಕ್ಕಾಗಿ ದೆಹಲಿಗೆ ದೌಡಾಯಿಸಿದ ಆಕಾಂಕ್ಷಿಗಳು
ದೇವೇಗೌಡರ ಪತ್ನಿ ಚೆನ್ನಮ್ಮ ಆರೋಗ್ಯದಲ್ಲಿ ಏರುಪೇರು: ಆಸ್ಪತ್ರೆಗೆ ದಾಖಲು
ದೇವೇಗೌಡರ ಪತ್ನಿ ಚೆನ್ನಮ್ಮ ಆರೋಗ್ಯದಲ್ಲಿ ಏರುಪೇರು: ಆಸ್ಪತ್ರೆಗೆ ದಾಖಲು
ಮೇಷ ಮತ್ತು ವೃಷಭ ರಾಶಿಯವರಿಗೆ ಭಾರಿ ಧನಲಾಭದ ಯೋಗ
ಮೇಷ ಮತ್ತು ವೃಷಭ ರಾಶಿಯವರಿಗೆ ಭಾರಿ ಧನಲಾಭದ ಯೋಗ
ಸಚಿವ ಸಂಪುಟ ವಿಸ್ತರಣೆ ಜಟಾಪಟಿ: ಬಿಕೆ ಹರಿಪ್ರಸಾದ್ ಏನಂದ್ರು ನೋಡಿ​​
ಸಚಿವ ಸಂಪುಟ ವಿಸ್ತರಣೆ ಜಟಾಪಟಿ: ಬಿಕೆ ಹರಿಪ್ರಸಾದ್ ಏನಂದ್ರು ನೋಡಿ​​
ಬಿಗ್ ಬಾಸ್ ಬೆಡಗಿ ಮೋಕ್ಷಿತಾ ಪೈ ಪಾಲಿಗೆ ರಾಧಾ ಪಾತ್ರ ಒಲಿದಿದ್ದು ಹೇಗೆ?
ಬಿಗ್ ಬಾಸ್ ಬೆಡಗಿ ಮೋಕ್ಷಿತಾ ಪೈ ಪಾಲಿಗೆ ರಾಧಾ ಪಾತ್ರ ಒಲಿದಿದ್ದು ಹೇಗೆ?
ಚಿಕ್ಕಮಗಳೂರು: 60 ಅಡಿ ಆಳದ ಕೊಳವೆ ಬಾವಿಗೆ ಬಿದ್ದಿದ್ದ ಕಾರ್ಮಿಕನ ರಕ್ಷಣೆ
ಚಿಕ್ಕಮಗಳೂರು: 60 ಅಡಿ ಆಳದ ಕೊಳವೆ ಬಾವಿಗೆ ಬಿದ್ದಿದ್ದ ಕಾರ್ಮಿಕನ ರಕ್ಷಣೆ
ಸಂಪುಟ ವಿಸ್ತರಣೆ ಬಗ್ಗೆ ಸಿದ್ದರಾಮಯ್ಯ ಜೊತೆ ಡಿಕೆಶಿ ಸುದೀರ್ಘ ಚರ್ಚೆ
ಸಂಪುಟ ವಿಸ್ತರಣೆ ಬಗ್ಗೆ ಸಿದ್ದರಾಮಯ್ಯ ಜೊತೆ ಡಿಕೆಶಿ ಸುದೀರ್ಘ ಚರ್ಚೆ
ವೀಕೆಂಡ್‌ನಲ್ಲೂ ನಡೆಯಲಿದೆ ಮತದಾರರ ಪಟ್ಟಿ ಪರಿಷ್ಕರಣೆ ಅಭಿಯಾನ
ವೀಕೆಂಡ್‌ನಲ್ಲೂ ನಡೆಯಲಿದೆ ಮತದಾರರ ಪಟ್ಟಿ ಪರಿಷ್ಕರಣೆ ಅಭಿಯಾನ