AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸೀರಿಯಲ್​ನಲ್ಲಿ ನಂಬರ್ 1 ಆದ ‘ಅಮೃತಧಾರೆ’ ಧಾರಾವಾಹಿ; ಟಿಆರ್​ಪಿ ಪಟ್ಟಿ

ಸದ್ಯ ಬಿಗ್ ಬಾಸ್ ಕೂಡ ಆರಂಭ ಆಗಿದೆ. ಮುಂದಿನ ವಾರ ಈ ಶೋನ ಟಿಆರ್​ಪಿ ಹೊರ ಬೀಳಲಿದೆ. ಈ ರಿಯಾಲಿಟಿ ಶೋ ಕಾರಣಕ್ಕೆ ಆ ಸಮಯದಲ್ಲಿ ಜೀ ಕನ್ನಡದಲ್ಲಿ ಪ್ರಸಾರ ಕಾಣುವ, ‘ನಾ ನಿನ್ನ ಬಿಡಲಾರೆ’ ಧಾರಾವಾಹಿ ಟಿಆರ್​ಪಿ ಕುಸಿಯುವ ಸಾಧ್ಯತೆ ಇದೆ.

ಸೀರಿಯಲ್​ನಲ್ಲಿ ನಂಬರ್ 1 ಆದ ‘ಅಮೃತಧಾರೆ’ ಧಾರಾವಾಹಿ; ಟಿಆರ್​ಪಿ ಪಟ್ಟಿ
ಅಮೃತಧಾರೆ
TV9 Web
| Updated By: ರಾಜೇಶ್ ದುಗ್ಗುಮನೆ|

Updated on: Oct 04, 2025 | 12:38 PM

Share

38ನೇ ವಾರದ ಟಿಆರ್​ಪಿ ಲಿಸ್ಟ್ ಹೊರ ಬಿದ್ದಿದೆ. ಈ ಟಿಆರ್​ಪಿಯಲ್ಲಿ ಅಚ್ಚರಿ ಎಂಬಂತೆ ‘ಅಮೃತಧಾರೆ’ ಧಾರಾವಾಹಿ ನಂಬರ್ 1 ಸ್ಥಾನ ಪಡೆದುಕೊಂಡಿದೆ. ಧಾರಾವಾಹಿಯಲ್ಲಿ ಎದುರಾದ ಟ್ವಿಸ್ಟ್​ಗಳಿಂದ ಈ ಧಾರಾವಾಹಿಗೆ ಮೊದಲ ಸ್ಥಾನ ಸಿಕ್ಕಿದೆ. ಹಾಗಾದರೆ, ಯಾವ ಧಾರಾವಾಹಿಗಳು ಯಾವ ಸ್ಥಾನದಲ್ಲಿ ಇವೆ ಎಂಬಿತ್ಯಾದಿ ವಿಚಾರಗಳ ಬಗ್ಗೆ ಇಲ್ಲಿದೆ ಮಾಹಿತಿ.

ಪ್ರತಿ ವಾರದ ಟಿಆರ್​ಪಿಯಲ್ಲೂ ಬದಲಾವಣೆಗಳು ಆಗುತ್ತಲೇ ಇರುತ್ತವೆ. ಯಾವ ಧಾರಾವಾಹಿ ಮೊದಲ ಸ್ಥಾನ ಪಡೆಯುತ್ತವೆ, ಯಾವ ಧಾರವಾಹಿ ಎರಡನೇ ಸ್ಥಾನ ಪಡೆಯುತ್ತವೆ ಎಂದು ಊಹಿಸೋದು ಕಷ್ಟ. ಏಕೆಂದರೆ ಪ್ರತಿ ವಾರವೂ ಇದರಲ್ಲಿ ಬದಲಾವಣೆಗಳು ಆಗುತ್ತಲೇ ಇರುತ್ತವೆ. ಈಗ 38ನೇ ವಾರದ ಟಿಆರ್​ಪಿಯಲ್ಲಿ ದೊಡ್ಡ ಬದಲಾವಣೆ ಆಗಿದೆ.

‘ಅಮೃತಧಾರೆ’ ಧಾರಾವಾಹಿ ಮೊದಲ ಸ್ಥಾನದಲ್ಲಿ ಮಿಂಚುತ್ತಿದೆ. ಭೂಮಿಕಾ ಹಾಗೂ ಗೌತಮ್ ಭೇಟಿಯ ಸಮಯದ ಎಪಿಸೋಡ್​ಗೆ ಸಿಕ್ಕ ಟಿಆರ್​ಪಿ ಇದಾಗಿದೆ. ಎರಡನೇ ಸ್ಥಾನದಲ್ಲಿ ‘ಅಣ್ಣಯ್ಯ’ ಧಾರಾವಾಹಿ ಇದೆ. ಈ ಧಾರಾವಾಹಿಯಲ್ಲೂ ಸದ್ಯ ಸಾಕಷ್ಟು ತಿರುವುಗಳು ಎದುರಾಗುತ್ತಿವೆ. ಹೀಗಾಗಿ, ಮುಂದಿನ ದಿನಗಳಲ್ಲಿ ಈ ಧಾರಾವಾಹಿಯಲ್ಲಿ ಮತ್ತಷ್ಟು ಹೆಚ್ಚಿನ ಟಿಆರ್​ಪಿ ಪಡೆಯಬಹುದು ಎಂದು ನಿರೀಕ್ಷಿಸಲಾಗಿದೆ.

ಮೂರನೇ ಸ್ಥಾನದಲ್ಲಿ ‘ಕರ್ಣ’ ಧಾರಾವಾಹಿ ಇದೆ. ಈ ಧಾರಾವಾಹಿ ಕಳೆದ ಕೆಲ ವಾರಗಳಿಂದ ಮೊದಲ ಸ್ಥಾನ ಪಡೆದುಕೊಳ್ಳುತ್ತಾ ಬರುತ್ತಿತ್ತು. ಆದರೆ, ಈಗ ಉಳಿದ ಧಾರಾವಾಹಿಗಳ ಟಿಆರ್​ಪಿಯಲ್ಲಿ ಏರಿಕೆ ಕಂಡಿದ್ದರಿಂದ, ಈ ಧಾರಾವಾಹಿಯ ಸ್ಥಾನ ಕುಸಿದಿದೆ. ನಾಲ್ಕನೇ ಸ್ಥಾನದಲ್ಲಿ ‘ಬ್ರಹ್ಮಗಂಟು’ ಧಾರಾವಾಹಿಗೆ ಸ್ಥಾನ ಸಿಕ್ಕಿದೆ. ಐದನೇ ಸ್ಥಾನದಲ್ಲಿ ‘ನಾ ನಿನ್ನ ಬಿಡಲಾರೆ’ ಧಾರಾವಾಹಿ ಇದೆ. ‘ಪುಟ್ಟಕ್ಕನ ಮಕ್ಕಳು’ ಧಾರಾವಾಹಿ ಆರನೇ ಸ್ಥಾನಕ್ಕೆ ತೃಪ್ತಿ ಪಟ್ಟುಕೊಂಡಿದೆ.

ಇದನ್ನೂ ಓದಿ: ರಾಕೆಟ್ ರೀತಿ ಏರಿತು ‘ಅಮೃತಧಾರೆ’ ಟಿಆರ್​ಪಿ; ಟಾಪ್ ಐದರಿಂದ ‘ನಾ ನಿನ್ನ ಬಿಡಲಾರೆ’ ಔಟ್

ಸದ್ಯ ಬಿಗ್ ಬಾಸ್ ಕೂಡ ಆರಂಭ ಆಗಿದೆ. ಮುಂದಿನ ವಾರ ಈ ಶೋನ ಟಿಆರ್​ಪಿ ಹೊರ ಬೀಳಲಿದೆ. ಈ ರಿಯಾಲಿಟಿ ಶೋ ಕಾರಣಕ್ಕೆ ಆ ಸಮಯದಲ್ಲಿ ಜೀ ಕನ್ನಡದಲ್ಲಿ ಪ್ರಸಾರ ಕಾಣುವ, ‘ನಾ ನಿನ್ನ ಬಿಡಲಾರೆ’ ಧಾರಾವಾಹಿ ಟಿಆರ್​ಪಿ ಕುಸಿಯುವ ಸಾಧ್ಯತೆ ಇದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ