AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಕೆಟ್ ರೀತಿ ಏರಿತು ‘ಅಮೃತಧಾರೆ’ ಟಿಆರ್​ಪಿ; ಟಾಪ್ ಐದರಿಂದ ‘ನಾ ನಿನ್ನ ಬಿಡಲಾರೆ’ ಔಟ್

ಈ ವಾರದ ಕನ್ನಡ ಧಾರಾವಾಹಿಗಳ ಟಿಆರ್‌ಪಿ ಪಟ್ಟಿಯಲ್ಲಿ ‘ಅಮೃತಧಾರೆ’ ಟಿವಿಆರ್ ಹೆಚ್ಚಿದೆ. ಈ ಧಾರಾವಾಹಿ ಉತ್ತಮ ಟಿಆರ್​ಪಿಯೊಂದಿಗೆ ಮುಂದೆ ಸಾಗುತ್ತಿದೆ. ‘ನಾ ನಿನ್ನ ಬಿಡಲಾರೆ’ ಧಾರಾವಾಹಿ ಟಾಪ್ 5 ರಾಂಕಿಂಗ್‌ನಿಂದ ಹೊರಬಿದ್ದಿದೆ. ಟಾಪ್ ಮೂರು ಧಾರಾವಾಹಿಗಳು 9+ ಟಿವಿಆರ್ ಅನ್ನು ಪಡೆದಿವೆ ಎಂಬುದು ವಿಶೇಷ.

ರಾಕೆಟ್ ರೀತಿ ಏರಿತು ‘ಅಮೃತಧಾರೆ’ ಟಿಆರ್​ಪಿ; ಟಾಪ್ ಐದರಿಂದ ‘ನಾ ನಿನ್ನ ಬಿಡಲಾರೆ’ ಔಟ್
Serial Trp
ರಾಜೇಶ್ ದುಗ್ಗುಮನೆ
|

Updated on: Sep 25, 2025 | 1:36 PM

Share

ಈ ವರ್ಷದ 37ನೇ ವಾರದ ಧಾರಾವಾಹಿಗಳ ಟಿಆರ್​ಪಿ ಪಟ್ಟಿ ಹೊರ ಬಿದ್ದಿದೆ. ‘ಅಮೃತಧಾರೆ’ ಧಾರಾವಾಹಿ ಕಳೆದ ವಾರಗಳಿಗಿಂತ ಹೆಚ್ಚಿನ ಟಿಆರ್​ಪಿ ಪಡೆದುಕೊಂಡಿದೆ. ಉಳಿದ ಧಾರಾವಾಹಿಗಳಿಗೆ ಹೋಲಿಕೆ ಮಾಡಿದರೆ ಈ ಧಾರಾವಾಹಿಯಲ್ಲಿ ಸಾಕಷ್ಟು ತಿರುವುಗಳನ್ನು ಇಡಲಾಗಿತ್ತು. ಇದು ತಂಡಕ್ಕೆ ಸಹಕಾರಿ ಆಗಿದೆ. ಈ ಕಾರಣದಿಂದಲೇ ಧಾರಾವಾಹಿ ಮೆಚ್ಚುಗೆ ಪಡೆಯುತ್ತಿದೆ.

ಕಳೆದ ಕೆಲವು ವಾರಗಳಿಂದ ಧಾರಾವಾಹಿ ಮೊದಲ ಸ್ಥಾನ ‘ಕರ್ಣ’ ಧಾರಾವಾಹಿಗೆ ಸಿಗುತ್ತಿತ್ತು. ಆದರೆ, ಈ ಬಾರಿ ‘ಕರ್ಣ’ನಿಗೆ ಎರಡನೇ ಸ್ಥಾನ ಸಿಕ್ಕಿದೆ. ಮೊದಲ ಸ್ಥಾನವನ್ನು ‘ಅಣ್ಣಯ್ಯ’ ಧಾರಾವಾಹಿ ಪಡೆದುಕೊಂಡಿದೆ. ಕಳೆದ ಕೆಲವು ವಾರಗಳಿಂದ ‘ಅಣ್ಣಯ್ಯ’ ಧಾರಾವಾಹಿಯಲ್ಲಿ ಮಹತ್ವದ ಬೆಳವಣಿಗೆಗಳು ನಡೆಯುತ್ತಿವೆ. ಇದು ಧಾರಾವಾಹಿ ಟಿಆರ್​ಪಿ ಹೆಚ್ಚಲು ಕಾರಣ ಆಗಿದೆ. ಈ ಧಾರಾವಾಹಿ ಮುಂದಿನ ವಾರ ಡಬಲ್ ಡಿಜಿಟ್ ಟಿಆರ್​ಪಿ ಪಡೆದರು ಅಚ್ಚರಿ ಏನಿಲ್ಲ.

ಎರಡನೇ ಸ್ಥಾನದಲ್ಲಿ ‘ಕರ್ಣ’ ಧಾರಾವಾಹಿ ಇದೆ. ಈ ಧಾರಾವಾಹಿಯ ಕಥೆಯಲ್ಲಿ ಹೆಚ್ಚಿನ ಬೆಳವಣಿಗೆಗಳು ನಡೆಯುತ್ತಿಲ್ಲ. ಇದನ್ನು ಕೆಲವರು ನಿಂತ ನೀರು ಎಂದು ಕೂಡ ಕರೆದಿದ್ದಾರೆ. ಆದರೆ, ಧಾರಾವಾಹಿ ಟಿಆರ್​ಪಿಯಲ್ಲಿ ಮಾತ್ರ ಮುಂದಿದೆ. ಈ ಧಾರಾವಾಹಿ ಸದ್ಯ ಲಿಸ್ಟ್​ನಲ್ಲಿ ಎರಡನೇ ಸ್ಥಾನದಲ್ಲಿ ಇದೆ.

ಮೂರನೇ ಸ್ಥಾನದಲ್ಲಿ ಅಮೃತಧಾರೆ ಧಾರಾವಾಹಿ ಇದೆ. ಈ ಧಾರಾವಾಹಿ ಮಹತ್ವದ ಘಟ್ಟ ತಲುಪಿದೆ. ಈ ಕಾರಣದಿಂದ ಧಾರಾವಾಹಿಗೆ ಭರ್ಜರಿ ಟಿಆರ್​ಪಿ ಸಿಕ್ಕಿದೆ. ಟಾಪ್ ಮೂರರಲ್ಲಿ ಇರುವ ಧಾರಾವಾಹಿಗಳ ಟಿವಿಆರ್ 9+ ಇದೆ ಎಂಬುದು ವಿಶೇಷ. ನಾಲ್ಕನೇ ಸ್ಥಾನದಲ್ಲಿ ‘ಲಕ್ಷ್ಮೀ ನಿವಾಸ’ ಧಾರಾವಾಹಿ ಇದೆ. ಈ ಧಾರಾವಾಹಿ ಕಳೆದ ಕೆಲವು ವಾರಗಳಿಂದ ಒಂದೇ ರೀತಿಯ ಪರ್ಫಾರ್ಮೆನ್ಸ್ ನೀಡುತ್ತಾ ಸಾಗುತ್ತಿದೆ.

ಐದನೇ ಸ್ಥಾನದಲ್ಲಿ ಈ ಬಾರಿ ‘ಪುಟ್ಟಕ್ಕನ ಮಕ್ಕಳು’ ಧಾರಾವಾಹಿ ಸ್ಥಾನ ಪಡೆದುಕೊಂಡಿದೆ. ಈ ಧಾರಾವಾಹಿಯಲ್ಲಿ ಕಥಾ ನಾಯಕಿ ಪಾತ್ರವನ್ನೇ ಕೊನೆಗೊಳಿಸಿದ್ದೂ ಅಲ್ಲದೆ, ಧಾರಾವಾಹಿ ಸಮಯವನ್ನು ಬದಲಾಯಿಸಲಾಯಿತು. ಆದಾಗ್ಯೂ ಧಾರಾವಾಹಿ ಉತ್ತಮ ಟಿಆರ್​ಪಿ ಪಡೆದುಕೊಳ್ಳುತ್ತಿದೆ. ಆದರೆ, ಟಾಪ್ ಐದರಲ್ಲಿ ಸ್ಥಾನ ಪಡೆಯದೆ ಬಹಳ ಸಮಯ ಕಳೆದಿತ್ತು.

ಇದನ್ನೂ ಓದಿ: ‘ನಾ ನಿನ್ನ ಬಿಡಲಾರೆ’ ಧಾರಾವಾಹಿಗೆ ಶಾಕ್ ಕೊಟ್ಟ ಪ್ರೇಕ್ಷಕ; ಟಿಆರ್​ಪಿಯಲ್ಲಿ ಯಾರು ಟಾಪ್?

‘ನಾ ನಿನ್ನ ಬಿಡಲಾರೆ’ ಧಾರಾವಾಹಿಗೆ ಶಾಕ್ ಎದುರಾಗಿದೆ. ಈ ಧಾರಾವಾಹಿ ಈ ಬಾರಿ ಆರನೇ ಸ್ಥಾನಕ್ಕೆ ಕುಸಿದಿದೆ. ಈ ಮೊದಲು ಟಾಪ್ ಎರಡರಲ್ಲಿ ಸ್ಥಾನ ಪಡೆದ ಉದಾಹರಣೆ ಇತ್ತು. ಆದರೆ, ಈ ಬಾರಿ ಆ ರೀತಿ ಆಗಿಲ್ಲ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಮುಳುಗುತ್ತಿದ್ದ ಇಬ್ಬರು ಯುವಕರನ್ನು ಕಾಪಾಡಿದ ಮಹಿಳಾ ಟ್ರಾಫಿಕ್ ಪೊಲೀಸ್
ಮುಳುಗುತ್ತಿದ್ದ ಇಬ್ಬರು ಯುವಕರನ್ನು ಕಾಪಾಡಿದ ಮಹಿಳಾ ಟ್ರಾಫಿಕ್ ಪೊಲೀಸ್
ಆ ಮಾತಿಗೆ ರೊಚ್ಚಿಗೆದ್ದು ವಿಪಕ್ಷ ಶಾಸಕರಿಗೆ ಏಕವಚನದಲ್ಲಿ ಬೈದ ಕೈ ಶಾಸಕ
ಆ ಮಾತಿಗೆ ರೊಚ್ಚಿಗೆದ್ದು ವಿಪಕ್ಷ ಶಾಸಕರಿಗೆ ಏಕವಚನದಲ್ಲಿ ಬೈದ ಕೈ ಶಾಸಕ
ತಮ್ಮ‌ ರಕ್ಷಣೆಗೆ ಬೋಟ್ ಆಂಬ್ಯುಲೆನ್ಸ್ ನಿರ್ಮಾಣ, ಮೀನುಗಾರರ ಮಾದರಿ ಹೆಜ್ಜೆ
ತಮ್ಮ‌ ರಕ್ಷಣೆಗೆ ಬೋಟ್ ಆಂಬ್ಯುಲೆನ್ಸ್ ನಿರ್ಮಾಣ, ಮೀನುಗಾರರ ಮಾದರಿ ಹೆಜ್ಜೆ
ಸಿಖ್ಖರನ್ನು ಕೊಂದ ಕುಟುಂಬದ ಕುಡಿಯೊಂದಿಗೆ ಕೈಕುಲುಕುವುದಿಲ್ಲ;ರವನೀತ್ ಬಿಟ್ಟು
ಸಿಖ್ಖರನ್ನು ಕೊಂದ ಕುಟುಂಬದ ಕುಡಿಯೊಂದಿಗೆ ಕೈಕುಲುಕುವುದಿಲ್ಲ;ರವನೀತ್ ಬಿಟ್ಟು
ಮನಸೋ ಇಚ್ಛೆ ಲೈಸೆನ್ಸ್: ಅಬಕಾರಿ ಇಲಾಖೆಯ ಮತ್ತಷ್ಟು ಕಳ್ಳಾಟ ಬಯಲು
ಮನಸೋ ಇಚ್ಛೆ ಲೈಸೆನ್ಸ್: ಅಬಕಾರಿ ಇಲಾಖೆಯ ಮತ್ತಷ್ಟು ಕಳ್ಳಾಟ ಬಯಲು
ಬೆಳಗಾವಿ: ಸಿಗರೇಟ್ ಹಣ ಕೇಳಿದ್ದಕ್ಕೆ ಬಿತ್ತು ಪಾನ್ ಶಾಪ್ ಮಾಲೀಕನ ಹೆಣ
ಬೆಳಗಾವಿ: ಸಿಗರೇಟ್ ಹಣ ಕೇಳಿದ್ದಕ್ಕೆ ಬಿತ್ತು ಪಾನ್ ಶಾಪ್ ಮಾಲೀಕನ ಹೆಣ
ಲವ್​​ ಹೆಸರಲ್ಲಿ ಮೋಸ ಮಾಡಿದವನ ಕಾಮುಕತೆ ಬಿಚ್ಚಿಟ್ಟ ಸಂತ್ರಸ್ತೆ
ಲವ್​​ ಹೆಸರಲ್ಲಿ ಮೋಸ ಮಾಡಿದವನ ಕಾಮುಕತೆ ಬಿಚ್ಚಿಟ್ಟ ಸಂತ್ರಸ್ತೆ
ಬಿಎಂಟಿಸಿ ಬಸ್ ಬಳಿಕ ವಿಕ್ಟೋರಿಯಾ ಆಸ್ಪತ್ರೆಯಲ್ಲೂ UPI ಸ್ಕ್ಯಾನರ್ ಸ್ಕ್ಯಾಮ್
ಬಿಎಂಟಿಸಿ ಬಸ್ ಬಳಿಕ ವಿಕ್ಟೋರಿಯಾ ಆಸ್ಪತ್ರೆಯಲ್ಲೂ UPI ಸ್ಕ್ಯಾನರ್ ಸ್ಕ್ಯಾಮ್
ಲಕ್ಕುಂಡಿಯ ಜೈನ ಬಸದಿಗಳಲ್ಲೂ ನಿಧಿ ಇದ್ಯಾ? ಸರ್ಪಗಳು ಕಾವಲು ಕಾಯ್ತಿದ್ಯಾ?
ಲಕ್ಕುಂಡಿಯ ಜೈನ ಬಸದಿಗಳಲ್ಲೂ ನಿಧಿ ಇದ್ಯಾ? ಸರ್ಪಗಳು ಕಾವಲು ಕಾಯ್ತಿದ್ಯಾ?
ಸದನದಲ್ಲಿ ವೈಯಕ್ತಿಕವಾಗಿ ಬೈದಾಡಿಕೊಂಡ ಶಾಸಕ ಶರಣು ಸಲಗಾರ್- ಶಿವಲಿಂಗೇಗೌಡ
ಸದನದಲ್ಲಿ ವೈಯಕ್ತಿಕವಾಗಿ ಬೈದಾಡಿಕೊಂಡ ಶಾಸಕ ಶರಣು ಸಲಗಾರ್- ಶಿವಲಿಂಗೇಗೌಡ