AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟಾಪ್​ನಲ್ಲಿ ಯಾರೂ ಊಹಿಸದ ಸೀರಿಯಲ್; ‘ಅಮೃತಧಾರೆ’ಗೆ ಎಷ್ಟನೇ ಸ್ಥಾನ?

35ನೇ ವಾರದ ಕನ್ನಡ ಧಾರಾವಾಹಿಗಳ TRP ರಿಪೋರ್ಟ್ ಬಿಡುಗಡೆಯಾಗಿದೆ. ‘ಅಮೃತಧಾರೆ’ ಎರಡನೇ ಸ್ಥಾನದಲ್ಲಿದ್ದರೆ, ಮೊದಲ ಸ್ಥಾನದಲ್ಲಿ ಯಾರೂ ಊಹಿಸದ ಧಾರಾವಾಹಿ ಇದೆ. ಈ ಧಾರಾವಾಹಿಯಲ್ಲಿ ಹಲವು ತಿರುವುಗಳು ಎದುರಾಗಿದ್ದು, ಎಲ್ಲವೂ ಮಹತ್ವದ ಬೆಳವಣಿಗೆಗಳೇ ಆಗಿವೆ. ಇದು ಧಾರಾವಾಹಿ ಟಿಆರ್​ಪಿ ಹೆಚ್ಚಲು ಕಾರಣ.

ಟಾಪ್​ನಲ್ಲಿ ಯಾರೂ ಊಹಿಸದ ಸೀರಿಯಲ್; ‘ಅಮೃತಧಾರೆ’ಗೆ ಎಷ್ಟನೇ ಸ್ಥಾನ?
ಧಾರಾವಾಹಿ ಟಿಆರ್​ಪಿ
ರಾಜೇಶ್ ದುಗ್ಗುಮನೆ
|

Updated on: Sep 12, 2025 | 7:31 AM

Share

ಧಾರಾವಾಹಿಗಳ ಟಿಆರ್​ಪಿಗಳಲ್ಲಿ ಪ್ರತಿ ವಾರ ಬದಲಾವಣೆ ಸಾಮಾನ್ಯ. ಆಯಾ ವಾರಗಳಲ್ಲಿ ಧಾರಾವಾಹಿಗಳ ಕಥೆ ಯಾವ ರೀತಿಯಲ್ಲಿ ಸಾಗಿದೆ ಎಂಬುದರ ಆಧಾರದ ಮೇಲೆ ಧಾರಾವಾಹಿಯ ಟಿಆರ್​ಪಿ ನಿರ್ಧಾರ ಆಗುತ್ತದೆ. ಈಗ 35ನೇ ವಾರದ ಧಾರಾವಾಹಿಗಳ ಟಿಆರ್​ಪಿ ಹೊರ ಬಂದಿದೆ. ಈ ಪೈಕಿ ಯಾರೂ ಊಹಿಸದ ಧಾರಾವಾಹಿ ಟಾಪ್​ನಲ್ಲಿ ಇದೆ. ‘ಅಮೃತಧಾರೆ’ ಧಾರಾವಾಹಿಗೆ (Serials) ಎರಡನೇ ಸ್ಥಾನ ಸಿಕ್ಕಿದೆ. ಆ ಬಗ್ಗೆ ಇಲ್ಲಿದೆ ವಿವರ.

ಮೊದಲ ಸ್ಥಾನದಲ್ಲಿ ‘ಕರ್ಣ’ ಧಾರಾವಾಹಿ ಇದೆ. ಈ ಧಾರಾವಾಹಿ ಕಳೆದ ವಾರ ಎರಡನೇ ಸ್ಥಾನ ಪಡೆದುಕೊಂಡಿತ್ತು. ಈ ಧಾರಾವಾಹಿಯ ಕಥೆಯಲ್ಲಿ ಹೆಚ್ಚಿನ ಬದಲಾವಣೆ ಏನೂ ಆಗುತ್ತಾ ಇರಲಿಲ್ಲ. ಈ ಕಾರಣದಿಂದಲೇ ಅನೇಕರು ಈ ಧಾರಾವಾಹಿ ಕಥೆಯನ್ನು ನಿಂತ ನೀರು ಎಂದು ಕರೆದಿದ್ದರು. ಹೀಗಾಗಿ, ಈ ಧಾರಾವಾಹಿ ಮೊದಲ ಸ್ಥಾನ ಬರುತ್ತದೆ ಎಂದು ಯಾರೂ ಊಹಿಸಿರಲಿಲ್ಲ. ಈಗ ಒಳ್ಳೆಯ ಟಿಆರ್​ಪಿ ಜೊತೆ ಧಾರಾವಾಹಿ ಮೊದಲ ಸ್ಥಾನ ಪಡೆದುಕೊಂಡಿದೆ.

ಇನ್ನು, ಎರಡನೇ ಸ್ಥಾನದಲ್ಲಿ ‘ಅಮೃತಧಾರೆ’, ‘ಅಣ್ಣಯ್ಯ ಧಾರಾವಾಹಿ ಇದೆ. ಈ ಧಾರಾವಾಹಿ ಒಳ್ಳೆಯ ಟಿಆರ್​ಪಿ ಪಡೆದುಕೊಂಡಿದೆ. ಈ ಧಾರಾವಾಹಿಯಲ್ಲಿ ಹಲವು ತಿರುವುಗಳು ಎದುರಾಗಿದ್ದು, ಎಲ್ಲವೂ ಮಹತ್ವದ ಬೆಳವಣಿಗೆಗಳೇ ಆಗಿವೆ. ಶಕುಂತಲಾಳ ನಿಜವಾದ ಮುಖ ಕಳಚೋದು, ಆಕೆಯ ಕೆನ್ನೆಗೆ ಭೂಮಿಕಾ ಹೊಡೆಯೋದು ಈ ರೀತಿಯ ಎಪಿಸೋಡ್​ಗಳಿಂದ ಧಾರಾವಾಹಿ ಎರಡನೇ ಸ್ಥಾನ ಪಡೆದುಕೊಂಡಿದೆ. ‘ಅಣ್ಣಯ್ಯ’ ಧಾರಾವಾಹಿ ಕೂಡ ಸ್ಥಿರವಾಗಿ ಪ್ರದರ್ಶನ ನೀಡುತ್ತಾ ಬರುತ್ತಿದೆ.

ಇದನ್ನೂ ಓದಿ
Image
ಮದುವೆ ಬಳಿಕ ಕೆಲಸಕ್ಕೆ ಮರಳಿದ ಅನುಶ್ರೀ ಈ ವಿಚಾರದಲ್ಲಿ ತಪ್ಪು ಮಾಡಲಿಲ್ಲ
Image
ಹಠ ಮಾಡಿ ವಿಷ್ಣುವರ್ಧನ್ ಸಿನಿಮಾದಲ್ಲಿ ನಟಿಸಿದ್ದ ನಟ ಅಕ್ಷಯ್ ಕುಮಾರ್
Image
ಲೂಸಿಯಾದಲ್ಲಿ ರಿಷಬ್ ಶೆಟ್ಟಿ ಮಾಡಿದ ಪಾತ್ರ ನೆನಪಿದೆಯೇ? ಅದೆಷ್ಟು ಬದಲಾವಣೆ
Image
‘ಹಳ್ಳಿ ಪವರ್​’ನಲ್ಲಿ 1 ವಾರಕ್ಕೆ 4 ಮಂದಿ ವೈಲ್ಡ್​ ಕಾರ್ಡ್ ಮೂಲಕ ಎಂಟ್ರಿ

ಇದನ್ನೂ ಓದಿ: ನಿಧಿ-ನಿತ್ಯಾ ಇಬ್ಬರನ್ನೂ ಮದವೆ ಆಗ್ತಾನೆ ಕರ್ಣ? ಸಿಕ್ತು ದೊಡ್ಡ ಸೂಚನೆ

ಇನ್ನು, ಮೂರನೇ ಸ್ಥಾನದಲ್ಲಿ ‘ಲಕ್ಷ್ಮೀ ನಿವಾಸ’ ಧಾರಾವಾಹಿ ಇದೆ. ಈ ಧಾರಾವಾಹಿ ಜನರ ಮೆಚ್ಚುಗೆ ಪಡೆದಿದೆ. ಈ ಧಾರಾವಾಹಿ ಈ ಮೊದಲು ಮೊದಲ ಸ್ಥಾನ ಪಡೆದುಕೊಂಡ ಉದಾಹರಣೆ ಸಾಕಷ್ಟಿದೆ. ನಾಲ್ಕನೇ ಸ್ಥಾನದಲ್ಲಿ ‘ನಾ ನಿನ್ನ ಬಿಡಲಾರೆ’ ಧಾರಾವಾಹಿ ಇದೆ. ಹಾರರ್ ಅಂಶಗಳನ್ನು ಈ ಧಾರಾವಾಹಿ ಒಳಗೊಂಡಿದೆ. ಜೀ ಕನ್ನಡದಲ್ಲೇ ಪ್ರಸಾರ ಕಾಣುತ್ತಿರುವ ‘ಬ್ರಹ್ಮಗಂಟು’ ಧಾರಾವಾಹಿ ಕೂಡ ಟಾಪ್​ ಐದರಲ್ಲಿ ಸ್ಥಾನ ಪಡೆದಿದೆ. ಈ ಧಾರಾವಾಹಿಗೆ ಐದನೇ ಸ್ಥಾನ ಸಿಕ್ಕಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಬೇಸಿಗೆ ಧಗೆ ಹೆಚ್ಚಾಗುತ್ತಿದ್ದಂತೆ ಚಿಲ್ ಬಿಯರ್‌ಗೆ ಭಾರಿ ಡಿಮ್ಯಾಂಡ್
ಬೇಸಿಗೆ ಧಗೆ ಹೆಚ್ಚಾಗುತ್ತಿದ್ದಂತೆ ಚಿಲ್ ಬಿಯರ್‌ಗೆ ಭಾರಿ ಡಿಮ್ಯಾಂಡ್
ಪ್ರತಿಕೃತಿ ಸುಡುವಾಗ ಬಿಜೆಪಿ ಶಾಸಕಿ ಕೂದಲಿಗೆ ಹೊತ್ತಿದ ಬೆಂಕಿ
ಪ್ರತಿಕೃತಿ ಸುಡುವಾಗ ಬಿಜೆಪಿ ಶಾಸಕಿ ಕೂದಲಿಗೆ ಹೊತ್ತಿದ ಬೆಂಕಿ
ರೈಲು ಹತ್ತಲು ಹೋಗಿ ಕಾಲು ಜಾರಿ ಬಿದ್ದು ಪ್ರಾಣ ಕಳೆದುಕೊಂಡ ಮಹಿಳೆ
ರೈಲು ಹತ್ತಲು ಹೋಗಿ ಕಾಲು ಜಾರಿ ಬಿದ್ದು ಪ್ರಾಣ ಕಳೆದುಕೊಂಡ ಮಹಿಳೆ
ಮೇ 15ಕ್ಕೆ ಗುಡ್ ನ್ಯೂಸ್ ಸಿಗತ್ತಾ? ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಡಿಕೆಶಿ!
ಮೇ 15ಕ್ಕೆ ಗುಡ್ ನ್ಯೂಸ್ ಸಿಗತ್ತಾ? ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಡಿಕೆಶಿ!
ಬರಿದಾದ ಜಲಾಶಯವೇ ಮಕ್ಕಳಿಗೀಗ ಕ್ರಿಕೆಟ್​​ ಮೈದಾನ!
ಬರಿದಾದ ಜಲಾಶಯವೇ ಮಕ್ಕಳಿಗೀಗ ಕ್ರಿಕೆಟ್​​ ಮೈದಾನ!
ಬೀದಿ ನಾಯಿಯ ಮೇಲೆ ಮಚ್ಚಿನಿಂದ ಹಲ್ಲೆ! ಭಯಾನಕ ದೃಶ್ಯ ಸಿಸಿಟಿವಿಯಲ್ಲಿ ಸೆರೆ
ಬೀದಿ ನಾಯಿಯ ಮೇಲೆ ಮಚ್ಚಿನಿಂದ ಹಲ್ಲೆ! ಭಯಾನಕ ದೃಶ್ಯ ಸಿಸಿಟಿವಿಯಲ್ಲಿ ಸೆರೆ
ನಡುರಸ್ತೆಯಲ್ಲಿ ಒಂಟಿ‌ ಕೋರೆ‌ ಸಲಗದ ಬಿಂದಾಸ್ ವಾಕ್!
ನಡುರಸ್ತೆಯಲ್ಲಿ ಒಂಟಿ‌ ಕೋರೆ‌ ಸಲಗದ ಬಿಂದಾಸ್ ವಾಕ್!
ಅಕ್ರಮ ಗೋ ಸಾಗಾಟ ವಾಹನ ತಡೆದು 23 ಗೋವುಗಳನ್ನು ರಕ್ಷಿಸಿದ BJP ಶಾಸಕ
ಅಕ್ರಮ ಗೋ ಸಾಗಾಟ ವಾಹನ ತಡೆದು 23 ಗೋವುಗಳನ್ನು ರಕ್ಷಿಸಿದ BJP ಶಾಸಕ
ಡಾ. ರಾಜ್​ಕುಮಾರ್ ಸಮಾಧಿ ವಿವಾದ: ಕ್ಷಮೆ ಕೇಳುವಾಗ ಸತಾಯಿಸಿದ್ರಾ ನಟ ಚೇತನ್?
ಡಾ. ರಾಜ್​ಕುಮಾರ್ ಸಮಾಧಿ ವಿವಾದ: ಕ್ಷಮೆ ಕೇಳುವಾಗ ಸತಾಯಿಸಿದ್ರಾ ನಟ ಚೇತನ್?
ವೈಟ್​ಹೌಸ್​ನಲ್ಲಿ ಗುಂಡಿನ ದಾಳಿ ನಡೆಸಿದ ವ್ಯಕ್ತಿಯ ಫೋಟೊ ಬಿಡುಗಡೆ
ವೈಟ್​ಹೌಸ್​ನಲ್ಲಿ ಗುಂಡಿನ ದಾಳಿ ನಡೆಸಿದ ವ್ಯಕ್ತಿಯ ಫೋಟೊ ಬಿಡುಗಡೆ