AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕ್ಲೈಮ್ಯಾಕ್ಸ್​ನಲ್ಲಿ ಏರಿತು ‘ಸೀತಾ ರಾಮ’ ಟಿಆರ್​ಪಿ; ಟಾಪ್ ಐದು ಧಾರಾವಾಹಿ ಲಿಸ್ಟ್ ಇಲ್ಲಿದೆ

ಸೀತಾ ರಾಮ ಧಾರಾವಾಹಿ ಏಪ್ರಿಲ್ 30 ರಂದು ಅಂತ್ಯಗೊಳ್ಳುತ್ತಿದೆ. ಈ ವಾರದ ಟಾಪ್ 5 ಕನ್ನಡ ಧಾರಾವಾಹಿಗಳ ಪಟ್ಟಿಯಲ್ಲಿ 'ಅಣ್ಣಯ್ಯ' ಮೊದಲ ಸ್ಥಾನದಲ್ಲಿದೆ. ಈ ವಾರ ಕೊನೆ ಆಗಲಿರುವ ‘ಸೀತಾ ರಾಮ’ ಧಾರಾವಾಹಿ ತನ್ನ ಅಂತಿಮ ವಾರದಲ್ಲಿ ಉತ್ತಮ ಟಿಆರ್​ಪಿ ಪಡೆದಿದೆ. ಆ ಬಗ್ಗೆ ಇಲ್ಲಿದೆ ವಿವರ.

ಕ್ಲೈಮ್ಯಾಕ್ಸ್​ನಲ್ಲಿ ಏರಿತು ‘ಸೀತಾ ರಾಮ’ ಟಿಆರ್​ಪಿ; ಟಾಪ್ ಐದು ಧಾರಾವಾಹಿ ಲಿಸ್ಟ್ ಇಲ್ಲಿದೆ
ಸೀತಾ ರಾಮ ಧಾರಾವಾಹಿ
ರಾಜೇಶ್ ದುಗ್ಗುಮನೆ
|

Updated on: May 29, 2025 | 3:00 PM

Share

‘ಸೀತಾ ರಾಮ’ ಧಾರಾವಾಹಿ (Seetha Raama Serial) ಕೊನೆ ಆಗುತ್ತಿದೆ. ಈ ವಾರ ಕೊನೆಯ ಸಂಚಿಕೆಗಳು ಪ್ರಸಾರ ಕಾಣಲಿದೆ. ಏಪ್ರಿಲ್ 30ರಂದು ಧಾರಾವಾಹಿ ಪೂರ್ಣಗೊಳ್ಳಲಿದೆ. ಇದಕ್ಕೂ ಮೊದಲು ಧಾರಾವಾಹಿಗಳ ಟಿಆರ್​ಪಿ ಲಿಸ್ಟ್ ಹೊರ ಬಿದ್ದಿದೆ. ಈ ಧಾರಾವಾಹಿ ಕೊನೆ ಆಗುತ್ತಿರುವ ಸಂದರ್ಭದಲ್ಲಿ ಧಾರಾವಾಹಿಯ ಟಿಆರ್​ಪಿಯಲ್ಲಿ ಕೊಂಚ ಏರಿಕೆ ಕಂಡಿದೆ. ಹಾಗಾದರೆ 20ನೇ ವಾರದಲ್ಲಿ ಟಾಪ್ ಐದರಲ್ಲಿ ಇರೋ ಧಾರಾವಾಹಿಗಳು ಯಾವವು ಎಂಬ ಬಗ್ಗೆ ಇಲ್ಲಿದೆ ವಿವರ.

ಧಾರಾವಾಹಿ ಟಿಆರ್​ಪಿಗಳಲ್ಲಿ ಪ್ರತಿ ವಾರ ಏರಿಳಿತ ಸಾಮಾನ್ಯ. ಅದೇ ರೀತಿ ಯಾವಾಗ ಯಾವಾ ಧಾರಾವಾಹಿ ಟಾಪ್​ನಲ್ಲಿ ಇರುತ್ತದೆ ಎಂದು ಹೇಳೋಕೆ ಸಾಧ್ಯವಿಲ್ಲ. ಕೆಲವೊಮ್ಮೆ ಧಾರಾವಾಹಿಗಳು ರೂಲ್ ಮಾಡಲು ಆರಂಭಿಸಿ ಬಿಟ್ಟರೆ ಹಲವು ತಿಂಗಳ ಕಾಲ ಅವು ನಂಬರ್ 1 ಇದ್ದ ಉದಾಹರಣೆ ಇದೆ. ಆದರೆ, ಇತ್ತೀಚೆಗೆ ಟಿಆರ್​ಪಿಯಲ್ಲಿ ಸಾಕಷ್ಟು ಏರಿಳಿತ ಇದೆ. ಐಪಿಎಲ್ ಕಾರಣದಿಂದಲೂ ಎಲ್ಲಾ ಧಾರಾವಾಹಿಗಳ ಟಿಆರ್​ಪಿಯಲ್ಲಿ ಕೊಂಚ ಇಳಿಕೆ ಆಗಿದೆ.

‘ಅಣ್ಣಯ್ಯ’ ಧಾರಾವಾಹಿ ಮೊದಲ ಸ್ಥಾನದಲ್ಲಿ ಇದೆ. ನಿಶಾ ರವಿಕೃಷ್ಣನ್, ವಿಕಾಸ್ ಉತ್ತಯ್ಯ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿರೋ ಈ ಧಾರಾವಾಗಿ ಪ್ರೇಕ್ಷಕರಿಗೆ ಸಖತ್ ಇಷ್ಟ ಆಗುತ್ತಿದೆ. ಕಥಾ ನಾಯಕ ಹಾಗೂ ನಾಯಕಿ ನಡುವಿನ ನಾಚಿಕೆ ಸ್ವಭಾವದ ರೊಮ್ಯಾನ್ಸ್ ವೀಕ್ಷಕರಿಗೆ ಇಷ್ಟ ಆಗುತ್ತಿದೆ. ಎರಡನೇ ಸ್ಥಾನದಲ್ಲಿ ‘ಅಮೃತಧಾರೆ’ ಧಾರಾವಾಹಿ ಇದೆ. ಈ ಧಾರಾವಾಹಿ ಪಾಯಿಂಟ್ ಒಂದು ಅಂಕದಿಂದ ಮೊದಲ ಸ್ಥಾನವನ್ನು ಮಿಸ್ ಮಾಡಿಕೊಂಡಿದೆ. ಈ ಧಾರಾವಾಹಿಯಲ್ಲಿ ವಿಲನ್​ಗಳ ನಿಜವಾದ ಮುಖವಾಡ ಬಯಲಾಗುತ್ತಿದೆ. ಈ ಕಾರಣದಿಂದಲೂ ಧಾರಾವಾಹಿಯನ್ನು ಹೆಚ್ಚಿನ ಜನರು ವೀಕ್ಷಿಸಿದ್ದಾರೆ.

ಇದನ್ನೂ ಓದಿ
Image
ರಶ್ಮಿಕಾಗೆ ನ್ಯಾಷನಲ್ ಕ್ರಶ್ ಎಂದು ಕರೆದ ಅಭಿಮಾನಿ; ನಟಿಯ ಪ್ರತಿಕ್ರಿಯೆ ಏನು?
Image
ಕಿಚ್ಚ ಸುದೀಪ್-ರಾಜೇಶ್ ಕೃಷ್ಣನ್ ಹಾಡಿನ್ ಜುಗಲ್​ಬಂದಿ; ಅಪರೂಪದ ವಿಡಿಯೋ
Image
ಎ,ಓಂ ಚಿತ್ರವನ್ನು ನಾನು ಮಾಡಿದ್ದರೆ ನಿವೃತ್ತಿ ಪಡೆಯುತ್ತಿದ್ದೆ; ಸುಕುಮಾರ್
Image
ಪವನ್ ಕಲ್ಯಾಣ್ ನಟನೆಯ ‘ಒಜಿ’ ಚಿತ್ರಕ್ಕೆ ಸೊಳ್ಳೆ ಕಾಟ; ಶೂಟಿಂಗ್ ಸ್ಥಗಿತ

ಇದನ್ನೂ ಓದಿ: ‘ಸೀತಾ ರಾಮ’ ಧಾರಾವಾಹಿಗೆ ಕೊನೆಯ ದಿನದ ಶೂಟಿಂಗ್; ಸೀರಿಯಲ್ ಪೂರ್ಣಗೊಳ್ಳಲು ಕಾರಣವೇನು?

ಮೂರನೇ ಸ್ಥಾನದಲ್ಲಿ ‘ಶ್ರಾವಣಿ ಸುಬ್ರಹ್ಮಣ್ಯ’, ನಾಲ್ಕನೇ ಸ್ಥಾನದಲ್ಲಿ ಹಾರರ್ ಧಾರಾವಾಹಿ ‘ನಾನಿನ್ನ ಬಿಡಲಾರೆ’ ಇದೆ. ಐದನೇ ಸ್ಥಾನದಲ್ಲಿ ‘ಲಕ್ಷ್ಮೀ ನಿವಾಸ’ ಧಾರಾವಾಹಿಗೆ ಸ್ಥಾನ ಸಿಕ್ಕಿದೆ. ಇನ್ನು ಸೀತಾ ರಾಮ ಧಾರಾವಾಹಿಗೆ ರಾಜ್ಯದಲ್ಲಿ 2.1 ಟಿವಿಆರ್ ಹಾಗೂ ನಗರ ಭಾಗದಲ್ಲಿ 2.3 ಟಿವಿಆರ್ ಸಿಕ್ಕಿದೆ. ಅಂತಿಮ ವಾರಕ್ಕೆ ಇನ್ನಷ್ಟು ಉತ್ತಮ ಟಿಆರ್​ಪಿ ಸಿಗೋ ಸಾಧ್ಯತೆ ಇದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ರಾಜೇಶ್ ದುಗ್ಗುಮನೆ
ರಾಜೇಶ್ ದುಗ್ಗುಮನೆ

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
ಗೋಕರ್ಣದ ಮಹಾಬಲೇಶ್ವರ ದೇಗುಲದಲ್ಲಿ ಆತ್ಮಲಿಂಗವನ್ನೇ ಮುಳುಗಿಸಿದ ಕೊಳಚೆ ನೀರು
ಗೋಕರ್ಣದ ಮಹಾಬಲೇಶ್ವರ ದೇಗುಲದಲ್ಲಿ ಆತ್ಮಲಿಂಗವನ್ನೇ ಮುಳುಗಿಸಿದ ಕೊಳಚೆ ನೀರು
ಮೊಬೈಲ್ ನಂಬರ್​ನ ಕೊನೇ 2 ಸಂಖ್ಯೆ ಯಾವುದಿರಬೇಕು?
ಮೊಬೈಲ್ ನಂಬರ್​ನ ಕೊನೇ 2 ಸಂಖ್ಯೆ ಯಾವುದಿರಬೇಕು?
ಇಂದು ಈ ರಾಶಿಯವರ ವಿವಾಹ ವಿಚಾರದಲ್ಲಿ ಪ್ರಗತಿ
ಇಂದು ಈ ರಾಶಿಯವರ ವಿವಾಹ ವಿಚಾರದಲ್ಲಿ ಪ್ರಗತಿ
ದೇಶಕ್ಕಾಗಿ ಪ್ರಾಣತೆತ್ತ ಮಗನ ನೆನೆದು ರಾಷ್ಟ್ರಪತಿ ಮುಂದೆ ಕಣ್ಣೀರಿಟ್ಟ ತಾಯಿ
ದೇಶಕ್ಕಾಗಿ ಪ್ರಾಣತೆತ್ತ ಮಗನ ನೆನೆದು ರಾಷ್ಟ್ರಪತಿ ಮುಂದೆ ಕಣ್ಣೀರಿಟ್ಟ ತಾಯಿ
ಮೃತರ ಸಂಖ್ಯೆ 35ಕ್ಕೆ ಏರಿಕೆ: ಫಿಲಿಫೈನ್ ಭೂಕಂಪದ ಕರಾಳತೆ ಹೇಗಿತ್ತು ನೋಡಿ
ಮೃತರ ಸಂಖ್ಯೆ 35ಕ್ಕೆ ಏರಿಕೆ: ಫಿಲಿಫೈನ್ ಭೂಕಂಪದ ಕರಾಳತೆ ಹೇಗಿತ್ತು ನೋಡಿ
ಜಗದೀಶ್ ಶೆಟ್ಟರ್ ನಿವಾಸಕ್ಕೆ ಭೇಟಿ ನೀಡಿದ ಮುಖ್ಯಮಂತ್ರಿ ಡಿಕೆ ಶಿವಕುಮಾರ್
ಜಗದೀಶ್ ಶೆಟ್ಟರ್ ನಿವಾಸಕ್ಕೆ ಭೇಟಿ ನೀಡಿದ ಮುಖ್ಯಮಂತ್ರಿ ಡಿಕೆ ಶಿವಕುಮಾರ್
ಹೊಸ ಸಿಎಂ, ಹೊಸ ಸಂಪ್ರದಾಯ: ಈ ಭೇಟಿ ಬಗ್ಗೆ ಡಿಕೆ ಶಿವಕುಮಾರ್ ಹೇಳಿದ್ದೇನು?
ಹೊಸ ಸಿಎಂ, ಹೊಸ ಸಂಪ್ರದಾಯ: ಈ ಭೇಟಿ ಬಗ್ಗೆ ಡಿಕೆ ಶಿವಕುಮಾರ್ ಹೇಳಿದ್ದೇನು?
ಚುನಾವಣೆಯಲ್ಲಿ ನಿಲ್ಲದೇ ಸಿಎಂ ಆದ ಕಥೆ: ಇದು ‘ಕಾಮನ್ ಮ್ಯಾನ್’ ಸಸ್ಪೆನ್ಸ್
ಚುನಾವಣೆಯಲ್ಲಿ ನಿಲ್ಲದೇ ಸಿಎಂ ಆದ ಕಥೆ: ಇದು ‘ಕಾಮನ್ ಮ್ಯಾನ್’ ಸಸ್ಪೆನ್ಸ್
ಕೆನಡಾದಲ್ಲಿ ಭಾರತೀಯ ಯುವಕರ ಬಳಿ ಸಹಾಯ ಕೇಳಿದ ಯುವತಿ
ಕೆನಡಾದಲ್ಲಿ ಭಾರತೀಯ ಯುವಕರ ಬಳಿ ಸಹಾಯ ಕೇಳಿದ ಯುವತಿ
ಟ್ರಕ್​ಗೆ ಡಿಕ್ಕಿಯಾಗಿ KSRTC ಬಸ್ ನುಜ್ಜುಗುಜ್ಜು: ತಪ್ಪಿದ ಭಾರೀ ಅನಾಹುತ
ಟ್ರಕ್​ಗೆ ಡಿಕ್ಕಿಯಾಗಿ KSRTC ಬಸ್ ನುಜ್ಜುಗುಜ್ಜು: ತಪ್ಪಿದ ಭಾರೀ ಅನಾಹುತ