AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟಿಆರ್​ಪಿಯಲ್ಲಿ ಮೊದಲ ಸ್ಥಾನದಲ್ಲಿ ಎರಡು ಜನಪ್ರಿಯ ಧಾರಾವಾಹಿಗಳು; ಟಾಪ್ 5 ಸೀರಿಯಲ್ ಲಿಸ್ಟ್ ಇಲ್ಲಿದೆ

ಈ ವಾರದ ಕನ್ನಡ ಧಾರಾವಾಹಿಗಳ ಟಿಆರ್‌ಪಿ ಪಟ್ಟಿಯಲ್ಲಿ ಎರಡು ಧಾರಾವಾಹಿಗಳು ಅಗ್ರ ಸ್ಥಾನಗಳನ್ನು ಪಡೆದಿವೆ. ಟಾಪ್ ಐದು ಧಾರಾವಾಹಿಗಳಲ್ಲಿ ಹೆಚ್ಚಿನವು ಜೀ ಕನ್ನಡದವು ಎಂಬುದು ಗಮನಾರ್ಹ. ‘ಸೀತಾ ರಾಮ’ ಧಾರಾವಾಹಿ ಈ ಮೊದಲು ಒಳ್ಳೆಯ ಟಿಆರ್​ಪಿ ಪಡೆದುಕೊಳ್ಳುತ್ತಿತ್ತು. ಆದರೆ, ಇತ್ತೀಚೆಗೆ ಈ ಧಾರಾವಾಹಿಯ ಟಿಆರ್ಪಿ ಮತ್ತಷ್ಟು ಕುಗ್ಗುವ ಸೂಚನೆ ಸಿಕ್ಕಿದೆ.

ಟಿಆರ್​ಪಿಯಲ್ಲಿ ಮೊದಲ ಸ್ಥಾನದಲ್ಲಿ ಎರಡು ಜನಪ್ರಿಯ ಧಾರಾವಾಹಿಗಳು; ಟಾಪ್ 5 ಸೀರಿಯಲ್ ಲಿಸ್ಟ್ ಇಲ್ಲಿದೆ
ಕನ್ನಡ ಧಾರಾವಾಹಿ
ರಾಜೇಶ್ ದುಗ್ಗುಮನೆ
|

Updated on: May 08, 2025 | 3:07 PM

Share

ಧಾರಾವಾಹಿಗಳ ಟಿಆರ್​ಪಿ (Serial TRP) ಲಿಸ್ಟ್ ಪ್ರತಿ ವಾರ ರಿವೀಲ್ ಆಗುತ್ತದೆ. ಈಗ ಈ ವರ್ಷದ 17ನೇ ವಾರದ ಟಿಆರ್​ಪಿ ಪಟ್ಟಿ ಹೊರ ಬಿದ್ದಿದೆ. ಈ ಪೈಕಿ ಕನ್ನಡದ ಎರಡು ಜನಪ್ರಿಯ ಧಾರಾವಾಹಿಗಳು ಸ್ಥಾನ ಪಡೆದುಕೊಂಡಿವೆ. ಟಾಪ್ ಐದರ ಪೈಕಿ ಬಹುತೇಕ ಎಲ್ಲಾ ಧಾರಾವಾಹಿಗಳು ಜೀ ಕನ್ನಡದವೇ ಅನ್ನೋದು ವಿಶೇಷ. ಈ ವಾರದ ಟಾಪ್​ ಸ್ಥಾನದಲ್ಲಿ ಇರೋ ಕನ್ನಡದ ಧಾರಾವಾಹಿಗಳು ಯಾವುದು ಎಂಬುದರ ವಿವರ ಈ ಸ್ಟೋರಿಯಲ್ಲಿ ಇದೆ.

ಈ ವಾರ ಮೊದಲ ಸ್ಥಾನದಲ್ಲಿ ಇದ್ದ ಧಾರಾವಾಹಿಗಳು ಮುಂದಿನ ವಾರ ಎರಡನೇ ಸ್ಥಾನಕ್ಕೆ ಇಳಿಯಬಹುದು. ಕಳೆದ ವಾರ ಮೊದಲ ಸ್ಥಾನದಲ್ಲಿ ಇದ್ದ ಧಾರಾವಾಹಿಗಳು ಈ ವಾರ ಮೊದಲ ಸ್ಥಾನಕ್ಕೆ ಬರಬಹುದು. ಇದರಲ್ಲಿ ಟಿಆರ್​ಪಿ ವಿಚಾರದಲ್ಲಿ ಇದು ಸಾಮಾನ್ಯ ಎನ್ನಬಹುದು. 17ನೇ ವಾರದ ಟಿಆರ್​ಪಿಯಲ್ಲೂ ‘ಹಾಗೆಯೇ ಆಗಿದೆ.

ಟಿಆರ್​ಪಿ ಲಿಸ್ಟ್​ನಲ್ಲಿ ಈ ವಾರ ‘ನಾ ನಿನ್ನ ಬಿಡಲಾರೆ’ ಮೊದಲ ಸ್ಥಾನದಲ್ಲಿ ಇದೆ. ಈ ಧಾರಾವಾಹಿ ಹಾರರ್ ಶೈಲಿಯಲ್ಲಿ ಮೂಡಿ ಬರುತ್ತಿದೆ. ‘ಅಣ್ಣಯ್ಯ’ ಧಾರಾವಾಹಿ ಕೂಡ ಮೊದಲ ಸ್ಥಾನದಲ್ಲಿ ಇದೆ. ರಾಜ್ಯದ ಟಿಆರ್​ಪಿಯನ್ನು ಪರಿಗಣಿಸಿ ಎರಡೂ ಧಾರಾವಾಹಿಗಳು ಮೊದಲ ಸ್ಥಾನದಲ್ಲಿ ಗಟ್ಟಿಯಾಗಿ ನಿಂತುಕೊಂಡಿವೆ.

ಇದನ್ನೂ ಓದಿ
Image
ಶಾರುಖ್ ಮೋಸ ಮಾಡಿದರೆ...; ಗೌರಿ ಖಾನ್ ಬೋಲ್ಡ್ ಉತ್ತರ ಮೆಚ್ಚಲೇಬೇಕು
Image
ಈ ವಿಲನ್ ನಿಜ ಜೀವನದಲ್ಲಿ ನಾಲ್ಕು ಮದುವೆ ಆದರು, ನಂತರ ಬೀದಿಗೆ ಬಂದರು
Image
‘ನಿನ್ನ ದೇಹ ನೀನೇ ನಿರ್ಧರಿಸು’; ದೀಪಿಕಾಗೆ ನೇರವಾಗಿ ಹೇಳಿದ್ದ ರಣವೀರ್ ಸಿಂಗ್
Image
ಅನುಷ್ಕಾ ಕೈಗೆ ಮುತ್ತು; ಕೊಹ್ಲಿನ ಜೋಕರ್ ಎಂದಿದ್ದ ರಾಹುಲ್​​ನ ವಿಡಿಯೋ ವೈರಲ್

ಎರಡನೇ ಸ್ಥಾನದಲ್ಲಿ ‘ಶ್ರಾವಣಿ ಸುಬ್ರಮಣ್ಯ’ ಧಾರಾವಾಹಿ ಇದೆ. ಈ ಧಾರಾವಾಹಿ ಬಗ್ಗೆ ಅಭಿಮಾನಿಗಳು ಸಾಕಷ್ಟು ನಿರೀಕ್ಷೆ ಇಟ್ಟುಕೊಂಡಿದ್ದಾರೆ. ಇತ್ತೀಚಿನ ದಿನಗಳಲ್ಲಿ ಈ ಧಾರಾವಾಹಿ ಒಳ್ಳೆಯ ಟಿಆರ್​ಪಿ ಪಡೆದುಕೊಂಡಿದೆ. ಈ ಕಾರಣಕ್ಕೆ ಈ ಧಾರಾವಾಹಿಗೆ ಎರಡನೇ ಸ್ಥಾನ ಸಿಕ್ಕಿದೆ.

ಮೂರನೇ ಸ್ಥಾನದಲ್ಲಿ ‘ಲಕ್ಷ್ಮೀ ನಿವಾಸ’ ಧಾರಾವಾಹಿ ಇದೆ. ಈ ಮೊದಲು ಈ ಧಾರಾವಾಹಿ ಮೊದಲ ಸ್ಥಾನ ಅಲಂಕರಿಸಿಕೊಳ್ಳುತ್ತಿತ್ತು. ಆದರೆ, ಈಗ ಬೇರೆ ಬೇರೆ ಧಾರಾವಾಹಿಗಳ ಅಬ್ಬರದಿಂದ ಈ ಧಾರಾವಾಹಿಯ ರ್ಯಾಂಕ್​ನಲ್ಲಿ ಇಳಿಕೆ ಆಗಿದೆ. ನಾಲ್ಕನೇ ಸ್ಥಾನದಲ್ಲಿ ‘ಅಮೃತಧಾರೆ’ ಧಾರಾವಾಹಿ ಇದೆ. ಐದನೇ ಸ್ಥಾನದಲ್ಲಿ ‘ಬ್ರಹ್ಮಗಂಟು’ ಧಾರಾವಾಹಿ ಇದೆ.

ಇದನ್ನೂ ಓದಿ: ವಾರ ಪೂರ್ತಿ ಪ್ರಸಾರ ಆಗಲಿದೆ ಕಲರ್ಸ್​ನ ನಿಮ್ಮ ಈ ನಾಲ್ಕು ಫೇವರಿಟ್ ಧಾರಾವಾಹಿ

‘ಸೀತಾ ರಾಮ’ ಧಾರಾವಾಹಿ ಈ ಮೊದಲು ಒಳ್ಳೆಯ ಟಿಆರ್​ಪಿ ಪಡೆದುಕೊಳ್ಳುತ್ತಿತ್ತು. ಆದರೆ, ಇತ್ತೀಚೆಗೆ ಈ ಧಾರಾವಾಹಿಯ ಟಿಆರ್​ಪಿ ಮತ್ತಷ್ಟು ಕುಗ್ಗುವ ಸೂಚನೆ ಸಿಕ್ಕಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ