AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಐಪಿಎಲ್ ಅಬ್ಬರಕ್ಕೆ ಕನ್ನಡ ಧಾರಾವಾಹಿಗಳು ತತ್ತರ; ಟಿಆರ್​ಪಿಯಲ್ಲಿ ಕುಸಿತ

ಐಪಿಎಲ್‌ನಿಂದಾಗಿ ಕನ್ನಡ ಧಾರಾವಾಹಿಗಳ ಟಿಆರ್‌ಪಿ ಗಣನೀಯವಾಗಿ ಕುಸಿದಿದೆ. ಪ್ರಮುಖ ಧಾರಾವಾಹಿಗಳ ಪ್ರಸಾರ ಸಮಯ ಐಪಿಎಲ್ ಪಂದ್ಯಗಳೊಂದಿಗೆ ಘರ್ಷಿಸುತ್ತಿರುವುದು ಇದಕ್ಕೆ ಪ್ರಮುಖ ಕಾರಣ. ಶ್ರಾವಣಿ ಸುಬ್ರಹ್ಮಣ್ಯ, ನಾ ನಿನ್ನ ಬಿಡಲಾರೆ, ಲಕ್ಷ್ಮೀ ನಿವಾಸ ಮುಂತಾದ ಧಾರಾವಾಹಿಗಳು ಉನ್ನತ ಸ್ಥಾನಗಳಲ್ಲಿದ್ದರೂ, ಒಟ್ಟಾರೆ ಟಿಆರ್‌ಪಿ ಕಡಿಮೆಯಾಗಿದೆ.

ಐಪಿಎಲ್ ಅಬ್ಬರಕ್ಕೆ ಕನ್ನಡ ಧಾರಾವಾಹಿಗಳು ತತ್ತರ; ಟಿಆರ್​ಪಿಯಲ್ಲಿ ಕುಸಿತ
ಧಾರಾವಾಹಿ ಟಿಆರ್​ಪಿ
Follow us
ರಾಜೇಶ್ ದುಗ್ಗುಮನೆ
|

Updated on: Apr 24, 2025 | 2:50 PM

ಧಾರಾವಾಹಿಗಳ ಟಿಆರ್​ಪಿಯ (TRP) ಮೇಲೆ ಸಾಕಷ್ಟು ವಿಚಾರಗಳು ಪ್ರಭಾವ ಬೀರುತ್ತವೆ. ಈಗ ಐಪಿಎಲ್ ಮೇನಿಯಾ. ಹೀಗಾಗಿ, ಧಾರಾವಾಹಿಗಳ ಟಿಆರ್​ಪಿಯಲ್ಲಿ ಸಾಕಷ್ಟು ಕುಸಿತ ಕಂಡಿದೆ. ಪ್ರತಿನಿತ್ಯ ಸಂಜೆ 7 ಗಂಟೆಗೆ ಐಪಿಎಲ್ ಮ್ಯಾಚ್​ನ ಟಾಸ್ ನಡೆಯುತ್ತದೆ. 7.30ಕ್ಕೆ ಪಂದ್ಯ ಆರಂಭ. ಬಹುತೇಕ ಪ್ರಮುಖ ಧಾರಾವಾಹಿಗಳು ಪ್ರಸಾರ ಆರಂಭಿಸೋದೆ 7 ಗಂಟೆ ಬಳಿಕ. ಈಗ ಐಪಿಎಲ್​ ಕಾರಣದಿಂದ ಧಾರಾವಾಹಿಗಳ ಟಿಆರ್​ಪಿಗೆ ಸಾಕಷ್ಟು ಹೊಡೆತ ಕೊಟ್ಟಿದೆ.

ಈ ಮೊದಲು ಕೆಲವು ಧಾರಾವಾಹಿಗಳು 10 ಟಿವಿಆರ್ ದಾಟಿದ ಉದಾಹರಣೆ ಇದೆ. ಆದರೆ, ಈಗ ಹಾಗಿಲ್ಲ. ಅನೇಕರು ಐಪಿಎಲ್ ವೀಕ್ಷಿಸುತ್ತಿರೋ ಹಿನ್ನೆಲೆಯಲ್ಲಿ ಧಾರಾವಾಹಿಗಳ ಟಿಆರ್​ಪಿ ಕುಸಿದೇ ಹೋಗಿದೆ. ಈ ಬಾರಿ 7.3 ಟಿವಿಆರ್ ಗರಿಷ್ಠ ಎನಿಸಿಕೊಂಡಿದೆ. ಇದಕ್ಕೆ ಐಪಿಎಲ್ ನೇರ ಕಾರಣ ಎಂಬ ಮಾತುಗಳು ವ್ಯಕ್ತವಾಗಿದೆ.

ಈ ಬಾರಿ ಮೊದಲ ಸ್ಥಾನದಲ್ಲಿ ಜೀ ಕನ್ನಡದ ‘ಶ್ರಾವಣಿ ಸುಬ್ರಹ್ಮಣ್ಯ’ ದಾರಾವಾಹಿ ಇದೆ. ಈ ಧಾರಾವಾಹಿ ಉತ್ತಮ ಟಿಆರ್​ಪಿ ಪಡೆದುಕೊಂಡಿದೆ. ಎರಡನೇ ಸ್ಥಾನದಲ್ಲಿ ‘ನಾ ನಿನ್ನ ಬಿಡಲಾರೆ’ ಧಾರಾವಾಹಿ ಇದೆ. ಮೂರನೇ ಸ್ಥಾನದಲ್ಲಿ ‘ಲಕ್ಷ್ಮೀ ನಿವಾಸ’ ಧಾರಾವಾಹಿ ಇದೆ. ನಾಲ್ಕನೇ ಸ್ಥಾನದಲ್ಲಿ ‘ಅಣ್ಣಯ್ಯ’ ಹಾಗೂ ಐದನೇ ಸ್ಥಾನದಲ್ಲಿ ‘ಅಮೃತಧಾರೆ’ ಧಾರಾವಾಹಿ ಇದೆ. ಟಾಪ್ ಐದರಲ್ಲಿ ಯಾವುದೇ ಕಲರ್ಸ್​ನ ಧಾರಾವಾಹಿಗಳು ಸ್ಥಾನ ಪಡೆದಿಲ್ಲ.

ಇದನ್ನೂ ಓದಿ
Image
ಮಂತ್ರಾಲಯದ ಗರ್ಭಗುಡಿಯಲ್ಲಿ ಮಲಗಿದ್ದ ರಾಜ್​ಕುಮಾರ್; ಆ ಬಳಿಕ ನಡೆದಿದ್ದು ಏನು
Image
ರಾಜ್​ಕುಮಾರ್ ಮೊದಲ ಆಡಿಷನ್ ಹೇಗಿತ್ತು? ವಿವರಿಸಿದ್ದ ಅಣ್ಣಾವ್ರು
Image
ಪಹಲ್ಗಾಮ್ ದಾಳಿ ಬಗ್ಗೆ ಪಾಕ್ ನಟನ ಅಭಿಪ್ರಾಯವೇನು? ದೂಷಿಸಿದ್ದು ಯಾರನ್ನು?
Image
ರಾಜ್​ಕುಮಾರ್ ಜನ್ಮದಿನಕ್ಕೆ ಶಿವಣ್ಣನ ಹೊಸ ಸಿನಿಮಾ ಘೋಷಣೆ; ಟೈಟಲ್ ಏನು?

ಇನ್ನು, ಹೊಸದಾಗಿ ಆರಂಭ ಆದ ‘ಮುದ್ದು ಸೊಸೆ’ ಧಾರಾವಾಹಿ ಆರನೇ ಸ್ಥಾನ ಪಡೆದಿದೆ. ಈ ಧಾರಾವಾಹಿಗೆ ಬಿಗ್ ಬಾಸ್ ಖ್ಯಾತಿಯ ತ್ರಿವಿಕ್ರಂ ಹೀರೋ. ಧಾರಾವಾಹಿ ಆರಂಭ ಆಗಿ ಕೆಲವೇ ದಿನಗಳು ಕಳೆದಿರುವುದರಿಂದ ಇದಕ್ಕೆ ಉತ್ತಮ ಟಿಆರ್​ಪಿ ಸಿಕ್ಕಿದೆ. ಮುಂದಿನ ದಿನಗಳಲ್ಲೂ ಈ ಧಾರಾವಾಹಿ ಇಷ್ಟೇ ಬೇಡಿಕೆ ಉಳಿಸಿಕೊಳ್ಳುತ್ತದೆಯೇ ಎಂಬುದನ್ನು ಕಾದು ನೋಡಬೇಕಿದೆ.

ಇದನ್ನೂ ಓದಿ:  ಉತ್ತಮ ಟಿಆರ್​ಪಿ ಮಧ್ಯೆಯೂ ಕೊನೆಯಾಗಲಿದೆ ಕಲರ್ಸ್​ನ ಟಾಪ್ 1 ಧಾರಾವಾಹಿ?

ಐಪಿಎಲ್ ಪಂದ್ಯಗಳು ಮೇ ಕೊನೆಯವರೆಗೂ ಇರಲಿದೆ. ಅಲ್ಲಿಯವರೆಗೂ ಇದೇ ರೀತಿಯ ಪರಿಸ್ಥಿತಿ ಮುಂದುವರಿಯಲಿದೆ. ಆ ಬಳಿಕ ಧಾರಾವಾಹಿಗಳ ಟಿಆರ್​ಪಿ ಹೆಚ್ಚೋ ನಿರೀಕ್ಷೆ ಇದೆ. ಇನ್ನು, ಐಪಿಎಲ್ ಎಂಬ ಕಾರಣದಿಂದಲೇ ಅನೇಕರು ಸಿನಿಮಾಗಳನ್ನು ರಿಲೀಸ್ ಮಾಡಲು ಮುಂದೆ ಬರುತ್ತಿಲ್ಲ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಜಿಂಕೆಯನ್ನ ಬೇಟೆಯಾಡಿ ಬಾಯಲ್ಲಿ ಹಿಡಿದ ಹುಲಿಯ ಅಪರೂಪದ ದೃಶ್ಯ
ಜಿಂಕೆಯನ್ನ ಬೇಟೆಯಾಡಿ ಬಾಯಲ್ಲಿ ಹಿಡಿದ ಹುಲಿಯ ಅಪರೂಪದ ದೃಶ್ಯ
ಅಖ್ನೂರ್​ ಬಳಿ ಬರಿದಾದ ಚೆನಾಬ್ ನದಿ, ಖಾಲಿ ನದಿಯಲ್ಲಿ ಸ್ಥಳೀಯರ ಓಡಾಟ
ಅಖ್ನೂರ್​ ಬಳಿ ಬರಿದಾದ ಚೆನಾಬ್ ನದಿ, ಖಾಲಿ ನದಿಯಲ್ಲಿ ಸ್ಥಳೀಯರ ಓಡಾಟ
ಹರೀಶ್ ಪೂಂಜಾ ಸೀರಿಯಲ್ ಅಫೆಂಡರ್ ಹಾಗೆ ಗೋಚರಿಸಸುತ್ತಾರೆ: ದಿನೇಶ್ ಗುಂಡೂರಾವ್
ಹರೀಶ್ ಪೂಂಜಾ ಸೀರಿಯಲ್ ಅಫೆಂಡರ್ ಹಾಗೆ ಗೋಚರಿಸಸುತ್ತಾರೆ: ದಿನೇಶ್ ಗುಂಡೂರಾವ್
ಭದ್ರತಾ ಸಿಬ್ಬಂದಿ ಮೇಲೆ ಕಾರು ಹತ್ತಿಸಿದ ಚಾಲಕ
ಭದ್ರತಾ ಸಿಬ್ಬಂದಿ ಮೇಲೆ ಕಾರು ಹತ್ತಿಸಿದ ಚಾಲಕ
ಪೆಟ್ರೋಲ್​ ಹಾಕುವ ವಿಚಾರಕ್ಕೆ ಗಲಾಟೆ: ಅಟ್ಟಾಡಿಸಿ ಕೆಲಸಗಾರರ ಮೇಲೆ ಹಲ್ಲೆ
ಪೆಟ್ರೋಲ್​ ಹಾಕುವ ವಿಚಾರಕ್ಕೆ ಗಲಾಟೆ: ಅಟ್ಟಾಡಿಸಿ ಕೆಲಸಗಾರರ ಮೇಲೆ ಹಲ್ಲೆ
ಸದಾನಂದಗೌಡರು ಬುಲ್ಡೋಜರ್ ಬಳಸುವ ಬಗ್ಗೆ ಹೇಳಿದ್ದು ಗೊತ್ತಿಲ್ಲ: ಪರಮೇಶ್ವರ್
ಸದಾನಂದಗೌಡರು ಬುಲ್ಡೋಜರ್ ಬಳಸುವ ಬಗ್ಗೆ ಹೇಳಿದ್ದು ಗೊತ್ತಿಲ್ಲ: ಪರಮೇಶ್ವರ್
ಕರ್ನಾಟಕದಿಂದ ಎಷ್ಟು ಪಾಕಿಸ್ತಾನೀಯರು ವಾಪಸ್? ಮಾಹಿತಿ ನೀಡಿದ ಪರಮೇಶ್ವರ್
ಕರ್ನಾಟಕದಿಂದ ಎಷ್ಟು ಪಾಕಿಸ್ತಾನೀಯರು ವಾಪಸ್? ಮಾಹಿತಿ ನೀಡಿದ ಪರಮೇಶ್ವರ್
ಶಿವಾನಂದ ರಾಜೀನಾಮೆ ಸಲ್ಲಿಸಿರುವುದು ಕೇವಲ ನಾಟಕ ಮಾತ್ರ: ವಿಶ್ವನಾಥ್
ಶಿವಾನಂದ ರಾಜೀನಾಮೆ ಸಲ್ಲಿಸಿರುವುದು ಕೇವಲ ನಾಟಕ ಮಾತ್ರ: ವಿಶ್ವನಾಥ್
ಡಿಎಂಕೆ ಸಂಸದ ರಾಜಾ ಭಾಷಣ ಮಾಡುವಾಗ ಬಿದ್ದ ಫೆಡ್​ಲೈಟ್ ಕಂಬ
ಡಿಎಂಕೆ ಸಂಸದ ರಾಜಾ ಭಾಷಣ ಮಾಡುವಾಗ ಬಿದ್ದ ಫೆಡ್​ಲೈಟ್ ಕಂಬ
ಉಗ್ರರಿಗೆ ಸಹಾಯ ಮಾಡಿದ್ದ ಇಮ್ತಿಯಾಜ್ ನದಿಗೆ ಹಾರಿ ಪ್ರಾಣ ಬಿಟ್ಟ
ಉಗ್ರರಿಗೆ ಸಹಾಯ ಮಾಡಿದ್ದ ಇಮ್ತಿಯಾಜ್ ನದಿಗೆ ಹಾರಿ ಪ್ರಾಣ ಬಿಟ್ಟ