AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹರ್ಷನಿಗೆ ಭುವಿ ಕಡೆಯಿಂದ ಸಿಗಲಿದೆ ಬಿಗ್​ ಸರ್​​ಪ್ರೈಸ್​​; ಟಿವಿ9ಗೆ ರಂಜನಿ ರಾಘವನ್ ಎಕ್ಸ್​ಕ್ಲೂಸಿವ್ ಮಾಹಿತಿ

ಸೋಮವಾರದ (ಜನವರಿ 31) ಎಪಿಸೋಡ್​ನಲ್ಲಿ ಹರ್ಷನಿಗೆ ಭುವಿ ಲವ್​ ಲೆಟರ್​ ಬರೆದಿದ್ದಾಳೆ. ಇದು ಆಕೆಯಿಂದ ಹರ್ಷನಿಗೆ ಬಂದ ಮೊದಲ ಪ್ರೇಮ ಬರಹ. ಈ ವಿಚಾರದಲ್ಲಿ ಆತ ಸಖತ್ ಖುಷಿಪಟ್ಟಿದ್ದಾನೆ. ಮುಂದಿನ ದಿನಗಳಲ್ಲಿ ಭುವಿ ಮತ್ತಷ್ಟು ಚೇಂಜ್​ ಆಗಲಿದ್ದಾಳೆ.

ಹರ್ಷನಿಗೆ ಭುವಿ ಕಡೆಯಿಂದ ಸಿಗಲಿದೆ ಬಿಗ್​ ಸರ್​​ಪ್ರೈಸ್​​; ಟಿವಿ9ಗೆ ರಂಜನಿ ರಾಘವನ್ ಎಕ್ಸ್​ಕ್ಲೂಸಿವ್ ಮಾಹಿತಿ
ರಂಜನಿ-ಕಿರಣ್​
TV9 Web
| Edited By: |

Updated on:Jan 31, 2022 | 5:48 PM

Share

ಕನ್ನಡತಿ ಧಾರಾವಾಹಿ (Kannadathi Serial) ಹೊಸಹೊಸ ತಿರುವುಗಳನ್ನು ಪಡೆದುಕೊಂಡು ಮುಂದೆ ಸಾಗುತ್ತಿದೆ. ಹರ್ಷ ಈಗಾಗಲೇ ಭುವಿಗೆ ಪ್ರೀತಿ ವ್ಯಕ್ತಪಡಿಸಿ ಆಗಿದೆ. ಭುವಿ ಇದನ್ನು ಒಪ್ಪಿಕೊಂಡಿದ್ದಾಳೆ. ಪ್ರೀತಿ ವಿಚಾರದಲ್ಲಿ ಹರ್ಷ ತುಂಬಾನೇ ಎಫರ್ಟ್​ ಹಾಕುತ್ತಿದ್ದಾನೆ. ಇದು ವೀಕ್ಷಕರಿಗೂ ಎದ್ದು ಕಾಣುತ್ತಿದೆ. ಭುವಿಯ ನಾಚಿಕೆ ಸ್ವಭಾವ ಇನ್ನೂ ಪೂರ್ತಿಯಾಗಿ ಹೋಗಿಲ್ಲ. ಆಕೆ, ವರುಧಿನಿಯ ಫ್ರೆಂಡ್​ಶಿಪ್​ಗೆ ಕೊಂಚ ಅಂಜುತ್ತಾಳೆ. ಆದರೆ, ದಿನ ಕಳೆದಂತೆ ಭುವಿ ನಿಧಾನವಾಗಿ ಬದಲಾಗುತ್ತಿದ್ದಾಳೆ. ಇದಕ್ಕೆ ಸಾಕ್ಷ್ಯ ಎಂಬಂತೆ ಆಕೆ ಹರ್ಷನಿಗೆ ಒಂದು ಲವ್​ ಲೆಟರ್​ ಬರೆದಿದ್ದಾಳೆ. ಮುಂದಿನ ದಿನಗಳಲ್ಲಿ ಒಂದು ದೊಡ್ಡ ಬದಲಾವಣೆ ಭುವಿಯ ಕಡೆಯಿಂದ ಆಗಲಿದೆಯಂತೆ. ಈ ಬಗ್ಗೆ ರಂಜನಿ ರಾಘವನ್ (Ranjani Raghavan)​ ಅವರು ಟಿವಿ9 ಕನ್ನಡದ ಜತೆಗೆ ಮಾಹಿತಿ ಹಂಚಿಕೊಂಡಿದ್ದಾರೆ.

ರಂಜನಿ ಅವರು ಭುವಿ ಪಾತ್ರವನ್ನು ಅದ್ಭುತವಾಗಿ ನಿರ್ವಹಿಸುತ್ತಿದ್ದಾರೆ. ಇದು ಎಲ್ಲರಿಗೂ ಇಷ್ಟವಾಗುತ್ತಿದೆ. ಇತ್ತೀಚೆಗೆ ಅವರಿಗೆ ಕೊವಿಡ್​ ಕಾಣಿಸಿಕೊಂಡಿತ್ತು. ಈ ಕಾರಣದಿಂದ ಅವರ ಪಾತ್ರ ಅಷ್ಟಾಗಿ ಪರದೆಮೇಲೆ ಬಂದಿರಲಿಲ್ಲ. ಆದರೆ, ಈಗ ಅವರು ಕೊವಿಡ್​ನಿಂದ ಗುಣಮುಖರಾಗಿದ್ದಾರೆ. ಈ ಕಾರಣಕ್ಕೆ ರಂಜನಿ ಆಗಿ ಮತ್ತೆ ಕಾಣಿಸಿಕೊಳ್ಳುತ್ತಿದ್ದಾರೆ. ಇದು ಅಭಿಮಾನಿಗಳಿಗೆ ಖುಷಿ ನೀಡಿದೆ.

ಸೋಮವಾರದ (ಜನವರಿ 31) ಎಪಿಸೋಡ್​ನಲ್ಲಿ ಹರ್ಷನಿಗೆ ಭುವಿ ಲವ್​ ಲೆಟರ್​ ಬರೆದಿದ್ದಾಳೆ. ಇದು ಆಕೆಯಿಂದ ಹರ್ಷನಿಗೆ ಬಂದ ಮೊದಲ ಪ್ರೇಮ ಬರಹ. ಈ ವಿಚಾರದಲ್ಲಿ ಆತ ಸಖತ್ ಖುಷಿಪಟ್ಟಿದ್ದಾನೆ. ಮುಂದಿನ ದಿನಗಳಲ್ಲಿ ಭುವಿ ಮತ್ತಷ್ಟು ಚೇಂಜ್​ ಆಗಲಿದ್ದಾಳೆ! ಈ ವಿಚಾರವನ್ನು ಸ್ವತಃ ಭುವಿ ಪಾತ್ರ ಮಾಡಿರುವ ರಂಜನಿ ರಾಘವನ್​ ಹೇಳಿಕೊಂಡಿದ್ದಾರೆ.

ಭುವಿಗೆ ಅದ್ದೂರಿಯಾಗಿ ಪ್ರಪೋಸ್​ ಮಾಡಿದ್ದು ಹರ್ಷ. ಆ ಬಳಿಕ ಭುವಿಯ ಮನ ಒಲಿಸಲು ಆತ ಸಾಕಷ್ಟು ಕಷ್ಟಪಟ್ಟಿದ್ದಾನೆ. ಆದರೆ, ಭುವಿ ನಾಚಿಕೆ ಸ್ವಭಾವದವಳು. ಹೀಗಾಗಿ, ಅವಳು ಅಷ್ಟಾಗಿ ಓಪನ್​ಅಪ್​ ಆಗಿಲ್ಲ. ಇದು ವೀಕ್ಷಕರ ಗಮನಕ್ಕೂ ಬಂದಿದೆ. ಆದರೆ, ಮುಂದಿನ ದಿನಗಳಲ್ಲಿ ಆ ರೀತಿ ಇರುವುದಿಲ್ಲವಂತೆ. ಹಾಗಾದರೆ, ಭುವಿ ಮುಂದೆ ಏನು ಮಾಡುತ್ತಾಳೆ? ಆ ಪ್ರಶ್ನೆಗೆ ಇಲ್ಲಿದೆ ಉತ್ತರ.

‘ಪ್ರೀತಿ ಹೇಳಿಕೊಳ್ಳುವುದರಲ್ಲಿರಬಹುದು ಅಥವಾ ಎಲ್ಲಾದರೂ ಕರೆದುಕೊಂಡು ಹೋಗುವುದರಲ್ಲಿರಬಹುದು, ಹರ್ಷನೇ ತುಂಬಾ ಎಫರ್ಟ್​ ಹಾಕುತ್ತಿದ್ದ. ಆದರೆ, ಭುವಿ ತನ್ನ ವ್ಯಕ್ತಿತ್ವವನ್ನು ಬದಲಾವಣೆ ಮಾಡಿಕೊಂಡು, ಹರ್ಷನನ್ನು ಕರೆದುಕೊಂಡು ಒಂದಷ್ಟು ಪ್ಲ್ಯಾನಿಂಗ್​ ಮಾಡಿದ್ದಾಳೆ. ಅದೇನು ಎಂಬುದನ್ನು ಧಾರಾವಾಹಿಯಲ್ಲಿ ನೋಡಿ’ ಎಂದಿದ್ದಾರೆ ರಂಜನಿ ರಾಘವನ್​.

ಇದನ್ನೂ ಓದಿ: ‘ಕನ್ನಡತಿ’ ನಟಿ ರಂಜನಿ ರಾಘವನ್​ ಬಳಿ ಎಷ್ಟು ದುಡ್ಡಿದೆ? ಅಚ್ಚರಿಯ ವಿಚಾರ ಬಾಯ್ಬಿಟ್ಟ ಭುವಿ

‘ಪುಟ್ಟಗೌರಿ ಮದುವೆ’ ಬಗ್ಗೆ ಪುನೀತ್​ ಮಾತಾಡಿದ್ದರು; ಆ ದಿನಗಳನ್ನು ನೆನಪಿಸಿಕೊಂಡ ನಟಿ ರಂಜನಿ ರಾಘವನ್​

Published On - 5:16 pm, Mon, 31 January 22

ಗಿಲ್ಲಿ ನನಗೆ ಹೊಡೆದಾಗ ಖುಷಿ ಆಗುತ್ತಿತ್ತು, ಎಂಜಾಯ್ ಮಾಡಿದೆ: ರಕ್ಷಿತಾ
ಗಿಲ್ಲಿ ನನಗೆ ಹೊಡೆದಾಗ ಖುಷಿ ಆಗುತ್ತಿತ್ತು, ಎಂಜಾಯ್ ಮಾಡಿದೆ: ರಕ್ಷಿತಾ
ಆಕಸ್ಮಿಕ ಬೆಂಕಿಗೆ ಹೊತ್ತಿ ಉರಿದ ಶಂಕಿತ ಬಾಂಗ್ಲಾ ವಲಸಿಗರ ಶೆಡ್​ಗಳು
ಆಕಸ್ಮಿಕ ಬೆಂಕಿಗೆ ಹೊತ್ತಿ ಉರಿದ ಶಂಕಿತ ಬಾಂಗ್ಲಾ ವಲಸಿಗರ ಶೆಡ್​ಗಳು
ಬಿಗ್​​ಬಾಸ್​​ಗೆ ಹೋಗಿದ್ದು ಏಕೆ? ಕಾವ್ಯಾ ಕೊಟ್ಟರು ಕಾರಣ
ಬಿಗ್​​ಬಾಸ್​​ಗೆ ಹೋಗಿದ್ದು ಏಕೆ? ಕಾವ್ಯಾ ಕೊಟ್ಟರು ಕಾರಣ
ಬಿಗ್​​ಬಾಸ್ ಬಳಿಕ ರಕ್ಷಿತಾ ಶೆಟ್ಟಿಯ ಮುಂದಿನ ಯೋಜನೆಗಳೇನು?
ಬಿಗ್​​ಬಾಸ್ ಬಳಿಕ ರಕ್ಷಿತಾ ಶೆಟ್ಟಿಯ ಮುಂದಿನ ಯೋಜನೆಗಳೇನು?
ಶಾಲಾ ಬಾಲಕಿಯನ್ನು ಹಿಂಬಾಲಿಸಿ ಮನೆ ಬಾಗಿಲಿಗೆ ಬಂದ ಆಗಂತುಕ!
ಶಾಲಾ ಬಾಲಕಿಯನ್ನು ಹಿಂಬಾಲಿಸಿ ಮನೆ ಬಾಗಿಲಿಗೆ ಬಂದ ಆಗಂತುಕ!
ಗಿಲ್ಲಿ ಬಗ್ಗೆ ಜನರಿಗೆ ಇರುವ ಕ್ರೇಜ್ ನೋಡಿ ಫಸ್ಟ್ ರಿಯಾಕ್ಷನ್ ಕೊಟ್ಟ ಕಾವ್ಯಾ
ಗಿಲ್ಲಿ ಬಗ್ಗೆ ಜನರಿಗೆ ಇರುವ ಕ್ರೇಜ್ ನೋಡಿ ಫಸ್ಟ್ ರಿಯಾಕ್ಷನ್ ಕೊಟ್ಟ ಕಾವ್ಯಾ
ಅಧಿಕಾರ ಬಿಟ್ಟಕೊಡಿ ಎಂದು ಕೇಳೋದು ಕಷ್ಟ: ಸಿಎಂಗೆ ಟಾಂಗ್ ಕೊಟ್ರಾ ಡಿಕೆಸು!
ಅಧಿಕಾರ ಬಿಟ್ಟಕೊಡಿ ಎಂದು ಕೇಳೋದು ಕಷ್ಟ: ಸಿಎಂಗೆ ಟಾಂಗ್ ಕೊಟ್ರಾ ಡಿಕೆಸು!
ನಿತಿನ್ ನಬಿನ್ ನನ್ನ ಬಾಸ್, ನಾನು ಕೇವಲ ಪಕ್ಷದ ಕಾರ್ಯಕರ್ತ: ಪ್ರಧಾನಿ ಮೋದಿ
ನಿತಿನ್ ನಬಿನ್ ನನ್ನ ಬಾಸ್, ನಾನು ಕೇವಲ ಪಕ್ಷದ ಕಾರ್ಯಕರ್ತ: ಪ್ರಧಾನಿ ಮೋದಿ
ಲಕ್ಕುಂಡಿ: ಉತ್ಖನನ ವೇಳೆ ಮನೆಯೊಂದರಲ್ಲಿ ಪುರಾತನ ದೇವಸ್ಥಾನ ಪತ್ತೆ!
ಲಕ್ಕುಂಡಿ: ಉತ್ಖನನ ವೇಳೆ ಮನೆಯೊಂದರಲ್ಲಿ ಪುರಾತನ ದೇವಸ್ಥಾನ ಪತ್ತೆ!
ಶ್ರೀಕೃಷ್ಣಮಠದಲ್ಲಿ ವಸ್ತ್ರಸಂಹಿತೆ ಜಾರಿ: ಇಲ್ಲಿದೆ ಭಕ್ತರಿಗೆ ಕೆಲ ಸೂಚನೆ
ಶ್ರೀಕೃಷ್ಣಮಠದಲ್ಲಿ ವಸ್ತ್ರಸಂಹಿತೆ ಜಾರಿ: ಇಲ್ಲಿದೆ ಭಕ್ತರಿಗೆ ಕೆಲ ಸೂಚನೆ