AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Kiran Raj: ಕಿರುತೆರೆಗೆ ‘ಕನ್ನಡತಿ’ ಕಿರಣ್ ರಾಜ್ ಕಂಬ್ಯಾಕ್​; ಯಾವ ಧಾರಾವಾಹಿ?

ಕಿರಣ್ ರಾಜ್ ಅವರ ನಟನೆಯ ‘ಕನ್ನಡತಿ’ ಧಾರಾವಾಹಿ ಪೂರ್ಣಗೊಂಡಿದೆ. ಅವರು ಸಂಪೂರ್ಣವಾಗಿ ಹಿರಿತೆರೆಯಲ್ಲಿ ಬ್ಯುಸಿ ಆಗಲು ನಿರ್ಧರಿಸಿದ್ದಾರೆ. ಹೀಗಿರುವಾಗಲೇ ಅವರಿಗೆ ಕಿರುತೆರೆ ಆಫರ್ ಬಂದಿದೆ.

Kiran Raj: ಕಿರುತೆರೆಗೆ ‘ಕನ್ನಡತಿ’ ಕಿರಣ್ ರಾಜ್ ಕಂಬ್ಯಾಕ್​; ಯಾವ ಧಾರಾವಾಹಿ?
ಕಿರಣ್ ರಾಜ್
ರಾಜೇಶ್ ದುಗ್ಗುಮನೆ
|

Updated on: May 17, 2023 | 11:32 AM

Share

ನಟ ಕಿರಣ್ ರಾಜ್ (Kiran Raj) ಅವರು ‘ಕನ್ನಡತಿ’ ಧಾರಾವಾಹಿ ಮೂಲಕ ಹೆಚ್ಚು ಜನಪ್ರಿಯತೆ ಪಡೆದರು. ಅವರು ಸದ್ಯ ಹಿರಿತೆರೆಯಲ್ಲಿ ಬ್ಯುಸಿ ಆಗಿದ್ದಾರೆ. ಹಲವು ಸಿನಿಮಾ ಒಪ್ಪಿಕೊಂಡು ಅವರು ನಟಿಸುತ್ತಿದ್ದಾರೆ. ಹೀಗಿರುವಾಗಲೇ ಅವರು ಮತ್ತೆ ಕಿರುತೆರೆಗೆ ಕಂಬ್ಯಾಕ್ ಮಾಡಿದ್ದಾರೆ. ಹಾಗಂತ ಅವರು ಹೀರೋ ಆಗಿ ಧಾರಾವಾಹಿಯಲ್ಲಿ ನಟಿಸುತ್ತಿಲ್ಲ. ಬದಲಿಗೆ ಕಲರ್ಸ್ ಕನ್ನಡದಲ್ಲಿ ಪ್ರಸಾರ ಆಗುತ್ತಿರುವ ‘ತ್ರಿಪುರ ಸುಂದರಿ’ (Tripura Sundari) ಧಾರಾವಾಹಿಯಲ್ಲಿ ಅವರು ಅತಿಥಿ ಪಾತ್ರ ಮಾಡುತ್ತಿದ್ದಾರೆ. ಈ ವಿಚಾರ ಕೇಳಿ ಅಭಿಮಾನಿಗಳು ಖುಷಿಪಟ್ಟಿದ್ದಾರೆ.

ಕಿರಣ್ ರಾಜ್ ಅವರ ನಟನೆಯ ‘ಕನ್ನಡತಿ’ ಧಾರಾವಾಹಿ ಪೂರ್ಣಗೊಂಡಿದೆ. ಅವರು ಸಂಪೂರ್ಣವಾಗಿ ಹಿರಿತೆರೆಯಲ್ಲಿ ಬ್ಯುಸಿ ಆಗಲು ನಿರ್ಧರಿಸಿದ್ದಾರೆ. ಹೀಗಿರುವಾಗಲೇ ಅವರಿಗೆ ಅತಿಥಿ ಪಾತ್ರದ ಆಫರ್ ಬಂದಿದ್ದು, ಖುಷಿಯಿಂದ ಒಪ್ಪಿ ನಟಿಸಿದ್ದಾರೆ. ಈ ಎಪಿಸೋಡ್ ಶೀಘ್ರವೇ ಪ್ರಸಾರ ಕಾಣಲಿದೆ. ಅದಕ್ಕೂ ಮೊದಲು ಇದರ ಪ್ರೋಮೋ ರಿಲೀಸ್ ಮಾಡಲಾಗಿದೆ.

ರಾಜಕುಮಾರನ (ಅಭಿನವ್ ವಿಶ್ವನಾಥನ್​) ಹುಡುಕಿಕೊಂಡು ಗಂಧರ್ವ ಕನ್ಯೆ ಆಮೃಪಾಲಿ (ದಿವ್ಯಾ ಸುರೇಶ್) ಭೂಲೋಕಕ್ಕೆ ಬಂದಿದ್ದಾಳೆ. ರಾಜಕುಮಾರನ ಹುಡುಕಲು ಇರುವ ಏಕೈಕ ಮಾರ್ಗ ಎಂದರೆ ಅವಳ ಬಳಿ ಇರುವ ಪದಕ ಆಗಿತ್ತು. ಆದರೆ, ಈ ಪದಕವನ್ನು ಕದಿಯಲಾಗಿದೆ. ಈ ಪದಕವನ್ನು ಹುಡುಕಲು ಆಮೃಪಾಲಿ ಕಷ್ಟಪಡುತ್ತಿದ್ದಾಳೆ. ಇವಳಿಗೆ ಸಹಾಯ ಮಾಡುವ ಪಾತ್ರದಲ್ಲಿ ಕಿರಣ್ ರಾಜ್ ಬರಲಿದ್ದಾರೆ.

ಈಗಾಗಲೇ ‘ಮಿಥುನ ರಾಶಿ’ ಧಾರಾವಾಹಿಯ ರಾಶಿ ಹಾಗೂ ‘ಕೆಂಡಸಂಪಿಗೆ’ ಧಾರಾವಾಹಿಯ ಸುಮನಾ ‘ತ್ರಿಪುರ ಸುಂದರಿ’ ಧಾರಾವಾಹಿಯಲ್ಲಿ ಅತಿಥಿ ಪಾತ್ರ ಮಾಡಿದ್ದರು. ಈಗ ಕಿರಣ್ ರಾಜ್ ಸರದಿ. ಈ ಬಗ್ಗೆ ಕಲರ್ಸ್ ಕನ್ನಡ ವಾಹಿನಿ ಪ್ರೋಮೋ ಹಂಚಿಕೊಂಡಿದೆ. ಇದು ಅಭಿಮಾನಿಗಳ ಖುಷಿ ಹೆಚ್ಚಿಸಿದೆ.

ಇದನ್ನೂ ಓದಿ: ‘ಬಾಡಿಗಿಂತ, ಮಾನಸಿಕ ಟ್ರಾನ್ಸ್​ಫಾರ್ಮೇಷನ್ ಮುಖ್ಯ’; ರಗಡ್ ‘ರಾನಿ’ ಲುಕ್ ಬಗ್ಗೆ ಕಿರಣ್ ರಾಜ್ ಮಾತು

‘ರಾನಿ’ ಚಿತ್ರದ ಮೂಲಕ ಹಳೆಯ ಪಾತ್ರಗಳನ್ನು ಮರೆಸಲು ಕಿರಣ್ ರಾಜ್ ರೆಡಿ ಆಗಿದ್ದಾರೆ. ಈ ಚಿತ್ರದಲ್ಲಿ ಅವರು ಸಖತ್ ಮಾಸ್ ಅವತಾರ ತಾಳಿದ್ದಾರೆ. ಯುಗಾದಿ ಹಬ್ಬದ ಪ್ರಯುಕ್ತ ‘ರಾನಿ’ ಚಿತ್ರದ ಹೊಸ ಪೋಸ್ಟರ್ ರಿವೀಲ್ ಆಗಿತ್ತು. ಕಿರಣ್ ರಾಜ್ ಅವರ ಲುಕ್ ನೋಡಿ ಫ್ಯಾನ್ಸ್ ಕಣ್ಣರಳಿಸಿದ್ದರು. ಈ ಮೊದಲು ‘ಬಡ್ಡೀಸ್’ ಚಿತ್ರದಲ್ಲಿ ಕಿರಣ್ ರಾಜ್ ನಟಿಸಿದ್ದರು. ಈ ಸಿನಿಮಾ ನಿರ್ದೇಶನ ಮಾಡಿದ್ದು ಗುರುತೇಜ್ ಶೆಟ್ಟಿ. ಈಗ ‘ರಾನಿ’ ಚಿತ್ರಕ್ಕಾಗಿ ಕಿರಣ್ ರಾಜ್ ಹಾಗೂ ಗುರುತೇಜ್ ಮತ್ತೆ ಒಂದಾಗಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow Us
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ