AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Kiran Raj: ಒಂದೊಳ್ಳೆಯ ಕೆಲಸ ಮಾಡಿ ಕ್ರಿಸ್​ಮಸ್​ ಆಚರಿಸಿದ ನಟ ಕಿರಣ್​ ರಾಜ್​

ಕೆಲ ವರ್ಷಗಳ ಹಿಂದೆ ‘ಕಿರಣ್​ ರಾಜ್​ ಫೌಂಡೇಷನ್’ ಸ್ಥಾಪಿಸಿ ಸಾಕಷ್ಟು ಜನರ ನೋವಿಗೆ ಸ್ಪಂದಿಸಿದ್ದಾರೆ ಕಿರಣ್​ ರಾಜ್​. ಅನಾಥಾಶ್ರಮದ ಮಕ್ಕಳಿಗೆ ಊಟ, ಕಷ್ಟ ಎಂದು ಬಂದವರಿಗೆ ಸಹಾಯ ಮಾಡಿದ್ದಾರೆ.

Kiran Raj: ಒಂದೊಳ್ಳೆಯ ಕೆಲಸ ಮಾಡಿ ಕ್ರಿಸ್​ಮಸ್​ ಆಚರಿಸಿದ ನಟ ಕಿರಣ್​ ರಾಜ್​
ಕಿರಣ್​ ರಾಜ್
TV9 Web
| Edited By: |

Updated on:Dec 26, 2021 | 11:11 PM

Share

ಕಿರಣ್​ ರಾಜ್​​ (Kiran Raj) ಅವರು ಕೇವಲ ನಟನೆಯನ್ನು ಮಾತ್ರ ಮಾಡುತ್ತಿಲ್ಲ. ಇದರ ಜತೆಜತೆಗೆ ಸಾಮಾಜಿಕ ಕೆಲಸಗಳಲ್ಲೂ ಗುರುತಿಸಿಕೊಂಡಿದ್ದಾರೆ. ತಮ್ಮ ಆದಾಯದ ಒಂದಷ್ಟು ಭಾಗವನ್ನು ಅವರು ಕಷ್ಟದಲ್ಲಿರುವವರ ಸಹಾಯಕ್ಕೆ ತೆಗೆದಿಟ್ಟಿದ್ದಾರೆ. ಪ್ರತಿ ವಿಶೇಷ ಸಂದರ್ಭದಲ್ಲೂ ಅವರು ಸಾಮಾಜಿಕ ಕೆಲಸ ಮಾಡುತ್ತಾರೆ. ಈಗ ಕ್ರಿಸ್​ಮಸ್​ಅನ್ನು ಅವರು ಭಿನ್ನವಾಗಿ ಆಚರಿಸಿದ್ದಾರೆ. ಅವರ ಈ ಕೆಲಸಕ್ಕೆ ಎಲ್ಲ ಕಡೆಗಳಲ್ಲೂ ಮೆಚ್ಚುಗೆ ವ್ಯಕ್ತವಾಗುತ್ತಿದೆ.

ಕೆಲ ವರ್ಷಗಳ ಹಿಂದೆ ‘ಕಿರಣ್​ ರಾಜ್​ ಫೌಂಡೇಷನ್’ ಸ್ಥಾಪಿಸಿ ಸಾಕಷ್ಟು ಜನರ ನೋವಿಗೆ ಸ್ಪಂದಿಸಿದ್ದಾರೆ ಕಿರಣ್​ ರಾಜ್​. ಅನಾಥಾಶ್ರಮದ ಮಕ್ಕಳಿಗೆ ಊಟ, ಕಷ್ಟ ಎಂದು ಬಂದವರಿಗೆ ಸಹಾಯ ಮಾಡಿದ್ದಾರೆ. ಕಿರಣ್​ ರಾಜ್​ ತಮ್ಮ ಒಟ್ಟೂ ಆದಾಯದಲ್ಲಿ ಶೇ.40ರಷ್ಟು ಗಳಿಕೆಯನ್ನು ಕಷ್ಟದಲ್ಲಿರುವವರ ಸಹಾಯಕ್ಕೆ ಬಳಕೆ ಮಾಡಿಕೊಳ್ಳುತ್ತಿದ್ದಾರೆ. ಇದಲ್ಲದೆ, ಕೊವಿಡ್​ ಸಂದರ್ಭದಲ್ಲಿ ಸಾಕಷ್ಟು ಜನರಿಗೆ ಸಹಾಯ ಮಾಡಿದ್ದಾರೆ. ಈ ವರ್ಷದ ಅವರ ಕ್ರಿಸ್​ಮಸ್​ ಆಚರಣೆ ಭಿನ್ನವಾಗಿದೆ.

ಕಿರಣ್​ ರಾಜ್​ ಅವರು ಹಿಂದುಳಿದ ಮಕ್ಕಳಿಗೆ ಹಾಗೂ ಅಗತ್ಯವಿರುವ ಮಕ್ಕಳಿಗೆ ನೋಟ್​ಬುಕ್​ ವಿತರಣೆ ಮಾಡಿದ್ದಾರೆ. ಸುಮಾರು 250 ಮಕ್ಕಳಿಗೆ ಅವರು ನೋಟ್​ಬುಕ್​ ವಿತರಿಸಿದ್ದಾರೆ. ಈ ಮೂಲಕ ಸಾಕಷ್ಟು ಮಕ್ಕಳಿಗೆ ಸಹಾಯ ಮಾಡುವ ಕೆಲಸ ಮಾಡಿದ್ದಾರೆ. ಇದನ್ನು ಅವರ ಅಭಿಮಾನಿ ಬಳಗದವರು ಹಂಚಿಕೊಂಡು ಮೆಚ್ಚುಗೆ ಸೂಚಿಸುತ್ತಿದ್ದಾರೆ. ಬೀದಿ ಬದಿಯಲ್ಲಿ ಮಲಗುವ ಅನೇಕರಿಗೆ ಇತ್ತೀಚೆಗೆ ಹೊದಿಕೆ ನೀಡುವ ಕೆಲಸವನ್ನು ಕಿರಣ್​ ರಾಜ್​ ಮಾಡಿದ್ದರು.

ಕಿರಣ್​ ರಾಜ್​ ನಟನೆಯ ‘ಕನ್ನಡತಿ’ ಧಾರಾವಾಹಿ ಮಹತ್ವದ ಘಟ್ಟ ತಲುಪಿದೆ. ಹಲವು ತಿರುವುಗಳನ್ನು ಪಡೆದುಕೊಂಡು ಈ ಧಾರಾವಾಹಿ ಸಾಗುತ್ತಿದೆ. ಈಗಾಗಲೇ ಹರ್ಷ (ಕಿರಣ್​ ರಾಜ್​) ಭುವಿಗೆ (ರಂಜನಿ ರಾಘವನ್​) ತಮ್ಮ ಪ್ರೀತಿಯನ್ನು ವ್ಯಕ್ತಪಡಿಸಿದ್ದಾರೆ. ಈ ಪ್ರೀತಿಯನ್ನು ಭುವಿ ಒಪ್ಪಿಕೊಳ್ಳುತ್ತಾರೋ ಅಥವಾ ಇಲ್ಲವೋ ಎನ್ನುವ ಕುತೂಹಲ ಮೂಡಿದೆ. ಇದರ ಜತೆಗೆ ಕಿರಣ್​ ರಾಜ್​ ಸಿನಿಮಾ ಕೆಲಸಗಳಲ್ಲೂ ಬ್ಯುಸಿ ಆಗಿದ್ದಾರೆ. ಕೆಲವು ಚಿತ್ರಗಳ ಕೆಲಸಗಳಲ್ಲಿ ಅವರು ತೊಡಗಿಕೊಂಡಿದ್ದಾರೆ.

ಇದನ್ನೂ ಓದಿ: ‘ಕನ್ನಡತಿ’ ಸಾನಿಯಾ ಪಾತ್ರದಿಂದ ಹೊರ ಬಂದ ರಮೋಲಾ; ಇದಕ್ಕಿದೆ ಮಹತ್ವದ ಕಾರಣ

ಜನ ಮೆಚ್ಚಿಕೊಂಡ ‘ಕನ್ನಡತಿ’ ಜೋಡಿಗೆ ಸಿಕ್ತು ಅವಾರ್ಡ್​; ಸಂಭ್ರಮಿಸಿದ ಕಿರಣ್​ ರಾಜ್​, ರಂಜನಿ ರಾಘವನ್​

Published On - 9:11 pm, Sun, 26 December 21

ಸಿಕ್ಕ ಸಿಕ್ಕ ಜಾನುವಾರುಗಳನ್ನು ತಿಂದು ತೇಗಿದ ಚಿರತೆ ಬೋನಿಗೆ ಬಿತ್ತು
ಸಿಕ್ಕ ಸಿಕ್ಕ ಜಾನುವಾರುಗಳನ್ನು ತಿಂದು ತೇಗಿದ ಚಿರತೆ ಬೋನಿಗೆ ಬಿತ್ತು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ