AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Kiran Raj: ಒಂದೊಳ್ಳೆಯ ಕೆಲಸ ಮಾಡಿ ಕ್ರಿಸ್​ಮಸ್​ ಆಚರಿಸಿದ ನಟ ಕಿರಣ್​ ರಾಜ್​

ಕೆಲ ವರ್ಷಗಳ ಹಿಂದೆ ‘ಕಿರಣ್​ ರಾಜ್​ ಫೌಂಡೇಷನ್’ ಸ್ಥಾಪಿಸಿ ಸಾಕಷ್ಟು ಜನರ ನೋವಿಗೆ ಸ್ಪಂದಿಸಿದ್ದಾರೆ ಕಿರಣ್​ ರಾಜ್​. ಅನಾಥಾಶ್ರಮದ ಮಕ್ಕಳಿಗೆ ಊಟ, ಕಷ್ಟ ಎಂದು ಬಂದವರಿಗೆ ಸಹಾಯ ಮಾಡಿದ್ದಾರೆ.

Kiran Raj: ಒಂದೊಳ್ಳೆಯ ಕೆಲಸ ಮಾಡಿ ಕ್ರಿಸ್​ಮಸ್​ ಆಚರಿಸಿದ ನಟ ಕಿರಣ್​ ರಾಜ್​
ಕಿರಣ್​ ರಾಜ್
TV9 Web
| Edited By: |

Updated on:Dec 26, 2021 | 11:11 PM

Share

ಕಿರಣ್​ ರಾಜ್​​ (Kiran Raj) ಅವರು ಕೇವಲ ನಟನೆಯನ್ನು ಮಾತ್ರ ಮಾಡುತ್ತಿಲ್ಲ. ಇದರ ಜತೆಜತೆಗೆ ಸಾಮಾಜಿಕ ಕೆಲಸಗಳಲ್ಲೂ ಗುರುತಿಸಿಕೊಂಡಿದ್ದಾರೆ. ತಮ್ಮ ಆದಾಯದ ಒಂದಷ್ಟು ಭಾಗವನ್ನು ಅವರು ಕಷ್ಟದಲ್ಲಿರುವವರ ಸಹಾಯಕ್ಕೆ ತೆಗೆದಿಟ್ಟಿದ್ದಾರೆ. ಪ್ರತಿ ವಿಶೇಷ ಸಂದರ್ಭದಲ್ಲೂ ಅವರು ಸಾಮಾಜಿಕ ಕೆಲಸ ಮಾಡುತ್ತಾರೆ. ಈಗ ಕ್ರಿಸ್​ಮಸ್​ಅನ್ನು ಅವರು ಭಿನ್ನವಾಗಿ ಆಚರಿಸಿದ್ದಾರೆ. ಅವರ ಈ ಕೆಲಸಕ್ಕೆ ಎಲ್ಲ ಕಡೆಗಳಲ್ಲೂ ಮೆಚ್ಚುಗೆ ವ್ಯಕ್ತವಾಗುತ್ತಿದೆ.

ಕೆಲ ವರ್ಷಗಳ ಹಿಂದೆ ‘ಕಿರಣ್​ ರಾಜ್​ ಫೌಂಡೇಷನ್’ ಸ್ಥಾಪಿಸಿ ಸಾಕಷ್ಟು ಜನರ ನೋವಿಗೆ ಸ್ಪಂದಿಸಿದ್ದಾರೆ ಕಿರಣ್​ ರಾಜ್​. ಅನಾಥಾಶ್ರಮದ ಮಕ್ಕಳಿಗೆ ಊಟ, ಕಷ್ಟ ಎಂದು ಬಂದವರಿಗೆ ಸಹಾಯ ಮಾಡಿದ್ದಾರೆ. ಕಿರಣ್​ ರಾಜ್​ ತಮ್ಮ ಒಟ್ಟೂ ಆದಾಯದಲ್ಲಿ ಶೇ.40ರಷ್ಟು ಗಳಿಕೆಯನ್ನು ಕಷ್ಟದಲ್ಲಿರುವವರ ಸಹಾಯಕ್ಕೆ ಬಳಕೆ ಮಾಡಿಕೊಳ್ಳುತ್ತಿದ್ದಾರೆ. ಇದಲ್ಲದೆ, ಕೊವಿಡ್​ ಸಂದರ್ಭದಲ್ಲಿ ಸಾಕಷ್ಟು ಜನರಿಗೆ ಸಹಾಯ ಮಾಡಿದ್ದಾರೆ. ಈ ವರ್ಷದ ಅವರ ಕ್ರಿಸ್​ಮಸ್​ ಆಚರಣೆ ಭಿನ್ನವಾಗಿದೆ.

ಕಿರಣ್​ ರಾಜ್​ ಅವರು ಹಿಂದುಳಿದ ಮಕ್ಕಳಿಗೆ ಹಾಗೂ ಅಗತ್ಯವಿರುವ ಮಕ್ಕಳಿಗೆ ನೋಟ್​ಬುಕ್​ ವಿತರಣೆ ಮಾಡಿದ್ದಾರೆ. ಸುಮಾರು 250 ಮಕ್ಕಳಿಗೆ ಅವರು ನೋಟ್​ಬುಕ್​ ವಿತರಿಸಿದ್ದಾರೆ. ಈ ಮೂಲಕ ಸಾಕಷ್ಟು ಮಕ್ಕಳಿಗೆ ಸಹಾಯ ಮಾಡುವ ಕೆಲಸ ಮಾಡಿದ್ದಾರೆ. ಇದನ್ನು ಅವರ ಅಭಿಮಾನಿ ಬಳಗದವರು ಹಂಚಿಕೊಂಡು ಮೆಚ್ಚುಗೆ ಸೂಚಿಸುತ್ತಿದ್ದಾರೆ. ಬೀದಿ ಬದಿಯಲ್ಲಿ ಮಲಗುವ ಅನೇಕರಿಗೆ ಇತ್ತೀಚೆಗೆ ಹೊದಿಕೆ ನೀಡುವ ಕೆಲಸವನ್ನು ಕಿರಣ್​ ರಾಜ್​ ಮಾಡಿದ್ದರು.

ಕಿರಣ್​ ರಾಜ್​ ನಟನೆಯ ‘ಕನ್ನಡತಿ’ ಧಾರಾವಾಹಿ ಮಹತ್ವದ ಘಟ್ಟ ತಲುಪಿದೆ. ಹಲವು ತಿರುವುಗಳನ್ನು ಪಡೆದುಕೊಂಡು ಈ ಧಾರಾವಾಹಿ ಸಾಗುತ್ತಿದೆ. ಈಗಾಗಲೇ ಹರ್ಷ (ಕಿರಣ್​ ರಾಜ್​) ಭುವಿಗೆ (ರಂಜನಿ ರಾಘವನ್​) ತಮ್ಮ ಪ್ರೀತಿಯನ್ನು ವ್ಯಕ್ತಪಡಿಸಿದ್ದಾರೆ. ಈ ಪ್ರೀತಿಯನ್ನು ಭುವಿ ಒಪ್ಪಿಕೊಳ್ಳುತ್ತಾರೋ ಅಥವಾ ಇಲ್ಲವೋ ಎನ್ನುವ ಕುತೂಹಲ ಮೂಡಿದೆ. ಇದರ ಜತೆಗೆ ಕಿರಣ್​ ರಾಜ್​ ಸಿನಿಮಾ ಕೆಲಸಗಳಲ್ಲೂ ಬ್ಯುಸಿ ಆಗಿದ್ದಾರೆ. ಕೆಲವು ಚಿತ್ರಗಳ ಕೆಲಸಗಳಲ್ಲಿ ಅವರು ತೊಡಗಿಕೊಂಡಿದ್ದಾರೆ.

ಇದನ್ನೂ ಓದಿ: ‘ಕನ್ನಡತಿ’ ಸಾನಿಯಾ ಪಾತ್ರದಿಂದ ಹೊರ ಬಂದ ರಮೋಲಾ; ಇದಕ್ಕಿದೆ ಮಹತ್ವದ ಕಾರಣ

ಜನ ಮೆಚ್ಚಿಕೊಂಡ ‘ಕನ್ನಡತಿ’ ಜೋಡಿಗೆ ಸಿಕ್ತು ಅವಾರ್ಡ್​; ಸಂಭ್ರಮಿಸಿದ ಕಿರಣ್​ ರಾಜ್​, ರಂಜನಿ ರಾಘವನ್​

Published On - 9:11 pm, Sun, 26 December 21

Follow Us
ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ಐದನೇ ಬಾರಿ ಚಿರತೆ ಪ್ರತ್ಯಕ್ಷ!
ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ಐದನೇ ಬಾರಿ ಚಿರತೆ ಪ್ರತ್ಯಕ್ಷ!
ತಾಯಿ ನಮ್ಮನ್ನಗಲಿದ್ದಾರೆ ಎನ್ನುವುದು ನೆನಸಿಕೊಳ್ಳಲಿಕ್ಕೂ ಸಾಧ್ಯವಿಲ್ಲ: hdk
ತಾಯಿ ನಮ್ಮನ್ನಗಲಿದ್ದಾರೆ ಎನ್ನುವುದು ನೆನಸಿಕೊಳ್ಳಲಿಕ್ಕೂ ಸಾಧ್ಯವಿಲ್ಲ: hdk
37 ಟಿಎಂಸಿ ಸಾಮರ್ಥ್ಯದ ಹೇಮಾವತಿಯಲ್ಲಿ ಉಳಿದಿದ್ದು ಕೇವಲ 24 ಟಿಎಂಸಿ
37 ಟಿಎಂಸಿ ಸಾಮರ್ಥ್ಯದ ಹೇಮಾವತಿಯಲ್ಲಿ ಉಳಿದಿದ್ದು ಕೇವಲ 24 ಟಿಎಂಸಿ
ಕಾವೇರಿ ಜಲ ವಿವಾದ: ಸಂಕಷ್ಟ ಸೂತ್ರ ಪಾಲಿಸುವಂತೆ CWRC ಸಲಹೆ
ಕಾವೇರಿ ಜಲ ವಿವಾದ: ಸಂಕಷ್ಟ ಸೂತ್ರ ಪಾಲಿಸುವಂತೆ CWRC ಸಲಹೆ
ಭೋಪಾಲ್‌ನಲ್ಲಿ ಹಿಂಸಾಚಾರಕ್ಕೆ ತಿರುಗಿದ ರೈತರ ಪ್ರತಿಭಟನೆ
ಭೋಪಾಲ್‌ನಲ್ಲಿ ಹಿಂಸಾಚಾರಕ್ಕೆ ತಿರುಗಿದ ರೈತರ ಪ್ರತಿಭಟನೆ
ಕುತೂಹಲಕಾರಿ ಘಟ್ಟ ತಲುಪಿದ ಸಂಪುಟ ವಿಸ್ತರಣೆ ಕಸರತ್ತು
ಕುತೂಹಲಕಾರಿ ಘಟ್ಟ ತಲುಪಿದ ಸಂಪುಟ ವಿಸ್ತರಣೆ ಕಸರತ್ತು
ರಾಜ್ಯದ ಜಲ ಪ್ರದೇಶ ನೋಡಲು ತಮಿಳುನಾಡು ಸಿಎಂಗೆ ಹೆಲಿಕಾಪ್ಟರ್ ವ್ಯವಸ್ಥೆ
ರಾಜ್ಯದ ಜಲ ಪ್ರದೇಶ ನೋಡಲು ತಮಿಳುನಾಡು ಸಿಎಂಗೆ ಹೆಲಿಕಾಪ್ಟರ್ ವ್ಯವಸ್ಥೆ
ಸಿನಿಮಾಕ್ಕೆ ‘ಲವ್ ಕಾಕ್ಟೆಲ್’ ಎಂದು ಹೆಸರಿಟ್ಟಿದ್ದೇಕೆ? ಹರೀಶ್ ರಾಜ್ ಉತ್ತರ
ಸಿನಿಮಾಕ್ಕೆ ‘ಲವ್ ಕಾಕ್ಟೆಲ್’ ಎಂದು ಹೆಸರಿಟ್ಟಿದ್ದೇಕೆ? ಹರೀಶ್ ರಾಜ್ ಉತ್ತರ
ಅಂಗವಿಕಲನಂತೆ ನಟಿಸಿ ಮೊಬೈಲ್ ಕದಿಯುತ್ತಿದ್ದ ಉತ್ತರ ಪ್ರದೇಶದ ಭಿಕ್ಷುಕ ಸೆರೆ
ಅಂಗವಿಕಲನಂತೆ ನಟಿಸಿ ಮೊಬೈಲ್ ಕದಿಯುತ್ತಿದ್ದ ಉತ್ತರ ಪ್ರದೇಶದ ಭಿಕ್ಷುಕ ಸೆರೆ
ಕಾವೇರಿ ವಿವಾದ ನಡುವೆಯೂ ವಿಜಯ್ ಸ್ವಾಗತಕ್ಕೆ ವಿಧಾನಸೌಧದಲ್ಲಿ ಭರದ ಸಿದ್ಧತೆ!
ಕಾವೇರಿ ವಿವಾದ ನಡುವೆಯೂ ವಿಜಯ್ ಸ್ವಾಗತಕ್ಕೆ ವಿಧಾನಸೌಧದಲ್ಲಿ ಭರದ ಸಿದ್ಧತೆ!