AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Kiran Raj: ಒಂದೊಳ್ಳೆಯ ಕೆಲಸ ಮಾಡಿ ಕ್ರಿಸ್​ಮಸ್​ ಆಚರಿಸಿದ ನಟ ಕಿರಣ್​ ರಾಜ್​

ಕೆಲ ವರ್ಷಗಳ ಹಿಂದೆ ‘ಕಿರಣ್​ ರಾಜ್​ ಫೌಂಡೇಷನ್’ ಸ್ಥಾಪಿಸಿ ಸಾಕಷ್ಟು ಜನರ ನೋವಿಗೆ ಸ್ಪಂದಿಸಿದ್ದಾರೆ ಕಿರಣ್​ ರಾಜ್​. ಅನಾಥಾಶ್ರಮದ ಮಕ್ಕಳಿಗೆ ಊಟ, ಕಷ್ಟ ಎಂದು ಬಂದವರಿಗೆ ಸಹಾಯ ಮಾಡಿದ್ದಾರೆ.

Kiran Raj: ಒಂದೊಳ್ಳೆಯ ಕೆಲಸ ಮಾಡಿ ಕ್ರಿಸ್​ಮಸ್​ ಆಚರಿಸಿದ ನಟ ಕಿರಣ್​ ರಾಜ್​
ಕಿರಣ್​ ರಾಜ್
TV9 Web
| Edited By: |

Updated on:Dec 26, 2021 | 11:11 PM

Share

ಕಿರಣ್​ ರಾಜ್​​ (Kiran Raj) ಅವರು ಕೇವಲ ನಟನೆಯನ್ನು ಮಾತ್ರ ಮಾಡುತ್ತಿಲ್ಲ. ಇದರ ಜತೆಜತೆಗೆ ಸಾಮಾಜಿಕ ಕೆಲಸಗಳಲ್ಲೂ ಗುರುತಿಸಿಕೊಂಡಿದ್ದಾರೆ. ತಮ್ಮ ಆದಾಯದ ಒಂದಷ್ಟು ಭಾಗವನ್ನು ಅವರು ಕಷ್ಟದಲ್ಲಿರುವವರ ಸಹಾಯಕ್ಕೆ ತೆಗೆದಿಟ್ಟಿದ್ದಾರೆ. ಪ್ರತಿ ವಿಶೇಷ ಸಂದರ್ಭದಲ್ಲೂ ಅವರು ಸಾಮಾಜಿಕ ಕೆಲಸ ಮಾಡುತ್ತಾರೆ. ಈಗ ಕ್ರಿಸ್​ಮಸ್​ಅನ್ನು ಅವರು ಭಿನ್ನವಾಗಿ ಆಚರಿಸಿದ್ದಾರೆ. ಅವರ ಈ ಕೆಲಸಕ್ಕೆ ಎಲ್ಲ ಕಡೆಗಳಲ್ಲೂ ಮೆಚ್ಚುಗೆ ವ್ಯಕ್ತವಾಗುತ್ತಿದೆ.

ಕೆಲ ವರ್ಷಗಳ ಹಿಂದೆ ‘ಕಿರಣ್​ ರಾಜ್​ ಫೌಂಡೇಷನ್’ ಸ್ಥಾಪಿಸಿ ಸಾಕಷ್ಟು ಜನರ ನೋವಿಗೆ ಸ್ಪಂದಿಸಿದ್ದಾರೆ ಕಿರಣ್​ ರಾಜ್​. ಅನಾಥಾಶ್ರಮದ ಮಕ್ಕಳಿಗೆ ಊಟ, ಕಷ್ಟ ಎಂದು ಬಂದವರಿಗೆ ಸಹಾಯ ಮಾಡಿದ್ದಾರೆ. ಕಿರಣ್​ ರಾಜ್​ ತಮ್ಮ ಒಟ್ಟೂ ಆದಾಯದಲ್ಲಿ ಶೇ.40ರಷ್ಟು ಗಳಿಕೆಯನ್ನು ಕಷ್ಟದಲ್ಲಿರುವವರ ಸಹಾಯಕ್ಕೆ ಬಳಕೆ ಮಾಡಿಕೊಳ್ಳುತ್ತಿದ್ದಾರೆ. ಇದಲ್ಲದೆ, ಕೊವಿಡ್​ ಸಂದರ್ಭದಲ್ಲಿ ಸಾಕಷ್ಟು ಜನರಿಗೆ ಸಹಾಯ ಮಾಡಿದ್ದಾರೆ. ಈ ವರ್ಷದ ಅವರ ಕ್ರಿಸ್​ಮಸ್​ ಆಚರಣೆ ಭಿನ್ನವಾಗಿದೆ.

ಕಿರಣ್​ ರಾಜ್​ ಅವರು ಹಿಂದುಳಿದ ಮಕ್ಕಳಿಗೆ ಹಾಗೂ ಅಗತ್ಯವಿರುವ ಮಕ್ಕಳಿಗೆ ನೋಟ್​ಬುಕ್​ ವಿತರಣೆ ಮಾಡಿದ್ದಾರೆ. ಸುಮಾರು 250 ಮಕ್ಕಳಿಗೆ ಅವರು ನೋಟ್​ಬುಕ್​ ವಿತರಿಸಿದ್ದಾರೆ. ಈ ಮೂಲಕ ಸಾಕಷ್ಟು ಮಕ್ಕಳಿಗೆ ಸಹಾಯ ಮಾಡುವ ಕೆಲಸ ಮಾಡಿದ್ದಾರೆ. ಇದನ್ನು ಅವರ ಅಭಿಮಾನಿ ಬಳಗದವರು ಹಂಚಿಕೊಂಡು ಮೆಚ್ಚುಗೆ ಸೂಚಿಸುತ್ತಿದ್ದಾರೆ. ಬೀದಿ ಬದಿಯಲ್ಲಿ ಮಲಗುವ ಅನೇಕರಿಗೆ ಇತ್ತೀಚೆಗೆ ಹೊದಿಕೆ ನೀಡುವ ಕೆಲಸವನ್ನು ಕಿರಣ್​ ರಾಜ್​ ಮಾಡಿದ್ದರು.

ಕಿರಣ್​ ರಾಜ್​ ನಟನೆಯ ‘ಕನ್ನಡತಿ’ ಧಾರಾವಾಹಿ ಮಹತ್ವದ ಘಟ್ಟ ತಲುಪಿದೆ. ಹಲವು ತಿರುವುಗಳನ್ನು ಪಡೆದುಕೊಂಡು ಈ ಧಾರಾವಾಹಿ ಸಾಗುತ್ತಿದೆ. ಈಗಾಗಲೇ ಹರ್ಷ (ಕಿರಣ್​ ರಾಜ್​) ಭುವಿಗೆ (ರಂಜನಿ ರಾಘವನ್​) ತಮ್ಮ ಪ್ರೀತಿಯನ್ನು ವ್ಯಕ್ತಪಡಿಸಿದ್ದಾರೆ. ಈ ಪ್ರೀತಿಯನ್ನು ಭುವಿ ಒಪ್ಪಿಕೊಳ್ಳುತ್ತಾರೋ ಅಥವಾ ಇಲ್ಲವೋ ಎನ್ನುವ ಕುತೂಹಲ ಮೂಡಿದೆ. ಇದರ ಜತೆಗೆ ಕಿರಣ್​ ರಾಜ್​ ಸಿನಿಮಾ ಕೆಲಸಗಳಲ್ಲೂ ಬ್ಯುಸಿ ಆಗಿದ್ದಾರೆ. ಕೆಲವು ಚಿತ್ರಗಳ ಕೆಲಸಗಳಲ್ಲಿ ಅವರು ತೊಡಗಿಕೊಂಡಿದ್ದಾರೆ.

ಇದನ್ನೂ ಓದಿ: ‘ಕನ್ನಡತಿ’ ಸಾನಿಯಾ ಪಾತ್ರದಿಂದ ಹೊರ ಬಂದ ರಮೋಲಾ; ಇದಕ್ಕಿದೆ ಮಹತ್ವದ ಕಾರಣ

ಜನ ಮೆಚ್ಚಿಕೊಂಡ ‘ಕನ್ನಡತಿ’ ಜೋಡಿಗೆ ಸಿಕ್ತು ಅವಾರ್ಡ್​; ಸಂಭ್ರಮಿಸಿದ ಕಿರಣ್​ ರಾಜ್​, ರಂಜನಿ ರಾಘವನ್​

Published On - 9:11 pm, Sun, 26 December 21

Follow Us
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?
ವಿಜಯ್​​ರನ್ನು ದೇವರೇ ಕಾಪಾಡಬೇಕು ಎಂದ ಹೆಚ್​​ಡಿಕೆ: ಕಾರಣ ಇಲ್ಲಿದೆ
ವಿಜಯ್​​ರನ್ನು ದೇವರೇ ಕಾಪಾಡಬೇಕು ಎಂದ ಹೆಚ್​​ಡಿಕೆ: ಕಾರಣ ಇಲ್ಲಿದೆ
ಅಂಜನಾದ್ರಿ ಹನುಮನಿಗೆ 2.5 ಕೋಟಿ ರೂ. ಮೌಲ್ಯದ ಚಿನ್ನದ ಕಿರೀಟ!
ಅಂಜನಾದ್ರಿ ಹನುಮನಿಗೆ 2.5 ಕೋಟಿ ರೂ. ಮೌಲ್ಯದ ಚಿನ್ನದ ಕಿರೀಟ!
ಸಲೂನ್‌ನಲ್ಲಿ ಶಿಸ್ತಿನಿಂದ ಕೇಶ ವಿನ್ಯಾಸ ಮಾಡಿಸಿಕೊಂಡ ಮಂಗ!
ಸಲೂನ್‌ನಲ್ಲಿ ಶಿಸ್ತಿನಿಂದ ಕೇಶ ವಿನ್ಯಾಸ ಮಾಡಿಸಿಕೊಂಡ ಮಂಗ!
ಲಕ್ಷಾಂತರ ರೂ. ಮೌಲ್ಯದ ಚಿನ್ನ, ನಗದು ಕದ್ದು ಮನೆಗೆ ಬೆಂಕಿ ಹಚ್ಚಿದ ಕಳ್ಳರು!
ಲಕ್ಷಾಂತರ ರೂ. ಮೌಲ್ಯದ ಚಿನ್ನ, ನಗದು ಕದ್ದು ಮನೆಗೆ ಬೆಂಕಿ ಹಚ್ಚಿದ ಕಳ್ಳರು!
ಬಿಎಸ್​ವೈ ಅಭಿಮಾನೋತ್ಸವಕ್ಕೆ ಸಜ್ಜಾದ ಚಿತ್ರದುರ್ಗ: ಕೇಸರಿಮಯವಾದ ನಗರ
ಬಿಎಸ್​ವೈ ಅಭಿಮಾನೋತ್ಸವಕ್ಕೆ ಸಜ್ಜಾದ ಚಿತ್ರದುರ್ಗ: ಕೇಸರಿಮಯವಾದ ನಗರ
ಎರಡನೇ ಪತ್ನಿ ಬೇಕಾ ಎಂದು ನೇರವಾಗಿ ಕೇಳಿದ ಕವಿತಾ; ಚಂದನ್ ಉತ್ತರ ಏನು?
ಎರಡನೇ ಪತ್ನಿ ಬೇಕಾ ಎಂದು ನೇರವಾಗಿ ಕೇಳಿದ ಕವಿತಾ; ಚಂದನ್ ಉತ್ತರ ಏನು?
ಸರ್ಕಾರ ರಚನೆಗೆ ವಿಜಯ್​ ಕಸರತ್ತು: ತಮಿಳುನಾಡಿನಲ್ಲಿ ಏನೇನಾಗ್ತಿದೆ ನೋಡಿ!
ಸರ್ಕಾರ ರಚನೆಗೆ ವಿಜಯ್​ ಕಸರತ್ತು: ತಮಿಳುನಾಡಿನಲ್ಲಿ ಏನೇನಾಗ್ತಿದೆ ನೋಡಿ!
ಕೊಬ್ಬರಿ ಎಣ್ಣೆ ದೀಪ ಹಚ್ಚುವುದರಿಂದ ತುಂಬಾ ಒಳ್ಳೇದು! ಯಾಕೆ ಗೊತ್ತಾ?
ಕೊಬ್ಬರಿ ಎಣ್ಣೆ ದೀಪ ಹಚ್ಚುವುದರಿಂದ ತುಂಬಾ ಒಳ್ಳೇದು! ಯಾಕೆ ಗೊತ್ತಾ?