AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಮೆರಿಕದಿಂದ ಬೆಂಗಳೂರಿಗೆ ಮರಳಿದ ‘ಕನ್ನಡತಿ’ ಧಾರಾವಾಹಿಯ ರತ್ನಮಾಲಾ; ಶೀಘ್ರವೇ ಧಾರವಾಹಿಗೆ ರೀ ಎಂಟ್ರಿ

ತನ್ನ ಇಡೀ ಆಸ್ತಿಯನ್ನು ಭುವಿಗೆ ಬರೆದಿದ್ದಾಳೆ ರತ್ನಮಾಲಾ. ಈ ವಿಚಾರ ಸಾನಿಯಾಗೆ ಗೊತ್ತಿಲ್ಲ. ಈಗ ಭುವಿ ಮೇಲೆ ಹಗೆ ಸಾಧಿಸುತ್ತಿರುವ ಸಾನಿಯಾಗೆ ಆಸ್ತಿ ವಿಚಾರ ಗೊತ್ತಾದರೆ ಶಾಕ್ ಆಗೋದು ಗ್ಯಾರಂಟಿ.

ಅಮೆರಿಕದಿಂದ ಬೆಂಗಳೂರಿಗೆ ಮರಳಿದ ‘ಕನ್ನಡತಿ’ ಧಾರಾವಾಹಿಯ ರತ್ನಮಾಲಾ; ಶೀಘ್ರವೇ ಧಾರವಾಹಿಗೆ ರೀ ಎಂಟ್ರಿ
TV9 Web
| Updated By: ರಾಜೇಶ್ ದುಗ್ಗುಮನೆ|

Updated on:Jul 21, 2022 | 6:32 AM

Share

‘ಕನ್ನಡತಿ’ ಧಾರಾವಾಹಿಯಲ್ಲಿ (Kannadathi Serial) ರತ್ನಮಾಲಾ ಎಂದೇ ಫೇಮಸ್ ಆದವರು ಚಿತ್ಕಲಾ ಬಿರಾದಾರ್ (Chitkala Biradar). ಅವರು ಕಥಾನಾಯಕ ಹರ್ಷನ ತಾಯಿ ಪಾತ್ರ ಮಾಡುವ ಮೂಲಕ ಗಮನ ಸೆಳೆದಿದ್ದಾರೆ. ಅವರು ನಿರ್ವಹಿಸುತ್ತಿರುವ ರತ್ನಮಾಲಾ (Ratnamala) ಪಾತ್ರ ಸಾಕಷ್ಟು ಹೈಲೈಟ್ ಆಗಿದೆ. ಅವರು ಇತ್ತೀಚೆಗೆ ಅಮೆರಿಕಕ್ಕೆ ತೆರಳಿದ್ದರು. ಈಗ ಅವರು ಬೆಂಗಳೂರಿಗೆ ಮರಳಿದ್ದಾರೆ. ಶೀಘ್ರವೇ ಅವರು ಶೂಟಿಂಗ್​ಗೆ ರೀ ಎಂಟ್ರಿ ಪಡೆಯಲಿದ್ದಾರೆ ಎನ್ನಲಾಗುತ್ತಿದೆ. ಈ ವಿಚಾರ ಕೇಳಿ ಕಿರುತೆರೆ ವೀಕ್ಷಕರು ಹಾಗೂ ‘ಕನ್ನಡತಿ’ ಧಾರಾವಾಹಿ ಫ್ಯಾನ್ಸ್ ಖುಷಿಪಟ್ಟಿದ್ದಾರೆ.

‘ಕನ್ನಡತಿ’ ಧಾರಾವಾಹಿಯಲ್ಲಿ ರತ್ನಮಾಲಾ ಪಾತ್ರ ತುಂಬಾನೇ ಮುಖ್ಯವಾಗಿದೆ. ಅವಳ ಒಡೆತನದಲ್ಲಿ ಹಲವು ಸಂಸ್ಥೆಗಳಿವೆ. ಈ ಧಾರಾವಾಹಿಯಲ್ಲಿನ ಫ್ಯಾಮಿಲಿ ಡ್ರಾಮಾಗೆ ಅವಳು ಮಾಡಿರುವ ಆಸ್ತಿಯೇ ಕಾರಣ. ಹರ್ಷನ ತಾಯಿ ಆಗಿ, ಭುವಿಯ ಅತ್ತೆಯಾಗಿ ರತ್ನಮಾಲಾ ಗಮನ ಸೆಳೆಯುತ್ತಿದ್ದಾಳೆ. ಚಿತ್ಕಲಾ ಅವರಿಗೆ ಬ್ರೇಕ್ ಬೇಕಿದ್ದ ಕಾರಣ, ಅವರು ನಿರ್ವಹಿಸುತ್ತಿದ್ದ ರತ್ನಮಾಲಾ ಪಾತ್ರಕ್ಕೂ ಬ್ರೇಕ್​ ನೀಡಲಾಯಿತು. ರತ್ನಮಾಲಾಗೆ ತೀವ್ರ ಅನಾರೋಗ್ಯ ಕಾಡಿದ್ದು, ಅಮೆರಿಕಕ್ಕೆ ಕಳುಹಿಸಲಾಗಿದೆ ಎಂದು ಕಥೆಯಲ್ಲಿ ತೋರಿಸಲಾಗಿದೆ. ಶೀಘ್ರವೇ ಅವರು ಧಾರಾವಾಹಿಗೆ ಮರಳುವ ಸೂಚನೆ ಸಿಕ್ಕಿದೆ.

ಮಾಲಾ ಎಜ್ಯುಕೇಶನ್ ಸಂಸ್ಥೆಗೆ ಸಾನಿಯಾ ಎಂಡಿ. ಈ ಸಂಸ್ಥೆಯಲ್ಲಿ ಭುವಿ ಇಂಟರ್ನ್​ಶಿಪ್​ ಮಾಡುತ್ತಿದ್ದಳು. ಸಾನಿಯಾ ಕಾಟ ತಡೆಯಲಾರದೇ ಅವಳು ಕೆಲಸ ಬಿಟ್ಟಿದ್ದಾಳೆ. ಈಗ ರತ್ನಮಾಲಾ ಮರಳಿದ ನಂತರದಲ್ಲಿ ಭುವಿಗೆ ಎಂಡಿ ಪಟ್ಟ ಸಿಕ್ಕರೂ ಅಚ್ಚರಿ ಏನಿಲ್ಲ.

ಇದನ್ನೂ ಓದಿ
Image
‘ಕನ್ನಡತಿ’ ಧಾರಾವಾಹಿಯಿಂದ ಹೊರ ನಡೆದ ರಕ್ಷಿತ್; ‘ಬಿಗ್ ಬಾಸ್​’ ಎಂಟ್ರಿ ಬಗ್ಗೆ ಶುರು ಆಗಿದೆ ಚರ್ಚೆ
Image
ಹಿಂದಿಗೆ ಡಬ್, ಮರಾಠಿಗೆ ರಿಮೇಕ್​ ಆದ ‘ಕನ್ನಡತಿ’: ಈ ಧಾರಾವಾಹಿಗೆ ಹೇಗಿದೆ ರೆಸ್ಪಾನ್ಸ್? ಇಲ್ಲಿದೆ ಉತ್ತರ
Image
‘ಬಡ್ಡೀಸ್​’ ಚಿತ್ರದಲ್ಲಿ ಆ್ಯಕ್ಷನ್​ ಹೀರೋ ಆಗಿ ಅಬ್ಬರಿಸ್ತಾರೆ ‘ಕನ್ನಡತಿ’ ನಟ ಕಿರಣ್​ ರಾಜ್​; ಜೂನ್​ 24ಕ್ಕೆ ರಿಲೀಸ್​
Image
ಹಿಂದಿಗೆ ಡಬ್​ ಆಗುತ್ತಿದೆ ‘ಕನ್ನಡತಿ’ ಧಾರಾವಾಹಿ; ಕಿರಣ್​ ರಾಜ್​-ರಂಜನಿ ರಾಘವನ್ ಫ್ಯಾನ್ಸ್​ಗೆ ಹೆಮ್ಮೆ​

ತನ್ನ ಇಡೀ ಆಸ್ತಿಯನ್ನು ಭುವಿಗೆ ಬರೆದಿದ್ದಾಳೆ ರತ್ನಮಾಲಾ. ಈ ವಿಚಾರ ಸಾನಿಯಾಗೆ ಗೊತ್ತಿಲ್ಲ. ಈಗ ಭುವಿ ಮೇಲೆ ಹಗೆ ಸಾಧಿಸುತ್ತಿರುವ ಸಾನಿಯಾಗೆ ಆಸ್ತಿ ವಿಚಾರ ಗೊತ್ತಾದರೆ ಶಾಕ್ ಆಗೋದು ಗ್ಯಾರಂಟಿ. ರತ್ನಮಾಲಾ ಮರಳಿ ಬಂದರೆ ಈ ಬೆಳವಣಿಗೆ ನಡೆಯಬಹುದು ಎಂಬುದು ವೀಕ್ಷಕರ ಊಹೆ. ಮುಂದೇನಾಗುತ್ತದೆ ಎಂಬುದನ್ನು ಕಾದು ನೋಡಬೇಕಿದೆ.

ಇದನ್ನೂ ಓದಿ: ‘ಕನ್ನಡತಿ’ ಧಾರಾವಾಹಿಯಿಂದ ಹೊರ ನಡೆದ ರಕ್ಷಿತ್; ‘ಬಿಗ್ ಬಾಸ್​’ ಎಂಟ್ರಿ ಬಗ್ಗೆ ಶುರು ಆಗಿದೆ ಚರ್ಚೆ

ಚಿತ್ಕಲಾ ಅವರು ಜಗದೀಶ್ ಅವರನ್ನು ಮದುವೆ ಆಗಿದ್ದಾರೆ. ಅವರ ದಾಂಪತ್ಯಕ್ಕೆ ಈಗ 30 ವರ್ಷ. ವಿವಾಹ ವಾರ್ಷಿಕೋತ್ಸವ ಆಚರಣೆಗೆ ಈ ದಂಪತಿ ಅಮೆರಿಕಕ್ಕೆ ತೆರಳಿದ್ದರು. ಅಲ್ಲಿ ಸಮಯ ಕಳೆಯುತ್ತಿರುವ ಫೋಟೋಗಳನ್ನು ಚಿತ್ಕಲಾ ಅವರು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದರು. ಈ ಫೋಟೋಗೆ ಅಭಿಮಾನಿಗಳು ನಾನಾ ರೀತಿಯಲ್ಲಿ ಕಮೆಂಟ್ ಮಾಡಿದ್ದರು. ‘ವೆಕೇಷನ್​ ಮುಗಿಸಿ ಸಾಕು. ಬೇಗ ಮನೆಗೆ ಬನ್ನಿ’ ಎಂದು ಚಿತ್ಕಲಾ ಎದುರು ಫ್ಯಾನ್ಸ್ ಬೇಡಿಕೆ ಇಟ್ಟಿದ್ದರು. ಈಗ ಮರಳಿ ಬೆಂಗಳೂರಿಗೆ ಬಂದಿರುವ ಫೋಟೋವನ್ನು ಚಿತ್ಕಲಾ ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.

Published On - 6:27 am, Thu, 21 July 22

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ