AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಿನ್ನ ರೀತಿಯಲ್ಲಿ ಕಿರಣ್ ರಾಜ್ ಸಹಾಯ; ನಟನಿಗೆ ಹರಿದುಬಂತು ಧನ್ಯವಾದಗಳ ಮಹಾಪೂರ

ಬೀದಿ ಬದಿ ವ್ಯಾಪಾರ ಮಾಡುವ ಅನೇಕರು ಮಳೆಯಲ್ಲಿ ನೆನೆಯುವ ಪರಿಸ್ಥಿತಿ ಇದೆ. ಅಂಥವರನ್ನು ಗುರುತಿಸಿ ಕಿರಣ್ ರಾಜ್ ಸಹಾಯ ಮಾಡಿದ್ದಾರೆ. 

ಭಿನ್ನ ರೀತಿಯಲ್ಲಿ ಕಿರಣ್ ರಾಜ್ ಸಹಾಯ; ನಟನಿಗೆ ಹರಿದುಬಂತು ಧನ್ಯವಾದಗಳ ಮಹಾಪೂರ
ಕಿರಣ್ ರಾಜ್
TV9 Web
| Edited By: |

Updated on: Jul 18, 2022 | 4:16 PM

Share

ನಟ ಕಿರಣ್ ರಾಜ್​ (Kiran Raj) ಅವರು ತಮ್ಮ ‘ಕಿರಣ್ ರಾಜ್ ಫೌಂಡೇಷನ್’ (Kiran Raj Foundation) ಮೂಲಕ ಕಷ್ಟದಲ್ಲಿರುವವರಿಗೆ ಸಹಾಯ ಮಾಡುತ್ತಿದ್ದಾರೆ. ಕೊವಿಡ್ ಸಂದರ್ಭದಲ್ಲಿ ಅವರು ಸಾಕಷ್ಟು ಮಂದಿಗೆ ನೆರವಿನ ಹಸ್ತ ಚಾಚಿದ್ದರು. ಊಟ ಇಲ್ಲದವರಿಗೆ ಊಟ ನೀಡಿದ್ದರು. ಧಾರಾವಾಹಿ ಹಾಗೂ ಸಿನಿಮಾಗಳ ಜತೆಗೆ ಈ ರೀತಿಯ ಕೆಲಸ ಮಾಡುವ ಮೂಲಕ ಅವರು ಪ್ರೇಕ್ಷಕರಿಗೆ ಇಷ್ಟವಾಗುತ್ತಾರೆ. ಈ ಬಾರಿ ಕಿರಣ್ ರಾಜ್ ಅವರು ಮತ್ತೆ ಸಹಾಯ ಹಸ್ತ ಚಾಚಿದ್ದಾರೆ. ಅಗತ್ಯ ಇರುವವರಿಗೆ ಅವರು ರೇನ್​ಕೋಟ್ ನೀಡಿದ್ದಾರೆ.

ಸದ್ಯ, ರಾಜ್ಯಾದ್ಯಂತ ಮಳೆ ಆಗುತ್ತಿದೆ. ಮಳೆಯಿಂದ ರಕ್ಷಣೆ ಪಡೆಯಲು ಹಣ ಇರುವವರು ಮಾರ್ಗ ಕಂಡುಕೊಳ್ಳುತ್ತಾರೆ. ಆದರೆ, ಕೆಲವರಿಗೆ ಛತ್ರಿ, ರೇನ್​ಕೋಟ್ ಖರೀದಿಸಲೂ ಹಣ ಇರುವುದಿಲ್ಲ. ಬೀದಿ ಬದಿ ವ್ಯಾಪಾರ ಮಾಡುವ ಅನೇಕರು ಮಳೆಯಲ್ಲಿ ನೆನೆಯುವ ಪರಿಸ್ಥಿತಿ ಇದೆ. ಅಂಥವರನ್ನು ಗುರುತಿಸಿ ಕಿರಣ್ ರಾಜ್ ಸಹಾಯ ಮಾಡಿದ್ದಾರೆ.

ಇದನ್ನೂ ಓದಿ
Image
Kiran Raj Birthday: ಕಿರಣ್ ರಾಜ್​ ಬರ್ತ್​ಡೇ: ಫ್ಯಾನ್ಸ್​ಗೆ ‘ಬಡ್ಡೀಸ್​’ ಸಿನಿಮಾ ನಟನ ಕಡೆಯಿಂದ ಗಿಫ್ಟ್​
Image
ಹಿಂದಿಗೆ ಡಬ್, ಮರಾಠಿಗೆ ರಿಮೇಕ್​ ಆದ ‘ಕನ್ನಡತಿ’: ಈ ಧಾರಾವಾಹಿಗೆ ಹೇಗಿದೆ ರೆಸ್ಪಾನ್ಸ್? ಇಲ್ಲಿದೆ ಉತ್ತರ
Image
‘ಬಡ್ಡೀಸ್​’ ಚಿತ್ರದಲ್ಲಿ ಆ್ಯಕ್ಷನ್​ ಹೀರೋ ಆಗಿ ಅಬ್ಬರಿಸ್ತಾರೆ ‘ಕನ್ನಡತಿ’ ನಟ ಕಿರಣ್​ ರಾಜ್​; ಜೂನ್​ 24ಕ್ಕೆ ರಿಲೀಸ್​
Image
ಹಿಂದಿಗೆ ಡಬ್​ ಆಗುತ್ತಿದೆ ‘ಕನ್ನಡತಿ’ ಧಾರಾವಾಹಿ; ಕಿರಣ್​ ರಾಜ್​-ರಂಜನಿ ರಾಘವನ್ ಫ್ಯಾನ್ಸ್​ಗೆ ಹೆಮ್ಮೆ​

ಬೀದಿಬದಿ ವ್ಯಾಪಾರಿಗಳು, ಸಿಗ್ನಲ್​​ನಲ್ಲಿ ವಸ್ತುಗಳನ್ನು ಮಾರಾಟ ಮಾಡುವವರು ಸಾಕಷ್ಟು ಜನರಿದ್ದಾರೆ. ಅವರ ದುಡಿಮೆ ಕಡಿಮೆ ಇರುತ್ತದೆ. ಇಂತಹವರನ್ನು ಗುರುತಿಸಿರುವ ಕಿರಣ್ ರಾಜ್ ಮಳೆಯಿಂದ ರಕ್ಷಣೆ ನೀಡುವ ರೇನ್​ಕೋಟ್​​ಗಳನ್ನು ನೀಡಿದ್ದಾರೆ. ಅವರಿಂದ ಸಹಾಯ ಪಡೆದವರು ಧನ್ಯವಾದ ಅರ್ಪಿಸುತ್ತಿದ್ದಾರೆ.

ಈ ಕೆಲಸವನ್ನು ಕಿರಣ್ ರಾಜ್ ಮಾತ್ರ ಮಾಡಿಲ್ಲ. ಸಾಮಾಜಿಕ ಕೆಲಸ ಮಾಡಲು ಆಸಕ್ತಿ ಇರುವ ಕಾಲೇಜು ವಿದ್ಯಾರ್ಥಿಗಳ ಮೂಲಕ ಈ ಒಳ್ಳೆಯ ಕೆಲಸ ಮಾಡಿಸಲಾಗಿದೆ. ‘ಇಂತಹ ಕಾರ್ಯಗಳಲ್ಲಿ ವಿದ್ಯಾರ್ಥಿಗಳು ಭಾಗವಹಿಸುತ್ತಿರುವುದು ಖುಷಿ ತಂದಿದೆ. ಜೀವನದಲ್ಲಿ ಮುಂದೆ ಇಂತಹ ಸಹಾಯ ಮಾಡುವ ಗುಣಗಳನ್ನು ಮೈಗೂಡಿಸಿಕೊಳ್ಳಲು ಇಂತಹ ಕಾರ್ಯಗಳು ಅವರಿಗೆ ಅನುಕೂಲವಾಗಲಿದೆ. ಸಾಮಾಜಿಕ ಕಾರ್ಯಗಳಲ್ಲಿ ಪಾಲ್ಗೊಳ್ಳಲು ಮನಸ್ಸಿರುವ ವಿದ್ಯಾರ್ಥಿಗಳು ಕಿರಣ್ ರಾಜ್ ಫೌಂಡೇಶ್​ಅನ್ನು ಸಂಪರ್ಕಿಸಬಹುದು’ ಎನ್ನುತ್ತಾರೆ ನಟ ಕಿರಣ್ ರಾಜ್.

View this post on Instagram

A post shared by Kiran Raj (@itskiranraj)

ಇದನ್ನೂ ಓದಿ: Kiran Raj Birthday: ಕಿರಣ್ ರಾಜ್​ ಬರ್ತ್​ಡೇ: ಫ್ಯಾನ್ಸ್​ಗೆ ‘ಬಡ್ಡೀಸ್​’ ಸಿನಿಮಾ ನಟನ ಕಡೆಯಿಂದ ಗಿಫ್ಟ್​

ಇತ್ತೀಚೆಗೆ ಕಿರಣ್ ರಾಜ್ ಅವರು ಬರ್ತ್​ಡೇ ಆಚರಿಸಿಕೊಂಡರು. ಈ ವೇಳೆ ತಮ್ಮ ಅಭಿಮಾನಿಗಳಿಗೆ ಉಡುಗೊರೆ ಹಾಗೂ ಬಡವರಿಗೆ ಬ್ಲಾಂಕೆಟ್​ ಸಹಾಯ ಮಾಡಿದ್ದರು. ಈ ಮೂಲಕ ಬರ್ತ್​ಡೇಯನ್ನು ಭಿನ್ನವಾಗಿ ಆಚರಿಸಿಕೊಂಡಿದ್ದರು. ಈ ಕೆಲಸಕ್ಕೆ ಎಲ್ಲ ಕಡೆಗಳಿಂದ ಮೆಚ್ಚುಗೆ ವ್ಯಕ್ತವಾಗಿದೆ. ತಮ್ಮ ದುಡಿಮೆಯ ಒಂದು ಪಾಲನ್ನು ಅವರು ಸಾಮಾಜಿಕ ಕೆಲಸಕ್ಕೆ ಬಳಕೆ ಮಾಡಿಕೊಳ್ಳುತ್ತಿದ್ದಾರೆ ಅನ್ನೋದು ವಿಶೇಷ.

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್