ಭಿನ್ನ ರೀತಿಯಲ್ಲಿ ಕಿರಣ್ ರಾಜ್ ಸಹಾಯ; ನಟನಿಗೆ ಹರಿದುಬಂತು ಧನ್ಯವಾದಗಳ ಮಹಾಪೂರ

ಬೀದಿ ಬದಿ ವ್ಯಾಪಾರ ಮಾಡುವ ಅನೇಕರು ಮಳೆಯಲ್ಲಿ ನೆನೆಯುವ ಪರಿಸ್ಥಿತಿ ಇದೆ. ಅಂಥವರನ್ನು ಗುರುತಿಸಿ ಕಿರಣ್ ರಾಜ್ ಸಹಾಯ ಮಾಡಿದ್ದಾರೆ. 

ಭಿನ್ನ ರೀತಿಯಲ್ಲಿ ಕಿರಣ್ ರಾಜ್ ಸಹಾಯ; ನಟನಿಗೆ ಹರಿದುಬಂತು ಧನ್ಯವಾದಗಳ ಮಹಾಪೂರ
ಕಿರಣ್ ರಾಜ್
Follow us
| Updated By: ರಾಜೇಶ್ ದುಗ್ಗುಮನೆ

Updated on: Jul 18, 2022 | 4:16 PM

ನಟ ಕಿರಣ್ ರಾಜ್​ (Kiran Raj) ಅವರು ತಮ್ಮ ‘ಕಿರಣ್ ರಾಜ್ ಫೌಂಡೇಷನ್’ (Kiran Raj Foundation) ಮೂಲಕ ಕಷ್ಟದಲ್ಲಿರುವವರಿಗೆ ಸಹಾಯ ಮಾಡುತ್ತಿದ್ದಾರೆ. ಕೊವಿಡ್ ಸಂದರ್ಭದಲ್ಲಿ ಅವರು ಸಾಕಷ್ಟು ಮಂದಿಗೆ ನೆರವಿನ ಹಸ್ತ ಚಾಚಿದ್ದರು. ಊಟ ಇಲ್ಲದವರಿಗೆ ಊಟ ನೀಡಿದ್ದರು. ಧಾರಾವಾಹಿ ಹಾಗೂ ಸಿನಿಮಾಗಳ ಜತೆಗೆ ಈ ರೀತಿಯ ಕೆಲಸ ಮಾಡುವ ಮೂಲಕ ಅವರು ಪ್ರೇಕ್ಷಕರಿಗೆ ಇಷ್ಟವಾಗುತ್ತಾರೆ. ಈ ಬಾರಿ ಕಿರಣ್ ರಾಜ್ ಅವರು ಮತ್ತೆ ಸಹಾಯ ಹಸ್ತ ಚಾಚಿದ್ದಾರೆ. ಅಗತ್ಯ ಇರುವವರಿಗೆ ಅವರು ರೇನ್​ಕೋಟ್ ನೀಡಿದ್ದಾರೆ.

ಸದ್ಯ, ರಾಜ್ಯಾದ್ಯಂತ ಮಳೆ ಆಗುತ್ತಿದೆ. ಮಳೆಯಿಂದ ರಕ್ಷಣೆ ಪಡೆಯಲು ಹಣ ಇರುವವರು ಮಾರ್ಗ ಕಂಡುಕೊಳ್ಳುತ್ತಾರೆ. ಆದರೆ, ಕೆಲವರಿಗೆ ಛತ್ರಿ, ರೇನ್​ಕೋಟ್ ಖರೀದಿಸಲೂ ಹಣ ಇರುವುದಿಲ್ಲ. ಬೀದಿ ಬದಿ ವ್ಯಾಪಾರ ಮಾಡುವ ಅನೇಕರು ಮಳೆಯಲ್ಲಿ ನೆನೆಯುವ ಪರಿಸ್ಥಿತಿ ಇದೆ. ಅಂಥವರನ್ನು ಗುರುತಿಸಿ ಕಿರಣ್ ರಾಜ್ ಸಹಾಯ ಮಾಡಿದ್ದಾರೆ.

ಇದನ್ನೂ ಓದಿ
Image
Kiran Raj Birthday: ಕಿರಣ್ ರಾಜ್​ ಬರ್ತ್​ಡೇ: ಫ್ಯಾನ್ಸ್​ಗೆ ‘ಬಡ್ಡೀಸ್​’ ಸಿನಿಮಾ ನಟನ ಕಡೆಯಿಂದ ಗಿಫ್ಟ್​
Image
ಹಿಂದಿಗೆ ಡಬ್, ಮರಾಠಿಗೆ ರಿಮೇಕ್​ ಆದ ‘ಕನ್ನಡತಿ’: ಈ ಧಾರಾವಾಹಿಗೆ ಹೇಗಿದೆ ರೆಸ್ಪಾನ್ಸ್? ಇಲ್ಲಿದೆ ಉತ್ತರ
Image
‘ಬಡ್ಡೀಸ್​’ ಚಿತ್ರದಲ್ಲಿ ಆ್ಯಕ್ಷನ್​ ಹೀರೋ ಆಗಿ ಅಬ್ಬರಿಸ್ತಾರೆ ‘ಕನ್ನಡತಿ’ ನಟ ಕಿರಣ್​ ರಾಜ್​; ಜೂನ್​ 24ಕ್ಕೆ ರಿಲೀಸ್​
Image
ಹಿಂದಿಗೆ ಡಬ್​ ಆಗುತ್ತಿದೆ ‘ಕನ್ನಡತಿ’ ಧಾರಾವಾಹಿ; ಕಿರಣ್​ ರಾಜ್​-ರಂಜನಿ ರಾಘವನ್ ಫ್ಯಾನ್ಸ್​ಗೆ ಹೆಮ್ಮೆ​

ಬೀದಿಬದಿ ವ್ಯಾಪಾರಿಗಳು, ಸಿಗ್ನಲ್​​ನಲ್ಲಿ ವಸ್ತುಗಳನ್ನು ಮಾರಾಟ ಮಾಡುವವರು ಸಾಕಷ್ಟು ಜನರಿದ್ದಾರೆ. ಅವರ ದುಡಿಮೆ ಕಡಿಮೆ ಇರುತ್ತದೆ. ಇಂತಹವರನ್ನು ಗುರುತಿಸಿರುವ ಕಿರಣ್ ರಾಜ್ ಮಳೆಯಿಂದ ರಕ್ಷಣೆ ನೀಡುವ ರೇನ್​ಕೋಟ್​​ಗಳನ್ನು ನೀಡಿದ್ದಾರೆ. ಅವರಿಂದ ಸಹಾಯ ಪಡೆದವರು ಧನ್ಯವಾದ ಅರ್ಪಿಸುತ್ತಿದ್ದಾರೆ.

ಈ ಕೆಲಸವನ್ನು ಕಿರಣ್ ರಾಜ್ ಮಾತ್ರ ಮಾಡಿಲ್ಲ. ಸಾಮಾಜಿಕ ಕೆಲಸ ಮಾಡಲು ಆಸಕ್ತಿ ಇರುವ ಕಾಲೇಜು ವಿದ್ಯಾರ್ಥಿಗಳ ಮೂಲಕ ಈ ಒಳ್ಳೆಯ ಕೆಲಸ ಮಾಡಿಸಲಾಗಿದೆ. ‘ಇಂತಹ ಕಾರ್ಯಗಳಲ್ಲಿ ವಿದ್ಯಾರ್ಥಿಗಳು ಭಾಗವಹಿಸುತ್ತಿರುವುದು ಖುಷಿ ತಂದಿದೆ. ಜೀವನದಲ್ಲಿ ಮುಂದೆ ಇಂತಹ ಸಹಾಯ ಮಾಡುವ ಗುಣಗಳನ್ನು ಮೈಗೂಡಿಸಿಕೊಳ್ಳಲು ಇಂತಹ ಕಾರ್ಯಗಳು ಅವರಿಗೆ ಅನುಕೂಲವಾಗಲಿದೆ. ಸಾಮಾಜಿಕ ಕಾರ್ಯಗಳಲ್ಲಿ ಪಾಲ್ಗೊಳ್ಳಲು ಮನಸ್ಸಿರುವ ವಿದ್ಯಾರ್ಥಿಗಳು ಕಿರಣ್ ರಾಜ್ ಫೌಂಡೇಶ್​ಅನ್ನು ಸಂಪರ್ಕಿಸಬಹುದು’ ಎನ್ನುತ್ತಾರೆ ನಟ ಕಿರಣ್ ರಾಜ್.

View this post on Instagram

A post shared by Kiran Raj (@itskiranraj)

ಇದನ್ನೂ ಓದಿ: Kiran Raj Birthday: ಕಿರಣ್ ರಾಜ್​ ಬರ್ತ್​ಡೇ: ಫ್ಯಾನ್ಸ್​ಗೆ ‘ಬಡ್ಡೀಸ್​’ ಸಿನಿಮಾ ನಟನ ಕಡೆಯಿಂದ ಗಿಫ್ಟ್​

ಇತ್ತೀಚೆಗೆ ಕಿರಣ್ ರಾಜ್ ಅವರು ಬರ್ತ್​ಡೇ ಆಚರಿಸಿಕೊಂಡರು. ಈ ವೇಳೆ ತಮ್ಮ ಅಭಿಮಾನಿಗಳಿಗೆ ಉಡುಗೊರೆ ಹಾಗೂ ಬಡವರಿಗೆ ಬ್ಲಾಂಕೆಟ್​ ಸಹಾಯ ಮಾಡಿದ್ದರು. ಈ ಮೂಲಕ ಬರ್ತ್​ಡೇಯನ್ನು ಭಿನ್ನವಾಗಿ ಆಚರಿಸಿಕೊಂಡಿದ್ದರು. ಈ ಕೆಲಸಕ್ಕೆ ಎಲ್ಲ ಕಡೆಗಳಿಂದ ಮೆಚ್ಚುಗೆ ವ್ಯಕ್ತವಾಗಿದೆ. ತಮ್ಮ ದುಡಿಮೆಯ ಒಂದು ಪಾಲನ್ನು ಅವರು ಸಾಮಾಜಿಕ ಕೆಲಸಕ್ಕೆ ಬಳಕೆ ಮಾಡಿಕೊಳ್ಳುತ್ತಿದ್ದಾರೆ ಅನ್ನೋದು ವಿಶೇಷ.

Nithya Bhavishya: ಈ ರಾಶಿಯವರು ಕೆಲವು ಸಾಲಬಾಧೆಯಿಂದ ಮುಕ್ತಿಪಡೆಯುವಿರಿ
Nithya Bhavishya: ಈ ರಾಶಿಯವರು ಕೆಲವು ಸಾಲಬಾಧೆಯಿಂದ ಮುಕ್ತಿಪಡೆಯುವಿರಿ
ತುಂಬಿ ಹರಿಯುವ ಹೊಳೆಯಲ್ಲೇ ಗರ್ಭಿಣಿ ಹೆಂಡತಿಯನ್ನು ಹೊತ್ತು ನಡೆದ ಗಂಡ
ತುಂಬಿ ಹರಿಯುವ ಹೊಳೆಯಲ್ಲೇ ಗರ್ಭಿಣಿ ಹೆಂಡತಿಯನ್ನು ಹೊತ್ತು ನಡೆದ ಗಂಡ
ನಾಳೆ ಹಮ್ಮಿಕೊಂಡಿದ್ದ ಚಾಮುಂಡಿ ಚಲೋ ರದ್ದು: ಪ್ರತಾಪ್ ಸಿಂಹ ಹೇಳಿದ್ದಿಷ್ಟು
ನಾಳೆ ಹಮ್ಮಿಕೊಂಡಿದ್ದ ಚಾಮುಂಡಿ ಚಲೋ ರದ್ದು: ಪ್ರತಾಪ್ ಸಿಂಹ ಹೇಳಿದ್ದಿಷ್ಟು
ಮಧ್ಯಪ್ರದೇಶದ ಶಾಜಾಪುರದಲ್ಲಿ ಭೀಕರ ಅಪಘಾತ; ಶಾಲಾ ಬಸ್ ಪಲ್ಟಿ, ಮಕ್ಕಳಿಗೆ ಗಾಯ
ಮಧ್ಯಪ್ರದೇಶದ ಶಾಜಾಪುರದಲ್ಲಿ ಭೀಕರ ಅಪಘಾತ; ಶಾಲಾ ಬಸ್ ಪಲ್ಟಿ, ಮಕ್ಕಳಿಗೆ ಗಾಯ
ಗ್ಯಾರಂಟಿ ಯೋಜನೆಗಳು, ಬಡವರ ಸುರಕ್ಷತೆ, ಕಲ್ಯಾಣ ಕೃತಿ ಬಿಡುಗಡೆ ಮಾಡಿದ ಸಿಎಂ
ಗ್ಯಾರಂಟಿ ಯೋಜನೆಗಳು, ಬಡವರ ಸುರಕ್ಷತೆ, ಕಲ್ಯಾಣ ಕೃತಿ ಬಿಡುಗಡೆ ಮಾಡಿದ ಸಿಎಂ
ಕೋಲಾರ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಮಾರಾಮಾರಿ
ಕೋಲಾರ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಮಾರಾಮಾರಿ
ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಕಾರು, ಸಿಟಿವಿಯಲ್ಲಿ ಭೀಕರ ದೃಶ್ಯ ಸೆರೆ
ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಕಾರು, ಸಿಟಿವಿಯಲ್ಲಿ ಭೀಕರ ದೃಶ್ಯ ಸೆರೆ
ಕೊತ್ವಾಲನ ಶಿಷ್ಯರು ವಿಧಾನಸೌಧಕ್ಕೆ ಬಂದ್ಮೇಲೆ ಕುಲಗೆಟ್ಟಿದ್ದು: ಹೆಚ್​ಡಿಕೆ
ಕೊತ್ವಾಲನ ಶಿಷ್ಯರು ವಿಧಾನಸೌಧಕ್ಕೆ ಬಂದ್ಮೇಲೆ ಕುಲಗೆಟ್ಟಿದ್ದು: ಹೆಚ್​ಡಿಕೆ
ಸ್ಯಾಮ್​ಸಂಗ್ ಎಲೆಕ್ಟ್ರಾನಿಕ್ಸ್ ಹಬ್ಬದ ವಿಶೇಷ ಮಾರಾಟ ಕೊಡುಗೆ ಆರಂಭ
ಸ್ಯಾಮ್​ಸಂಗ್ ಎಲೆಕ್ಟ್ರಾನಿಕ್ಸ್ ಹಬ್ಬದ ವಿಶೇಷ ಮಾರಾಟ ಕೊಡುಗೆ ಆರಂಭ
ಶಿವಣ್ಣ-ಉಪ್ಪಿ ನಟನೆಯ ‘45’ ಚಿತ್ರದ ಸುದ್ದಿಗೋಷ್ಠಿ ಲೈವ್ ನೋಡಿ
ಶಿವಣ್ಣ-ಉಪ್ಪಿ ನಟನೆಯ ‘45’ ಚಿತ್ರದ ಸುದ್ದಿಗೋಷ್ಠಿ ಲೈವ್ ನೋಡಿ