AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜನ ಮೆಚ್ಚಿಕೊಂಡ ‘ಕನ್ನಡತಿ’ ಜೋಡಿಗೆ ಸಿಕ್ತು ಅವಾರ್ಡ್​; ಸಂಭ್ರಮಿಸಿದ ಕಿರಣ್​ ರಾಜ್​, ರಂಜನಿ ರಾಘವನ್​

ಕನ್ನಡತಿ ಧಾರಾವಾಹಿ ನಿತ್ಯ ಹೊಸಹೊಸ ತಿರುವು ಪಡೆದುಕೊಳ್ಳುತ್ತಿದೆ. ಹರ್ಷ (ಕಿರಣ್​)​ ಮತ್ತು ಭುವಿ (ರಂಜನಿ) ನಡುವಿನ ಆಪ್ತತೆ ದಿನ ಕಳೆದಂತೆ ಹೆಚ್ಚುತ್ತಿದೆ.

ಜನ ಮೆಚ್ಚಿಕೊಂಡ ‘ಕನ್ನಡತಿ’ ಜೋಡಿಗೆ ಸಿಕ್ತು ಅವಾರ್ಡ್​; ಸಂಭ್ರಮಿಸಿದ ಕಿರಣ್​ ರಾಜ್​, ರಂಜನಿ ರಾಘವನ್​
ರಂಜನಿ-ಕಿರಣ್​ ರಾಜ್​
TV9 Web
| Updated By: ರಾಜೇಶ್ ದುಗ್ಗುಮನೆ|

Updated on: Oct 18, 2021 | 1:52 PM

Share

ಕಿರಣ್​ ರಾಜ್​ ಹಾಗೂ ರಂಜನಿ ರಾಘವನ್​ ‘ಕನ್ನಡತಿ’ ಧಾರಾವಾಹಿ ಮೂಲಕ ಹೆಚ್ಚು ಮನೆ ಮಾತಾಗಿದ್ದಾರೆ. ಅವರು ನಿರ್ವಹಿಸುತ್ತಿರುವ ಹರ್ಷ ಮತ್ತು ಭುವಿ ಪಾತ್ರ ಜನರಿಗೆ ಹೆಚ್ಚು ಇಷ್ಟವಾಗಿದೆ. ಈ ಧಾರಾವಾಹಿ ಜೋಡಿಗೆ ದೊಡ್ಡ ಅಭಿಮಾನಿ ಬಳಗ ಇದೆ. ವಿಶೇಷ ಎಂದರೆ, ಇಬ್ಬರಿಗೂ ‘ಅನುಬಂಧ’ ಅವಾರ್ಡ್​ ಸಿಕ್ಕಿದೆ. ಈ ಬಗ್ಗೆ ಕಲರ್ಸ್​ ಕನ್ನಡ ವಾಹಿನಿ ಪ್ರೋಮೋ ಹಂಚಿಕೊಂಡಿದ್ದು, ಅಭಿಮಾನಿಗಳು ಸಂಭ್ರಮಿಸಿದ್ದಾರೆ.

ಕಲರ್ಸ್​ ಕನ್ನಡ ವಾಹಿನಿ ಅದ್ದೂರಿಯಾಗಿ ‘ಅನುಬಂಧ’ ಅವಾರ್ಡ್ಸ್​ ಕಾರ್ಯಕ್ರಮ ನಡೆಸಿದೆ. ಅಕ್ಟೋಬರ್​ 15,16 ಮತ್ತು 17ರಂದು ಈ ಕಾರ್ಯಕ್ರಮ ಕಲರ್ಸ್​ನಲ್ಲಿ ಪ್ರಸಾರವಾಗಿದೆ. ಧಾರಾವಾಹಿ ಕಲಾವಿದರು ಹಾಗೂ ರಿಯಾಲಿಟಿ ಶೋ ಸ್ಪರ್ಧಿಗಳಿಗೆ ನಾನಾ ರೀತಿಯ ಅವಾರ್ಡ್​ ಸಿಕ್ಕಿದೆ.

ಜನ ಮೆಚ್ಚಿದ ನಾಯಕಿ, ಜನ ಮೆಚ್ಚಿದ ನಾಯಕ, ಜನ ಮೆಚ್ಚಿದ ಜೋಡಿ, ಜನ ಮೆಚ್ಚಿದ ಯೂತ್​ ಐಕಾನ್​ ಸೇರಿ ಸಾಕಷ್ಟು ಅವಾರ್ಡ್​ಗಳನ್ನು ನೀಡಲಾಗುತ್ತದೆ. ಇದಕ್ಕೆ ವೀಕ್ಷಕರು ವೋಟ್​ ಮಾಡಬೇಕು. ಯಾರು ಹೆಚ್ಚು ವೋಟ್​ ಪಡೆಯುತ್ತಾರೋ ಅವರು ಈ ಪ್ರಶಸ್ತಿ​ಗೆ ಭಾಜನರಾಗುತ್ತಾರೆ. ಅದೇ ರೀತಿ ಜನ ಮೆಚ್ಚಿದ ನಾಯಕಿ, ಜನ ಮೆಚ್ಚಿದ ನಾಯಕ ಪ್ರಶಸ್ತಿ ಅನುಕ್ರಮವಾಗಿ ರಂಜನಿ ರಾಘವನ್​ ಹಾಗೂ ಕಿರಣ್​ ರಾಜ್​ಗೆ ಸಿಕ್ಕಿದೆ.

ಕನ್ನಡತಿ ಧಾರಾವಾಹಿ ನಿತ್ಯ ಹೊಸಹೊಸ ತಿರುವು ಪಡೆದುಕೊಳ್ಳುತ್ತಿದೆ. ಹರ್ಷ (ಕಿರಣ್​)​ ಮತ್ತು ಭುವಿ (ರಂಜನಿ) ನಡುವಿನ ಆಪ್ತತೆ ದಿನ ಕಳೆದಂತೆ ಹೆಚ್ಚುತ್ತಿದೆ. ಭುವಿಗೆ ಪ್ರಪೋಸ್​ ಮಾಡಬೇಕು ಎಂದು ಹರ್ಷ ಸಿದ್ಧತೆ ಮಾಡಿಕೊಂಡಿದ್ದಾನೆ. ಹೀಗಾಗಿ ಧಾರಾವಾಹಿ ವೀಕ್ಷಕರ ಆಸಕ್ತಿ ಕೆರಳಿಸುತ್ತಿದೆ. ಇನ್ನು ಕಿರಣ್​ ರಾಜ್​ ಹಾಗೂ ರಂಜನಿ ರಾಘವನ್​ ಅವರ ನ್ಯಾಚುರಲ್​ ಆ್ಯಕ್ಟಿಂಗ್​ ಎಲ್ಲರಿಗೂ ಇಷ್ಟವಾಗುತ್ತಿದೆ.

‘ನಾನು ಕೊನೆಯ​ ಸೀಟ್​ನಲ್ಲಿ ಕೂರುತ್ತಿದ್ದೆ. ಆಗ ಸ್ಟೇಜ್​ ತುಂಬಾ ದೊಡ್ಡದಾಗಿ ಕಾಣುತ್ತಿತ್ತು. ಈಗ ಸ್ಟೇಜ್​ ಮೇಲೆ ನಿಂತು ನೋಡಿದಾಗ, ಆ ಕುರ್ಚಿ ಚಿಕ್ಕದಾಗಿ ಕಾಣುತ್ತಾ ಇದೆ. ಆದರೆ, ಈ ಪ್ರಯಾಣಕ್ಕೆ ಸಾಕಷ್ಟು ಶ್ರಮ ಬೇಕು. ಜೀವನ ತುಂಬಾನೇ ಅನ್​ಪ್ರಿಡಿಕ್ಟ್​ ಆಗಿದೆ . ಆದರೆ, ಏನಾದ್ರೂ ಮಾಡ್ತೀನಿ ಎಂದರೆ ಆ ಧೈರ್ಯಕ್ಕೆ ನೀವೇ ಕಾರಣ’ ಎಂದರು ಹರ್ಷ.

ಇದನ್ನೂ ಓದಿ: ಅವಮಾನ ಮಾಡಿದವರಿಗೆ ಕಿಚ್ಚ ಸುದೀಪ್​ ಎದುರೇ ಉತ್ತರಿಸಿದ ‘ಕನ್ನಡತಿ’ ಕಿರಣ್​ ರಾಜ್​

ಅರವಿಂದ್​ಗೆ ಸಿಕ್ತು ಯೂತ್​ ಐಕಾನ್​ ಅವಾರ್ಡ್​​; ಸಂತಸ ಪಟ್ಟ ದಿವ್ಯಾ ಉರುಡುಗ

ಬ್ಯಾಡ್ಮಿಂಟನ್ ಆಡುವಾಗಲೇ ಹೃದಯಾಘಾತದಿಂದ 25 ವರ್ಷದ ಯುವಕ ಸಾವು
ಬ್ಯಾಡ್ಮಿಂಟನ್ ಆಡುವಾಗಲೇ ಹೃದಯಾಘಾತದಿಂದ 25 ವರ್ಷದ ಯುವಕ ಸಾವು
ನಿಮ್ಮ ದೇಶದ ಸಚಿವರ ಮೇಲೆ ನಂಬಿಕೆಯಿಲ್ವಾ?; ಸದನದಲ್ಲಿ ಗುಡುಗಿದ ಅಮಿತ್ ಶಾ
ನಿಮ್ಮ ದೇಶದ ಸಚಿವರ ಮೇಲೆ ನಂಬಿಕೆಯಿಲ್ವಾ?; ಸದನದಲ್ಲಿ ಗುಡುಗಿದ ಅಮಿತ್ ಶಾ
ಮಗನ ಮದುವೆ ಜೊತೆಗೆ 11 ಜೋಡಿಗಳಿಗೆ ವಿವಾಹ ಮಾಡಿಸಿದ ತಂದೆ
ಮಗನ ಮದುವೆ ಜೊತೆಗೆ 11 ಜೋಡಿಗಳಿಗೆ ವಿವಾಹ ಮಾಡಿಸಿದ ತಂದೆ
ರಸಗೊಬ್ಬರ ಅಭಾವ ಮತ್ತು ರೈತರ ಸಮಸ್ಯೆ ಬಗ್ಗೆ ನಡ್ಡಾಗೆ ಪತ್ರ ಬರೆದಿರುವ ಸಿಎಂ
ರಸಗೊಬ್ಬರ ಅಭಾವ ಮತ್ತು ರೈತರ ಸಮಸ್ಯೆ ಬಗ್ಗೆ ನಡ್ಡಾಗೆ ಪತ್ರ ಬರೆದಿರುವ ಸಿಎಂ
ಗೊಬ್ಬರಕ್ಕಾಗಿ ಪರದಾಡುತ್ತಿರುವ ಅನ್ನದಾತರು, ಅಂಗಡಿಗಳ ಮುಂದೆ ಉದ್ದುದ್ದ ಸಾಲ
ಗೊಬ್ಬರಕ್ಕಾಗಿ ಪರದಾಡುತ್ತಿರುವ ಅನ್ನದಾತರು, ಅಂಗಡಿಗಳ ಮುಂದೆ ಉದ್ದುದ್ದ ಸಾಲ
ರಾಹುಲ್ ಗಾಂಧಿ ಪ್ರಾಮಾಣಿಕತೆಗೆ ಅಭಿನಂದನೆ ಸಲ್ಲಿಸಬೇಕು: ಈಶ್ವರಪ್ಪ
ರಾಹುಲ್ ಗಾಂಧಿ ಪ್ರಾಮಾಣಿಕತೆಗೆ ಅಭಿನಂದನೆ ಸಲ್ಲಿಸಬೇಕು: ಈಶ್ವರಪ್ಪ
ತುಂಗಭದ್ರಾ ಜಲಾಶದಿಂದ ಏಕಾಏಕಿ ನುಗ್ಗಿ ಬಂದ ನೀರು, ಶ್ವಾನಗಳು ಎಸ್ಕೇಪ್
ತುಂಗಭದ್ರಾ ಜಲಾಶದಿಂದ ಏಕಾಏಕಿ ನುಗ್ಗಿ ಬಂದ ನೀರು, ಶ್ವಾನಗಳು ಎಸ್ಕೇಪ್
ಅಭಿವೃದ್ಧಿ ವಿಷಯದಲ್ಲಿ ಸಿದ್ದರಾಮಯ್ಯ ಯಾವತ್ತೂ ಚರ್ಚೆ ಮಾಡಲ್ಲ: ಅಶೋಕ
ಅಭಿವೃದ್ಧಿ ವಿಷಯದಲ್ಲಿ ಸಿದ್ದರಾಮಯ್ಯ ಯಾವತ್ತೂ ಚರ್ಚೆ ಮಾಡಲ್ಲ: ಅಶೋಕ
ಕುಮಟಾ: ದೇವಿಮನೆ ಘಟ್ಟ ಭಾಗ ಕುಸಿತ, ಹೆದ್ದಾರಿಯಲ್ಲಿ ಏಕಮುಖ ಸಂಚಾರ
ಕುಮಟಾ: ದೇವಿಮನೆ ಘಟ್ಟ ಭಾಗ ಕುಸಿತ, ಹೆದ್ದಾರಿಯಲ್ಲಿ ಏಕಮುಖ ಸಂಚಾರ
ಜನ ಅಧಿಕಾರ ಕೊಟ್ಟಿರೋದು ಹೋಲಿಕೆ ಮಾಡಲಲ್ಲ, ಕೆಲಸ ಮಾಡಲು: ಯದುವೀರ್
ಜನ ಅಧಿಕಾರ ಕೊಟ್ಟಿರೋದು ಹೋಲಿಕೆ ಮಾಡಲಲ್ಲ, ಕೆಲಸ ಮಾಡಲು: ಯದುವೀರ್