AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Ranjani Raghavan: ‘ಕನ್ನಡತಿ’ ರಂಜನಿಗೆ ಹೆಮ್ಮೆಯ ಕ್ಷಣ; ಖುಷಿ ಹಂಚಿಕೊಂಡ ಕಿರುತೆರೆ ನಟಿ

ರಂಜನಿ ಈ ಮೊದಲು ಸಾಕಷ್ಟು ಕಥೆಗಳನ್ನು ಬರೆದಿದ್ದಾರೆ. ಅವೆಲ್ಲವನ್ನೂ ಸೇರಿಸಿ ಈಗ ಪುಸ್ತಕದ ರೂಪದಲ್ಲಿ ಹೊರ ತಂದಿದ್ದಾರೆ. ಇದಕ್ಕೆ ‘ಕತೆ ಡಬ್ಬಿ’ ಎಂದು ಹೆಸರಿಟ್ಟಿದ್ದಾರೆ. ಇತ್ತೀಚೆಗೆ ಈ ಪುಸ್ತಕ ಲೋಕಾರ್ಪಣೆಗೊಂಡಿತ್ತು. ಈ ಪುಸ್ತಕವನ್ನು ಓದಿ ಸಾಕಷ್ಟು ಜನರು ಇಷ್ಟಪಟ್ಟಿದ್ದರು.

Ranjani Raghavan: ‘ಕನ್ನಡತಿ’ ರಂಜನಿಗೆ ಹೆಮ್ಮೆಯ ಕ್ಷಣ; ಖುಷಿ ಹಂಚಿಕೊಂಡ ಕಿರುತೆರೆ ನಟಿ
TV9 Web
| Edited By: |

Updated on: Dec 04, 2021 | 1:47 PM

Share

‘ಕನ್ನಡತಿ’ ರಂಜನಿ ರಾಘವನ್​ ಅವರು ಸಾಕಷ್ಟು ಖ್ಯಾತಿ ಗಳಿಸಿಕೊಂಡಿದ್ದಾರೆ. ಧಾರಾವಾಹಿಯಲ್ಲಿ ಅವರು ನಿರ್ವಹಿಸುತ್ತಿರುವ ಭುವನೇಶ್ವರಿ ಪಾತ್ರ ಸಾಕಷ್ಟು ಜನರಿಗೆ ಇಷ್ಟವಾಗಿದೆ. ಈ ಧಾರಾವಾಹಿ ಮೂಲಕ ಕನ್ನಡವನ್ನು ಬೆಳೆಸುವ ಕಾರ್ಯ ಕೂಡ ಆಗುತ್ತಿದೆ. ಈ ಕಾರಣಕ್ಕೂ ಧಾರಾವಾಹಿ ಹೆಚ್ಚು ಜನರಿಗೆ ಇಷ್ಟವಾಗಿದೆ. ರಂಜನಿ ಕೇವಲ ನಟನೆ ಮಾತ್ರವಲ್ಲ ಬರಹದ ಮೂಲಕವೂ ಗುರುತಿಸಿಕೊಂಡಿದ್ದಾರೆ. ಅವರು ‘ಕತೆ ಡಬ್ಬಿ’ ಹೆಸರಿನ ಕಥಾ ಸಂಕಲವನ್ನು ಹೊರ ತಂದಿದ್ದಾರೆ. ಈಗ ಅವರಿಗೆ ಹೆಮ್ಮೆ ಆಗುವಂತಹ ಘಟನೆಯೊಂದು ನಡೆದಿದೆ. ಈ ಬಗ್ಗೆ ಅವರು ಸೋಶಿಯಲ್​ ಮೀಡಿಯಾದಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ.

ರಂಜನಿ ಈ ಮೊದಲು ಸಾಕಷ್ಟು ಕಥೆಗಳನ್ನು ಬರೆದಿದ್ದಾರೆ. ಅವೆಲ್ಲವನ್ನೂ ಸೇರಿಸಿ ಈಗ ಪುಸ್ತಕದ ರೂಪದಲ್ಲಿ ಹೊರ ತಂದಿದ್ದಾರೆ. ಇದಕ್ಕೆ ‘ಕತೆ ಡಬ್ಬಿ’ ಎಂದು ಹೆಸರಿಟ್ಟಿದ್ದಾರೆ. ಇತ್ತೀಚೆಗೆ ಈ ಪುಸ್ತಕ ಲೋಕಾರ್ಪಣೆಗೊಂಡಿತ್ತು. ಈ ಪುಸ್ತಕವನ್ನು ಓದಿ ಸಾಕಷ್ಟು ಜನರು ಇಷ್ಟಪಟ್ಟಿದ್ದರು. ಈಗ ಚಂದನ ವಾಹಿನಿಯಲ್ಲಿ ಪ್ರಸಾರವಾಗುವ ‘ಥಟ್​ ಅಂತ ಹೇಳಿ’ ಕಾರ್ಯಕ್ರಮದಲ್ಲಿಈ ಪುಸ್ತಕವನ್ನು  ಬಹುಮಾನವಾಗಿ ನೀಡಲಾಗಿದೆ. ಇದು ರಂಜನಿ ಅಭಿಮಾನಿಗಳಿಗೆ ಖುಷಿ ನೀಡಿದೆ.

‘ಕನ್ನಡಿಗರ ಹೆಮ್ಮೆಯ ರಸಪ್ರಶ್ನೆ ಕಾರ್ಯಕ್ರಮ ‘ಥಟ್ ಅಂತ ಹೇಳಿ’ಅಲ್ಲಿ ಕತೆ ಡಬ್ಬಿ ಪುಸ್ತಕವನ್ನು ಬಹುಮಾನವಾಗಿ ಕೊಡುತ್ತಿದ್ದಾರೆ. ಈ ಪುಸ್ತಕವನ್ನು ಗುರುತಿಸಿದ್ದಕ್ಕಾಗಿ ‘ಥಟ್ ಅಂತ ಹೇಳಿ’ ತಂಡಕ್ಕೆ ನನ್ನ ನಮನಗಳು’ ಎಂದು ರಂಜನಿ ರಾಘವನ್​ ಬರೆದುಕೊಂಡಿದ್ದಾರೆ. ಇದನ್ನು ನೋಡಿ ಅಭಿಮಾನಿಗಳು ಖುಷಿಪಟ್ಟಿದ್ದಾರೆ. ‘ಈ ಕಾರ್ಯಕ್ರಮ ನೋಡಿದಾಗಲೆಲ್ಲ ನಿಮ್ಮ ಪುಸ್ತಕ ಜ್ಞಾಪಕ ಬರ್ತಿತ್ತು. ಈಗ ಅದನ್ನೇ ಬಹುಮಾನವಾಗಿ ಕೊಡುತ್ತಿದ್ದಾರೆ ಅಂತ ನೋಡಿ ಖುಷಿ ಆಗ್ತಿದೆ. ಹೀಗೆ ಬರೀತಿರಿ, ಬೆಳಿತಿರಿ’ ಎಂದು ಅಭಿಮಾನಿಗಳು ಹಾರೈಸಿದ್ದಾರೆ.

‘ಕನ್ನಡತಿ’ ಧಾರಾವಾಹಿ ಸಾಕಷ್ಟು ಟ್ವಿಸ್ಟ್​ಗಳನ್ನು ಪಡೆದುಕೊಳ್ಳುತ್ತಿದೆ. ರಂಜನಿ ನಿರ್ವಹಿಸುತ್ತಿರುವ ಭುವಿ ಪಾತ್ರ ದಿನಕಳೆದಂತೆ ಮತ್ತಷ್ಟು ಸ್ಟ್ರಾಂಗ್​ ಆಗುತ್ತಿದೆ. ಭುವಿ ಎದುರು ಹರ್ಷ ಪ್ರೀತಿ ವ್ಯಕ್ತಪಡಿಸಿದ್ದಾನೆ. ಆದರೆ, ಅವಳ ಕಡೆಯಿಂದ ಯಾವುದೇ ಉತ್ತರ ಬಂದಿಲ್ಲ. ‘ಕನ್ನಡತಿ’ ಬಗ್ಗೆ ವೀಕ್ಷಕರಿಗೆ ಸಾಕಷ್ಟು ಕುತೂಹಲಗಳನ್ನು ಹುಟ್ಟು ಹಾಕುವ ಕೆಲಸವನ್ನು ಧಾರಾವಾಹಿ ತಂಡ ಮಾಡುತ್ತಿದೆ.

ಇದನ್ನೂ ಓದಿ: ನಟನೆಯಷ್ಟೇ ಅಲ್ಲದೆ ಸಾಹಿತ್ಯ ಕ್ಷೇತ್ರದಲ್ಲೂ ಛಾಪು ಮೂಡಿಸಿದ ಕನ್ನಡತಿ;, ಇಲ್ಲಿದೆ ರಂಜನಿ ರಾಘವನ್ ಅವರ ಮನದಾಳದ ಮಾತು

ಗಣಿದಣಿಗೆ ಭರತ್​​ ರೆಡ್ಡಿ ಓಪನ್​ ಚಾಲೆಂಜ್​​: 'ಕೈ​​' ಶಾಸಕ ಹೇಳಿದ್ದೇನು?
ಗಣಿದಣಿಗೆ ಭರತ್​​ ರೆಡ್ಡಿ ಓಪನ್​ ಚಾಲೆಂಜ್​​: 'ಕೈ​​' ಶಾಸಕ ಹೇಳಿದ್ದೇನು?
ವೇಗವಾಗಿ ಬಂದು ಟೋಲ್ ಬೂತ್​ಗೆ ಗುದ್ದಿದ ಬಸ್, ಭೀಕರ ದೃಶ್ಯ ಸಿಸಿಟಿವಿಲಿ ಸೆರೆ
ವೇಗವಾಗಿ ಬಂದು ಟೋಲ್ ಬೂತ್​ಗೆ ಗುದ್ದಿದ ಬಸ್, ಭೀಕರ ದೃಶ್ಯ ಸಿಸಿಟಿವಿಲಿ ಸೆರೆ
ಜನಾರ್ದನ ರೆಡ್ಡಿ ಮನೆ ಮುಂದಿನ ಸಂಘರ್ಷದ ಭೀಕರತೆ ಬಿಚ್ಚಿಟ್ಟ ವಿಡಿಯೋ
ಜನಾರ್ದನ ರೆಡ್ಡಿ ಮನೆ ಮುಂದಿನ ಸಂಘರ್ಷದ ಭೀಕರತೆ ಬಿಚ್ಚಿಟ್ಟ ವಿಡಿಯೋ
ಮೋಸದಿಂದ ಕೊನೆಯ ಕ್ಯಾಪ್ಟನ್ ಆದ್ರಾ ಧನುಷ್? ಬಿಗ್ ಬಾಸ್ ಪ್ರಶ್ನೆ
ಮೋಸದಿಂದ ಕೊನೆಯ ಕ್ಯಾಪ್ಟನ್ ಆದ್ರಾ ಧನುಷ್? ಬಿಗ್ ಬಾಸ್ ಪ್ರಶ್ನೆ
ಗಿಲ್ಲಿ ನಟ ಬರೆದು ಹಾಡಿದ ರ್ಯಾಪ್ ಸಾಂಗ್ ಪೂರ್ಣ ವಿಡಿಯೋ ಇಲ್ಲಿದೆ
ಗಿಲ್ಲಿ ನಟ ಬರೆದು ಹಾಡಿದ ರ್ಯಾಪ್ ಸಾಂಗ್ ಪೂರ್ಣ ವಿಡಿಯೋ ಇಲ್ಲಿದೆ
2026ರಲ್ಲಿ ಎದುರಾಗುವ ಆಕಸ್ಮಿಕ ಕಷ್ಟಗಳಿಂದ ಪಾರಾಗುವ ವಿಧಾನ
2026ರಲ್ಲಿ ಎದುರಾಗುವ ಆಕಸ್ಮಿಕ ಕಷ್ಟಗಳಿಂದ ಪಾರಾಗುವ ವಿಧಾನ
ಇಂದು ಈ ರಾಶಿಯವರ ಎಲ್ಲಾ ಕೆಲಸ ಕಾರ್ಯಗಳಲ್ಲಿ ಯಶಸ್ಸು
ಇಂದು ಈ ರಾಶಿಯವರ ಎಲ್ಲಾ ಕೆಲಸ ಕಾರ್ಯಗಳಲ್ಲಿ ಯಶಸ್ಸು
ನನ್ನನ್ನು ಮುಗಿಸಲೆಂದೇ ಗುಂಡಿನ ದಾಳಿ; ಜನಾರ್ದನ ರೆಡ್ಡಿ ಆರೋಪ
ನನ್ನನ್ನು ಮುಗಿಸಲೆಂದೇ ಗುಂಡಿನ ದಾಳಿ; ಜನಾರ್ದನ ರೆಡ್ಡಿ ಆರೋಪ
ಜನಾರ್ದನ ರೆಡ್ಡಿ ಮನೆ ಮುಂದೆ ಫೈರಿಂಗ್; ಕಾಂಗ್ರೆಸ್​​ ಕಾರ್ಯಕರ್ತ ಸಾವು
ಜನಾರ್ದನ ರೆಡ್ಡಿ ಮನೆ ಮುಂದೆ ಫೈರಿಂಗ್; ಕಾಂಗ್ರೆಸ್​​ ಕಾರ್ಯಕರ್ತ ಸಾವು
ಬಳ್ಳಾರಿಯಲ್ಲಿ ಜನಾರ್ದನ ರೆಡ್ಡಿ ಮನೆ ಮುಂದೆ ಫೈರಿಂಗ್‌: ಶಾಕಿಂಗ್ ರಿಯಾಕ್ಷನ್
ಬಳ್ಳಾರಿಯಲ್ಲಿ ಜನಾರ್ದನ ರೆಡ್ಡಿ ಮನೆ ಮುಂದೆ ಫೈರಿಂಗ್‌: ಶಾಕಿಂಗ್ ರಿಯಾಕ್ಷನ್