AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಆಣೆ ಮಾಡಿ ಹೇಳುತೀನಿ..’ ಎಂದು ಲಂಗ ದಾವಣಿ ಚಾಲೆಂಜ್ ಸ್ವೀಕರಿಸಿದ ರಂಜನಿ ರಾಘವನ್

ಶರಣ್ ಹಾಗೂ ನಿಶ್ವಿಕಾ ‘ಗುರು ಶಿಷ್ಯರು’ ಸಿನಿಮಾದಲ್ಲಿ ಒಟ್ಟಾಗಿ ನಟಿಸುತ್ತಿದ್ದಾರೆ. ಈ ಚಿತ್ರದ ‘ಆಣೆ ಮಾಡಿ ಹೇಳುತೀನಿ..’ ಹಾಡು ಇತ್ತೀಚೆಗೆ ಬಿಡುಗಡೆ ಆಗಿ ಸಾಕಷ್ಟು ಗಮನ ಸೆಳೆಯುತ್ತಿದೆ.

‘ಆಣೆ ಮಾಡಿ ಹೇಳುತೀನಿ..’ ಎಂದು ಲಂಗ ದಾವಣಿ ಚಾಲೆಂಜ್ ಸ್ವೀಕರಿಸಿದ ರಂಜನಿ ರಾಘವನ್
ರಂಜನಿ
TV9 Web
| Edited By: |

Updated on: Jul 05, 2022 | 4:41 PM

Share

ನಟಿ ರಂಜನಿ ರಾಘವನ್ (Ranjani Raghavan) ಅವರು ಹಿರಿತೆರೆ ಹಾಗೂ ಕಿರುತೆರೆ ಎರಡರಲ್ಲೂ ಬ್ಯುಸಿ ಆಗಿದ್ದಾರೆ. ಅವರು ನಟಿಸುತ್ತಿರುವ ‘ಕನ್ನಡತಿ’ ಧಾರಾವಾಹಿಗೆ (Kannadathi Serial) ವೀಕ್ಷಕರಿಂದ ಭರಪೂರ ಮೆಚ್ಚುಗೆ ವ್ಯಕ್ತವಾಗಿದೆ. ಭುವಿ ಪಾತ್ರದಲ್ಲಿ ರಂಜನಿ ಅವರು ಗಮನ ಸೆಳೆಯುತ್ತಿದ್ದಾರೆ. ಸಿನಿಮಾ ರಂಗದಿಂದಲೂ ಹಲವು ಆಫರ್​ಗಳು ಅವರನ್ನು ಹುಡುಕಿಕೊಂಡು ಬರುತ್ತಿವೆ. ಈ ಮಧ್ಯೆ ನಟಿ ರಂಜನಿ ಅವರು ಸೋಶಿಯಲ್ ಮೀಡಿಯಾದಲ್ಲೂ ಆ್ಯಕ್ಟೀವ್ ಆಗಿದ್ದಾರೆ. ಆಗಾಗ ಹೊಸಹೊಸ ಫೋಟೋಗಳನ್ನು ಹಂಚಿಕೊಂಡು ಅವರು ಗಮನ ಸೆಳೆಯುತ್ತಾರೆ. ಈಗ ಅವರು ಹೊಸ ಚಾಲೆಂಜ್ ಒಂದನ್ನು ಸ್ವೀಕರಿಸಿದ್ದಾರೆ. ಲಂಗ ದಾವಣಿ ಧರಿಸಿ ಅವರು ಹೆಜ್ಜೆ ಹಾಕಿದ್ದಾರೆ.

ಶರಣ್ ಹಾಗೂ ನಿಶ್ವಿಕಾ ‘ಗುರು ಶಿಷ್ಯರು’ ಸಿನಿಮಾದಲ್ಲಿ ಒಟ್ಟಾಗಿ ನಟಿಸುತ್ತಿದ್ದಾರೆ. ಈ ಚಿತ್ರದ ‘ಆಣೆ ಮಾಡಿ ಹೇಳುತೀನಿ..’ ಹಾಡು ಇತ್ತೀಚೆಗೆ ಬಿಡುಗಡೆ ಆಗಿ ಸಾಕಷ್ಟು ಗಮನ ಸೆಳೆಯುತ್ತಿದೆ. ಈ ಹಾಡು ಲಕ್ಷಾಂತರಬಾರಿ ವೀಕ್ಷಣೆ ಕಂಡಿದೆ. ಈ ಸಾಂಗ್​ನಲ್ಲಿ ನಿಶ್ವಿಕಾ ಅವರು ಲಂಗ ದಾವಣಿ ಧರಿಸಿ ಡ್ಯಾನ್ಸ್ ಮಾಡಿದ್ದಾರೆ. ಅದೇ ರೀತಿ ರಂಜನಿ ಕೂಡ ಲಂಗ ದಾವಣಿ ಹಾಕಿ ಹೆಜ್ಜೆ ಹಾಕಿದ್ದಾರೆ.

ಇದನ್ನೂ ಓದಿ
Image
ಅಭಿಮಾನಿಗಳ ಎದುರು ಒಂದು ಪ್ರಶ್ನೆ ಇಟ್ಟ ರಂಜನಿ ರಾಘವನ್​; ಉತ್ತರ ಕೊಟ್ಟ ಫ್ಯಾನ್ಸ್
Image
ಹಿಂದಿಗೆ ಡಬ್, ಮರಾಠಿಗೆ ರಿಮೇಕ್​ ಆದ ‘ಕನ್ನಡತಿ’: ಈ ಧಾರಾವಾಹಿಗೆ ಹೇಗಿದೆ ರೆಸ್ಪಾನ್ಸ್? ಇಲ್ಲಿದೆ ಉತ್ತರ
Image
ಹರ್ಷನಿಗಾಗಿ ಕೈ ಕತ್ತರಿಸಿಕೊಂಡ ವರುಧಿನಿ; ಮಂಟಪ ಬಿಟ್ಟು ಆಸ್ಪತ್ರೆಗೆ ಹೋದ ಭುವಿ
Image
‘ಕನ್ನಡತಿ’ ಧಾರಾವಾಹಿ: ಮದುವೆಗೂ ಮುನ್ನ ಹರ್ಷನ ಬಳಿ ಮಾಡಿದ್ದ 30 ಲಕ್ಷ ರೂಪಾಯಿ ಸಾಲ ತೀರಿಸಿದ ಭುವಿ

ಇನ್​ಸ್ಟಾಗ್ರಾಮ್​ನಲ್ಲಿ ರೀಲ್ಸ್ ಅನ್ನು ರಂಜನಿ ಹಂಚಿಕೊಂಡಿದ್ದಾರೆ. ಈ ರೀಲ್ಸ್​ನಲ್ಲಿ ಅವರು ‘ಆಣೆ ಮಾಡಿ ಹೇಳುತೀನಿ..’ ಹಾಡಿಗೆ ಹೆಜ್ಜೆ ಹಾಕಿದ್ದಾರೆ. ‘ಯಾವ್ದ್ ಯಾವ್ದೋ ಚಾಲೆಂಜ್ ಮಾಡ್ತೀವಂತೆ, ನಮ್ಮ ‘ಲಂಗ ದಾವಣಿ’ ಚಾಲೆಂಜ್ ತಗೊಳಲ್ವಾ’ ಎಂದು ಅವರು ಬರೆದುಕೊಂಡಿದ್ದಾರೆ. ಅಲ್ಲದೆ, ಹಾಡಿನ ಬಗ್ಗೆ ಮೆಚ್ಚುಗೆಯ ಮಾತುಗಳನ್ನು ಆಡಿದ್ದಾರೆ.

ಧಾರಾವಾಹಿ ವಿಚಾರಕ್ಕೆ ಬರುವುದಾದರೆ ‘ಕನ್ನಡತಿ’ ಸೀರಿಯಲ್ ಪ್ರಮುಖ ಘಟ್ಟ ತಲುಪಿದೆ. ಹರ್ಷ ಹಾಗೂ ಭುವಿ ಮದುವೆ ನೆರವೇರಿದೆ. ಇಡೀ ಆಸ್ತಿಯನ್ನು ಭುವಿಯ ಹೆಸರಿಗೆ ಬರೆದಿದ್ದಾಳೆ ರತ್ನಮಾಲಾ. ಮುಂದಿನ ದಿನಗಳಲ್ಲಿ ಸಾನಿಯಾ ಕಡೆಯಿಂದ ಯಾವ ರೀತಿಯ ತೊಂದರೆಗಳು ಭುವಿಗೆ ಎದುರಾಗಬಹುದು ಎಂಬುದು ಸದ್ಯದ ಕುತೂಹಲ. ಇದರ ಜತೆಗೆ ವರುಧಿನಿ ಕೂಡ ಭುವಿಗೆ ತೊಂದರೆ ಕೊಡಲು ರೆಡಿ ಆಗಿದ್ದಾಳೆ.

ಇದನ್ನೂ ಓದಿ: ಕನ್ನಡಾಂಬೆ ಭುವನೇಶ್ವರಿ ದೇವಸ್ಥಾನ ಹೇಗಿದೆ? ವಿಶೇಷ ವಿಡಿಯೋ ಮಾಡಿ ಪರಿಚಯಿಸಿದ ನಟಿ ರಂಜನಿ ರಾಘವನ್

ಅಭಿಮಾನಿಗಳ ಎದುರು ಒಂದು ಪ್ರಶ್ನೆ ಇಟ್ಟ ರಂಜನಿ ರಾಘವನ್​; ಉತ್ತರ ಕೊಟ್ಟ ಫ್ಯಾನ್ಸ್

Follow Us
ಇರಾನ್ ಜಲಾಂತರ್ಗಾಮಿ ಕೇಂದ್ರದ ಮೇಲೆ ಅಮೆರಿಕದಿಂದ ಕಡಲ ಡ್ರೋನ್ ದಾಳಿ
ಇರಾನ್ ಜಲಾಂತರ್ಗಾಮಿ ಕೇಂದ್ರದ ಮೇಲೆ ಅಮೆರಿಕದಿಂದ ಕಡಲ ಡ್ರೋನ್ ದಾಳಿ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ