AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಕನ್ನಡತಿ’ ವರುಧಿನಿ ಪರವಾಗಿ ಧ್ವನಿ ಎತ್ತಿದ ವೀಕ್ಷಕರು; ಇದಕ್ಕೆ ಕಾರಣ ಶ್ವೇತಾ

ಸುಕೃತಾ ಅವರು ‘ಅಗ್ನಿಸಾಕ್ಷಿ’ ಧಾರಾವಾಹಿ ಮೂಲಕ ಗುರುತಿಸಿಕೊಂಡಿದ್ದರು. ಅವರು ಮಾಡುತ್ತಿದ್ದ ಪಾತ್ರ ಎಲ್ಲರಿಗೂ ಇಷ್ಟವಾಗಿತ್ತು. ಇದಾದ ನಂತರ ನಟನೆಯಿಂದ ಅವರು ಅಂತರ ಕಾಯ್ದುಕೊಂಡಿದ್ದರು.

‘ಕನ್ನಡತಿ’ ವರುಧಿನಿ ಪರವಾಗಿ ಧ್ವನಿ ಎತ್ತಿದ ವೀಕ್ಷಕರು; ಇದಕ್ಕೆ ಕಾರಣ ಶ್ವೇತಾ
ಸುಕೃತಾ-ಸಾರಾ ಅಣ್ಣಯ್ಯ
TV9 Web
| Updated By: ರಾಜೇಶ್ ದುಗ್ಗುಮನೆ|

Updated on: Oct 18, 2021 | 9:41 PM

Share

‘ಕನ್ನಡತಿ’ ಧಾರಾವಾಹಿ ವರುಧಿನಿ ಪಾತ್ರ ಮಾಡುತ್ತಿರುವ ಸಾರಾ ಅಣ್ಣಯ್ಯ ಅನೇಕರಿಗೆ ಇಷ್ಟವಾಗುತ್ತಾರೆ. ತೆರೆಮೇಲೆ ಅವರು ನಿರ್ವಹಿಸುತ್ತಿರುವ ಪಾತ್ರ ಭಿನ್ನವಾಗಿದೆ. ಕೆಲವೊಮ್ಮೆ ಅವರು ಅತಿಯಾಗಿ ಆಡುವುದರಿಂದ ವೀಕ್ಷಕರಿಗೆ ಕಿರಿಕಿರಿ ಉಂಟಾದ ಉದಾಹರಣೆ ಇದೆ. ಆದರೆ, ತೆರೆಮೇಲೆ ಹಾಗೂ ನಿಜ ಜೀವನದಲ್ಲಿ ತುಂಬಾನೇ ಸ್ಟೈಲಿಸ್ಟ್​. ಈ ಕಾರಣಕ್ಕೆ ಅನೇಕರು ಅವರ ಪರವಾಗಿ ಧ್ವನಿ ಎತ್ತಿದ್ದಾರೆ. ಹಾಗಾದರೆ, ಇದಕ್ಕೆ ಕಾರಣವೇನು? ಆ ಪ್ರಶ್ನೆಗೆ ಇಲ್ಲಿದೆ ಉತ್ತರ.

ಸುಕೃತಾ ಅವರು ‘ಅಗ್ನಿಸಾಕ್ಷಿ’ ಧಾರಾವಾಹಿ ಮೂಲಕ ಗುರುತಿಸಿಕೊಂಡಿದ್ದರು. ಅವರು ಮಾಡುತ್ತಿದ್ದ ಪಾತ್ರ ಎಲ್ಲರಿಗೂ ಇಷ್ಟವಾಗಿತ್ತು. ಇದಾದ ನಂತರ ನಟನೆಯಿಂದ ಅವರು ಅಂತರ ಕಾಯ್ದುಕೊಂಡಿದ್ದರು. ಆದರೆ, ಈಗ ಸುಕೃತಾ ಧಾರಾವಾಹಿಗೆ ಕಂಬ್ಯಾಕ್​ ಮಾಡಿದ್ದಾರೆ. ‘ಲಕ್ಷಣ’ ಧಾರಾವಾಹಿಯಲ್ಲಿ ಶ್ವೇತಾ ಪಾತ್ರವನ್ನು ಅವರು ನಿರ್ವಹಿಸುತ್ತಿದ್ದಾರೆ. ‘ಲಕ್ಷಣ’ದಲ್ಲಿ ಅವರದ್ದು ನೆಗೆಟಿವ್ ಪಾತ್ರ. ಅವರು ಈ ಧಾರಾವಾಹಿಯಲ್ಲಿ ಸಖತ್​ ಸ್ಟೈಲಿಶ್​​ ಆಗಿ ಕಾಣಿಸಿಕೊಂಡಿದ್ದಾರೆ. ಈ ಕಾರಣಕ್ಕೆ ಈ ಬಾರಿಯ ‘ಅನುಬಂಧ’ ಅವಾರ್ಡ್ಸ್​ನಲ್ಲಿ ಜನ ಮೆಚ್ಚಿದ ಸ್ಟೈಲ್​ ಐಕಾನ್​ (ಫಿಮೇಲ್​) ಸುಕೃತಾಗೆ (ಶ್ವೆತಾ ಪಾತ್ರ) ಸಿಕ್ಕಿದೆ. ಅವರಿಗೆ ಅನೇಕರು ಮೆಚ್ಚುಗೆ ಸೂಚಿಸುತ್ತಿದ್ದಾರೆ. ಅದೇ ರೀತಿ ಅನೇಕರು ಈ ಬಗ್ಗೆ ಅಸಮಾಧಾನ ಹೊರ ಹಾಕುತ್ತಿದ್ದಾರೆ.

ಈ ಪ್ರಶಸ್ತಿ ವರುಧಿನಿಗೆ (ಸಾರಾ ಅಣ್ಣಪ್ಪ) ಸಲ್ಲಬೇಕಿತ್ತು ಎಂದು ಅನೇಕರು ಅಭಿಪ್ರಾಯ ಹೊರ ಹಾಕಿದ್ದಾರೆ. ಶ್ವೇತಾಗಿಂತ ವರುಧಿನಿ ಹೆಚ್ಚು ಸ್ಟೈಲಿಸ್ಟ್​ ಆಗಿದ್ದಾರೆ. ಈ ಕಾರಣಕ್ಕೆ ವರುಧಿನ ಅವರು ಇದಕ್ಕೆ ಅರ್ಹರಾಗಿದ್ದರು ಎನ್ನುವ ಅಭಿಪ್ರಾಯ ಬಂದಿದೆ.

ಕಿರುತೆರೆ ವ್ಯಾಪ್ತಿ ದಿನಕಳೆದಂತೆ ವಿಸ್ತರಣೆ ಆಗುತ್ತಲೇ ಇದೆ. ಸಿನಿಮಾ ನಿರ್ಮಾಣದ ಮಟ್ಟದಲ್ಲೇ ಧಾರಾವಾಹಿಗಳನ್ನು ನಿರ್ಮಾಣ ಮಾಡಲಾಗುತ್ತಿದೆ. ಒಂದಕ್ಕಿಂತ ಒಂದು ಧಾರಾವಾಹಿ ಅದ್ದೂರಿಯಾಗಿ ಮೂಡಿ ಬರುತ್ತಿದೆ. ಇದರ ಜತೆಗೆ ವರ್ಷಕ್ಕೆ ಒಂದು ಬಾರಿ ಧಾರಾವಾಹಿ ಕಲಾವಿದರನ್ನು ಒಟ್ಟಿಗೆ ಸೇರಿಸಲಾಗುತ್ತದೆ. ಕಲರ್ಸ್​ ಕನ್ನಡ ವಾಹಿನಿ ಅನುಬಂಧ ಅವಾರ್ಡ್ಸ್​ನೊಂದಿಗೆ ವೀಕ್ಷಕರ ಎದುರು ಬಂದಿದೆ. ಕಲರ್ಸ್​ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುವ ಧಾರಾವಾಹಿಗಳನ್ನು ಇಟ್ಟುಕೊಂಡು ವಿವಿಧ ರೀತಿಯ ಅವಾರ್ಡ್​ ನೀಡಲಾಗಿದೆ.

ಇದನ್ನೂ ಓದಿ: ಕನ್ನಡತಿಯಲ್ಲಿ ಹರ್ಷನ ಪ್ರಪೋಸ್​ ಭುವಿ ಒಪ್ಪಿಕೊಳ್ಳೋದು ಡೌಟು? ಇಲ್ಲಿದೆ ಕಾರಣ

ಜನ ಮೆಚ್ಚಿಕೊಂಡ ‘ಕನ್ನಡತಿ’ ಜೋಡಿಗೆ ಸಿಕ್ತು ಅವಾರ್ಡ್​; ಸಂಭ್ರಮಿಸಿದ ಕಿರಣ್​ ರಾಜ್​, ರಂಜನಿ ರಾಘವನ್​

ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!