AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Ranjani Raghavan: ಹಳ್ಳಿ ಮಹಿಳೆಯರ ಜೊತೆ ಸೋಬಾನೆ ಪದ ಹಾಡಿದ ‘ಕನ್ನಡತಿ’ ಸೀರಿಯಲ್​ ಭುವಿ; ಇಲ್ಲಿದೆ ವಿಡಿಯೋ

‘ಜಾನಪದ ಸಾಹಿತ್ಯದಲ್ಲಿ ಸೋಬಾನೆ ಪದಕ್ಕೆ ವಿಶಿಷ್ಟ ಸ್ಥಾನವಿದೆ. ಈ ಕಲೆಯನ್ನು ಉಳಿಸುವಲ್ಲಿ ಗ್ರಾಮೀಣ ಮಹಿಳೆಯರ ಪಾತ್ರ ಹಿರಿದು’ ಎಂದು ರಂಜನಿ ರಾಘವನ್​ ಹೇಳಿದ್ದಾರೆ.

Ranjani Raghavan: ಹಳ್ಳಿ ಮಹಿಳೆಯರ ಜೊತೆ ಸೋಬಾನೆ ಪದ ಹಾಡಿದ ‘ಕನ್ನಡತಿ’ ಸೀರಿಯಲ್​ ಭುವಿ; ಇಲ್ಲಿದೆ ವಿಡಿಯೋ
ರಂಜನಿ ರಾಘವನ್
Follow us
TV9 Web
| Updated By: ಮದನ್​ ಕುಮಾರ್​

Updated on: Jun 11, 2022 | 9:57 AM

ನಟಿ ರಂಜನಿ ರಾಘವನ್​ (Ranjani Raghavan) ಅವರು ಬಹುಮುಖ ಪ್ರತಿಭೆ. ನಟಿಯಾಗಿ, ಲೇಖಕಿಯಾಗಿ ಅವರು ಗುರುತಿಸಿಕೊಂಡಿದ್ದಾರೆ. ‘ಕನ್ನಡತಿ’ ಸೀರಿಯಲ್​ (Kannadathi Serial) ಭುವಿ ಪಾತ್ರದ ಮೂಲಕ ಅವರು ಅಪಾರ ಜನಪ್ರಿಯತೆ ಪಡೆದುಕೊಂಡಿದ್ದಾರೆ. ಸೋಶಿಯಲ್​ ಮೀಡಿಯಾದಲ್ಲೂ ಅವರು ತುಂಬ ಫೇಮಸ್​. ಇನ್​ಸ್ಟಾಗ್ರಾಮ್​ನಲ್ಲಿ ಅವರು ಆಗಾಗ ಏನಾದರೂ ಅಪ್​ಡೇಟ್​ ನೀಡುತ್ತಾ ಇರುತ್ತಾರೆ. ಅಭಿಮಾನಿಗಳಿಗಾಗಿ ತಮ್ಮ ದಿನಚರಿಯ ಕುರಿತು ಮಾಹಿತಿ ಹಂಚಿಕೊಳ್ಳುತ್ತಾರೆ. ಈಗ ರಂಜನಿ ರಾಘವನ್​ ಅವರು ಒಂದು ವಿಶೇಷ ವಿಡಿಯೋ ಶೇರ್​ ಮಾಡಿಕೊಂಡಿದ್ದಾರೆ. ಅದರಲ್ಲಿ ಅವರು ಹಳ್ಳಿ ಮಹಿಳೆಯರ ಜೊತೆ ಸೇರಿ ಸೋಬಾನೆ ಪದ (Sobane Song) ಹಾಡುತ್ತಿರುವುದು ಸೊಗಸಾಗಿದೆ. ಅಭಿಮಾನಿಗಳಿಗೆ ಈ ವಿಡಿಯೋ ತುಂಬ ಇಷ್ಟ ಆಗಿದ್ದು, ಕಮೆಂಟ್​ಗಳ ಮೂಲಕ ಮೆಚ್ಚುಗೆ ಸೂಚಿಸಿದ್ದಾರೆ. ಗ್ರಾಮೀಣ ಸೊಗಡಿನ ಈ ಹಾಡನ್ನು ಹೇಳಿದ್ದಕ್ಕಾಗಿ ಅವರ ಫ್ಯಾನ್ಸ್​ ಖುಷಿಪಟ್ಟಿದ್ದಾರೆ. ಈ ಎಲ್ಲ ಕಾರಣಗಳಿಂದಾಗಿ ರಂಜನಿ ಅವರು ವಿಶೇಷವಾಗಿ ಗುರುತಿಸಿಕೊಳ್ಳುತ್ತಾರೆ.

ರಂಜನಿ ರಾಘವನ್​ ಅವರು ಅಪ್ಪಟ ಕನ್ನಡದ ನಟಿ. ಧಾರಾವಾಹಿ ಪಾತ್ರದ ರೀತಿ ನಿಜಜೀವನದಲ್ಲಿಯೂ ಅವರು ಕನ್ನಡ ಭಾಷೆ ಬಗ್ಗೆ ಅಪಾರ ಗೌರವ ಹೊಂದಿದ್ದಾರೆ. ಇತ್ತೀಚಿನ ದಿನಗಳಲ್ಲಿ ಸೋಬಾನೆ ಪದ ಕೇಳುವುದು ಕಡಿಮೆ ಆಗಿದೆ. ಅದನ್ನು ಸೋಶಿಯಲ್​ ಮೀಡಿಯಾದಲ್ಲಿ ಹಂಚಿಕೊಳ್ಳುವ ಮೂಲಕ ಹೊಸ ಪೀಳಿಗೆಯವರಿಗೆ ಪರಿಚಯಿಸಿದ್ದಕ್ಕಾಗಿ ಅನೇಕರು ರಂಜನಿ ರಾಘವನ್​ಗೆ ಕಮೆಂಟ್​ ಮೂಲಕ ಮೆಚ್ಚುಗೆ ಮತ್ತು ಧನ್ಯವಾದ ತಿಳಿಸಿದ್ದಾರೆ.

ಇದನ್ನೂ ಓದಿ
Image
ಕನ್ನಡಾಂಬೆ ಭುವನೇಶ್ವರಿ ದೇವಸ್ಥಾನ ಹೇಗಿದೆ? ವಿಶೇಷ ವಿಡಿಯೋ ಮಾಡಿ ಪರಿಚಯಿಸಿದ ನಟಿ ರಂಜನಿ ರಾಘವನ್
Image
‘ಸೈಬರ್ ಲೋಕದಲ್ಲಿ ಹೆಣ್ಮಕ್ಕಳ ಖಾಸಗಿತನಕ್ಕೆ ಸೇಫ್ಟಿ ಇಲ್ಲ ಎಂದರೆ..’: ‘ಟಕ್ಕರ್​’ ಬಗ್ಗೆ ರಂಜನಿ ರಾಘವನ್​ ಮಾತು
Image
ಹರಿದ ಬಟ್ಟೆ, ಹಣೆಯಲ್ಲಿ ರಕ್ತ; ನಟಿ ರಂಜನಿ ರಾಘವನ್ ಹಂಚಿಕೊಂಡ ವಿಡಿಯೋ ನೋಡಿ ಗಾಬರಿಗೊಳ್ಳಬೇಡಿ
Image
ಹಿಂದಿಗೆ ಡಬ್​ ಆಗುತ್ತಿದೆ ‘ಕನ್ನಡತಿ’ ಧಾರಾವಾಹಿ; ಕಿರಣ್​ ರಾಜ್​-ರಂಜನಿ ರಾಘವನ್ ಫ್ಯಾನ್ಸ್​ಗೆ ಹೆಮ್ಮೆ​

ಇದನ್ನೂ ಓದಿ: ‘ಕನ್ನಡತಿ’ ನಟಿ ರಂಜನಿ ರಾಘವನ್​ ಬಳಿ ಎಷ್ಟು ದುಡ್ಡಿದೆ? ಅಚ್ಚರಿಯ ವಿಚಾರ ಬಾಯ್ಬಿಟ್ಟ ಭುವಿ

‘ಜಾನಪದ ಸಾಹಿತ್ಯದಲ್ಲಿ ಸೋಬಾನೆ ಪದಕ್ಕೆ ವಿಶಿಷ್ಟ ಸ್ಥಾನವಿದೆ. ಈ ಕಲೆಯನ್ನು ಉಳಿಸುವಲ್ಲಿ ಗ್ರಾಮೀಣ ಮಹಿಳೆಯರ ಪಾತ್ರ ಹಿರಿದು. ಕಂಚಿನ ಕಂಠದಲ್ಲಿ ಮೂಡಿಬರ್ತಿರೋ ಇವರ ಪದ ಇನ್ನಷ್ಟು ಕಿವಿಗಳನ್ನು ತಲುಪಿ ಹೃದಯಗಳನ್ನು ಮುಟ್ಟಲಿ ಅಂತ ಇದನ್ನು ಹಂಚಿಕೊಳ್ಳುತ್ತಿದ್ದೇನೆ’ ಎಂದು ಈ ವಿಡಿಯೋದ ಜತೆ ಬರೆದುಕೊಂಡಿದ್ದಾರೆ ರಂಜನಿ ರಾಘವನ್​.

(ಇನ್​ಸ್ಟಾಗ್ರಾಮ್​ನಲ್ಲಿ ರಂಜನಿ ಹಂಚಿಕೊಂಡ ಸೋಬಾನೆ ಹಾಡಿನ ವಿಡಿಯೋ ಇಲ್ಲಿದೆ)

‘ಕನ್ನಡತಿ’ ಧಾರಾವಾಹಿಯಲ್ಲಿ ನಟ ಕಿರಣ್​ ರಾಜ್​ ಜೊತೆ ರಂಜನಿ ರಾಘವನ್​ ಅವರ ಕಾಂಬಿನೇಷನ್​ ತುಂಬ ಚೆನ್ನಾಗಿ ಮೂಡಿಬರುತ್ತಿದ್ದು, ಅಭಿಮಾನಿಗಳಿಗೆ ಇಷ್ಟ ಆಗುತ್ತಿದೆ. ಸೀರಿಯಲ್​ ಮಾತ್ರವಲ್ಲದೇ ಸಿನಿಮಾಗಳಲ್ಲೂ ಅವರಿಗೆ ಬೇಡಿಕೆ ಇದೆ. ‘ಕ್ಷಮಿಸಿ ನಿಮ್ಮ ಖಾತೆಯಲ್ಲಿ ಹಣವಿಲ್ಲ’, ‘ಟಕ್ಕರ್​’ ಮುಂತಾದ ಸಿನಿಮಾಗಳಲ್ಲಿ ಅವರು ನಟಿಸಿದ್ದಾರೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಜನಸಾಮಾನ್ಯರ ಹಿತದೃಷ್ಟಿ ಗಮನದಲ್ಲಿಟ್ಟುಕೊಂಡೇ ನಿರ್ಧಾರಗಳು: ಶಿವಕುಮಾರ್
ಜನಸಾಮಾನ್ಯರ ಹಿತದೃಷ್ಟಿ ಗಮನದಲ್ಲಿಟ್ಟುಕೊಂಡೇ ನಿರ್ಧಾರಗಳು: ಶಿವಕುಮಾರ್
ಕಾಲ್ತುಳಿತ ದುರ್ಘಟನೆಗೆ ನಾನು ಹೇಗೆ ಜವಾಬ್ದಾರನಾಗುತ್ತೇನೆ? ಶಿವಕುಮಾರ್
ಕಾಲ್ತುಳಿತ ದುರ್ಘಟನೆಗೆ ನಾನು ಹೇಗೆ ಜವಾಬ್ದಾರನಾಗುತ್ತೇನೆ? ಶಿವಕುಮಾರ್
ವಂದೇ ಭಾರತ್ ಎಕ್ಸ್‌ಪ್ರೆಸ್‌ನಲ್ಲಿ ಶಾಲಾ ಮಕ್ಕಳ ಜೊತೆ ಪ್ರಯಾಣಿಸಿದ ಪ್ರಧಾನಿ
ವಂದೇ ಭಾರತ್ ಎಕ್ಸ್‌ಪ್ರೆಸ್‌ನಲ್ಲಿ ಶಾಲಾ ಮಕ್ಕಳ ಜೊತೆ ಪ್ರಯಾಣಿಸಿದ ಪ್ರಧಾನಿ
ಪರಿಹಾರ ಮೊತ್ತ ಹೆಚ್ಚಿಸುವಂತೆ ಸರ್ಕಾರವನ್ನೂ ಆಗ್ರಹಿಸುತ್ತೇನೆ: ಹೆಬ್ಬಾಳ್ಕರ್
ಪರಿಹಾರ ಮೊತ್ತ ಹೆಚ್ಚಿಸುವಂತೆ ಸರ್ಕಾರವನ್ನೂ ಆಗ್ರಹಿಸುತ್ತೇನೆ: ಹೆಬ್ಬಾಳ್ಕರ್
ಆರ್​ಸಿಬಿ ಕೊಡುವ ₹10 ಲಕ್ಷ ಭಿಕ್ಷೆ ಬೇಕಿಲ್ಲ, ಒಂದೊಂದು ಕೋಟಿ ಕೊಡಲಿ:ಬಿವಿವೈ
ಆರ್​ಸಿಬಿ ಕೊಡುವ ₹10 ಲಕ್ಷ ಭಿಕ್ಷೆ ಬೇಕಿಲ್ಲ, ಒಂದೊಂದು ಕೋಟಿ ಕೊಡಲಿ:ಬಿವಿವೈ
ಸಿಎಂ ಹಿಂದೆ ಸದಾ ಗೋವಿಂದ ಭಜನೆ ಮಾಡೋ ಆತನಿಂದಲೇ ಎಲ್ಲವೂ ಆಯ್ತು: HDK
ಸಿಎಂ ಹಿಂದೆ ಸದಾ ಗೋವಿಂದ ಭಜನೆ ಮಾಡೋ ಆತನಿಂದಲೇ ಎಲ್ಲವೂ ಆಯ್ತು: HDK
ಸತ್ತವರ ಮೇಲೆ ರಾಜಕೀಯ ಮಾಡಿಕೊಂಡೇ ಕುಮಾರಸ್ವಾಮಿ ಬೆಳೆದಿದ್ದು: ಸುರೇಶ್
ಸತ್ತವರ ಮೇಲೆ ರಾಜಕೀಯ ಮಾಡಿಕೊಂಡೇ ಕುಮಾರಸ್ವಾಮಿ ಬೆಳೆದಿದ್ದು: ಸುರೇಶ್
ಸಸ್ಪೆನ್ಷನ್ ಒಂದು ನಾಟಕ ಅಂತ ಪೊಲೀಸ್ ಅಧಿಕಾರಿಗಳಿಗೂ ಗೊತ್ತು: ಕುಮಾರಸ್ವಾಮಿ
ಸಸ್ಪೆನ್ಷನ್ ಒಂದು ನಾಟಕ ಅಂತ ಪೊಲೀಸ್ ಅಧಿಕಾರಿಗಳಿಗೂ ಗೊತ್ತು: ಕುಮಾರಸ್ವಾಮಿ
ಪೊಲೀಸ್ ಅಧಿಕಾರಿಗಳು ತಪ್ಪಿತಸ್ಥರೆಂದು ಮೇಲ್ನೋಟಕ್ಕೆ ಗೊತ್ತಾಗಿತ್ತು: ಸಿಎಂ
ಪೊಲೀಸ್ ಅಧಿಕಾರಿಗಳು ತಪ್ಪಿತಸ್ಥರೆಂದು ಮೇಲ್ನೋಟಕ್ಕೆ ಗೊತ್ತಾಗಿತ್ತು: ಸಿಎಂ
ಕ್ರೆಡಿಟ್​​ ತೆಗೆದುಕೊಳ್ಳುವ ಚಟ ನಿಮಗೆ: ಡಿಕೆಶಿ​​ ವಿರುದ್ಧ ಜೋಶಿ ಕಿಡಿ
ಕ್ರೆಡಿಟ್​​ ತೆಗೆದುಕೊಳ್ಳುವ ಚಟ ನಿಮಗೆ: ಡಿಕೆಶಿ​​ ವಿರುದ್ಧ ಜೋಶಿ ಕಿಡಿ