AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Ranjani Raghavan: ಹಳ್ಳಿ ಮಹಿಳೆಯರ ಜೊತೆ ಸೋಬಾನೆ ಪದ ಹಾಡಿದ ‘ಕನ್ನಡತಿ’ ಸೀರಿಯಲ್​ ಭುವಿ; ಇಲ್ಲಿದೆ ವಿಡಿಯೋ

‘ಜಾನಪದ ಸಾಹಿತ್ಯದಲ್ಲಿ ಸೋಬಾನೆ ಪದಕ್ಕೆ ವಿಶಿಷ್ಟ ಸ್ಥಾನವಿದೆ. ಈ ಕಲೆಯನ್ನು ಉಳಿಸುವಲ್ಲಿ ಗ್ರಾಮೀಣ ಮಹಿಳೆಯರ ಪಾತ್ರ ಹಿರಿದು’ ಎಂದು ರಂಜನಿ ರಾಘವನ್​ ಹೇಳಿದ್ದಾರೆ.

Ranjani Raghavan: ಹಳ್ಳಿ ಮಹಿಳೆಯರ ಜೊತೆ ಸೋಬಾನೆ ಪದ ಹಾಡಿದ ‘ಕನ್ನಡತಿ’ ಸೀರಿಯಲ್​ ಭುವಿ; ಇಲ್ಲಿದೆ ವಿಡಿಯೋ
ರಂಜನಿ ರಾಘವನ್
TV9 Web
| Edited By: |

Updated on: Jun 11, 2022 | 9:57 AM

Share

ನಟಿ ರಂಜನಿ ರಾಘವನ್​ (Ranjani Raghavan) ಅವರು ಬಹುಮುಖ ಪ್ರತಿಭೆ. ನಟಿಯಾಗಿ, ಲೇಖಕಿಯಾಗಿ ಅವರು ಗುರುತಿಸಿಕೊಂಡಿದ್ದಾರೆ. ‘ಕನ್ನಡತಿ’ ಸೀರಿಯಲ್​ (Kannadathi Serial) ಭುವಿ ಪಾತ್ರದ ಮೂಲಕ ಅವರು ಅಪಾರ ಜನಪ್ರಿಯತೆ ಪಡೆದುಕೊಂಡಿದ್ದಾರೆ. ಸೋಶಿಯಲ್​ ಮೀಡಿಯಾದಲ್ಲೂ ಅವರು ತುಂಬ ಫೇಮಸ್​. ಇನ್​ಸ್ಟಾಗ್ರಾಮ್​ನಲ್ಲಿ ಅವರು ಆಗಾಗ ಏನಾದರೂ ಅಪ್​ಡೇಟ್​ ನೀಡುತ್ತಾ ಇರುತ್ತಾರೆ. ಅಭಿಮಾನಿಗಳಿಗಾಗಿ ತಮ್ಮ ದಿನಚರಿಯ ಕುರಿತು ಮಾಹಿತಿ ಹಂಚಿಕೊಳ್ಳುತ್ತಾರೆ. ಈಗ ರಂಜನಿ ರಾಘವನ್​ ಅವರು ಒಂದು ವಿಶೇಷ ವಿಡಿಯೋ ಶೇರ್​ ಮಾಡಿಕೊಂಡಿದ್ದಾರೆ. ಅದರಲ್ಲಿ ಅವರು ಹಳ್ಳಿ ಮಹಿಳೆಯರ ಜೊತೆ ಸೇರಿ ಸೋಬಾನೆ ಪದ (Sobane Song) ಹಾಡುತ್ತಿರುವುದು ಸೊಗಸಾಗಿದೆ. ಅಭಿಮಾನಿಗಳಿಗೆ ಈ ವಿಡಿಯೋ ತುಂಬ ಇಷ್ಟ ಆಗಿದ್ದು, ಕಮೆಂಟ್​ಗಳ ಮೂಲಕ ಮೆಚ್ಚುಗೆ ಸೂಚಿಸಿದ್ದಾರೆ. ಗ್ರಾಮೀಣ ಸೊಗಡಿನ ಈ ಹಾಡನ್ನು ಹೇಳಿದ್ದಕ್ಕಾಗಿ ಅವರ ಫ್ಯಾನ್ಸ್​ ಖುಷಿಪಟ್ಟಿದ್ದಾರೆ. ಈ ಎಲ್ಲ ಕಾರಣಗಳಿಂದಾಗಿ ರಂಜನಿ ಅವರು ವಿಶೇಷವಾಗಿ ಗುರುತಿಸಿಕೊಳ್ಳುತ್ತಾರೆ.

ರಂಜನಿ ರಾಘವನ್​ ಅವರು ಅಪ್ಪಟ ಕನ್ನಡದ ನಟಿ. ಧಾರಾವಾಹಿ ಪಾತ್ರದ ರೀತಿ ನಿಜಜೀವನದಲ್ಲಿಯೂ ಅವರು ಕನ್ನಡ ಭಾಷೆ ಬಗ್ಗೆ ಅಪಾರ ಗೌರವ ಹೊಂದಿದ್ದಾರೆ. ಇತ್ತೀಚಿನ ದಿನಗಳಲ್ಲಿ ಸೋಬಾನೆ ಪದ ಕೇಳುವುದು ಕಡಿಮೆ ಆಗಿದೆ. ಅದನ್ನು ಸೋಶಿಯಲ್​ ಮೀಡಿಯಾದಲ್ಲಿ ಹಂಚಿಕೊಳ್ಳುವ ಮೂಲಕ ಹೊಸ ಪೀಳಿಗೆಯವರಿಗೆ ಪರಿಚಯಿಸಿದ್ದಕ್ಕಾಗಿ ಅನೇಕರು ರಂಜನಿ ರಾಘವನ್​ಗೆ ಕಮೆಂಟ್​ ಮೂಲಕ ಮೆಚ್ಚುಗೆ ಮತ್ತು ಧನ್ಯವಾದ ತಿಳಿಸಿದ್ದಾರೆ.

ಇದನ್ನೂ ಓದಿ
Image
ಕನ್ನಡಾಂಬೆ ಭುವನೇಶ್ವರಿ ದೇವಸ್ಥಾನ ಹೇಗಿದೆ? ವಿಶೇಷ ವಿಡಿಯೋ ಮಾಡಿ ಪರಿಚಯಿಸಿದ ನಟಿ ರಂಜನಿ ರಾಘವನ್
Image
‘ಸೈಬರ್ ಲೋಕದಲ್ಲಿ ಹೆಣ್ಮಕ್ಕಳ ಖಾಸಗಿತನಕ್ಕೆ ಸೇಫ್ಟಿ ಇಲ್ಲ ಎಂದರೆ..’: ‘ಟಕ್ಕರ್​’ ಬಗ್ಗೆ ರಂಜನಿ ರಾಘವನ್​ ಮಾತು
Image
ಹರಿದ ಬಟ್ಟೆ, ಹಣೆಯಲ್ಲಿ ರಕ್ತ; ನಟಿ ರಂಜನಿ ರಾಘವನ್ ಹಂಚಿಕೊಂಡ ವಿಡಿಯೋ ನೋಡಿ ಗಾಬರಿಗೊಳ್ಳಬೇಡಿ
Image
ಹಿಂದಿಗೆ ಡಬ್​ ಆಗುತ್ತಿದೆ ‘ಕನ್ನಡತಿ’ ಧಾರಾವಾಹಿ; ಕಿರಣ್​ ರಾಜ್​-ರಂಜನಿ ರಾಘವನ್ ಫ್ಯಾನ್ಸ್​ಗೆ ಹೆಮ್ಮೆ​

ಇದನ್ನೂ ಓದಿ: ‘ಕನ್ನಡತಿ’ ನಟಿ ರಂಜನಿ ರಾಘವನ್​ ಬಳಿ ಎಷ್ಟು ದುಡ್ಡಿದೆ? ಅಚ್ಚರಿಯ ವಿಚಾರ ಬಾಯ್ಬಿಟ್ಟ ಭುವಿ

‘ಜಾನಪದ ಸಾಹಿತ್ಯದಲ್ಲಿ ಸೋಬಾನೆ ಪದಕ್ಕೆ ವಿಶಿಷ್ಟ ಸ್ಥಾನವಿದೆ. ಈ ಕಲೆಯನ್ನು ಉಳಿಸುವಲ್ಲಿ ಗ್ರಾಮೀಣ ಮಹಿಳೆಯರ ಪಾತ್ರ ಹಿರಿದು. ಕಂಚಿನ ಕಂಠದಲ್ಲಿ ಮೂಡಿಬರ್ತಿರೋ ಇವರ ಪದ ಇನ್ನಷ್ಟು ಕಿವಿಗಳನ್ನು ತಲುಪಿ ಹೃದಯಗಳನ್ನು ಮುಟ್ಟಲಿ ಅಂತ ಇದನ್ನು ಹಂಚಿಕೊಳ್ಳುತ್ತಿದ್ದೇನೆ’ ಎಂದು ಈ ವಿಡಿಯೋದ ಜತೆ ಬರೆದುಕೊಂಡಿದ್ದಾರೆ ರಂಜನಿ ರಾಘವನ್​.

(ಇನ್​ಸ್ಟಾಗ್ರಾಮ್​ನಲ್ಲಿ ರಂಜನಿ ಹಂಚಿಕೊಂಡ ಸೋಬಾನೆ ಹಾಡಿನ ವಿಡಿಯೋ ಇಲ್ಲಿದೆ)

‘ಕನ್ನಡತಿ’ ಧಾರಾವಾಹಿಯಲ್ಲಿ ನಟ ಕಿರಣ್​ ರಾಜ್​ ಜೊತೆ ರಂಜನಿ ರಾಘವನ್​ ಅವರ ಕಾಂಬಿನೇಷನ್​ ತುಂಬ ಚೆನ್ನಾಗಿ ಮೂಡಿಬರುತ್ತಿದ್ದು, ಅಭಿಮಾನಿಗಳಿಗೆ ಇಷ್ಟ ಆಗುತ್ತಿದೆ. ಸೀರಿಯಲ್​ ಮಾತ್ರವಲ್ಲದೇ ಸಿನಿಮಾಗಳಲ್ಲೂ ಅವರಿಗೆ ಬೇಡಿಕೆ ಇದೆ. ‘ಕ್ಷಮಿಸಿ ನಿಮ್ಮ ಖಾತೆಯಲ್ಲಿ ಹಣವಿಲ್ಲ’, ‘ಟಕ್ಕರ್​’ ಮುಂತಾದ ಸಿನಿಮಾಗಳಲ್ಲಿ ಅವರು ನಟಿಸಿದ್ದಾರೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Follow Us
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್