AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಕೆಲವೊಂದು ಯುದ್ಧಗಳನ್ನು ನಾನೇ ಗೆಲ್ಲಬೇಕಿದೆ’; ಸಹಾಯ ಮಾಡಲು ಬಂದ ಹರ್ಷನಿಗೆ ಒಂದೇ ಮಾತಲ್ಲಿ ಉತ್ತರಿಸಿದ ಭುವಿ

ಭುವಿಯನ್ನು ರತ್ನಮಾಲಾ ಸೊಸೆಯಾಗಿ ಸ್ವೀಕರಿಸುತ್ತಿರುವ ವಿಚಾರ ಅನೇಕರಿಗೆ ಇಷ್ಟವಿಲ್ಲ. ಬಡ ಕುಟುಂಬದ ಹಿನ್ನೆಲೆಯಿಂದ ಬಂದ ಭುವಿ ಈಗ ಎಲ್ಲದಕ್ಕೂ ಒಡತಿ ಆಗುತ್ತಾಳೆ ಅನ್ನುವ ವಿಚಾರ ಅನೇಕರಿಂದ ಸಹಿಸಿಕೊಳ್ಳೋಕೆ ಆಗುತ್ತಿಲ್ಲ. ಈ ಕಾರಣಕ್ಕೆ ಸಾನಿಯಾ ಉರಿದುಕೊಳ್ಳುತ್ತಿದ್ದಾಳೆ.

‘ಕೆಲವೊಂದು ಯುದ್ಧಗಳನ್ನು ನಾನೇ ಗೆಲ್ಲಬೇಕಿದೆ’; ಸಹಾಯ ಮಾಡಲು ಬಂದ ಹರ್ಷನಿಗೆ ಒಂದೇ ಮಾತಲ್ಲಿ ಉತ್ತರಿಸಿದ ಭುವಿ
ಭುವಿ-ಹರ್ಷ
TV9 Web
| Edited By: |

Updated on: Jun 07, 2022 | 8:30 PM

Share

ಕನ್ನಡತಿ ಧಾರಾವಾಹಿಯಲ್ಲಿ (Kannadathi Serial) ಭುವಿ ಹಾಗೂ ಹರ್ಷನ (Harsha) ಮದುವೆಗೆ ಕ್ಷಣಗಣನೆ ಆರಂಭವಾಗಿದೆ. ಭುವಿಯನ್ನು ಆರ್ಥಿಕ ಸಂಕಷ್ಟಕ್ಕೆ ಸಿಲುಕಿಸುವ ಸಾನಿಯಾ ಪ್ರಯತ್ನ ಯಶಸ್ವಿ ಆಗಿದೆ. ಸೀರೆ ಖರೀದಿ ವೇಳೆ ಹೆಚ್ಚಿನ ಮೊತ್ತದ ಸೀರೆ ಖರೀದಿಸುವಂತೆ ಮಾಡಿ ಭುವಿಯನ್ನು ಕಷ್ಟಕ್ಕೆ ಸಿಲುಕಿಸಿದ್ದಾಳೆ ಸಾನಿಯಾ. ಇದರಿಂದ ಭುವಿ ಹೆಣಗಾಡುತ್ತಿದ್ದಾಳೆ. ‘ದೊಡ್ಡವರ ಮನೆಯ ಸಹಾವಾಸ ಬೇಡವೇ ಬೇಡ’ ಎಂದು ಭುವಿ ಹೇಳುವಂತೆ ಆಗಬೇಕು ಎಂಬುದು ಸಾನಿಯಾ ಆಸೆ. ಆದರೆ, ಭುವಿ ಹಾಗೆಲ್ಲ ಸೋಲುವವಳು ಅಲ್ಲವೇ ಅಲ್ಲ. ಸ್ವಾಭಿಮಾನವನ್ನೂ ಬಿಡುವವಳಲ್ಲ. ಈ ಯುದ್ಧವನ್ನು ತಾನೇ ಗೆಲ್ಲುವ ಹಠಕ್ಕೆ ಬಿದ್ದಿದ್ದಾಳೆ.

ಭುವಿಯನ್ನು ರತ್ನಮಾಲಾ ಸೊಸೆಯಾಗಿ ಸ್ವೀಕರಿಸುತ್ತಿರುವ ವಿಚಾರ ಅನೇಕರಿಗೆ ಇಷ್ಟವಿಲ್ಲ. ಬಡ ಕುಟುಂಬದ ಹಿನ್ನೆಲೆಯಿಂದ ಬಂದ ಭುವಿ ಈಗ ಎಲ್ಲದಕ್ಕೂ ಒಡತಿ ಆಗುತ್ತಾಳೆ ಅನ್ನುವ ವಿಚಾರ ಅನೇಕರಿಂದ ಸಹಿಸಿಕೊಳ್ಳೋಕೆ ಆಗುತ್ತಿಲ್ಲ. ಈ ಕಾರಣಕ್ಕೆ ಸಾನಿಯಾ ಉರಿದುಕೊಳ್ಳುತ್ತಿದ್ದಾಳೆ. ಆಕೆಗೆ ಇದನ್ನು ಅರಗಿಸಿಕೊಳ್ಳೋಕೆ ಸಾಧ್ಯವೇ ಆಗುತ್ತಿಲ್ಲ. ಹೀಗಾಗಿ, ಭುವಿಯ ವಿರುದ್ಧ ಮಸಲತ್ತು ನಡೆಸುತ್ತಿದ್ದಾಳೆ.

ಭುವಿಯ ಮನೆಯಲ್ಲಿ ಮದುವೆ ತಯಾರಿ ನಡೆಯುತ್ತಿದೆ. ಮದುವೆ ಹಿಂದಿನ ದಿನದ ನಾಂದಿ ಕಾರ್ಯಕ್ಕೆ ಊಟ ಸೇರಿ ಮತ್ತಿತ್ಯಾದಿ ಕಾರ್ಯಗಳಿಗೆ ಹೆಚ್ಚಿನ ಖರ್ಚು ಎದುರಾಗುತ್ತಿದೆ. ಇದನ್ನು ಭರಿಸೋಕೆ ಭುವಿಗೆ ಸಾಧ್ಯವೇ ಆಗುತ್ತಿಲ್ಲ. ಆದರೆ, ಇದನ್ನು ಆಕೆ ಒಬ್ಬಂಟಿಯಾಗಿ ಎದುರಿಸಬೇಕಾಗಿದೆ.

ಇದನ್ನೂ ಓದಿ
Image
‘ಹರ್ಷ ಭುವಿ ಮದುವೆ ಅದೇ ಮುಹೂರ್ತದಲ್ಲಿ ನಡೆಯುತ್ತೆ’; ಸಾನಿಯಾ ವಿರುದ್ಧ ತಿರುಗಿ ಬಿದ್ದ ವರುಧಿನಿ
Image
ಮತ್ತೊಂದು ಚಿತ್ರ ಒಪ್ಪಿಕೊಂಡ ನಟ ಕಿರಣ್ ರಾಜ್; ‘ಭರ್ಜರಿ ಗಂಡು’ ನಿರ್ದೇಶಕನ ಜತೆ ಹೊಸ ಸಿನಿಮಾ
Image
‘ಕನ್ನಡತಿ’ ಧಾರಾವಾಹಿಗಿಂತಲೂ ಮುಂಚೆ ನಟ ಕಿರಣ್​ ರಾಜ್​ ಈ ಸಿನಿಮಾ ಒಪ್ಪಿಕೊಂಡಿದ್ದು ಯಾಕೆ?
Image
‘ಕನ್ನಡತಿ’ ಹೀರೋ ಕಿರಣ್​ ರಾಜ್​ ದುಡಿಮೆಯ ಶೇ.40ರಷ್ಟು ಹಣ ಬಡವರಿಗೆ ಮೀಸಲು

ಇದನ್ನೂ ಓದಿ: ಭುವಿ-ಹರ್ಷನ ಮದುವೆಗೆ ವಿಶೇಷ ಅತಿಥಿ ಎಂಟ್ರಿ; ವಿವಾಹ ಕೆಲಸಕ್ಕೆ ‘ಗೀತಾ’ ಧಾರಾವಾಹಿ ವಿಜಯ್ ಹಾಜರಿ

ಹರ್ಷ ಹಾಗೂ ಭುವಿ ದೂರವಾಣಿ ಮೂಲಕ ಮಾತನಾಡುತ್ತಿದ್ದರು. ಆಗ, ‘ಹಾಲಿನವರಿಗೆ ಕೊಡುವ ಹಣ ಇಷ್ಟು ಬಾಕಿ ಇದೆ’ ಎಂದು ಭುವಿಯ ಬಳಿ ಆಕೆಯ ತಂಗಿ ಬಿಂದು ಹೇಳಿದಳು. ಇದು ಹರ್ಷನಿಗೆ ಕೇಳಿದೆ. ಈ ವೇಳೆ ಹರ್ಷ ‘ಏನಾದರೂ ತೊಂದರೆ ಇದ್ದರೆ ನನಗೆ ಹೇಳಿ. ಚಿಕ್ಕದಾಗಿ ಹರ್ಷ ಎಂದು ಕೂಗಿದರೂ ಸಾಕು. ನಾನು ನಿಮ್ಮ ಎದುರು ಬಂದು ನಿಲ್ಲುತ್ತೇನೆ’ ಎಂದಿದ್ದಾನೆ. ಇದಕ್ಕೆ ಭುವಿ ನೇರವಾಗಿಯೇ ಉತ್ತರ ನೀಡಿದ್ದಾಳೆ. ‘ನನಗೆ ಏನೇ ತೊಂದರೆ ಆದರೂ ನೀವು ಬರ್ತೀರಾ ಅನ್ನೋದು ಗೊತ್ತಿದೆ. ಆ ವಿಷಯದಲ್ಲಿ ಸಂಶಯ ಇಲ್ಲ. ಆದರೆ, ಕೆಲ ಯುದ್ಧಗಳನ್ನು ನಾನೇ ಗೆಲ್ಲಬೇಕಿದೆ’ ಎಂದಿದ್ದಾಳೆ ಭುವಿ. ಈ ಮೂಲಕ ಈ ಸಮಸ್ಯೆಯಿಂದ ತಾವೇ ಹೊರ ಬರುವ ಬಗ್ಗೆ ಹೇಳಿಕೊಂಡಿದ್ದಾಳೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Follow Us
Web contact
Web contact

TV9 Kannada

Read More
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಸಿಎಂ ಆಗುವ ಮುನ್ನವೇ ಡಿಕೆಶಿ ರಾಜಕೀಯ ತಂತ್ರಗಾರಿಕೆ
ಸಿಎಂ ಆಗುವ ಮುನ್ನವೇ ಡಿಕೆಶಿ ರಾಜಕೀಯ ತಂತ್ರಗಾರಿಕೆ
ಡಿಕೆಶಿ ಜೊತೆಗಿನ 25 ವರ್ಷದ ಆತ್ಮೀಯತೆ ಹಂಚಿಕೊಂಡ ಕಡಲೆಕಾಯಿ ವ್ಯಾಪಾರಿ
ಡಿಕೆಶಿ ಜೊತೆಗಿನ 25 ವರ್ಷದ ಆತ್ಮೀಯತೆ ಹಂಚಿಕೊಂಡ ಕಡಲೆಕಾಯಿ ವ್ಯಾಪಾರಿ
ಡಿಕೆಶಿ ಸಿಎಂ, ಪರಮೇಶ್ವರ್-ಡಿಸಿಎಂ: ಇಲ್ಲಿದೆ ಸಚಿವರ ಅಧಿಕೃತ ಲಿಸ್ಟ್
ಡಿಕೆಶಿ ಸಿಎಂ, ಪರಮೇಶ್ವರ್-ಡಿಸಿಎಂ: ಇಲ್ಲಿದೆ ಸಚಿವರ ಅಧಿಕೃತ ಲಿಸ್ಟ್
ಡಿಕೆಶಿ ಪ್ರಮಾಣವಚನ ಕಾರ್ಯಕ್ರಮದ ಬಗ್ಗೆ ನೊಣವಿನಕೆರೆ ಶ್ರೀಗಳು ಹೇಳಿದ್ದಿಷ್ಟು
ಡಿಕೆಶಿ ಪ್ರಮಾಣವಚನ ಕಾರ್ಯಕ್ರಮದ ಬಗ್ಗೆ ನೊಣವಿನಕೆರೆ ಶ್ರೀಗಳು ಹೇಳಿದ್ದಿಷ್ಟು
‘ಬ್ಲಾಸ್ಟ್​’ ಸಿನಿಮಾಗೆ ಬ್ಲಾಸ್ಟ್​ ಮ್ಯೂಸಿಕ್ ಕೊಟ್ಟ ರವಿ ಬಸ್ರೂರು
‘ಬ್ಲಾಸ್ಟ್​’ ಸಿನಿಮಾಗೆ ಬ್ಲಾಸ್ಟ್​ ಮ್ಯೂಸಿಕ್ ಕೊಟ್ಟ ರವಿ ಬಸ್ರೂರು