AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಹರ್ಷ ಭುವಿ ಮದುವೆ ಅದೇ ಮುಹೂರ್ತದಲ್ಲಿ ನಡೆಯುತ್ತೆ’; ಸಾನಿಯಾ ವಿರುದ್ಧ ತಿರುಗಿ ಬಿದ್ದ ವರುಧಿನಿ

ಹರ್ಷ ಹಾಗೂ ಭುವಿ ಮದುವೆ ಆಗೋದು ವರುಧಿನಿಗೂ ಇಷ್ಟ ಇಲ್ಲ. ಭುವಿ ಹಾಗೂ ಹರ್ಷ ಪ್ರೀತಿಸುತ್ತಿದ್ದಾರೆ ಎನ್ನುವ ವಿಚಾರ ಕೇಳಿ ವರುಧಿನಿ ಕೋಪಗೊಂಡಿದ್ದಳು. ಆದರೆ, ದಿನಕಳೆದಂತೆ ಆಕೆ ಕೊಂಚ ಬದಲಾಗುತ್ತಿದ್ದಾಳೆ.

‘ಹರ್ಷ ಭುವಿ ಮದುವೆ ಅದೇ ಮುಹೂರ್ತದಲ್ಲಿ ನಡೆಯುತ್ತೆ’; ಸಾನಿಯಾ ವಿರುದ್ಧ ತಿರುಗಿ ಬಿದ್ದ ವರುಧಿನಿ
ವರು-ಸಾನಿಯಾ
TV9 Web
| Edited By: |

Updated on: May 28, 2022 | 7:50 AM

Share

‘ಕನ್ನಡತಿ’ ಧಾರಾವಾಹಿಯ (Kannadathi Serial) ಪ್ರಮುಖ ಪಾತ್ರಧಾರಿಗಳಾದ ಹರ್ಷ ಹಾಗೂ ಭುವಿ ಮದುವೆಗೆ (Harsha And Bhuvi Wedding) ಹಲವು ವಿಘ್ನಗಳು ಎದುರಾಗುವ ಸೂಚನೆ ಸಿಕ್ಕಿದೆ. ಹರ್ಷನ ತಾಯಿ ರತ್ನಮಾಲಾಗೆ ಆರೋಗ್ಯ ಕೈ ಕೊಟ್ಟಿದೆ. ಅವರು ಯಾವಾಗ ಬೇಕಾದರೂ ಕೊನೆಯುಸಿರು ತೆಗೆಯಬಹುದು ಎನ್ನುವ ಎಚ್ಚರಿಕೆ ವೈದ್ಯರಿಂದ ಬಂದಿದೆ. ಇದು ಹರ್ಷ ಹಾಗೂ ಭುವಿ ಮದುವೆಗೆ ಇರುವ ಮೊದಲ ಕಂಟಕ. ಇದಲ್ಲದೆ ಸಾನಿಯಾ ಹಾಗೂ ವರುಧಿನಿ ಒಟ್ಟಾಗಿ ಮದುವೆ ನಿಲ್ಲಿಸಲು ಪ್ಲ್ಯಾನ್ ರೂಪಿಸುತ್ತಿದ್ದಾರೆ. ಆದರೆ, ಕೊನೇ ಕ್ಷಣದಲ್ಲಿ ಸಾನಿಯಾಗೆ ವರುಧಿನಿ ಕೈ ಕೊಟ್ಟಿದ್ದಾಳೆ. ಮದುವೆ ಯಾವುದೇ ಕಾರಣಕ್ಕೂ ನಡೆದೇ ನಡೆಯುತ್ತದೆ ಎನ್ನುವ ಮಾತನ್ನು ಹೇಳಿದ್ದಾಳೆ. ಇದರಿಂದ ಸಾನಿಯಾ ಆತಂಕಕ್ಕೆ ಒಳಗಾಗಿದ್ದಾಳೆ. ಮುಂದೇನಾಗುತ್ತದೆ ಅನ್ನೋದು ಸದ್ಯದ ಕುತೂಹಲ.

ಹರ್ಷ ಹಾಗೂ ಭುವಿ ಮದುವೆ ಆಗೋದು ವರುಧಿನಿಗೂ ಇಷ್ಟ ಇಲ್ಲ. ಭುವಿ ಹಾಗೂ ಹರ್ಷ ಪ್ರೀತಿಸುತ್ತಿದ್ದಾರೆ ಎನ್ನುವ ವಿಚಾರ ಕೇಳಿ ವರುಧಿನಿ ಕೋಪಗೊಂಡಿದ್ದಳು. ಆದರೆ, ದಿನಕಳೆದಂತೆ ಆಕೆ ಕೊಂಚ ಬದಲಾಗುತ್ತಿದ್ದಾಳೆ. ಹರ್ಷ ಹಾಗೂ ಭುವಿ ಜೋಡಿಯನ್ನು ಒಪ್ಪಿಕೊಳ್ಳುತ್ತಿದ್ದಾಳೆ. ಇದು ಸಾನಿಯಾ ಚಿಂತೆಗೆ ಕಾರಣವಾಗಿದೆ. ಅಲ್ಲದೆ, ಈಗ ಆಕೆ ಹೇಳಿರುವ ನೇರ ಮಾತಿನಿಂದ ಸಾನಿಯಾ ಚಿಂತೆಗೀಡಾಗಿದ್ದಾಳೆ.

ಹರ್ಷನ ಮದುವೆ ಜವಾಬ್ದಾರಿಯನ್ನು ವರುಧಿನಿ ವಹಿಸಿಕೊಂಡಿದ್ದಾಳೆ. ಇದಕ್ಕೆ ದೊಡ್ಡ ಮಟ್ಟದಲ್ಲಿ ತಯಾರಿ ನಡೆಯುತ್ತಿದೆ. ಇದನ್ನು ಕಂಡು ಸಾನಿಯಾ ಅಚ್ಚರಿಗೊಂಡಳು. ನಿಲ್ಲಿಸುವ ಮದುವೆಗೆ ಯಾಕಿಷ್ಟು ತಯಾರಿ ಎಂದು ಕೇಳಿದಳು. ಇದಕ್ಕೆ ಉತ್ತರಿಸಿದ ವರುಧಿನಿ, ‘ಹೀರೋನ ಮದುವೆ ನಡೆದೇ ನಡೆಯುತ್ತದೆ. ಯಾವುದೇ ಅಡ್ಡಿ ಆಗೋಕೆ ನಾನು ಬಿಡುವುದಿಲ್ಲ’ ಎಂದಿದ್ದಾಳೆ. ಈ ಮಾತನ್ನು ಕೇಳಿ ಸಾನಿಯಾ ಚಿಂತೆಗೆ ಒಳಗಾಗಿದ್ದಾಳೆ.

ಇದನ್ನೂ ಓದಿ
Image
ಮತ್ತೊಂದು ಚಿತ್ರ ಒಪ್ಪಿಕೊಂಡ ನಟ ಕಿರಣ್ ರಾಜ್; ‘ಭರ್ಜರಿ ಗಂಡು’ ನಿರ್ದೇಶಕನ ಜತೆ ಹೊಸ ಸಿನಿಮಾ
Image
‘ನಾನು ಎಷ್ಟು ಟೇಕ್​ ತೆಗೆದುಕೊಳ್ತೀನಿ ಅಂತ ಬೆಟ್​ ಕಟ್ಟುತ್ತಿದ್ದರು’; ಅವಮಾನದ ಹಾದಿ ನೆನೆದ ಕಿರಣ್​ ರಾಜ್
Image
‘ಕನ್ನಡತಿ’ ಧಾರಾವಾಹಿಗಿಂತಲೂ ಮುಂಚೆ ನಟ ಕಿರಣ್​ ರಾಜ್​ ಈ ಸಿನಿಮಾ ಒಪ್ಪಿಕೊಂಡಿದ್ದು ಯಾಕೆ?
Image
‘ಕನ್ನಡತಿ’ ಹೀರೋ ಕಿರಣ್​ ರಾಜ್​ ದುಡಿಮೆಯ ಶೇ.40ರಷ್ಟು ಹಣ ಬಡವರಿಗೆ ಮೀಸಲು

ವರುಧಿನಿ ಹಾಗೂ ಭುವಿ ಮೊದಲಿನಿಂದಲೂ ಗೆಳತಿಯರು. ವರುಧಿನಿಯನ್ನು ಹೆಚ್ಚು ನಂಬಬೇಡ ಎಂದು ಸಾನಿಯಾ ತಾಯಿ ಮೊದಲೇ ಎಚ್ಚರಿಕೆ ನೀಡಿದ್ದಳು. ಆದರೆ, ಸಾನಿಯಾ ಈ ಬಗ್ಗೆ ತಲೆಕೆಡಿಸಿಕೊಂಡಿರಲಿಲ್ಲ. ಈಗ ಅವಳಿಗೆ ಸಂಕಟ ಎದುರಾಗಿದೆ.

ಇದನ್ನೂ ಓದಿ:  ಬೆಟ್ಟದಿಂದ ಭುವಿಯನ್ನು ತಳ್ಳೇ ಬಿಟ್ಟ ಕಿಲ್ಲರ್; ವರುಧಿನಿಯಿಂದ ಮತ್ತಷ್ಟು ದೂರವಾದ ಹರ್ಷ

ಹರ್ಷ ಹಾಗೂ ಭುವಿ ಮದುವೆಗೂ ಮುನ್ನ ಭುವನೇಶ್ವರಿ ದೇವಸ್ಥಾನಕ್ಕೆ ತೆರಳಿ ಪೂಜೆ ಸಲ್ಲಿಸಿ ಬಂದಿದ್ದಾರೆ. ಶೀಘ್ರದಲ್ಲೇ ಇವರ ಮದುವೆ ನಡೆಯಲಿದೆ. ಮದುವೆ ಆದ ಬಳಿಕ ಸಂಪೂರ್ಣ ಆಡಳಿತ ಭುವಿಯ ಪಾಲಾಗಲಿದೆ. ಇದನ್ನು ಸಾನಿಯಾ ಹೇಗೆ ಸ್ವೀಕರಿಸುತ್ತಾಳೆ ಅನ್ನೋದು ಸದ್ಯದ ಕುತೂಹಲ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Follow Us
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್