AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹರ್ಷ-ಭುವಿ ಮದುವೆಯಿಂದ ಅರ್ಧಕ್ಕೆ ನಿರ್ಗಮಿಸಿದ ‘ಕನ್ನಡತಿ’ಯ ರತ್ನಮಾಲಾ ನಿಜಕ್ಕೂ ಇರೋದೆಲ್ಲಿ? ಇಲ್ಲಿದೆ ಉತ್ತರ

ಚಿತ್ಕಲಾ ಬಿರಾದಾರ ಅವರು ‘ಕನ್ನಡತಿ’ ಧಾರಾವಾಹಿಯಲ್ಲಿ ರತ್ನಮಾಲಾ ಪಾತ್ರ ಮಾಡುತ್ತಿದ್ದಾರೆ. ಅವರು ಕನ್ನಡ ಕಿರುತೆರೆ ಮತ್ತು ಹಿರಿತೆರೆಯಲ್ಲಿ ಸಕ್ರಿಯರಾಗಿದ್ದಾರೆ.

ಹರ್ಷ-ಭುವಿ ಮದುವೆಯಿಂದ ಅರ್ಧಕ್ಕೆ ನಿರ್ಗಮಿಸಿದ ‘ಕನ್ನಡತಿ’ಯ ರತ್ನಮಾಲಾ ನಿಜಕ್ಕೂ ಇರೋದೆಲ್ಲಿ? ಇಲ್ಲಿದೆ ಉತ್ತರ
TV9 Web
| Updated By: ರಾಜೇಶ್ ದುಗ್ಗುಮನೆ|

Updated on: Jul 13, 2022 | 6:30 AM

Share

‘ಕನ್ನಡತಿ’ (Kannadathi) ಧಾರಾವಾಹಿಯಲ್ಲಿ ಹರ್ಷ ಹಾಗೂ ಭುವಿ ಮದುವೆ ಆಗಿದೆ. ಇದು ಅವರ ಫ್ಯಾನ್ಸ್​ಗೆ ಖುಷಿ ನೀಡಿದೆ. ಅವರು ಮದುವೆ ಆಗಬೇಕು ಎಂಬುದು ಅವರ ಫ್ಯಾನ್ಸ್​ನ​ ಹಲವು ಸಮಯದ ಕನಸಾಗಿತ್ತು. ಕೊನೆಗೂ ಈ ಕನಸು ನನಸಾಗಿದೆ. ಅದ್ದೂರಿಯಾಗಿ ಇವರ ಮದುವೆ ನೆರವೇರಿದೆ. ಈ ಮಧ್ಯೆ ಫ್ಯಾನ್ಸ್​ಗೆ ಬೇಸರವಾಗುವಂತಹ ವಿಚಾರ ಒಂದು ಜರುಗಿತ್ತು. ಹರ್ಷನ ತಾಯಿ ರತ್ನಮಾಲಾ ಮದುವೆ ಮುಗಿಯುತ್ತಿದ್ದಂತೆ ಧಾರಾವಾಹಿಯಿಂದ ನಿರ್ಗಮಿಸಿದರು. ರತ್ನಮಾಲಾ ಮರಳುತ್ತಾರೋ ಅಥವಾ ಇಲ್ಲವೋ ಎನ್ನುವ ಪ್ರಶ್ನೆ ಮೂಡಿತ್ತು. ಇದಕ್ಕೆ ಉತ್ತರ ಇಲ್ಲಿದೆ.

ಚಿತ್ಕಲಾ ಬಿರಾದಾರ ಅವರು ‘ಕನ್ನಡತಿ’ ಧಾರಾವಾಹಿಯಲ್ಲಿ ರತ್ನಮಾಲಾ ಪಾತ್ರ ಮಾಡುತ್ತಿದ್ದಾರೆ. ಅವರು ಕನ್ನಡ ಕಿರುತೆರೆ ಮತ್ತು ಹಿರಿತೆರೆಯಲ್ಲಿ ಸಕ್ರಿಯರಾಗಿದ್ದಾರೆ. ಅವರ ನಟನೆಯನ್ನು ಸಾಕಷ್ಟು ಮಂದಿ ಇಷ್ಟಪಡುತ್ತಾರೆ. ‘ಕನ್ನಡತಿ’ ಧಾರಾವಾಹಿಯಲ್ಲಿ ಅವರು ನಿರ್ವಹಿಸುತ್ತಿರುವ ರತ್ನಮಾಲಾ ಪಾತ್ರ ಪ್ರೇಕ್ಷಕರಿಗೆ ಸಾಕಷ್ಟು ಇಷ್ಟವಾಗಿದೆ. ಹರ್ಷ ಹಾಗೂ ಭುವಿ ಮದುವೆ ಸಂದರ್ಭದಲ್ಲಿ ರತ್ನಮಾಲಾ ಆರೋಗ್ಯ ಹದಗೆಟ್ಟಿದೆ ಎಂದು ತೋರಿಸಲಾಯಿತು. ಚಿಕಿತ್ಸೆ ಕಾರಣದಿಂದ ಅವರನ್ನು ಅಮೆರಿಕಕ್ಕೆ ಕಳುಹಿಸಲಾಗಿದೆ ಎಂದು ಧಾರಾವಾಹಿಯಲ್ಲಿ ಹೇಳಲಾಗಿದೆ. ಅವರು ನಿಜಕ್ಕೂ ಈಗ ಇರುವುದು ಅಮೆರಿಕದಲ್ಲಿಯೇ. ವೆಕೇಷನ್​ ತೆಗೆದುಕೊಂಡು ಚಿತ್ಕಲಾ ಅವರು ಅಮೆರಿಕ ತೆರಳಿದ್ದಾರೆ.

ಇದನ್ನೂ ಓದಿ
Image
ಹಿಂದಿಗೆ ಡಬ್, ಮರಾಠಿಗೆ ರಿಮೇಕ್​ ಆದ ‘ಕನ್ನಡತಿ’: ಈ ಧಾರಾವಾಹಿಗೆ ಹೇಗಿದೆ ರೆಸ್ಪಾನ್ಸ್? ಇಲ್ಲಿದೆ ಉತ್ತರ
Image
‘ಬಡ್ಡೀಸ್​’ ಚಿತ್ರದಲ್ಲಿ ಆ್ಯಕ್ಷನ್​ ಹೀರೋ ಆಗಿ ಅಬ್ಬರಿಸ್ತಾರೆ ‘ಕನ್ನಡತಿ’ ನಟ ಕಿರಣ್​ ರಾಜ್​; ಜೂನ್​ 24ಕ್ಕೆ ರಿಲೀಸ್​
Image
ಹಿಂದಿಗೆ ಡಬ್​ ಆಗುತ್ತಿದೆ ‘ಕನ್ನಡತಿ’ ಧಾರಾವಾಹಿ; ಕಿರಣ್​ ರಾಜ್​-ರಂಜನಿ ರಾಘವನ್ ಫ್ಯಾನ್ಸ್​ಗೆ ಹೆಮ್ಮೆ​
Image
‘ಅವಕಾಶ ಇದ್ದಿದ್ರೆ ನಾನು ಒಂದು ಝೂ ಮಾಡ್ತಿದ್ದೆ’; ‘ಕನ್ನಡತಿ’ ನಟ ಕಿರಣ್​ ರಾಜ್​

ಚಿತ್ಕಲಾ ಅವರು ಜಗದೀಶ್ ಅವರನ್ನು ಮದುವೆ ಆಗಿದ್ದಾರೆ. ಅವರ ದಾಂಪತ್ಯಕ್ಕೆ ಈಗ 30 ವರ್ಷ. ವಿವಾಹ ವಾರ್ಷಿಕೋತ್ಸವ ಆಚರಣೆಗೆ ಈ ದಂಪತಿ ಅಮೆರಿಕಕ್ಕೆ ತೆರಳಿದ್ದಾರೆ. ಅಲ್ಲಿ ಸಮಯ ಕಳೆಯುತ್ತಿರುವ ಫೋಟೋಗಳನ್ನು ಚಿತ್ಕಲಾ ಅವರು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಳ್ಳುತ್ತಿದ್ದಾರೆ. ಈ ಫೋಟೋಗೆ ಅಭಿಮಾನಿಗಳು ನಾನಾ ರೀತಿಯಲ್ಲಿ ಕಮೆಂಟ್ ಮಾಡುತ್ತಿದ್ದಾರೆ. ‘ವೆಕೇಷನ್​ ಮುಗಿಸಿ ಸಾಕು. ಬೇಗ ಮನೆಗೆ ಬನ್ನಿ’ ಎಂದು ಚಿತ್ಕಲಾ ಎದುರು ಫ್ಯಾನ್ಸ್ ಬೇಡಿಕೆ ಇಡುತ್ತಿದ್ದಾರೆ.

ಇದನ್ನೂ ಓದಿ: Kiran Raj: ‘ಕನ್ನಡತಿ’ ಸೀರಿಯಲ್ ನಟ​ ಕಿರಣ್​ ರಾಜ್​ ಹುಟ್ಟುಹಬ್ಬಕ್ಕೆ ಹರಿದುಬಂತು ಶುಭಾಶಯಗಳ ಮಹಾಪೂರ

‘ಕನ್ನಡತಿ’ ಧಾರಾವಾಹಿಯಲ್ಲಿ ರತ್ನಮಾಲಾ ಕಾಣಿಸಿಕೊಳ್ಳದಿದ್ದರೂ ದೂರವಾಣಿ ಮೂಲಕ ಸಂಪರ್ಕದಲ್ಲಿದ್ದಾಳೆ. ಭುವಿಗೆ ಕರೆ ಮಾಡಿ ಮನೆಯ ಸಂಪೂರ್ಣ ಜವಾಬ್ದಾರಿಯನ್ನು ಸಂಪೂರ್ಣವಾಗಿ ವಹಿಸಿಕೊಳ್ಳುವಂತೆ ಕೋರಿದ್ದಾಳೆ ರತ್ನಮಾಲಾ. ಮುಂದೇನಾಗುತ್ತದೆ ಎಂಬುದನ್ನು ಕಾದು ನೋಡಬೇಕಿದೆ.

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ