AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕನ್ನಡಾಂಬೆ ಭುವನೇಶ್ವರಿ ದೇವಸ್ಥಾನ ಹೇಗಿದೆ? ವಿಶೇಷ ವಿಡಿಯೋ ಮಾಡಿ ಪರಿಚಯಿಸಿದ ನಟಿ ರಂಜನಿ ರಾಘವನ್

ನಟಿ ರಂಜನಿ ರಾಘವನ್ ಅವರು ಭುವನಗಿರಿ ಕನ್ನಡಾಂಬೆಯ ದೇವಸ್ಥಾನದ ಪರಿಚಯ ಮಾಡಿದ್ದಾರೆ. ಶೂಟಿಂಗ್ ಮಧ್ಯೆ ಬಿಡುವು ಮಾಡಿಕೊಂಡು ಅವರು ರೀಲ್ಸ್​ ಮಾಡಿದ್ದಾರೆ.

ಕನ್ನಡಾಂಬೆ ಭುವನೇಶ್ವರಿ ದೇವಸ್ಥಾನ ಹೇಗಿದೆ? ವಿಶೇಷ ವಿಡಿಯೋ ಮಾಡಿ ಪರಿಚಯಿಸಿದ ನಟಿ ರಂಜನಿ ರಾಘವನ್
ರಂಜನಿ ರಾಘವನ್
TV9 Web
| Edited By: |

Updated on: May 25, 2022 | 7:59 PM

Share

‘ಕನ್ನಡತಿ’ ಧಾರವಾಹಿ (Kannadathi Serial) ಪ್ರಮುಖ ಘಟ್ಟ ತಲುಪಿದೆ. ಈ ಧಾರಾವಾಹಿಯ ಪ್ರಮುಖ ಪಾತ್ರಧಾರಿಗಳಾದ ಹರ್ಷ ಹಾಗೂ ಭುವಿಯ ಮದುವೆಗೆ ಸಕಲ ಸಿದ್ಧತೆ ನಡೆದಿದೆ. ಹರ್ಷ ಹಾಗೂ ಭುವಿ ಮದುವೆಗೆ ಹಲವು ವಿಘ್ನಗಳು ಎದುರಾದವು. ಭುವಿಯನ್ನು ಕೊಲ್ಲಲು ಪ್ರಯತ್ನ ಕೂಡ ನಡೆಯಿತು. ಅದೃಷ್ಟವಶಾತ್ ಭುವಿ ಬದುಕಿದ್ದಾಳೆ. ಗಾಯಗಳಿಂದ ಚೇತರಿಸಿಕೊಂಡಿದ್ದಾಳೆ. ಈಗ ಈ ಧಾರಾವಾಹಿ ಹೊಸ ತಿರುವು ಪಡೆದುಕೊಂಡು ಸಾಗುತ್ತಿದೆ. ಹರ್ಷ ಹಾಗೂ ಭುವಿ ಶೀಘ್ರವೇ ಮದುವೆ ಆಗಲಿದ್ದಾರೆ. ಇವರ ಮದುವೆ ನಡೆಯುತ್ತಿರುವುದು ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲೂಕಿನ ಭುವನಗಿರಿಯಲ್ಲಿರುವ ಭುವನೇಶ್ವರಿ ದೇವರ (Bhuvanagiri Temple ) ಸನ್ನಿಧಿಯಲ್ಲಿ ಅನ್ನೋದು ವಿಶೇಷ.

ಭುವನಗಿರಿಯ ಕನ್ನಡಾಂಬೆ ದೇವಸ್ಥಾನ ಸಾಕಷ್ಟು ಜನಪ್ರಿಯತೆ ಪಡೆದುಕೊಂಡಿದೆ. ಇದು ಕರ್ನಾಟಕದಲ್ಲಿರುವ ಏಕೈಕ ಕನ್ನಡಾಂಬೆ ದೇವಸ್ಥಾನ ಎಂದು ರಂಜನಿ ರಾಘವನ್ ಮಾಹಿತಿ ನೀಡಿದ್ದಾರೆ. ಕಳೆದ ಕೆಲ ದಿನಗಳ ಕಾಲ ಈ ಧಾರಾವಾಹಿ ಶೂಟಿಂಗ್ ಇಲ್ಲಿ ನಡೆದಿದೆ. ಸದ್ಯ, ‘ಕನ್ನಡತಿ’ಯಲ್ಲಿ ಈ ಎಪಿಸೋಡ್ ಪ್ರಸಾರವಾಗುತ್ತಿದೆ.

ಇದನ್ನೂ ಓದಿ
Image
ಭುವಿಗೆ ತಿಳಿದೇ ಹೋಯ್ತು ಸಾನಿಯಾ ಅಸಲಿ ಮುಖ; ಮದುವೆಗೂ ಮುನ್ನ ಎಲ್ಲವನ್ನೂ ಅರಿತುಕೊಂಡ ಹರ್ಷನ ಪ್ರೇಯಸಿ
Image
ಹರಿದ ಬಟ್ಟೆ, ಹಣೆಯಲ್ಲಿ ರಕ್ತ; ನಟಿ ರಂಜನಿ ರಾಘವನ್ ಹಂಚಿಕೊಂಡ ವಿಡಿಯೋ ನೋಡಿ ಗಾಬರಿಗೊಳ್ಳಬೇಡಿ
Image
ಐಸಿಯುನಲ್ಲಿ ಭುವಿ: ಸಾನಿಯಾಗೆ ತಿರುಮಂತ್ರ ಆಯ್ತು ಪ್ಲ್ಯಾನ್​; ಮುಂದಿದೆ ಮಾರಿ ಹಬ್ಬ
Image
 ಬೆಟ್ಟದಿಂದ ಭುವಿಯನ್ನು ತಳ್ಳೇ ಬಿಟ್ಟ ಕಿಲ್ಲರ್; ವರುಧಿನಿಯಿಂದ ಮತ್ತಷ್ಟು ದೂರವಾದ ಹರ್ಷ

ನಟಿ ರಂಜನಿ ರಾಘವನ್ ಅವರು ಭುವನಗಿರಿ ಕನ್ನಡಾಂಬೆಯ ದೇವಸ್ಥಾನದ ಪರಿಚಯ ಮಾಡಿದ್ದಾರೆ. ಶೂಟಿಂಗ್ ಮಧ್ಯೆ ಬಿಡುವು ಮಾಡಿಕೊಂಡು ಅವರು ರೀಲ್ಸ್​ ಮಾಡಿದ್ದಾರೆ. ಇದನ್ನು ಇನ್​ಸ್ಟಾಗ್ರಾಮ್​ನಲ್ಲಿ ಹಂಚಿಕೊಂಡು ಸಂಭ್ರಮಿಸಿದ್ದಾರೆ. ಈ ವಿಡಿಯೋದಲ್ಲಿ ರಂಜನಿ ಅವರು ದೇವಸ್ಥಾನದ ಬಗ್ಗೆ ಮಾಹಿತಿ ನೀಡಿದ್ದಾರೆ.

ಹೊರ ಭಾಗದಲ್ಲಿ ನಿಂತು ದೇವಸ್ಥಾನದ ಬಗ್ಗೆ ರಂಜನಿ ರಾಘವನ್ ಮಾಹಿತಿ ಹಂಚಿಕೊಂಡಿದ್ದಾರೆ. ಆ ಬಳಿಕ ಅವರು ನೇರವಾಗಿ ದೇವಸ್ಥಾನದ ಒಳಗೆ ತೆರಳಿದ್ದಾರೆ. ಫ್ಯಾನ್ಸ್​ಗೆ ಅವರು ದೇವರ ದರ್ಶನ ಮಾಡಿಸಿದ್ದಾರೆ. ಈ ವಿಡಿಯೋದಲ್ಲಿ ದೇವಸ್ಥಾನದ ಒಳಭಾಗದಲ್ಲಿ ಶೂಟಿಂಗ್​ಗೆ ಸಿದ್ಧತೆ ಮಾಡಿಕೊಳ್ಳುತ್ತಿರುವುದ ಕಂಡು ಬಂದಿದೆ.

ಇದನ್ನೂ ಓದಿ: ‘ಬಡ್ಡೀಸ್​’ ಚಿತ್ರದಲ್ಲಿ ಆ್ಯಕ್ಷನ್​ ಹೀರೋ ಆಗಿ ಅಬ್ಬರಿಸ್ತಾರೆ ‘ಕನ್ನಡತಿ’ ನಟ ಕಿರಣ್​ ರಾಜ್​; ಜೂನ್​ 24ಕ್ಕೆ ರಿಲೀಸ್​

ಹರ್ಷ ಹಾಗೂ ಭುವಿ ಪರಸ್ಪರ ಪ್ರೀತಿಸುತ್ತಿದ್ದಾರೆ. ರತ್ನಮಾಲಾ ಮಾಡಿರುವ ಆಸ್ತಿಗೆ ಒಡೆತನ ಹೊಂದಲಿದ್ದಾಳೆ ಭುವಿ. ಈ ವಿಚಾರ ಕೇಳಿ ಸಾನಿಯಾಗೆ ಹೊಟ್ಟೆಉರಿ ಶುರುವಾಗಿದೆ. ಹೀಗಾಗಿ ಮದುವೆ ನಿಲ್ಲಿಸಲು ನಾನಾ ಪ್ರಯತ್ನ ಮಾಡುತ್ತಿದ್ದಾಳೆ. ಈ ಮಧ್ಯೆ ಹರ್ಷನ ತಾಯಿ ರತ್ನಮಾಲಾಗೆ ಅನಾರೋಗ್ಯ ಕಾಡಿದೆ. ಭುವಿ ಗೆಳತಿ ವರುಧಿನಿ ಕೂಡ ಮದುವೆ ವಿಚಾರ ತಿಳಿದು ಅಸಮಾಧಾನಗೊಂಡಿದ್ದಾಳೆ. ಮದುವೆಯ ಎಪಿಸೋಡ್ ಯಾವ ರೀತಿಯಲ್ಲಿ ಮೂಡಿ ಬರಲಿದೆ ಅನ್ನೋದು ಸದ್ಯದ ಕುತೂಹಲ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್