ತಪ್ಪು ಮಾಡಿದ ಸಾನಿಯಾಗೆ ಹರ್ಷನ ಎಚ್ಚರಿಕೆ; ಬಿಸಿ ತಟ್ಟಿದ್ದು ಮಾತ್ರ ವರುಧಿನಿಗೆ

ಮದುವೆ ಮನೆಗೆ ಅಜ್ಜಿ ಬಂದಿಲ್ಲ ಎನ್ನುವ ವಿಚಾರ ಹರ್ಷನಿಗೆ ಗೊತ್ತಾಗಿದೆ. ಈ ವೇಳೆ ಆತ ನೇರವಾಗಿ ಕರೆದಿದ್ದು ಸಾನಿಯಾ ಅವಳನ್ನು.

ತಪ್ಪು ಮಾಡಿದ ಸಾನಿಯಾಗೆ ಹರ್ಷನ ಎಚ್ಚರಿಕೆ; ಬಿಸಿ ತಟ್ಟಿದ್ದು ಮಾತ್ರ ವರುಧಿನಿಗೆ
ಸಾನಿಯಾ-ಹರ್ಷ
Follow us
| Updated By: ರಾಜೇಶ್ ದುಗ್ಗುಮನೆ

Updated on: Jun 14, 2022 | 6:30 AM

ಕಲರ್ಸ್​ ಕನ್ನಡದಲ್ಲಿ (Colors Kannada) ಪ್ರಸಾರವಾಗುತ್ತಿರುವ ‘ಕನ್ನಡತಿ’ ಧಾರಾವಾಹಿ (Kannadathi Serial) ಪ್ರಮುಖ ಘಟ್ಟ ತಲುಪಿದೆ. ಹರ್ಷ ಹಾಗೂ ಭುವಿಯ ಮದುವೆ ಅದ್ದೂರಿಯಾಗಿ ನಡೆಯುತ್ತಿದೆ. ಮದುವೆ ಕಾರ್ಯಗಳು ಭರದಿಂದ ಸಾಗುತ್ತಿವೆ. ಈ ಮಧ್ಯೆ ಹರ್ಷನ ಮದುವೆ ನಿಲ್ಲಿಸೋಕೆ ಸಾಕಷ್ಟು ಪ್ರಯತ್ನಗಳು ನಡೆಯುತ್ತಿವೆ. ಇದನ್ನು ಮಾಡುತ್ತಿರುವುದು ಸಾನಿಯಾ ಹಾಗೂ ವರುಧಿನಿ. ಸಾನಿಯಾ ಈಗ ಎಡವಟ್ಟೊಂದನ್ನು ಮಾಡಿಕೊಂಡಿದ್ದಾಳೆ. ಇದಕ್ಕೆ ಹರ್ಷ ಖಡಕ್ ಎಚ್ಚರಿಕೆ ನೀಡಿದ್ದಾನೆ. ಎಚ್ಚರಿಕೆ ಕೊಟ್ಟಿದ್ದು ಸಾನಿಯಾ ಆದರೂ ವರುಧಿನಿಗೆ ಭಯ ಶುರುವಾಗಿದೆ. ಅಂತಿಮವಾಗಿ ಏನಾಗುತ್ತದೆ ಅನ್ನೋದು ಸದ್ಯದ ಕುತೂಹಲ.

‘ಕನ್ನಡತಿ’ ಧಾರಾವಾಹಿಯಲ್ಲಿ ಹರ್ಷ ಹಾಗೂ ಭುವಿ ಮದುವೆ ಆಗುತ್ತಿರುವ ವಿಚಾರದಲ್ಲಿ ಅನೇಕರಿಗೆ ಸಿಟ್ಟಿದೆ. ಭುವಿ ಮದುವೆಯನ್ನು ಹೇಗಾದರೂ ನಿಲ್ಲಿಸಬೇಕು ಎಂದು ಸಾನಿಯಾ ಪ್ಲ್ಯಾನ್ ಮಾಡಿದ್ದಾಳೆ. ಇದಕ್ಕಾಗಿ ಸಾನಿಯಾ ಒಂದು ಪ್ಲ್ಯಾನ್ ರೂಪಿಸಿದ್ದಳು. ಭುವಿಯ ಅಜ್ಜಿಯನ್ನು ಕರೆತರುವ ಕ್ಯಾಬ್​ ಡ್ರೈವರ್​ಗೆ ಹಣ ನೀಡಿದ್ದಳು. ಆತ ಅಜ್ಜಿಯನ್ನು ಕಾಡಿನ ಮಧ್ಯೆ ಬಿಟ್ಟು ಬಂದಿದ್ದಾನೆ. ಮದುವೆ ಮನೆಗೆ ಅಜ್ಜಿ ಬಂದಿಲ್ಲ ಎನ್ನುವ ವಿಚಾರ ಹರ್ಷನಿಗೆ ಗೊತ್ತಾಗಿದೆ. ಈ ವೇಳೆ ಆತ ನೇರವಾಗಿ ಕರೆದಿದ್ದು ಸಾನಿಯಾ ಅವಳನ್ನು.

ಇದನ್ನೂ ಓದಿ
Image
‘777 ಚಾರ್ಲಿ’ ಸಿನಿಮಾದಲ್ಲಿ ಶ್ವಾನ ಪಡೆದ ಸಂಭಾವನೆ ಎಷ್ಟು? ರಕ್ಷಿತ್ ಶೆಟ್ಟಿ ನೀಡಿದ್ರು ಅಚ್ಚರಿಯ ಮಾಹಿತಿ
Image
ಮತ್ತೊಂದು ಚಿತ್ರ ಒಪ್ಪಿಕೊಂಡ ನಟ ಕಿರಣ್ ರಾಜ್; ‘ಭರ್ಜರಿ ಗಂಡು’ ನಿರ್ದೇಶಕನ ಜತೆ ಹೊಸ ಸಿನಿಮಾ
Image
‘ಕನ್ನಡತಿ’ ಧಾರಾವಾಹಿಗಿಂತಲೂ ಮುಂಚೆ ನಟ ಕಿರಣ್​ ರಾಜ್​ ಈ ಸಿನಿಮಾ ಒಪ್ಪಿಕೊಂಡಿದ್ದು ಯಾಕೆ?
Image
‘ಕನ್ನಡತಿ’ ಹೀರೋ ಕಿರಣ್​ ರಾಜ್​ ದುಡಿಮೆಯ ಶೇ.40ರಷ್ಟು ಹಣ ಬಡವರಿಗೆ ಮೀಸಲು

‘ಅತಿರೇಕ ಯಾವತ್ತೂ ಒಳ್ಳೆಯದಲ್ಲ. ನೀವು ಸ್ಕೀಮ್ ಹಾಕುವುದರಲ್ಲಿ ಎಕ್ಸ್​ಪರ್ಟ್​ ಇರಬಹುದು. ಆದರೆ, ನನ್ನ ಮದುವೆಯಲ್ಲಿ ಈ ರೀತಿ ಆದರೆ ನಾನು ಅದನ್ನು ಸಹಿಸುವುದಿಲ್ಲ. ಎಚ್ಚರಿಕೆಯಿಂದ ಇರಿ’ ಎಂದು ಸಾನಿಯಾಗೆ ಹರ್ಷ ಎಚ್ಚರಿಕೆ ನೀಡಿದ್ದಾನೆ. ಸಾನಿಯಾ ಪಕ್ಕದಲ್ಲೇ ಇದ್ದ ವರುಧಿನಿಗೂ ಈ ಮಾತಿನಿಂದ ಭಯ ಆಗಿದೆ.

ಇದನ್ನೂ ಓದಿ: ‘ಹರ್ಷ ಭುವಿ ಮದುವೆ ಅದೇ ಮುಹೂರ್ತದಲ್ಲಿ ನಡೆಯುತ್ತೆ’; ಸಾನಿಯಾ ವಿರುದ್ಧ ತಿರುಗಿ ಬಿದ್ದ ವರುಧಿನಿ

ಹರ್ಷನನ್ನು ಮದುವೆ ಆಗಲು ವರುಧಿನಿ ಪ್ರಯತ್ನಿಸುತ್ತಿದ್ದಾಳೆ. ಇದಕ್ಕಾಗಿ ನಾನಾ ರೀತಿಯ ಪ್ಲ್ಯಾನ್​ಗಳನ್ನು ಕೂಡ ರೂಪಿಸಿದ್ದಾಳೆ. ಈಗ ಹರ್ಷನ ಎಚ್ಚರಿಕೆಯಿಂದ ಆಕೆಗೆ ಭಯ ಶುರುವಾಗಿದೆ. ಹರ್ಷನಿಗೆ ವರುಧಿನಿ ಮೇಲೆ ಯಾವುದೇ ಭಾವನೆ ಇಲ್ಲ. ಆಕೆಯನ್ನು ಕಂಡರೆ ಮೊದಲಿನಿಂದಲೂ ಆತ ಸಿಡುಕುತ್ತಿದ್ದ. ಆದರೆ ಭುವಿಯ ಕ್ಲೋಸ್​ಫ್ರೆಂಡ್ ಎಂಬ ಕಾರಣಕ್ಕೆ ವರುಧಿನಿಯನ್ನು ಹತ್ತಿರಬಿಟ್ಟುಕೊಂಡಿದ್ದಾನೆ ಹರ್ಷ. ಈಗ ವರುಧಿನಿ ಮಾಡುತ್ತಿರುವ ಪ್ಲ್ಯಾನ್ ಬಯಲಾದರೆ ಜೀವಮಾನದಲ್ಲಿ ಆಕೆಯನ್ನು ಹರ್ಷ ಕ್ಷಮಿಸೋದು ಅನುಮಾನವೇ. ಮುಂದೇನಾಗುತ್ತದೆ ಅನ್ನೋದು ಸದ್ಯದ ಕುತೂಹಲ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ