AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕನ್ನಡತಿಯಲ್ಲಿ ಖಡಕ್​ ವಿಲನ್​ ರಮೋಲಾ ನಿಜ ಜೀವನದಲ್ಲಿ ಹೀಗಿದ್ದಾರಾ?; ಸಣ್ಣ ಘಟನೆಯಿಂದ ಎಲ್ಲವೂ ಗೊತ್ತಾಯ್ತು

ರಮೋಲಾ ತೆರೆಮೇಲೆ ಮಾಡುತ್ತಿರುವ ಪಾತ್ರಕ್ಕೂ ಅವರ ನಿಜ ಜೀವನಕ್ಕೂ ಒಂದು ಸ್ವಲ್ಪವೂ ಸಾಮ್ಯತೆ ಇಲ್ಲ. ಅವರು ಇಲ್ಲಿವರೆಗೂ ದೊಡ್ಡ ಕಷ್ಟ ಎಂಬುದನ್ನು ನೋಡಿಲ್ಲ.

ಕನ್ನಡತಿಯಲ್ಲಿ ಖಡಕ್​ ವಿಲನ್​ ರಮೋಲಾ ನಿಜ ಜೀವನದಲ್ಲಿ ಹೀಗಿದ್ದಾರಾ?; ಸಣ್ಣ ಘಟನೆಯಿಂದ ಎಲ್ಲವೂ ಗೊತ್ತಾಯ್ತು
ಕನ್ನಡತಿಯಲ್ಲಿ ಖಡಕ್​ ವಿಲನ್​ ರಮೋಲಾ ನಿಜ ಜೀವನದಲ್ಲಿ ಹೀಗಿದ್ದಾರಾ?; ಸಣ್ಣ ಘಟನೆಯಿಂದ ಎಲ್ಲವೂ ಗೊತ್ತಾಯ್ತು
TV9 Web
| Edited By: |

Updated on: Aug 29, 2021 | 8:27 PM

Share

‘ಕನ್ನಡತಿ’ ಧಾರಾವಾಹಿ ಮನೆಮಾತಾಗಿದೆ. ಈ ಧಾರಾವಾಹಿಯಲ್ಲಿ ರಮೋಲಾ ಅವರು ಸಾನಿಯಾ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಇದು ನೆಗೆಟಿವ್​ ಶೇಡ್​ನ​ ಪಾತ್ರ. ಅವರ ಮಾತು, ಗತ್ತು ಎಲ್ಲ ವೀಕ್ಷಕರಿಗೆ ಇಷ್ಟವಾಗುತ್ತಿದೆ. ಅವರ ನಿಜ ಜೀವನದ ಬಗ್ಗೆ ತಿಳಿದುಕೊಳ್ಳಬೇಕು ಎಂಬುದು ಅನೇಕರ ಆಸೆಯಾಗಿತ್ತು. ಇದಕ್ಕೆ ಬಿಗ್​ ಬಾಸ್​ ಮಿನಿ ಸೀಸನ್​ ವೇದಿಕೆ ಕಲ್ಪಿಸಿಕೊಟ್ಟಿದೆ. ತೆರೆಮೇಲೆ ಖಡಕ್​ ಆಗಿ ಕಾಣಿಸಿಕೊಳ್ಳುವ ರಮೋಲಾ ಇವರೇನಾ ಎಂದು ಪ್ರಶ್ನಿಸುವ ರೀತಿಯಲ್ಲಿ ಘಟನೆ ಒಂದು ನಡೆದಿದೆ.

ರಮೋಲಾ ತೆರೆಮೇಲೆ ಮಾಡುತ್ತಿರುವ ಪಾತ್ರಕ್ಕೂ ಅವರ ನಿಜ ಜೀವನಕ್ಕೂ ಒಂದು ಸ್ವಲ್ಪವೂ ಸಾಮ್ಯತೆ ಇಲ್ಲ. ಅವರು ಇಲ್ಲಿವರೆಗೂ ದೊಡ್ಡ ಕಷ್ಟ ಎಂಬುದನ್ನು ನೋಡಿಲ್ಲ. ಯಾವ ವಿಚಾರದಲ್ಲೂ ಅವರು ಜವಾಬ್ದಾರಿ ಹೊತ್ತುಕೊಳ್ಳುವ ಪರಿಸ್ಥಿತಿ ಬಂದಿಲ್ಲ. ಅವರಿಗೆ ಇಷ್ಟ ಬಂದಿದ್ದನ್ನು ಓದುವ ಹಾಗೂ ಇಷ್ಟದ ಕೆಲಸ ಮಾಡುವ ಅವಕಾಶವನ್ನು ಕುಟುಂಬದವರು ನೀಡಿದ್ದರು. ಹೀಗಾಗಿ ಯಾವುದು ಕೂಡ ಸಮಸ್ಯೆ ಎಂದು ಅವರಿಗೆ ಅನಿಸೇ ಇಲ್ಲ.

ರಮೋಲಾಗೆ ಅಡುಗೆ ಮಾಡೋಕೆ ಬರುವುದಿಲ್ಲ. ಇದನ್ನು ಅವರು ಓಪನ್​ ಆಗಿಯೇ ಬಿಗ್​ ಬಾಸ್​ ಮನೆಯಲ್ಲಿ ಹೇಳಿಕೊಂಡಿದ್ದಾರೆ. ಆದರೆ, ಬಿಗ್​ ಬಾಸ್​ ಮನೆಯಲ್ಲಿ ಎಲ್ಲರಿಗೂ ಟಾಸ್ಕ್​ ಒಂದನ್ನು ನೀಡಲಾಗಿತ್ತು. ಇದರ ಅನುಸಾರ ಎಲ್ಲರೂ ಅಡುಗೆ ಮಾಡಿ ಮನೆಮಂದಿಗೆ ಬಡಿಸಬೇಕು. ಅಂತೆಯೇ ರಮೋಲಾ ಕೂಡ ಅಡುಗೆ ಮಾಡೋಕೆ ಮುಂದಾದರು.

ರಮೋಲಾ ಅಡುಗೆ ಮಾಡೋಕೆ ವಿಳಂಬವಾಗಿತ್ತು. ಇದು ಮನೆಯವರ ಅಸಮಾಧಾನಕ್ಕೆ ಕಾರಣವಾಗಿತ್ತು. ಆದರೆ, ಅಡುಗೆ ರುಚಿಯಾಗಿತ್ತು. ಮೊದಲ ಪ್ರಯತ್ನದಲ್ಲೇ ಅವರು ಯಶಸ್ವಿಯಾಗಿದ್ದರು. ಇದನ್ನು ನಿರಂಜನ್​ ಬಾಯ್ತುಂಬ ಹೊಗಳಿದರು. ಈ ಮಾತು ಕೇಳುತ್ತಿದ್ದಂತೆ ರಮೋಲಾ ಗಳಗಳನೆ ಅತ್ತರು. ತೆರೆಮೇಲೆ ಕಾಣಿಸುವ ಸಾನಿಯಾಗೂ ತೆರೆಹಿಂದಿನ ರಮೋಲಾಗೂ ತುಂಬಾನೇ ವ್ಯತ್ಯಾಸವಿದೆ ಎಂದು ವೀಕ್ಷಕರು ಕಮೆಂಟ್​ ಮಾಡಿದ್ದಾರೆ.

ಇದನ್ನೂ ಓದಿ: ‘ಕನ್ನಡತಿ’ ಧಾರಾವಾಹಿಗಿಂತಲೂ ಮುಂಚೆ ನಟ ಕಿರಣ್​ ರಾಜ್​ ಈ ಸಿನಿಮಾ ಒಪ್ಪಿಕೊಂಡಿದ್ದು ಯಾಕೆ?

‘ನಾನು ಎಷ್ಟು ಟೇಕ್​ ತೆಗೆದುಕೊಳ್ತೀನಿ ಅಂತ ಬೆಟ್​ ಕಟ್ಟುತ್ತಿದ್ದರು’; ಅವಮಾನದ ಹಾದಿ ನೆನೆದ ಕಿರಣ್​ ರಾಜ್

ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ನಟ ಯಶ್​ ತಾಯಿ ಜಾಗ ವಿವಾದಕ್ಕೆ ಟ್ವಿಸ್ಟ್​​: ಒಂದೇ ಸೈಟ್​​ಗೆ ಎರಡು ದಾಖಲೆ?
ನಟ ಯಶ್​ ತಾಯಿ ಜಾಗ ವಿವಾದಕ್ಕೆ ಟ್ವಿಸ್ಟ್​​: ಒಂದೇ ಸೈಟ್​​ಗೆ ಎರಡು ದಾಖಲೆ?
ಬಾಯಿಯ ಆರೋಗ್ಯ ಚೆನ್ನಾಗಿಲ್ಲದಿದ್ದರೆ ಹೃದಯದ ಆಯಸ್ಸು ಕಡಿಮೆಯಾಗುತ್ತಾ?
ಬಾಯಿಯ ಆರೋಗ್ಯ ಚೆನ್ನಾಗಿಲ್ಲದಿದ್ದರೆ ಹೃದಯದ ಆಯಸ್ಸು ಕಡಿಮೆಯಾಗುತ್ತಾ?
ಕೊಡಗಿನಲ್ಲಿ ರೆಸಾರ್ಟ್, ವಿಲ್ಲಾಗಳಿಗಾಗಿ ಬೆಟ್ಟ ಬಗೆದ ಮಾಫಿಯಾ ಗ್ಯಾಂಗ್
ಕೊಡಗಿನಲ್ಲಿ ರೆಸಾರ್ಟ್, ವಿಲ್ಲಾಗಳಿಗಾಗಿ ಬೆಟ್ಟ ಬಗೆದ ಮಾಫಿಯಾ ಗ್ಯಾಂಗ್