AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಕನ್ನಡತಿ’ ರಮೋಲಾ ಕೊಟ್ಟ ಖಡಕ್​ ಕೌಂಟರ್​ಗೆ ಸೈಲೆಂಟ್​ ಆದ ನಿರಂಜನ್​

ನಿರಂಜನ್​ ಮನೆಯಲ್ಲಿ ಎಲ್ಲರ ಗಮನ ಸೆಳೆಯೋಕೆ ಯಶಸ್ವಿಯಾಗಿದ್ದಾರೆ. ಅವರು ಮಾಡುವ ಕಾಮಿಡಿಗಳು ವೀಕ್ಷಕರಿಗೆ ಇಷ್ಟವಾಗುತ್ತಿದೆ. ಮನೆಯಲ್ಲಿ ಅವರು ಸಂದರ್ಶಕರಾಗಿದ್ದಾರೆ.

‘ಕನ್ನಡತಿ’ ರಮೋಲಾ ಕೊಟ್ಟ ಖಡಕ್​ ಕೌಂಟರ್​ಗೆ ಸೈಲೆಂಟ್​ ಆದ ನಿರಂಜನ್​
‘ಕನ್ನಡತಿ’ ರಮೋಲಾ ಕೊಟ್ಟ ಖಡಕ್​ ಕೌಂಟರ್​ಗೆ ಸೈಲೆಂಟ್​ ಆದ ನಿರಂಜನ್​
TV9 Web
| Edited By: |

Updated on:Aug 30, 2021 | 8:51 PM

Share

ಕನ್ನಡತಿ ಧಾರಾವಾಹಿಯಲ್ಲಿ ಸಾನಿಯಾ ಪಾತ್ರದ ಮೂಲಕ ಹೆಚ್ಚು ಗುರುತಿಸಿಕೊಂಡ ರಮೋಲಾ ಈಗ ಬಿಗ್​ ಬಾಸ್​ ಮಿನಿ ಸೀಸನ್​ನಲ್ಲಿ ಎಲ್ಲರ ಗಮನ ಸೆಳೆಯುತ್ತಿದ್ದಾರೆ. ಅಡುಗೆ ಮಾಡೋಕೆ ಬರದಿದ್ದರೂ ಅವರು ಉತ್ತಮವಾಗಿ ಅಡುಗೆ ತಯಾರಿಸಿ ಎಲ್ಲರಿಂದ ಮೆಚ್ಚುಗೆ ಗಳಿಸಿಕೊಂಡಿದ್ದರು. ಈಗ ಅವರು ನಿರಂಜನ್​ಗೆ ಕೌಂಟರ್​ ಕೊಟ್ಟು ಸುದ್ದಿಯಾಗಿದ್ದಾರೆ. ಕಲರ್ಸ್​ ಕನ್ನಡ ವಾಹಿನಿ ಈ ಬಗ್ಗೆ ಪ್ರೋಮೋ  ಹಂಚಿಕೊಂಡಿದೆ. ಇದನ್ನು ನೋಡಿದ ಅನೇಕರು ಸಾಕಷ್ಟು ನಕ್ಕಿದ್ದಾರೆ.

ನಿರಂಜನ್​ ಮನೆಯಲ್ಲಿ ಎಲ್ಲರ ಗಮನ ಸೆಳೆಯೋಕೆ ಯಶಸ್ವಿಯಾಗಿದ್ದಾರೆ. ಅವರು ಮಾಡುವ ಕಾಮಿಡಿಗಳು ವೀಕ್ಷಕರಿಗೆ ಇಷ್ಟವಾಗುತ್ತಿದೆ. ಮನೆಯಲ್ಲಿ ಅವರು ಸಂದರ್ಶಕರಾಗಿದ್ದಾರೆ. ‘ಕಷಾಯ ವಿತ್​ ನಿರಂಜನ್​’  ಹೆಸರಿನ ಶೋ ನಡೆಸಿಕೊಟ್ಟಿದ್ದಾರೆ. ಇದಕ್ಕೆ ವಿಶೇಷ ಅತಿಥಿಯಾಗಿ ಬಂದಿದ್ದು ರಮೋಲಾ.

‘ಕನ್ನಡತಿ ಧಾರಾವಾಹಿ ಖ್ಯಾತಿಯ ರಮೋಲಾ ಅವರು ಇಂದು ನಮ್ಮ ಶೋಗೆ ಆಗಮಿಸಿದ್ದಾರೆ. ಅವರನ್ನು ನಾವು ಸ್ವಾಗತಿಸುತ್ತಿದ್ದೇವೆ. ನಮ್ಮ ಶೋ 25 ಸಂಚಿಕೆ ಪೂರೈಸಿದೆ’ ಎಂದು ಮಾತು ಆರಂಭಿಸಿದರು ನಿರಂಜನ್​. ಮುಂದುವರಿದು, ‘ಈ ವಿಶೇಷ ದಿನದಂದು ಅತಿಥಿಯಾಗಿ ನೀವು ಬಂದಿದ್ದೀರಿ. ಈ ದಿನ ತುಂಬಾನೇ ದೊಡ್ಡದೊಡ್ಡ ವ್ಯಕ್ತಿಗಳು ಇಲ್ಲಿಗೆ ಆಗಮಿಸುತ್ತಾರೆ ಎಂದುಕೊಂಡಿದ್ದೆ. ಆದರೆ, ಯಾರೂ ಖಾಲಿ ಇರಲಿಲ್ಲ. ನೀವು ಬಂದಿದ್ದೀರಿ. ಅದೃಷ್ಟವಂತರಿಗೆ ಮಾತ್ರ ಇಲ್ಲಿಗೆ ಬರೋಕೆ ಸಾಧ್ಯ. ಅದೃಷ್ಟವಂತರು ಬಂದು, ಅದೃಷ್ಟವನ್ನು ತೆಗೆದುಕೊಂಡು ಹೋಗುವ ವೇದಿಕೆ ಇದೆ. ಈಗ ನೀವು ಇಲ್ಲಿಗೆ ಬಂದಿದ್ದೀರಿ. ಹೇಗನಿಸುತ್ತಿದೆ’ ಎಂದು ತುಂಬಾನೇ ಗತ್ತಿನಲ್ಲಿ ಕೇಳಿದರು ನಿರಂಜನ್​. ಇದಕ್ಕೆ ರಮೋಲಾ ಒಳ್ಳೆಯ ಕೌಂಟರ್​ ನೀಡಿದ್ದಾರೆ.

‘ನಿರಂಜನ್​ ಹೇಳಿದಂತೆ ಯಾರೂ ಈ ಶೋಗೆ ಬರೋಕೆ ರೆಡಿ ಇರಲಿಲ್ಲ. ಹೀಗಾಗಿ ನಾನು ಬಂದೆ. ಅವರು ಪಾಪ ಇಲ್ಲಿ ನೊಣ ಹೊಡೆಯುತ್ತಾ ಕೂರುತ್ತಿದ್ದರು. ನನಗೆ ನೋಡೋಕೆ ಆಗಿಲ್ಲ. ಅದಕ್ಕೆ ಬಂದೆ’ ಎಂದಿದ್ದಾರೆ ರಮೋಲಾ. ಇದನ್ನು ಕೇಳಿ ನಿರಂಜನ್​ಗೆ ಏನು ಉತ್ತರಿಸಬೇಕು ಎಂಬುದೆ ಗೊತ್ತಾಗಲಿಲ್ಲ.

ಇದನ್ನೂ ಓದಿ: ಬಿಗ್​ ಬಾಸ್​ ಮಿನಿ ಸೀಸನ್​ ಫಿನಾಲೆಗೆ ಸಿಂಹಾಸನವೇರಿ ಬಂದ ಕಿಚ್ಚ; ಇಲ್ಲಿದೆ ಅದ್ದೂರಿ ವೇದಿಕೆಯ ಝಲಕ್​

ಕನ್ನಡತಿಯಲ್ಲಿ ಖಡಕ್​ ವಿಲನ್​ ರಮೋಲಾ ನಿಜ ಜೀವನದಲ್ಲಿ ಹೀಗಿದ್ದಾರಾ?; ಸಣ್ಣ ಘಟನೆಯಿಂದ ಎಲ್ಲವೂ ಗೊತ್ತಾಯ್ತು

Published On - 8:49 pm, Mon, 30 August 21

ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಮಾಡದ ತಪ್ಪಿಗೆ ಸುಟ್ಟು ಕರಕಲಾದ ಸೀಬರ್ಡ್ ಬಸ್ಸಿನ ಕೊನೆಯ ದೃಶ್ಯ
ಮಾಡದ ತಪ್ಪಿಗೆ ಸುಟ್ಟು ಕರಕಲಾದ ಸೀಬರ್ಡ್ ಬಸ್ಸಿನ ಕೊನೆಯ ದೃಶ್ಯ
ಚಾಮರಾಜನಗರ ಬೋನಿಗೆ ಬಿದ್ದ ಹುಲಿ
ಚಾಮರಾಜನಗರ ಬೋನಿಗೆ ಬಿದ್ದ ಹುಲಿ
2026 ವೃಶ್ಚಿಕ ರಾಶಿಗೆ ಗುರು ಸಂಚಾರದಿಂದ ಆರ್ಥಿಕ ಪ್ರಗತಿಯ ವರ್ಷ
2026 ವೃಶ್ಚಿಕ ರಾಶಿಗೆ ಗುರು ಸಂಚಾರದಿಂದ ಆರ್ಥಿಕ ಪ್ರಗತಿಯ ವರ್ಷ
ಬಸ್​ ದುರಂತದಲ್ಲಿ ಸುಟ್ಟು ಕರಕಲಾದ ಮೃತದೇಹಗಳ ಗುರುತು ಪತ್ತೆ ಹೇಗಿರುತ್ತೆ?
ಬಸ್​ ದುರಂತದಲ್ಲಿ ಸುಟ್ಟು ಕರಕಲಾದ ಮೃತದೇಹಗಳ ಗುರುತು ಪತ್ತೆ ಹೇಗಿರುತ್ತೆ?